Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮೂರು ದಿನ ಅತಿ ಭಾರೀ ಮಳೆ! 19 ಜಿಲ್ಲೆಗಳಲ್ಲಿ ಹೈ ಅಲರ್ಟ್.. ಈ ಜಿಲ್ಲೆಯಲ್ಲಿ ರಜೆ ಘೋಷಣೆ
ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಆಶ್ಲೇಷಾ ಮಳೆ ಅಬ್ಬರಿಸುತ್ತಿದೆ. ಮುಂದಿನ ಮೂರು ದಿನಗಳಲ್ಲೂ ಭಾರೀ ಮಳೆ (Karnataka Weather) ಮುಂದುವರಿಯುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಈಗಾಗಲೇ ವ್ಯಾಪಕ ಮಳೆಯಾಗಿದ್ದು, ಉತ್ತರ ಕರ್ನಾಟಕದ ಕೆಲವು ಪ್ರದೇಶಗಳಿಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಳೆದ ಮೂರು ದಿನಗಳಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಸುರಿಯುತ್ತಿದೆ. ಬೆಂಗಳೂರು ಸೇರಿದಂತೆ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲೂ ಭಾರೀ ಮಳೆಯಾಗಿದೆ. ವ್ಯಾಪಕ ಮಳೆ (Karnataka Rain) ನಿರೀಕ್ಷೆಯಿರುವ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಕಟ್ಟೆಚ್ಚರ ನೀಡಿದೆ.
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇಂದು ಮತ್ತು ನಾಳೆಯೂ ಸಹ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಜಾರಿಯಲ್ಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಬಿರುಗಾಳಿಯೊಂದಿಗೆ ಆಗಸ್ಟ್ 6 ಮತ್ತು 7 ರಂದು ಭಾರೀಯಿಂದ ಅತಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ರಾಜ್ಯದ ಹಲೆವೆಡೆ ಇಂದು ಭಾರೀ ಮಳೆಯಾಗುತ್ತಿದೆ. ಇತ್ತ ಕೊಡಗು ಜಿಲ್ಲೆಯಲ್ಲಿ ಮಳೆ ಅವಾಂತರ ಸೃಷ್ಟಿಸಿದೆ. ಭಾರತೀಯ ಹವಾಮಾನ ಇಲಾಖೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದು ಭೀಕರ ಮಳೆಯಾಗಲಿದೆ ಎಂದು ತಿಳಿಸಿದೆ. ಹೀಗಾಗಿ, ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಇಂದು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.
ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಕೊಪ್ಪಳ, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ವ್ಯಾಪಕ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದು ಮುಂದಿನ ದಿನಗಳಲ್ಲಿ ತೀವ್ರತೆಯನ್ನು ಹೆಚ್ಚಿಸಬಹುದಾದ ಮಳೆಯ ಮುನ್ಸೂಚನೆಯಾಗಿದೆ.
ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಚಿಕ್ಕಮಗಳೂರು, ರಾಮನಗರ, ಶಿವಮೊಗ್ಗ, ವಿಜಯನಗರ, ರಾಮನಗರ, ಮೈಸೂರು, ದಾವಣಗೆರೆ, ಚಾಮರಾಜನಗರ, ಯಾದಗಿರಿ, ರಾಯಚೂರು, ಕಲಬುರಗಿ, ಹಾವೇರಿ, ಧಾರವಾಡ, ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಆಗಸ್ಟ್ 8 ರವರೆಗೂ ವ್ಯಾಪಕ ಮಳೆಯ ಮುನ್ಸೂಚನೆ ಇದೆ. ನಂತರ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಾಗರಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಬೆಂಗಳೂರಿನಲ್ಲಿ ಮಳೆಯೋ ಮಳೆ
ಬೆಂಗಳೂರಿನಲ್ಲಿ ರಾತ್ರಿ ವೇಳೆ ಭಾರೀ ಮಳೆಯಾಗುತ್ತಿದೆ. ಹಗಲಿನಲ್ಲಿ ಬಿಸಿಲಿದ್ದರೂ ಸಂಜೆಯ ವೇಳೆಗೆ ಮೋಡ ಕವಿದ ವಾತಾವರಣ ಇರಲಿದೆ. ಬಳಿಕ ರಾತ್ರಿ ಜೋರು ಮಳೆ ಸುರಿಯುತ್ತಿದೆ. ಇಂದು ಸಹ ಬೆಂಗಳೂರು ನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕಳೆದ ಎರಡು ದಿನಗಳಿಂದಲೂ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಇನ್ನು ಮೂರು ದಿನ ಮಳೆ ನಿರೀಕ್ಷಿಸಲಾಗಿದೆ.
ನಾಳೆಯೂ ಆರೆಂಜ್ ಅಲರ್ಟ್
ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಅದೇ ಸಮಯದಲ್ಲಿ, ದಾವಣಗೆರೆ, ಹಾಸನ, ಹಾವೇರಿ, ಧಾರವಾಡ, ಉತ್ತರ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಶುಕ್ರವಾರದಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದೊಂದಿಗೆ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಹವಾಮಾನ
• ಎಚ್ಎಎಲ್ - ಗರಿಷ್ಠ 29.6°C ಮತ್ತು ಕನಿಷ್ಠ 20.4°C
• ಕಾರವಾರ - ಗರಿಷ್ಠ 31.0°C, ಕನಿಷ್ಠ 26.2°C
• ಕಲಬುರಗಿ - ಗರಿಷ್ಠ 34.1°C, ಕನಿಷ್ಠ 24.4°C
• ರಾಯಚೂರು - ಗರಿಷ್ಠ 34.0°C, ಕನಿಷ್ಠ 24.6°C
• ಹೊನ್ನಾವರ - ಗರಿಷ್ಠ 30.0°C, ಕನಿಷ್ಠ 25.1°C
• ವಿಜಯಪುರ - ಗರಿಷ್ಠ 31.0°C, ಕನಿಷ್ಠ 23.0°C



Click it and Unblock the Notifications
