Latest Updates
-
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ?
ಕರ್ನಾಟಕ ಬಜೆಟ್ 2026: ಆರೋಗ್ಯ ವಲಯಕ್ಕೆ ಬಂಪರ್, ಹೊಸ ಯೋಜನೆಗಳೇನು ನೋಡಿ!
ರಾಜ್ಯ ಸರ್ಕಾರದ 2026-27ನೇ ಸಾಲಿನ ಬಹುನಿರೀಕ್ಷಿತ ಬಜೆಟ್ ಮಂಡನೆಯಾಗಿದ್ದು, ಹಲವು ಕ್ಷೇತ್ರಗಳಿಗೆ ಬರಪೂರ ಕೊಡುಗೆ ನೀಡಲಾಗಿದೆ. ಬರೋಬ್ಬರಿ 4,48,004 ಕೋಟಿ ರೂಪಾಯಿ ಗಾತ್ರದ ದಾಖಲೆಯ ಬಜೆಟ್ ಇದಾಗಿದೆ. 2025-26ನೇ ಸಾಲಿನ ಪರಿಷ್ಕೃತ ಅಂದಾಜು 3,95,307 ಕೋಟಿ ರೂ.ಗಳಷ್ಟಿತ್ತು. ಈ ಬಾರಿ ತುಸು ಏರಕೆಯಾಗಿದೆ. ಈ ಬಾರಿ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಅತೀ ಹೆಚ್ಚು ಹಂಚಿಕೆಯಾಗಿದೆ. ಹಾಗೆ ಆರೋಗ್ಯ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೂ ಸಹ ದೊಡ್ಡ ಮೊತ್ತದ ಹಂಚಿಕೆ ನೋಡಬಹುದು.
ಈ ಬಾರಿಯ ಬಜೆಟ್ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸುಮಾರು 17,817 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಇದು ಒಟ್ಟು ಬಜೆಟ್ ಗಾತ್ರದ ಶೇ.4 ರಷ್ಟಾಗಿದೆ. ಹಾಗೆ ಈ ಬಜೆಟ್ನಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಗೆ ಬರೋಬ್ಬರಿ 28,608 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ.

ರಾಜ್ಯದಾದ್ಯಂತ ಕಾರ್ಯನಿರ್ವಹಿಸುತ್ತಿರುವ ಲಕ್ಷಾಂತರ ಅಂಗನವಾಡಿ ಸಿಬ್ಬಂದಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ಪ್ರಸ್ತುತ ಸೇವೆ ಸಲ್ಲಿಸುತ್ತಿರುವ 1,39,844 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ತಲಾ ಒಂದು ಜೊತೆ ಹೆಚ್ಚುವರಿ ಸಮವಸ್ತ್ರ ವಿತರಿಸಲು ಸರ್ಕಾರ ನಿರ್ಧರಿಸಿದೆ.
ಆರೋಗ್ಯ ವಲಯಕ್ಕೆ ಈ ಬಜೆಟ್ನಲ್ಲಿ ಸಿಕ್ಕಿದ್ದೇನು?
ಈ ಬಾರಿಯ ಬಜೆಟ್ನಲ್ಲಿ ಆರೋಗ್ಯ ವಲಯಕ್ಕೂ ಬರಪೂರ ಕೊಡುಗೆ ನೀಡಲಾಗಿದೆ. ಅದ್ರಲ್ಲೂ ಹೊಸ ಆಸ್ಪತ್ರೆ, ಹಳೆಯ ಆಸ್ಪತ್ರೆ ಮೇಲ್ದರ್ಜೆಗೆ ಏರಿಸುವುದು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಸ್ತನ ಹಾಗೂ ಗರ್ಭಕೋಶ ಕ್ಯಾನ್ಸರ್ ಲಸಿಕಾ ಕೇಂದ್ರವನ್ನು ಸ್ಥಾಪಿಸುವುದಾಗಿ ಘೋಷಿಸಲಾಗಿದೆ.
ಹಾಗೆ ರಾಯಚೂರು, ಬಾಗಲಕೋಟೆ, ವಿಜಯಪುರ, ಬೀದರ್, ಕೊಪ್ಪಳ, ಚಿತ್ರದುರ್ಗ, ಮಂಡ್ಯ, ಭದ್ರಾವತಿ ಮತ್ತು ಕೋಲಾರದಲ್ಲಿ ESI ಆಸ್ಪತ್ರೆಗಳನ್ನು ಉನ್ನತೀಕರಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಹಾಗೆ ವಿಜಯಪುರದಲ್ಲಿ 12 ಸಾವಿರ ಮೆಟ್ರಿಕ್ ಟನ್ ಸಾಮರ್ಥ್ಯದ ಶೀತಲ ಗೃಹ ನಿರ್ಮಾಣಕ್ಕೂ ಈ ಬಜೆಟ್ನಲ್ಲಿ ಯೋಜನೆ ರೂಪಿಸಲಾಗಿದೆ.
16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ
ಸಂಪುಟ ಸಭೆ ಹಾಗೆ ಅಧಿವೇಶನದಲ್ಲಿ ಚರ್ಚೆಯಾಗಿದ್ದ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ ಸಂಬಂಧಿಸಿದಂತೆ ಬಜೆಟ್ನಲ್ಲಿಯೂ ಈ ಕುರಿತ ಅಧಿಕೃತ ಘೋಷಣೆ ಹೊರಬಿದ್ದಿದೆ. ಆಸ್ಟ್ರೇಲಿಯಾದಲ್ಲಿ 18 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಅದೇ ರೀತಿ ಕರ್ನಾಟಕದಲ್ಲೂ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡ ಪರಿಣಾಮದ ಬಗ್ಗೆ ಪ್ರಸ್ತಾಪ ಮಾಡಲಾಗಿದೆ. ಅಡ್ಡ ಪರಿಣಾಮಗಳ ತಡೆಗಟ್ಟುವ ಉದ್ದೇಶ ಇದೆ. 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆ ನಿಷೇಧಿಸಲಾಗುವುದು ಎಂದು ಉಲ್ಲೇಖಿಸಲಾಗಿದೆ. ಫೇಸ್ಬುಕ್, ಇನ್ಸ್ಟಾಗ್ರಾಮ್, ಎಕ್ಸ್ನಂತಹ ವೇದಿಕೆಗಳಿಗೆ ಲಾಗ್-ಇನ್ ಆಗುವಾಗ ಆಧಾರ್ ಅಥವಾ ಇತರ ಗುರುತಿನ ಚೀಟಿ ಮೂಲಕ ವಯಸ್ಸನ್ನು ಕಡ್ಡಾಯವಾಗಿ ದೃಢೀಕರಿಸಬೇಕಾಗಬಹುದು. 16 ವರ್ಷದೊಳಗಿನ ಮಕ್ಕಳಿಗೆ ಖಾತೆ ತೆರೆಯಲು ಅವಕಾಶ ನೀಡುವ ಸಂಸ್ಥೆಗಳ ಮೇಲೆ ಭಾರಿ ದಂಡ ವಿಧಿಸುವ ಅವಕಾಶ ಈ ಕಾನೂನಿನಲ್ಲಿರಲಿದೆ.



Click it and Unblock the Notifications