Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
Karnataka Weather: ರಾಜ್ಯದಲ್ಲಿ ಗಾಳಿ ಸಹಿತ ಭಾರೀ ಮಳೆಯ ಮುನ್ಸೂಚನೆ..! ಅಲರ್ಟ್ ಘೋಷಣೆ
ರಾಜ್ಯದಲ್ಲಿ ಪೂರ್ವ ಮುಂಗಾರಿನ ಅಬ್ಬರ ಹೆಚ್ಚಾಗುತ್ತಿದೆ. ಮಲೆನಾಡು, ಕರಾವಳಿಯಲ್ಲಿ ನಿರೀಕ್ಷೆ ಮೀರಿ ಮಳೆಯಾಗುತ್ತಿದೆ. ಅದರಲ್ಲೂ ಈ ವರ್ಷ ಮುಂಗಾರು ಅವಧಿ ಮುನ್ನವೇ ಆರಂಭವಾಗುತ್ತಿದ್ದು, ಈ ಮಳೆಯಿಂದಾಗಿ ಜನರಲ್ಲಿ ಸಂತಸ ಮನೆ ಮಾಡಿದೆ. ಕಳೆದೊಂದು ವಾರದಿಂದಲೂ ಉತ್ತಮ ಮಳೆಯಾಗುತ್ತಿದ್ದು, ಈ ಮಳೆ ಮುಂದುವರೆಯುವ ಸೂಚನೆ ಸಿಕ್ಕಿದೆ.
ಸದ್ಯ ರಾಜ್ಯದೆಲ್ಲೆಡೆ ಬಿಸಿಲ ಬೇಗೆ ಕಡಿಮೆಯಾಗಿದ್ದು, ತಾಪಮಾಣ ಇಳಿಕೆ ಕಂಡಿದೆ. ಹಾಗೆ ಜಲಾಶಯಗಳಲ್ಲೂ ನೀರಿನ ಮಟ್ಟ ಏರಿಕೆಯಾಗಿರುವುದು ರೈತರಲ್ಲೂ ಸಂತಸಕ್ಕೆ ಕಾರಣವಾಗಿದೆ. ಹಾಗೆ ಈ ಮಳೆ ಮತ್ತಷ್ಟು ದಿನ ಮುಂದುವರೆಯುವ ಸೂಚನೆ ಸಿಕ್ಕಿದೆ. ಸದ್ಯ ಮಳೆ ಮುಂದುವರೆದಿರುವುದು ಶಿವಮೊಗ್ಗ ತುಂಗಾ ಜಲಾಶಯದ ನೀರಿನ ಮಟ್ಟ ಏರಿಕೆಗೆ ಕಾರಣವಾಗಿದೆ. ಸುಮಾರು 2500 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ ಎಂದು ತಿಳಿದುಬಂದಿದೆ. ಸಾಮಾನ್ಯವಾಗಿ ಈ ಸಮಯದಲ್ಲಿ ನೀರು ಹೊರಬಿಡುವ ಪ್ರಕ್ರಿಯೆ ಇರುವುದಿಲ್ಲ. ಆದ್ರೆ ಅತ್ಯಧಿಕ ಮಳೆಯಿಂದಾಗಿ ನೀರು ಹೊರಬಿಡಲಾಗುತ್ತಿದೆ.

ರಾಜ್ಯದ ಹಲವು ಜಿಲ್ಲೆಗೆ ರೆಡ್ ಅಲರ್ಟ್
ಕಳೆದೊಂದು ವಾರದಿಂದ ಬಿಡುವು ನೀಡದೆ ಮಳೆ ಸುರಿಯುತ್ತಿದೆ. ಆದ್ರೆ ಈಗ ರಾಜ್ಯದ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇಂದು ಗುಡುಗು, ಮಿಂಚು ಮತ್ತು ಬಿರುಗಾಳಿ ಜೊತೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹಾಗೆ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅರಬ್ಬಿ ಸಮುದ್ರದಲ್ಲಿ ವಾಯು ಭಾರ ಕುಸಿತವಾದರೆ ಕೇರಳ, ತಮಿಳುನಾಡು, ಕರ್ನಾಟಕ ಭಾಗದಲ್ಲಿ ಭಾರೀ ಮಳೆಯಾಗಲಿದೆ. ಹೀಗಾಗಿ ಇಂದು ಶಿವಮೊಗ್ಗ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಗಾಳಿಯಿಂದ ಕೂಡಿರುವ ಮಳೆ ಬೀಳಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಹಾಗೆ ಧಾರವಾಡ, ಗದಗ, ಹಾವೇರಿ, ಹಾಸನ, ಮೈಸೂರು ಜಿಲ್ಲೆಗೆ ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಹಾಗೆ ಮೇ 17 ಹಾಗೂ 28ರಂದು ದಕ್ಷಿಣ ಒಳನಾಡಿದ ಹಲವು ಭಾಗದಲ್ಲಿ ಉತ್ತಮ ಮಳೆಯಾಗಲಿದ್ದು, ಇದೇ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸದ್ಯ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವುದು ಸಂತಸ ತರುವಂತಿದೆ.
ಬೆಂಗಳೂರಲ್ಲೂ ಮಳೆ
ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಮಳೆ ಅಬ್ಬರಿಸುತ್ತಿದೆ, ಮೊದಲ ಮಳೆಗೆ ಬೆಂಗಳೂರು ತತ್ತರಿಸಿದೆ. ಇನ್ನು ಮುಂದಿನ 2 ದಿನಗಳ ಕಾಲ ಬೆಂಗಳೂರಿನಲ್ಲೂ ಹಗುರದಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸದ್ಯ ಬೆಂಗಳೂರಲ್ಲಿ ಮಳೆ ಬಿಡುವು ನೀಡಿರುವುದು ರಾಜಧಾನಿ ಮಂದಿ ನಿಟ್ಟುಸಿರು ಬಿಡುವಂತೆ ಮಾಡಿದೆ.
ಕೇರಳದಲ್ಲಿ ರೆಡ್ ಅಲರ್ಟ್
ಕೇರಳದಲ್ಲಿ ಮಳೆ ಹಾಗೂ ಗಾಳಿಯ ಅಬ್ಬರ ಮತ್ತಷ್ಟು ಜೋರಾಗಿದೆ. ಅಲ್ಲಿನ 11 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಗೆ ಶೂರ್, ಇಡುಕ್ಕಿ, ಎರ್ನಾಕುಲಂ, ವಯನಾಡ್ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗ ರಜೆ ಘೋಷಿಸಲಾಗಿದೆ.
ಇನ್ನು 26 ರಂದು ಬಿಹಾರ, ಪೂರ್ವ ಮಧ್ಯಪ್ರದೇಶ, 27 ಮತ್ತು 28 ರಂದು ಹಿಮಾಚಲ ಪ್ರದೇಶ, ಮೇ 27-29 ರಂದು ಕರಾವಳಿ ಆಂಧ್ರಪ್ರದೇಶದಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದ್ದು, ಈ ಸಮಯದಲ್ಲಿ ಗಾಳಿಯ ವೇಗ ಪ್ರತಿ ಗಂಟೆಗೆ 50ರಿಂದ 60 ಕಿ.ಮೀ ಇರಲಿದೆ ಎಂದು ಮುನ್ಸೂಚನೆ ನೀಡಿದೆ. ಈ ಮೊದಲು ಮೇ 27ರಿಂದ ಮಾನ್ಸೂನ್ ಮಳೆಯ ಸೂಚನೆ ನೀಡಲಾಗಿತ್ತು, ಅದರಂತೆ ಮಳೆ ಕೂಡ ಆರಂಭಗೊಂಡಿದೆ. ಮುಂದಿನ ಒಂದು ವಾರದೊಳಗೆ ಮುಂಗಾರು ಮಳೆ ಕಾರ್ಯವೃತ್ತವಾಗುವುದು ಖಚಿತವಾಗಿದೆ.



Click it and Unblock the Notifications
