Latest Updates
-
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು!
ರಾಜ್ಯದಲ್ಲಿ ಮುಂದಿನ 1 ವಾರ ಹವಾಮಾನ ಹೇಗಿರಲಿದೆ? ಎಲ್ಲೆಲ್ಲಿ ಮಳೆಯಾಗಲಿದೆ?
ಸದ್ಯ ರಾಜ್ಯದ ಕೆಲವು ಭಾಗದಲ್ಲಿ ವರುಣನ ದರ್ಶನವಾಗಿದೆ. ಮಲೆನಾಡು, ಕರಾವಳಿ, ಸೇರಿ ಪಶ್ಚಿಮ ಘಟ್ಟ ಸಾಲಿನ ಕೆಲವು ಭಾಗದಲ್ಲಿ ಮಳೆಯಾಗಿದೆ. ಇನ್ನು ಬೆಂಗಳೂರು, ಹಳೆ ಮೈಸೂರು ಭಾಗದಲ್ಲಿ ಸಣ್ಣದಾಗಿ ಮಳೆಯಾಗಿದೆ. ಇದು ಬಿಟ್ಟರೆ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಪ್ರಮಾಣ ಕಡಿಮೆಯಾಗಿದೆ.
ಕೆಲವು ಕಡೆ ಮಳೆ ಬಂದರೂ ಬೇಸಿಗೆಯ ಸೆಖೆ ಪ್ರಖರವಾಗಿದ್ದು, ಮತ್ತಷ್ಟು ಉರಿ ಬಿಸಿಲು ಕಾಡುತ್ತಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದರೂ ಹವಾಮಾನದಲ್ಲಿ ಭಾರೀ ಬದಲಾವಣೆಯಾಗಿಲ್ಲ. ಸುಮಾರು 30ರಿಂದ 34 ಡಿಗ್ರಿ ಸೆಲ್ಸಿಯಸ್ ದಾಖಲಾಗುತ್ತಿದೆ. ಇತ್ತ ರಾಜ್ಯದಲ್ಲಿ ಒಣಹವೆ ಮುಂದುವರೆಯುವ ಲಕ್ಷಣ ಸಹ ಕಂಡುಬರುತ್ತಿದೆ.

ಇನ್ನು ಮುಂದಿನ 7 ದಿನಗಳ ಕಾಲ ರಾಜ್ಯದ ಹವಾಮಾನ ಯಾವ ರೀತಿ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ಹಂಚಿಕೊಂಡಿದೆ. ಮುಂದಿನ ಒಂದು ವಾರದಲ್ಲಿ ರಾಜ್ಯದ ಕೆಲ ಭಾಗದಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಏಪ್ರಿಲ್ 23ರಂದು ಮಂಗಳವಾರ ಬೀದರ್, ಕಲಬುರಗಿ, ಬೆಳಗಾವಿ, ಬಾಗಲಕೋಟೆಯ ಜಿಲ್ಲೆಯಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ, ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಮಾಹಿತಿ ನೀಡಿದೆ.
ಏಪ್ರಿಲ್ 25ರಂದು ರಾಜ್ಯದ ಕೆಲವ ಭಾಗದಲ್ಲಿ ಮಳೆಯಾಗುವ ನಿರೀಕ್ಷೆ ಇದ್ದು ಅಲ್ಲಿಯವರೆಗೆ ಒಣ ಹವೆ ಮುಂದುವರೆಯಲಿದೆ ಎಂದಿದೆ. ಕಲಬುರಗಿ, ಬಾಗಲಕೋಟೆ, ಬೆಳಗಾವಿ, ಬೀದರ್, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಮಂಡ್ಯ, ಮೈಸೂರು ಭಾಗದಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ ಎಂದು ತಿಳಿಸಿದೆ.
ಇದರ ಜೊತೆ ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ರಾಯಚೂರು ಭಾಗದಲ್ಲಿ ಏಪ್ರಿಲ್ 25ರ ಬಳಿಕ ಹಗುರದಿಂದ ಮಳೆಯಾಗುವ ನಿರೀಕ್ಷೆ ಇದ್ದು, ವಾರದ ಕೊನೆಯಲ್ಲಿ ಸಿಡಿಲು ಗುಡುಗು ಸಹಿತ ಮಳೆಯಾಗಲಿದೆ ಎಂದಿದೆ. ಕರಾವಳಿ ಭಾಗದಲ್ಲಿ ಬಿಸಿ ಮತ್ತು ಶುಷ್ಕ ವಾತಾವರಣ ಇರಲಿದ್ದು, ತಾಪಮಾನ ಏರಿಕೆಯಾಗಲಿದೆ. ಹೀಗಾಗಿ ಬಿಸಿಲು ಹೆಚ್ಚಾಗಲಿದೆ ಎಂದಿದೆ.
ಬೆಂಗಳೂರಲ್ಲಿ ಮಳೆ ಯಾವಾಗ?
ರಾಜ್ಯದ ಬೇರೆಲ್ಲಾ ಜಿಲ್ಲೆಗಳಿಗಿಂತ ಬೆಂಗಳೂರಿಗೆ ಮಳೆ ಅಗತ್ಯವಾಗಿದೆ. ಬೆಂಗಳೂರಿಗರು ಸಹ ಮಳೆಗಾಗಿ ಕಾದು ಕುಳಿತ್ತಿದ್ದಾರೆ. ಕಳೆದ ಎರಡು ದಿನದ ಹಿಂದೆ ಕೆಲವು ಭಾಗದಲ್ಲಿ ವರುಣನ ಸಿಂಚನವಾಗಿದ್ದರೂ ಹೇಳಿಕೊಳ್ಳುವಷ್ಟು ಮಳೆ ಬಿದ್ದಿಲ್ಲ. ಹೀಗಾಗಿ ಬೆಂಗಳೂರು ಬಿಸಿಲಿನಿಂದ ಮತ್ತಷ್ಟು ಕೆಂಪಗಾಗಿದೆಯೇ ಹೊರತು ತಂಪಾಗುವ ಲಕ್ಷಣ ಕಾಣುತ್ತಿಲ್ಲ.
ಹೀಗಾಗಿ ಬೆಂಗಳೂರಿಗೆ ಏಪ್ರಿಲ್ ಕೊನೆಯ ವಾರದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಅಶ್ವಿನಿ ಮಳೆ ರಾಜ್ಯದಲ್ಲಿ ಹಲವು ಜಿಲ್ಲೆಗಳಿಗೆ ಕೃಪೆ ತೋರಿದ್ದರೂ ಇನ್ನೂ ಹಲವು ಜಿಲ್ಲೆಗಳು ಮಳೆಗಾಗಿ ಕಾಯುತ್ತಿವೆ. ಏಪ್ರಿಲ್ 27ರಿಂದ ಭರಣಿ ಮಳೆ ಆರಂಭವಾಗಲಿದ್ದು, ಈ ಮಳೆಯ ಮೇಲೆ ನಿರೀಕ್ಷೆ ಇಡಲಾಗಿದೆ.



Click it and Unblock the Notifications