Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
Karnataka Rain: ಜೂ.23 ರವರೆಗೂ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್ ಅಲರ್ಟ್.. ಮತ್ತೆ ಶಾಲೆಗಳಿಗೆ ರಜೆ ಘೋಷಣೆ
ರಾಜ್ಯದಾದ್ಯಂತ ಜೂನ್ 23ರ ವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಅರಬ್ಬೀ ಸಮುದ್ರದ ಕೊಂಕಣ ಕರಾವಳಿಯಲ್ಲಿ ಸರ್ಕ್ಯುಲೇಷನ್ ಇರುವುದರಿಂದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಜೂನ್ 20 ರವರೆಗೂ ಭಾರೀ ಮಳೆಯಾಗಲಿದೆ. ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಅತ್ಯಂತ ಭಾರೀ ಮಳೆಯ ಹಿನ್ನೆಲೆ ಈ 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಕೊಡಲಾಗಿದೆ. ಉಡುಪಿ, ಉತ್ತರ ಕನ್ನಡದ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜ್ ಶಿಕ್ಷಣ, ಐಟಿಐಗಳಿಗೆ ರಜೆ ಘೋಷಿಸಲಾಗಿದೆ. ಪದವಿ ನಂತರದ ಶಿಕ್ಷಣ ಸಂಸ್ಥೆಗಳಿಗೆ ರಜೆ ಇಲ್ಲ.
ಕರ್ನಾಟಕದಲ್ಲಿ ಮಳೆ (Karnataka Rain) ಚುರುಕುಗೊಂಡಿದೆ. ಕರಾವಳಿ, ಮಲೆನಾಡು ಸೇರಿದಂತೆ ಉತ್ತರ ಕರ್ನಾಟಕದ ಧಾರವಾಡ, ಹಾವೇರಿಯಲ್ಲಿ ರಾತ್ರಿಯಿಡೀ ಧಾರಾಕಾರ ಮಳೆ ಸುರಿದಿದೆ. ಇಂದು ಬೆಳ್ಳಂಬೆಳಗ್ಗೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿದ್ದಾನೆ. ಇಂದು ಸಹ ಅತ್ಯಂತ ಭಾರೀ ಮಳೆಯ ಕಾರಣ ರೆಡ್ ಅಲರ್ಟ್ ಘೋಷಿಸಲಾಗಿದೆ. ನಾಳೆ (ಜೂನ್ 18 ಬುಧವಾರ) ದಕ್ಷಿಣ ಕನ್ನಡ , ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗದಲ್ಲಿ ಭಾರೀ ಮಳೆಯಾಗಲಿದೆ. ಈ 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಕೊಡಲಾಗಿದೆ. ಜೂನ್ 20 ರಿಂದ ಯಾವುದೇ ಜಿಲ್ಲೆಗಳಿಗೆ ಮಳೆ ಅಲರ್ಟ್ ನೀಡಿಲ್ಲ.

ರಾಜ್ಯದಲ್ಲಿ ಇಂದು ಎಲ್ಲೆಲ್ಲಿ ಮಳೆ?
ಇಂದು (ಜೂನ್ 17) ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಅತ್ಯಂತ ಭಾರೀ ಮಳೆಯಾಗಲಿದೆ. ಕೊಡಗು, ಹಾಸನ, ಬೆಳಗಾವಿ, ಮೈಸೂರು, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಹಾಗೆಯೇ ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ನಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮುಂದುವರಿದ ಮಳೆ
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ಸ್ವಲ್ಪ ಮಳೆಯಾಗುತ್ತಿದೆ. ಹೆಚ್ಎಎಲ್ನಲ್ಲಿ 27.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕೆಐಎಎಲ್ನಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರೆಡ್ ಅಲರ್ಟ್ ಜಿಲ್ಲೆಗಳು
ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗುವ ಸೂಚನೆಯಿರುವ ರೆಡ್ ಅಲರ್ಟ್ ಘೋಷಿಸಲಾಗಿದೆ.
ಆರೆಂಜ್ ಅಲರ್ಟ್ ಜಿಲ್ಲೆಗಳು
ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ದಾವಣಗೆರೆ, ಹಾಸನ ಮತ್ತು ಮೈಸೂರಿನಲ್ಲಿ ಅತಿ ಹೆಚ್ಚು ಮಳೆಯಾಗುವ ಎಚ್ಚರಿಕೆಯನ್ನು ಆರೆಂಜ್ ಅಲರ್ಟ್ ಮಾಡಲಾಗಿದೆ.
ಯೆಲ್ಲೋ ಅಲರ್ಟ್ ಜಿಲ್ಲೆಗಳು
ಈ ಮಧ್ಯೆ, ಮಂಡ್ಯ, ಕೊಪ್ಪಳ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ರಾಜ್ಯದಲ್ಲಿ ಭಾರೀ ಮಳೆ ಅಬ್ಬರಿಸುವ ಸೂಚನೆಯಿದ್ದು, ಉತ್ತರ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಕುಮಟಾ, ಕಾರವಾರ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇನ್ನು ಕೊಡಗಿನಲ್ಲೂ ಭಾರೀ ಮಳೆಗೆ ಪ್ರೌಢ ಶಾಲೆವರೆಗೆ ರಜೆ ಘೋಷಿಸಲಾಗಿದೆ. ಉಡುಪಿ ಜಿಲ್ಲೆಯಲ್ಲೂ ಶಾಲೆ, ಪಿಯುಸಿವರೆಗೆ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮಂಗಳೂರು ತಾಲೂಕಿನಲ್ಲಿ ವಿವಿಧೆಡೆ ಹಾನಿ
ಕಂದಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೆ ವಿಮಾನ ನಿಲ್ದಾಣ ರಸ್ತೆ- ಬಜ್ಜೆಯಿಂದ ಅದ್ಯಪಾಡಿಗೆ ಹೋಗುವ ಬೈಲು ಬೀಡು ರಸ್ತೆಯಲ್ಲಿ ಮಳೆನೀರು ಇಂಗಿ ರಸ್ತೆಯಲ್ಲಿ ಬಿರುಕು ಮೂಡಿದೆ. ರಸ್ತೆಯಲ್ಲಿ ಉಬ್ಬು-ತಗ್ಗುಗಳಾಗಿರುವುದರಿಂದ ಇಂಜಿನಿಯರ್ ಸ್ಥಳ ಪರಿಶೀಲಿಸಿದರು. ವಾಹನ ಸಂಚಾರಕ್ಕೆ ಅಪಾಯಕಾರಿಯಾಗಿರುವುದರಿಂದ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಕೆಮ್ಮಂಜೂರು ಗ್ರಾಮದಲ್ಲಿ ಕೃತಕ ನೆರೆ ಉಂಟಾಗಿ ಹಲವಾರು ಮನೆಗಳಿಗೆ ಮಳೆನೀರು ನುಗ್ಗಿದೆ.
ನಿನ್ನೆ ಎಲ್ಲೆಲ್ಲಿ ಮಳೆಯಾಗಿದೆ?
ಮಂಕಿ, ಸಿದ್ದಾಪುರ, ಮಂಗಳೂರು, ಆಗುಂಬೆ, ಕೊಟ್ಟಿಗೆಹಾರ, ಕ್ಯಾಸಲ್ರಾಕ್, ಪಣಂಬೂರು, ಗೇರುಸೊಪ್ಪ, ಕುಂದಾಪುರ, ಉಪ್ಪಿನಂಗಡಿ, ಕದ್ರಾ, ಬಂಟವಾಳ, ಕೋಟಾ, ಹೊನ್ನಾವರ, ಕುಮಟಾ, ಧರ್ಮಸ್ಥಳ, ಮಾಣಿ, ಪುತ್ತೂರು, ಭಾಗಮಂಡಲದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ತುಮಕೂರು, ವಿಜಯನಗರ, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ನಲ್ಲಿ ಮಳೆಯಾಗಿದೆ.



Click it and Unblock the Notifications

