Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ರಾಜ್ಯದಲ್ಲಿ 3 ದಿನ ಭಾರೀ ಮಳೆ: ಮಂಗಳೂರಲ್ಲಿ ಭಯಂಕರ ಮಳೆ.. ಈ 6 ಜಿಲ್ಲೆಗಳಿಗೆ ರೆಡ್ ಅಲರ್ಟ್
ಸೈಕ್ಲೋನ್ ಎಫೆಕ್ಟ್, ಇಂದಿನಿಂದ ಮೂರು ದಿನ ಭಾರೀ ಮಳೆ. ಈ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ. ಹೌದು, ರಾಜ್ಯದಲ್ಲಿ ಕೆಲ ವಾರಗಳಿಂದ ವರುಣಾರ್ಭಟ ಜೋರಾಗಿಯೇ ಇದೆ. ಮುಂಗಾರು ಪೂರ್ವ ಮಳೆಯಿಂದಾಗಿ ಹಲವು ಜಿಲ್ಲೆಗಳು ತತ್ತರಿಸಿ ಹೋಗಿದ್ದು, ಭಾರೀ ಹಾನಿ ಸಂಭವಿಸಿದೆ. ಇಂದು ಸಹ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ನೈಋುತ್ಯ ಮುಂಗಾರು ತೀವ್ರವಾಗಿದೆ. ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭರ್ಜರಿ ಮಳೆಯಾಗಿದೆ. ಕರಾವಳಿಯಲ್ಲಿ ಗಾಳಿ ಸಹಿತ ಮಳೆಯಾಗುತ್ತಿದೆ. ಕುಮಟಾದಲ್ಲಿ ಗರಿಷ್ಠ ಮಳೆ ದಾಖಲಾಗಿದೆ.
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ನೈಋುತ್ಯ ಮುಂಗಾರು ಚುರುಕಾಗಿದ್ದು, ಎರಡು ದಿನ ಭಾರೀ ಮಳೆಯಾಗುವ (Karnataka Rain) ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಭರ್ಜರಿ ಮಳೆಯಾಗಿದ್ದು, ಮಂಗಳೂರು ನಗರ ಪ್ರದೇಶದಲ್ಲಿ ವಿಶೇಷವಾಗಿ ಮಳೆ ಅವಾಂತರ ಸೃಷ್ಟಿಯಾಗಿದೆ. ಇಂದು (ಭಾನುವಾರ) ಬೆಳಗ್ಗೆಯೂ ನಿರಂತರವಾಗಿ ಮಳೆಯಾಗುತ್ತಿದೆ. ಮಂಗಳೂರು ನಗರದ ಪಂಪ್ವೆಲ್ ಸರ್ಕಲ್ ಮುಳುಗಡೆಯಾಗಿದೆ. ಭಾರೀ ಪ್ರಮಾಣದ ಮಳೆ ನೀರು ರಸ್ತೆಯಲ್ಲಿ ಹರಿಯುತ್ತಿದ್ದು, ಸಂಪೂರ್ಣ ರಸ್ತೆ ಸಂಚಾರ ಬಂದ್ ಆಗಿದೆ. ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಆತಂಕ ಸೃಷ್ಠಿಸಿದೆ. ಮಳೆ ನೀರಿನಲ್ಲೇ ಸಂಚರಿಸಲು ಯತ್ನಿಸಿ, ನಡುರಸ್ತೆಯಲ್ಲೇ ಕೆಟ್ಟು ನಿಂತಿದ್ದ ಖಾಸಗಿ ಬಸ್ವೊಂದನ್ನು ಸ್ಥಳೀಯರು ತಳ್ಳಿ ರಸ್ತೆ ಪಕ್ಕಕ್ಕೆ ನಿಲ್ಲಿಸಿದ್ದಾರೆ.

ಸೈಕ್ಲೋನ್ ಎಫೆಕ್ಟ್, ಈ 6 ಜಿಲ್ಲೆಗಳಿಗೆ ರೆಡ್ ಅಲರ್ಟ್
ಸೈಕ್ಲೋನ್ ಎಫೆಕ್ಟ್ನಿಂದ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆ ಕರಾವಳಿ, ಕೊಡಗು, ಚಿಕ್ಕಮಗಳೂರು ಸೇರಿದಂತೆ 6 ಜಿಲ್ಲೆಗಳಿಗೆ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಇಂದು (ಭಾನುವಾರ) ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
48 ಗಂಟೆಗಳಲ್ಲಿ ಮಳೆ, ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಹಾಗೂ ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕದ ಭಾಗದಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಸ್ಥಿತಿ ಉಂಟಾಗಿದೆ. ಇಂದಿನಿಂದ ಮೂರು ದಿನಗಳ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜಾಗೃತವಾಗಿರುವಂತೆ ಎಚ್ಚರಿಕೆಯನ್ನು ನೀಡಿದೆ. ಬೆಳಗಾವಿ, ಧಾರವಾಡ, ಹಾವೇರಿ, ಹಾಸನ, ಬೀದರ್, ಬೆಂಗಳೂರು, ಮೈಸೂರು ಸೇರಿದಂತೆ ಹಲವು ಭಾಗಗಳಿಗೂ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಉಳಿದೆಡೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ನಾಳೆ ಕರಾವಳಿ ಜಿಲ್ಲೆಗಳಿಗೆ ಮಾತ್ರ ರೆಡ್ ಅಲರ್ಟ್
ನಾಳೆ (ಜೂನ್ 16) ಕರಾವಳಿ ಜಿಲ್ಲೆಗಳಿಗೆ ಮಾತ್ರ ರೆಡ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಚಂಡಮಾರುತ, ವಾಯುಭಾರ ಕುಸಿತದ ಪ್ರಭಾವಗಳಿಂದ ಕಳೆದ ಕೆಲ ದಿನಗಳಿಂದ ರಾಜ್ಯದ ನಾನಾ ಕಡೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಆಗಲಿದೆ.
ಜೂ.17 ರಂದು 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಇನ್ನು ಜೂನ್ 17 ರಂದು ರಾಜ್ಯದ 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮೈಸೂರು, ಹಾಸನ, ಚಾಮರಾಜನಗರ, ಧಾರವಾಡ, ಬೆಳಗಾವಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಅಲ್ಲದೆ, ಉಳಿದೆಡೆ ಮಳೆ ಆಗುವ ಸಾಧ್ಯತೆ ಕಡಿಮೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂನ್ 18 ರಿಂದ ಮಳೆ ಪ್ರಮಾಣದಲ್ಲಿ ಕಡಿಮೆಯಾಗಲಿದ್ದು, ಕರಾವಳಿ ಜಿಲ್ಲೆಗಳಿಗೆ ಮಾತ್ರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.



Click it and Unblock the Notifications
