Latest Updates
-
ಸುಪ್ರೀಂ ಕೋರ್ಟ್ ಲೋಕ್ ಅದಾಲತ್ ದಿನ 2: ನಿಮ್ಮ ಪ್ರಕರಣ ಇತ್ಯರ್ಥವಾಗಲು ಈ ದಾಖಲೆಗಳು ಕಡ್ಡಾಯ! -
ರಕ್ಷಾ ಬಂಧನ 2026: ಹಬ್ಬದ ಸಂಭ್ರಮಕ್ಕೆ ಬಜೆಟ್ ಮತ್ತು ಪ್ಲಾನಿಂಗ್ ಹೀಗಿರಲಿ! -
ಮಳೆಗಾಲದಲ್ಲಿ ಬೆಂಗಳೂರಿನ ಮನೆ ಮತ್ತು ಬಾಲ್ಕನಿ ರಕ್ಷಣೆ: 40 ನಿಮಿಷದ ಸಿಂಪಲ್ ಚೆಕ್ಲಿಸ್ಟ್ -
ಬೆಂಗಳೂರಿನಲ್ಲಿ 2 ದಿನ ಭಾರಿ ಪವರ್ ಕಟ್: ಈ 70 ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಮುನ್ನೆಚ್ಚರಿಕೆ ವಹಿಸಿ! -
ಈರುಳ್ಳಿ ಬೆಲೆ ಏರಿಕೆ ಬಿಸಿ: ₹800ರಲ್ಲಿ ವಾರಪೂರ್ತಿ ಪ್ರೋಟೀನ್ ಯುಕ್ತ ಆರೋಗ್ಯಕರ ಊಟದ ಪ್ಲಾನ್! -
ಹಬ್ಬದ ಸಿಹಿ ತಯಾರಿಗೆ ಸಕ್ಕರೆ ಬೆಲೆ ಬಿಸಿ: ಜೇಬಿಗೆ ಹೊರೆಯಾಗದಂತೆ ಸಂಭ್ರಮಿಸುವುದು ಹೇಗೆ? -
LPG e-KYC ಗಡುವು: ನಾಳೆಯೇ ಕೊನೆಯ ದಿನ, ನಿಮ್ಮ ಗ್ಯಾಸ್ ಸಂಪರ್ಕ ಕಡಿತವಾಗದಂತೆ ತಡೆಯುವುದು ಹೇಗೆ? -
BWF ಸೆಮಿಫೈನಲ್ ವೀಕ್ಷಿಸುವಾಗ ಮೈಕೈ ನೋವೇ? 8 ನಿಮಿಷದ ಈ ಸಿಂಪಲ್ ವ್ಯಾಯಾಮ ಮಾಡಿ! -
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ?
Karnataka Rain: ಮುಂದಿನ 4 ದಿನ ಭಾರೀ ಮಳೆ: 14 ಜಿಲ್ಲೆಗಳಿಗೆ ಹೈ ಅಲರ್ಟ್.. ಎಲ್ಲೆಲ್ಲಿ ಶಾಲೆಗಳಿಗೆ ರಜೆ ಘೋಷಣೆ
ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ ಸಾಧ್ಯತೆ. ಹವಾಮಾನ ಇಲಾಖೆಯಿಂದ 14 ಜಿಲ್ಲೆಗಳಿಗೆ ರೆಡ್, ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಣೆ. ಹೌದು, ರಾಜ್ಯದಲ್ಲಿ (Karnataka Rain) ಕಳೆದ ಕೆಲವು ದಿನಗಳಿಂದ ನೈಋುತ್ಯ ಮುಂಗಾರು ಚುರುಕಾಗಿದೆ. ಕರಾವಳಿ ಮತ್ತು ಪಶ್ಚಿಮ ಘಟ್ಟಗಳ 14 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಹೈ ಅಲರ್ಟ್ ನೀಡಿದೆ. ಜೊತೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಹವಾಮಾನ ಇಲಾಖೆ ಪ್ರಕಾರ, ಮುಂದಿನ ನಾಲ್ಕು ದಿನಗಳವರೆಗೆ ಕರ್ನಾಟಕದಾದ್ಯಂತ ಮಳೆ ಮತ್ತು ಗಾಳಿಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಇಂದು ಸಹ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ, ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಅದೇ ರೀತಿ, ಬೆಂಗಳೂರು ನಗರ ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ (Karavali) ಜಿಲ್ಲೆಗಳಲ್ಲಿ ಇಂದು ಮುಂಜಾನೆಯಿಂದಲೇ ಮಳೆ ಆರ್ಭಟಿಸುತ್ತಿದೆ. ಹವಾಮಾನ ಇಲಾಖೆಯು ಬೆಳಗ್ಗೆ 4.30ರ ವೇಳೆಗೆ 8 ಜಿಲ್ಲೆಗಳಿಗೆ ಭಾರೀ ಗಾಳಿ ಮಳೆಯ ಮುನ್ನೆಚ್ಚರಿಕೆ ನೀಡಿದೆ.

ರಾಜ್ಯದ 14 ಜಿಲ್ಲೆಗಳಿಗೆ ಹೈ ಅಲರ್ಟ್
ಈಗಾಗಲೇ ಮಳೆರಾಯನ ಆರ್ಭಟ ಶುರುವಾಗಿದ್ದು, ಕುಂಭದ್ರೋಣ ಮಳೆಗೆ ಕರಾವಳಿ ಜನ ಹೈರಾಣಾಗಿದ್ದಾರೆ. ಇತ್ತ ಹವಾಮಾನ ಇಲಾಖೆ ರಾಜ್ಯದ 14 ಜಿಲ್ಲೆಗಳಿಗೆ ಅಲರ್ಟ್ ಕೊಟ್ಟಿದ್ದು, ಉಳಿದೆಲ್ಲಾ ಜಿಲ್ಲೆಗಳಿಗೆ ಹೈ ಅಲರ್ಟ್ ನೀಡಿದೆ. ಜೂನ್ 17 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದೆ.
ರೆಡ್ ಅಲರ್ಟ್ ಜಿಲ್ಲೆಗಳು
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ. ಈ ಜಿಲ್ಲೆಗಳಲ್ಲಿ ಅತ್ಯಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.
ಆರೆಂಜ್ ಅಲರ್ಟ್ ಜಿಲ್ಲೆಗಳು
ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ದಾವಣಗೆರೆ, ಹಾಸನ ಮತ್ತು ಮೈಸೂರು. ಈ ಜಿಲ್ಲೆಗಳ ಹಲವು ಭಾಗಗಳಲ್ಲಿ ಅತಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಯೆಲ್ಲೋ ಅಲರ್ಟ್ ಜಿಲ್ಲೆಗಳು
ಮಂಡ್ಯ, ಕೊಪ್ಪಳ, ಕಲಬುರಗಿ ಮತ್ತು ಬೀದರ್. ಈ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎಲ್ಲೆಲ್ಲಿ ಶಾಲಾ ಕಾಲೇಜು ರಜೆ?
ಕರಾವಳಿ ಮತ್ತು ಮಲೆನಾಡ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಹೀಗಾಗಿ, ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕಿನಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್ಆರ್ ಪುರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇಂದು (ಜೂ.16) ಎಲ್ಲಾ ಅಂಗನವಾಡಿ , ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಈ ಜಿಲ್ಲೆಯಲ್ಲೂ ಶಾಲಾ-ಕಾಲೇಜುಗಳಿಗೆ ರಜೆ
ಭಾರೀ ಮಳೆ ಆಗುತ್ತಿರುವುದರಿಂದ ಈಗಾಗಲೇ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಹಾಗು ಉಡುಪಿ ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದೀಗ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ ಆದೇಶದಲ್ಲಿ ತಿಳಿಸಿದ್ದಾರೆ. ರಜಾದಿನದಲ್ಲಿನ ತರಗತಿ ಪಠ್ಯವನ್ನು ಮುಂದಿನ ಅವಧಿಯಲ್ಲಿ ಸರಿದೂಗಿಸುವಂತೆ ತಿಳಿಸಿದೆ ಸಾಗರ ತಹಶೀಲ್ದಾರರು ಸೂಚಿಸಿದ್ದಾರೆ. ಇನ್ನೂ, ಉಡುಪಿ ಜಿಲ್ಲೆಯಲ್ಲೂ ಮಳೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ರಜೆ ಘೋಷಣೆ ಮಾಡಿದ್ದಾರೆ.



Click it and Unblock the Notifications
