Latest Updates
-
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ?
Karnataka Rain: ರಾಜ್ಯದಲ್ಲಿ 6 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್ ಅಲರ್ಟ್.. ಎಲ್ಲೆಲ್ಲಿ ಪ್ರವಾಹ
ರಾಜ್ಯದಾದ್ಯಂತ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಮುಂದಿನ ಆರು ದಿನಗಳ ಕಾಲ ಸಾಧಾರಣದಿಂದ ಭಾರೀ ಮಳೆಯಾಗುವ (Heavy Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು, ರಾಜ್ಯದಲ್ಲಿ ಮುಂಗಾರು ತೀವ್ರವಾಗಿದ್ದು, ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಿಂದಾಗಿ ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಮಲೆನಾಡಿನಲ್ಲಿ ನದಿಗಳು ತುಂಬಿ ಹರಿಯುತ್ತಿದ್ದು, ಭೂಕುಸಿತಗಳು ಸಂಭವಿಸಿವೆ. ಕಳೆದ ಎರಡು ದಿನಗಳಿಂದ ಮಳೆಯ ತೀವ್ರತೆ ಕೊಂಚ ಕಡಿಮೆಯಾಗಿದ್ದರೂ, ಮುಂದಿನ ಆರು ದಿನಗಳ ಕಾಲ ಮತ್ತೆ ಮಳೆ ಹೆಚ್ಚಾಗುವ (Karnataka Rain) ಸಾಧ್ಯತೆಯಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಜುಲೈ 3ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇದರ ಪರಿಣಾಮವಾಗಿ, ಕೆಲವು ಜಿಲ್ಲೆಗಳಿಗೆ ಹೈ ಅಲರ್ಟ್ ನೀಡಲಾಗಿದೆ. ಭಾರೀ ಮಳೆಯಿಂದಾಗಿ ಉಂಟಾಗುವ ಪ್ರವಾಹದ ಪರಿಸ್ಥಿತಿಯನ್ನು ಎದುರಿಸಲು ಸಾರ್ವಜನಿಕರು ಕೆಲವು ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯ. ಪ್ರವಾಹ ಪ್ರದೇಶಗಳಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದ ಇರಬೇಕು. ನದಿ, ಕೆರೆಗಳ ಬಳಿ ಸಂಚರಿಸುವುದನ್ನು ತಪ್ಪಿಸಬೇಕು. ವಿದ್ಯುತ್ ಸ್ಫುಲಿಂಗಗಳಿಂದ ದೂರವಿರಬೇಕು. ಯಾವುದೇ ತೊಂದರೆಯಾದಲ್ಲಿ ಸ್ಥಳೀಯ ಅಧಿಕಾರಿಗಳ ಸಹಾಯವನ್ನು ಪಡೆಯಬೇಕು ಎಂದು ಸೂಚಿಸಲಾಗಿದೆ.

ಕೊಡಗಿಗೆ ರೆಡ್ ಅಲರ್ಟ್, ಪ್ರವಾಹದ ಭೀತಿ
ಕೊಡಗು ಜಿಲ್ಲೆಯಲ್ಲಿ ಇಂದು ಸಹ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಪ್ರದೇಶದಲ್ಲಿ ಪ್ರವಾಹದ ಅಪಾಯ ಹೆಚ್ಚಾಗಿದ್ದು, ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಗುಡ್ಡ ಕುಸಿತದ ಭೀತಿ ಜನರನ್ನು ಆತಂಕಕ್ಕೀಡು ಮಾಡಿದೆ. ಕೊಡಗಿನಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಮುಂದಿನ ಆರು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಭಾಗದ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. ಮುಂದಿನ ಮೂರು ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಗಾಳಿಯು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದ್ದು, ಮಳೆಯ ತೀವ್ರತೆ ಹೆಚ್ಚಾಗಲಿದೆ.
ಕಲಬುರಗಿ, ಬೀದರ್, ಬೆಳಗಾವಿಗೆ ಯೆಲ್ಲೋ ಅಲರ್ಟ್
ಕಲಬುರಗಿ, ಬೀದರ್ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ. ಈ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಹವಾಮಾನ ಇಲಾಖೆಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸೂಚನೆ ನೀಡಿದೆ. ಒಟ್ಟಾರೆ, ಮುಂಗಾರು ಚುರುಕಾಗುವ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಎಲ್ಲೆಲ್ಲಿ ಭಾರೀ ಮಳೆ
ಕೊಡಗಿನಲ್ಲಿ ಸತತವಾಗಿ ಭಾರಿ ಮಳೆಯಾಗುತ್ತಿರುವುದರಿಂದ ನದಿಗಳು ಮತ್ತು ಹಳ್ಳಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಇದರಿಂದಾಗಿ ವಿರಾಜಪೇಟೆ, ಕೊಟ್ಟಿಗೆಹಾರ, ಶೃಂಗೇರಿ, ಹುಂಚದಕಟ್ಟೆ, ಬೆಳ್ತಂಗಡಿ, ಯಲ್ಲಾಪುರ, ಕ್ಯಾಸಲ್ ರಾಕ್, ಖಾನಾಪುರ, ಕೊಪ್ಪ, ಸೋಮವಾರಪೇಟೆ, ಪೊನ್ನಂಪೇಟೆ, ಸಿದ್ದಾಪುರ, ಕದ್ರಾ ಮತ್ತು ಬನವಾಸಿ ಪ್ರದೇಶಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಈ ಪ್ರದೇಶಗಳಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.
ಸಾಧಾರಣ ಮಳೆಯಾಗುವ ಜಿಲ್ಲೆಗಳು
ರಾಜ್ಯದ ಇತರೆ ಜಿಲ್ಲೆಗಳಾದ ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ
ಕರಾವಳಿ ಪ್ರದೇಶಗಳಾದ ಲೋಂಡಾ, ಜಯಪುರ, ಕಾರ್ಕಳ, ಬಂಟವಾಳ, ಸುಳ್ಯ, ಗೇರುಸೊಪ್ಪ, ಹೊನ್ನಾವರ, ಮಾಣಿ, ಶಕ್ತಿನಗರ, ಕುಂದಾಪುರ, ಮೂಡುಬಿದಿರೆ, ಅಂಕೋಲಾ, ಗೋಕರ್ಣ, ಶಿರಾಲಿ, ಮಂಗಳೂರು ಮುಂತಾದ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಈ ಪ್ರದೇಶಗಳಲ್ಲಿ ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.



Click it and Unblock the Notifications












