Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ರಾಜ್ಯದಲ್ಲಿ ಮುಂದಿನ 1 ವಾರ ಹವಾಮಾನ ಹೇಗಿರಲಿದೆ? ಎಲ್ಲೆಲ್ಲಿ ಮಳೆಯಾಗಲಿದೆ?
ಸದ್ಯ ರಾಜ್ಯದ ಕೆಲವು ಭಾಗದಲ್ಲಿ ವರುಣನ ದರ್ಶನವಾಗಿದೆ. ಮಲೆನಾಡು, ಕರಾವಳಿ, ಸೇರಿ ಪಶ್ಚಿಮ ಘಟ್ಟ ಸಾಲಿನ ಕೆಲವು ಭಾಗದಲ್ಲಿ ಮಳೆಯಾಗಿದೆ. ಇನ್ನು ಬೆಂಗಳೂರು, ಹಳೆ ಮೈಸೂರು ಭಾಗದಲ್ಲಿ ಸಣ್ಣದಾಗಿ ಮಳೆಯಾಗಿದೆ. ಇದು ಬಿಟ್ಟರೆ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಪ್ರಮಾಣ ಕಡಿಮೆಯಾಗಿದೆ.
ಕೆಲವು ಕಡೆ ಮಳೆ ಬಂದರೂ ಬೇಸಿಗೆಯ ಸೆಖೆ ಪ್ರಖರವಾಗಿದ್ದು, ಮತ್ತಷ್ಟು ಉರಿ ಬಿಸಿಲು ಕಾಡುತ್ತಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದರೂ ಹವಾಮಾನದಲ್ಲಿ ಭಾರೀ ಬದಲಾವಣೆಯಾಗಿಲ್ಲ. ಸುಮಾರು 30ರಿಂದ 34 ಡಿಗ್ರಿ ಸೆಲ್ಸಿಯಸ್ ದಾಖಲಾಗುತ್ತಿದೆ. ಇತ್ತ ರಾಜ್ಯದಲ್ಲಿ ಒಣಹವೆ ಮುಂದುವರೆಯುವ ಲಕ್ಷಣ ಸಹ ಕಂಡುಬರುತ್ತಿದೆ.

ಇನ್ನು ಮುಂದಿನ 7 ದಿನಗಳ ಕಾಲ ರಾಜ್ಯದ ಹವಾಮಾನ ಯಾವ ರೀತಿ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ಹಂಚಿಕೊಂಡಿದೆ. ಮುಂದಿನ ಒಂದು ವಾರದಲ್ಲಿ ರಾಜ್ಯದ ಕೆಲ ಭಾಗದಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಏಪ್ರಿಲ್ 23ರಂದು ಮಂಗಳವಾರ ಬೀದರ್, ಕಲಬುರಗಿ, ಬೆಳಗಾವಿ, ಬಾಗಲಕೋಟೆಯ ಜಿಲ್ಲೆಯಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ, ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಮಾಹಿತಿ ನೀಡಿದೆ.
ಏಪ್ರಿಲ್ 25ರಂದು ರಾಜ್ಯದ ಕೆಲವ ಭಾಗದಲ್ಲಿ ಮಳೆಯಾಗುವ ನಿರೀಕ್ಷೆ ಇದ್ದು ಅಲ್ಲಿಯವರೆಗೆ ಒಣ ಹವೆ ಮುಂದುವರೆಯಲಿದೆ ಎಂದಿದೆ. ಕಲಬುರಗಿ, ಬಾಗಲಕೋಟೆ, ಬೆಳಗಾವಿ, ಬೀದರ್, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಮಂಡ್ಯ, ಮೈಸೂರು ಭಾಗದಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ ಎಂದು ತಿಳಿಸಿದೆ.
ಇದರ ಜೊತೆ ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ರಾಯಚೂರು ಭಾಗದಲ್ಲಿ ಏಪ್ರಿಲ್ 25ರ ಬಳಿಕ ಹಗುರದಿಂದ ಮಳೆಯಾಗುವ ನಿರೀಕ್ಷೆ ಇದ್ದು, ವಾರದ ಕೊನೆಯಲ್ಲಿ ಸಿಡಿಲು ಗುಡುಗು ಸಹಿತ ಮಳೆಯಾಗಲಿದೆ ಎಂದಿದೆ. ಕರಾವಳಿ ಭಾಗದಲ್ಲಿ ಬಿಸಿ ಮತ್ತು ಶುಷ್ಕ ವಾತಾವರಣ ಇರಲಿದ್ದು, ತಾಪಮಾನ ಏರಿಕೆಯಾಗಲಿದೆ. ಹೀಗಾಗಿ ಬಿಸಿಲು ಹೆಚ್ಚಾಗಲಿದೆ ಎಂದಿದೆ.
ಬೆಂಗಳೂರಲ್ಲಿ ಮಳೆ ಯಾವಾಗ?
ರಾಜ್ಯದ ಬೇರೆಲ್ಲಾ ಜಿಲ್ಲೆಗಳಿಗಿಂತ ಬೆಂಗಳೂರಿಗೆ ಮಳೆ ಅಗತ್ಯವಾಗಿದೆ. ಬೆಂಗಳೂರಿಗರು ಸಹ ಮಳೆಗಾಗಿ ಕಾದು ಕುಳಿತ್ತಿದ್ದಾರೆ. ಕಳೆದ ಎರಡು ದಿನದ ಹಿಂದೆ ಕೆಲವು ಭಾಗದಲ್ಲಿ ವರುಣನ ಸಿಂಚನವಾಗಿದ್ದರೂ ಹೇಳಿಕೊಳ್ಳುವಷ್ಟು ಮಳೆ ಬಿದ್ದಿಲ್ಲ. ಹೀಗಾಗಿ ಬೆಂಗಳೂರು ಬಿಸಿಲಿನಿಂದ ಮತ್ತಷ್ಟು ಕೆಂಪಗಾಗಿದೆಯೇ ಹೊರತು ತಂಪಾಗುವ ಲಕ್ಷಣ ಕಾಣುತ್ತಿಲ್ಲ.
ಹೀಗಾಗಿ ಬೆಂಗಳೂರಿಗೆ ಏಪ್ರಿಲ್ ಕೊನೆಯ ವಾರದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಅಶ್ವಿನಿ ಮಳೆ ರಾಜ್ಯದಲ್ಲಿ ಹಲವು ಜಿಲ್ಲೆಗಳಿಗೆ ಕೃಪೆ ತೋರಿದ್ದರೂ ಇನ್ನೂ ಹಲವು ಜಿಲ್ಲೆಗಳು ಮಳೆಗಾಗಿ ಕಾಯುತ್ತಿವೆ. ಏಪ್ರಿಲ್ 27ರಿಂದ ಭರಣಿ ಮಳೆ ಆರಂಭವಾಗಲಿದ್ದು, ಈ ಮಳೆಯ ಮೇಲೆ ನಿರೀಕ್ಷೆ ಇಡಲಾಗಿದೆ.



Click it and Unblock the Notifications











