Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಬೆಂಗಳೂರಿಗೆ ಬಿಗ್ ಅಲರ್ಟ್! ಆ.9 ರವರೆಗೂ ರಣಭೀಕರ ಮಳೆ.. ರಾಜ್ಯದ 29 ಜಿಲ್ಲೆಗಳಲ್ಲಿ ಹೈ ಅಲರ್ಟ್
ರಾಜ್ಯದಲ್ಲಿ ಕೆಲ ದಿನಗಳಿಂದ ಬಿಡುವು ಕೊಟ್ಟಿದ್ದ ಮುಂಗಾರು ಮತ್ತೆ ಚುರುಕುಗೊಂಡಿದೆ. ಆಗಸ್ಟ್ 9 ರವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ (Karnataka Weather) ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ರಾಜ್ಯದ 29 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮುಂಬರುವ ದಿನಗಳಲ್ಲಿ ರಾಜ್ಯದಾದ್ಯಂತ ಹವಾಮಾನದಲ್ಲಿ ಗಮನಾರ್ಹ ಬದಲಾವಣೆ ಇರಲಿದೆ. ಬನ್ನಿ, ಇಂದು ಎಲ್ಲೆಲ್ಲಿ ಅಧಿಕ ಮಳೆಯಾಗಲಿದೆ (Karnataka Rain) ಎಂದು ತಿಳಿಯೋಣ.
ರಾಜಧಾನಿ ಬೆಂಗಳೂರಿಗೆ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಕಳೆದ ಎರಡು ದಿನಗಳಿಂದಲೂ ಸಿಲಿಕಾನ್ ಸಿಟಿಯಲ್ಲಿ ಉತ್ತಮ ಮಳೆಯಾಗಿದ್ದು, ಇಂದೂ ಕೂಡ ವರುಣನ ಅಬ್ಬರ ಕಾಣಬಹುದು. ಸಾಮಾನ್ಯವಾಗಿ, ಬೆಳಗ್ಗೆ ಬಿಸಿಲಿದ್ದರೂ ಸಂಜೆ ವೇಳೆಗೆ ಮೋಡ ಕವಿದು ರಾತ್ರಿ ವೇಳೆ ಜೋರು ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಮಳೆಯ ತೀವ್ರತೆ ಹೆಚ್ಚುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಈ ಭಾಗಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯಾದ್ಯಂತ ಮಳೆಯ ಅಬ್ಬರ ಮುಂದುವರಿಯಲಿದೆ.

16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಹವಾಮಾನ ಇಲಾಖೆ ರಾಜ್ಯದ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ವಿಜಯನಗರ, ಶಿವಮೊಗ್ಗ, ರಾಮನಗರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಈ ಜಿಲ್ಲೆಗಳಲ್ಲಿ ಸಂಜೆ ನಂತರ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ.
10 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಉಳಿದಂತೆ ರಾಜ್ಯದ 10 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಜಾರಿಗೊಳಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಮತ್ತು ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ದಿನಗಳಲ್ಲಿ ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಎಲ್ಲೆಲ್ಲಿ ಮಳೆ?
ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ರಾಯಲ್ಪಾಡು, ಆಗುಂಬೆ, ಜಿಕೆವಿಕೆ, ಕೃಷ್ಣರಾಜಪೇಟೆ, ಹೊಸಕೋಟೆ, ಗೌರಿಬಿದನೂರು, ಧರ್ಮಸ್ಥಳ, ಹೆಸರಘಟ್ಟ, ಬೆಳ್ತಂಗಡಿ, ಉಡುಪಿ, ಸುಳ್ಯ, ಪುತ್ತೂರು, ಮೂಡುಬಿದಿರೆ, ಕೋಟಾ, ಕಾರ್ಕಳ, ಬೀದರ್, ಭಾಗಮಂಡಲದಲ್ಲಿ ಈಗಾಗಲೇ ಉತ್ತಮ ಮಳೆ ಸುರಿದಿದೆ. ಬಂಟವಾಳ, ಟಿಜಿ ಹಳ್ಳಿ, ನಾಪೋಕ್ಲು, ಮಾಣಿ, ಮಾಗಡಿ, ಕುಂದಾಪುರ, ಕಿಬ್ಬನಹಳ್ಳಿ, ಕಳಸ, ಗೋಪಾಲ್ನಗರ, ಚನ್ನರಾಯಪಟ್ಟಣ, ಭದ್ರಾವತಿ, ಬೆಂಗಳೂರು ಎಚ್ಎಎಲ್, ಉಪ್ಪಿನಂಗಡಿ, ತಿಪಟೂರು, ಸಿದ್ದಾಪುರ, ಮಂಕಿ, ಪೊನ್ನಂಪೇಟೆ, ಕುಣಿಗಲ್, ಕೊಟ್ಟಿಗೆಹಾರ, ದೇವರಹಿಪ್ಪರಗಿ, ಕ್ಯಾಸಲ್ ರಾಕ್, ಬೇಳೂರು, ಆನವಟ್ಟಿ ಸೇರಿದಂತೆ ಹಲವೆಡೆ ಮಳೆಯಾಗಿರುವುದಾಗಿ ವರದಿಯಾಗಿದೆ. ಬೆಂಗಳೂರಿನಲ್ಲಿ ಸತತ ಎರಡು ದಿನಗಳಿಂದ ಮಳೆಯಾಗುತ್ತಿದ್ದು, ಸೋಮವಾರ ಸಂಜೆ ಶುರುವಾದ ಮಳೆ ತಡರಾತ್ರಿಯವರೆಗೂ ಮುಂದುವರಿದಿದೆ.
ರಾಜ್ಯದಲ್ಲಿ ಹವಾಮಾನ ಹೇಗಿದೆ?
• ಬೆಂಗಳೂರಿನ ಎಚ್ಎಎಲ್ - ಗರಿಷ್ಠ 29.0 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20.0 ಡಿಗ್ರಿ ಸೆಲ್ಸಿಯಸ್
• ಬೆಂಗಳೂರು ನಗರ - ಗರಿಷ್ಠ 29.0 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20.2 ಡಿಗ್ರಿ ಸೆಲ್ಸಿಯಸ್
• ಕಾರವಾರ - ಗರಿಷ್ಠ 31.8 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24.8 ಡಿಗ್ರಿ ಸೆಲ್ಸಿಯಸ್
• ಹೊನ್ನಾವರ - ಗರಿಷ್ಠ 30.3 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25.0 ಡಿಗ್ರಿ ಸೆಲ್ಸಿಯಸ್
• ವಿಜಯಪುರ - ಗರಿಷ್ಠ 30.5 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21.0 ಡಿಗ್ರಿ ಸೆಲ್ಸಿಯಸ್
• ಬೀದರ್ - ಗರಿಷ್ಠ 30.0 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22.0 ಡಿಗ್ರಿ ಸೆಲ್ಸಿಯಸ್
ಒಟ್ಟಾರೆಯಾಗಿ, ಮಳೆಗಾಲದ ಅರ್ಧಭಾಗ ಮುಗಿದು ಮಳೆ ನಿಲ್ಲಬಹುದು ಎಂದು ಜನರು ಭಾವಿಸಿದ್ದರು. ಆದರೆ, ಆಗಸ್ಟ್ 9 ರವರೆಗೂ ರಾಜ್ಯದಾದ್ಯಂತ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ, ಎಲ್ಲ ಜಿಲ್ಲೆಗಳಲ್ಲೂ ಮಳೆ ಅಲರ್ಟ್ ಘೋಷಿಸಲಾಗಿದೆ.



Click it and Unblock the Notifications












