Latest Updates
-
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್!
Karnataka Rain: ಜೂ.23 ರವರೆಗೂ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್ ಅಲರ್ಟ್.. ಮತ್ತೆ ಶಾಲೆಗಳಿಗೆ ರಜೆ ಘೋಷಣೆ
ರಾಜ್ಯದಾದ್ಯಂತ ಜೂನ್ 23ರ ವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಅರಬ್ಬೀ ಸಮುದ್ರದ ಕೊಂಕಣ ಕರಾವಳಿಯಲ್ಲಿ ಸರ್ಕ್ಯುಲೇಷನ್ ಇರುವುದರಿಂದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಜೂನ್ 20 ರವರೆಗೂ ಭಾರೀ ಮಳೆಯಾಗಲಿದೆ. ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಅತ್ಯಂತ ಭಾರೀ ಮಳೆಯ ಹಿನ್ನೆಲೆ ಈ 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಕೊಡಲಾಗಿದೆ. ಉಡುಪಿ, ಉತ್ತರ ಕನ್ನಡದ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜ್ ಶಿಕ್ಷಣ, ಐಟಿಐಗಳಿಗೆ ರಜೆ ಘೋಷಿಸಲಾಗಿದೆ. ಪದವಿ ನಂತರದ ಶಿಕ್ಷಣ ಸಂಸ್ಥೆಗಳಿಗೆ ರಜೆ ಇಲ್ಲ.
ಕರ್ನಾಟಕದಲ್ಲಿ ಮಳೆ (Karnataka Rain) ಚುರುಕುಗೊಂಡಿದೆ. ಕರಾವಳಿ, ಮಲೆನಾಡು ಸೇರಿದಂತೆ ಉತ್ತರ ಕರ್ನಾಟಕದ ಧಾರವಾಡ, ಹಾವೇರಿಯಲ್ಲಿ ರಾತ್ರಿಯಿಡೀ ಧಾರಾಕಾರ ಮಳೆ ಸುರಿದಿದೆ. ಇಂದು ಬೆಳ್ಳಂಬೆಳಗ್ಗೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿದ್ದಾನೆ. ಇಂದು ಸಹ ಅತ್ಯಂತ ಭಾರೀ ಮಳೆಯ ಕಾರಣ ರೆಡ್ ಅಲರ್ಟ್ ಘೋಷಿಸಲಾಗಿದೆ. ನಾಳೆ (ಜೂನ್ 18 ಬುಧವಾರ) ದಕ್ಷಿಣ ಕನ್ನಡ , ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗದಲ್ಲಿ ಭಾರೀ ಮಳೆಯಾಗಲಿದೆ. ಈ 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಕೊಡಲಾಗಿದೆ. ಜೂನ್ 20 ರಿಂದ ಯಾವುದೇ ಜಿಲ್ಲೆಗಳಿಗೆ ಮಳೆ ಅಲರ್ಟ್ ನೀಡಿಲ್ಲ.

ರಾಜ್ಯದಲ್ಲಿ ಇಂದು ಎಲ್ಲೆಲ್ಲಿ ಮಳೆ?
ಇಂದು (ಜೂನ್ 17) ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಅತ್ಯಂತ ಭಾರೀ ಮಳೆಯಾಗಲಿದೆ. ಕೊಡಗು, ಹಾಸನ, ಬೆಳಗಾವಿ, ಮೈಸೂರು, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಹಾಗೆಯೇ ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ನಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮುಂದುವರಿದ ಮಳೆ
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ಸ್ವಲ್ಪ ಮಳೆಯಾಗುತ್ತಿದೆ. ಹೆಚ್ಎಎಲ್ನಲ್ಲಿ 27.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕೆಐಎಎಲ್ನಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರೆಡ್ ಅಲರ್ಟ್ ಜಿಲ್ಲೆಗಳು
ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗುವ ಸೂಚನೆಯಿರುವ ರೆಡ್ ಅಲರ್ಟ್ ಘೋಷಿಸಲಾಗಿದೆ.
ಆರೆಂಜ್ ಅಲರ್ಟ್ ಜಿಲ್ಲೆಗಳು
ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ದಾವಣಗೆರೆ, ಹಾಸನ ಮತ್ತು ಮೈಸೂರಿನಲ್ಲಿ ಅತಿ ಹೆಚ್ಚು ಮಳೆಯಾಗುವ ಎಚ್ಚರಿಕೆಯನ್ನು ಆರೆಂಜ್ ಅಲರ್ಟ್ ಮಾಡಲಾಗಿದೆ.
ಯೆಲ್ಲೋ ಅಲರ್ಟ್ ಜಿಲ್ಲೆಗಳು
ಈ ಮಧ್ಯೆ, ಮಂಡ್ಯ, ಕೊಪ್ಪಳ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ರಾಜ್ಯದಲ್ಲಿ ಭಾರೀ ಮಳೆ ಅಬ್ಬರಿಸುವ ಸೂಚನೆಯಿದ್ದು, ಉತ್ತರ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಕುಮಟಾ, ಕಾರವಾರ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇನ್ನು ಕೊಡಗಿನಲ್ಲೂ ಭಾರೀ ಮಳೆಗೆ ಪ್ರೌಢ ಶಾಲೆವರೆಗೆ ರಜೆ ಘೋಷಿಸಲಾಗಿದೆ. ಉಡುಪಿ ಜಿಲ್ಲೆಯಲ್ಲೂ ಶಾಲೆ, ಪಿಯುಸಿವರೆಗೆ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮಂಗಳೂರು ತಾಲೂಕಿನಲ್ಲಿ ವಿವಿಧೆಡೆ ಹಾನಿ
ಕಂದಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೆ ವಿಮಾನ ನಿಲ್ದಾಣ ರಸ್ತೆ- ಬಜ್ಜೆಯಿಂದ ಅದ್ಯಪಾಡಿಗೆ ಹೋಗುವ ಬೈಲು ಬೀಡು ರಸ್ತೆಯಲ್ಲಿ ಮಳೆನೀರು ಇಂಗಿ ರಸ್ತೆಯಲ್ಲಿ ಬಿರುಕು ಮೂಡಿದೆ. ರಸ್ತೆಯಲ್ಲಿ ಉಬ್ಬು-ತಗ್ಗುಗಳಾಗಿರುವುದರಿಂದ ಇಂಜಿನಿಯರ್ ಸ್ಥಳ ಪರಿಶೀಲಿಸಿದರು. ವಾಹನ ಸಂಚಾರಕ್ಕೆ ಅಪಾಯಕಾರಿಯಾಗಿರುವುದರಿಂದ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಕೆಮ್ಮಂಜೂರು ಗ್ರಾಮದಲ್ಲಿ ಕೃತಕ ನೆರೆ ಉಂಟಾಗಿ ಹಲವಾರು ಮನೆಗಳಿಗೆ ಮಳೆನೀರು ನುಗ್ಗಿದೆ.
ನಿನ್ನೆ ಎಲ್ಲೆಲ್ಲಿ ಮಳೆಯಾಗಿದೆ?
ಮಂಕಿ, ಸಿದ್ದಾಪುರ, ಮಂಗಳೂರು, ಆಗುಂಬೆ, ಕೊಟ್ಟಿಗೆಹಾರ, ಕ್ಯಾಸಲ್ರಾಕ್, ಪಣಂಬೂರು, ಗೇರುಸೊಪ್ಪ, ಕುಂದಾಪುರ, ಉಪ್ಪಿನಂಗಡಿ, ಕದ್ರಾ, ಬಂಟವಾಳ, ಕೋಟಾ, ಹೊನ್ನಾವರ, ಕುಮಟಾ, ಧರ್ಮಸ್ಥಳ, ಮಾಣಿ, ಪುತ್ತೂರು, ಭಾಗಮಂಡಲದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ತುಮಕೂರು, ವಿಜಯನಗರ, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ನಲ್ಲಿ ಮಳೆಯಾಗಿದೆ.



Click it and Unblock the Notifications
