Karnataka Rains: ಈ 7 ಜಿಲ್ಲೆಗಳಲ್ಲಿ ಭಯಾನಕ ಮಳೆ! 5 ದಿನ ಆರೆಂಜ್ ಅಲರ್ಟ್ ಘೋಷಣೆ.. ರಜೆ ಇದ್ಯಾ?

ಕರ್ನಾಟಕದಲ್ಲಿ ಮಹಾ ಮಳೆ ಅಲರ್ಟ್! 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ. ಕರಾವಳಿ, ಶಿವಮೊಗ್ಗ, ಕೊಡಗು ಸೇರಿ 7 ಜಿಲ್ಲೆಗಳಲ್ಲಿ ಇಂದು ಬಿರುಗಾಳಿ ಮಳೆ ಸಾಧ್ಯತೆ. ಹೌದು, ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಇಂದು ವ್ಯಾಪಕವಾಗಿ ಮಳೆಯಾಗುವ (Karnataka Weather) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಂತೆ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಈ ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ. ಇಂದು ಎಲ್ಲೆಲ್ಲಿ ಭಾರೀ ಮಳೆಯಾಗಲಿದೆ (Karnataka Rain) ಮತ್ತು ಯಾವ ಜಿಲ್ಲೆಗಳಿಗೆ ಹೈ ಅಲರ್ಟ್ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರೆದಿದೆ. ಹವಾಮಾನ ಇಲಾಖೆಯು (IMD) ಜುಲೈ 27 ರವರೆಗೂ ರಾಜ್ಯಾದ್ಯಂತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಇದರ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗದ ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜುಲೈ 27 ರವರೆಗೆ ಆರೆಂಜ್ ಅಲರ್ಟ್ ಇರಲಿದೆ. ಬೆಂಗಳೂರು ಸೇರಿದಂತೆ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜುಲೈ 25 ರಂದು ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಮತ್ತೊಮ್ಮೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Bengaluru Rain

ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯೊಂದಿಗೆ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಉತ್ತರ ಕನ್ನಡದ ಕಾರವಾರದಲ್ಲಿ 12 ಸೆಂ.ಮೀ ಮಳೆಯಾಗಿದೆ. ಕುಮಟಾ, ಅಂಕೋಲಾ ಮತ್ತು ಕದ್ರಾದಲ್ಲಿ 7 ಸೆಂ.ಮೀ ಮಳೆಯಾಗಿದೆ. ಉಡುಪಿಯ ಸಿದ್ದಾಪುರದಲ್ಲಿ 9 ಸೆಂ.ಮೀ ಮತ್ತು ಕೊಡಗಿನ ಆಗುಂಬೆಯಲ್ಲಿ 7 ಸೆಂ.ಮೀ ಮಳೆಯಾಗಿದೆ. ಮಲೆನಾಡು ಪ್ರದೇಶಗಳಲ್ಲಿ ಸರಾಸರಿ 5 ಸೆಂ.ಮೀ ಮಳೆಯಾಗಿದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯದ ಇತರೆ ಜಿಲ್ಲೆಗಳಾದ ಕೋಲಾರ, ಮಂಡ್ಯ, ಮೈಸೂರು ಮತ್ತು ಚಾಮರಾಜನಗರದಲ್ಲಿ ಮುಂದಿನ ಎರಡು ದಿನಗಳವರೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರು ಗ್ರಾಮಾಂತರ, ತುಮಕೂರು, ಗದಗ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಜುಲೈ 22 ರಂದು ಜೋರು ಮಳೆಯಾಗುವ ಸಾಧ್ಯತೆ ಇದೆ. ಹಾವೇರಿ, ವಿಜಯಪುರ, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳವರೆಗೆ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಭಾರೀ ಮಳೆ

ಬೆಂಗಳೂರಿನಲ್ಲಿ ಕಳೆದ ಕೆಲವು ಗಂಟೆಗಳಿಂದ ಭಾರೀ ಮಳೆಯಾಗುತ್ತಿದೆ. ನಗರದ ಕೋರಮಂಗಲ, ಲಾಲ್‌ಬಾಗ್, ಜಯನಗರ, ಮೆಜೆಸ್ಟಿಕ್, ರಾಜಾಜಿನಗರ ಮತ್ತು ಹೆಬ್ಬಾಳದಂತಹ ಪ್ರದೇಶಗಳಲ್ಲಿ ಜೋರು ಮಳೆ ಸುರಿದಿದೆ. ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಮುಂದಿನ ಮೂರು ದಿನಗಳವರೆಗೆ ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣದೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜುಲೈ 22 ಮತ್ತು 23 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಕಳೆದ ವಾರದಿಂದ ವಾಡಿಕೆಗಿಂತ ಹೆಚ್ಚು ಮಳೆ

ರಾಜ್ಯದ ಹಲವು ಜಿಲ್ಲೆಗಳು ಮಳೆ ಕೊರತೆ ಅನುಭವಿಸಿವೆ. ಆದರೆ, ಜುಲೈ 1 ರಿಂದ 12 ರವರೆಗೆ ಹಲವು ಜಿಲ್ಲೆಗಳಲ್ಲಿ ಕಳೆದ ವಾರದಿಂದ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಉಡುಪಿಯಲ್ಲಿ 39 ಸೆಂ.ಮೀ. ಮಳೆಯಾಗಿದೆ. ದಕ್ಷಿಣ ಕನ್ನಡದಲ್ಲಿ 33 ಸೆಂ.ಮೀ. ಮತ್ತು ಉತ್ತರ ಕನ್ನಡದಲ್ಲಿ 23 ಸೆಂ.ಮೀ ಮಳೆಯಾಗಿದೆ. ಇದು ಶೇ.12 ರಷ್ಟು ಹೆಚ್ಚುವರಿ ಮಳೆಯಾಗಿದೆ. ಹವಾಮಾನ ಇಲಾಖೆಯ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ. ಮಳೆಯಿಂದ ಉಂಟಾಗುವ ಸಂಭಾವ್ಯ ತೊಂದರೆಗಳಾದ ಜಲಾವೃತ, ರಸ್ತೆ ಕುಸಿತ ಮತ್ತು ವಿದ್ಯುತ್ ವ್ಯತ್ಯಯಗಳನ್ನು ಎದುರಿಸಲು ಸ್ಥಳೀಯ ಆಡಳಿತ ಸಿದ್ಧತೆಗಳನ್ನು ನಡೆಸಿದೆ.

English summary

Karnataka Weather On July 22th: 7 days Heavy Rain In Karnataka, orange alert issued in 7 districts

Karnataka Weather On July 22th: 7 days Heavy Rain In Karnataka, orange alert issued in 7 districts
Story first published: Tuesday, July 22, 2025, 9:15 [IST]
X
Desktop Bottom Promotion