Latest Updates
-
ಮಧುರೈಗೆ ಹೋಗ್ತಿದ್ದೀರಾ? ಈ ಪವಿತ್ರ ದೇಗುಲಗಳಿಗೂ ಭೇಟಿ ನೀಡೋದನ್ನ ಮರೀಬೇಡಿ.. ಪಟ್ಟಿ ಇಲ್ಲಿದೆ -
ಈ 3 ರಾಶಿಗಳಿಗೆ ಜೀವನದಲ್ಲಿ ಏರಿಳಿತಗಳು! ಹಳೆಯ ನೆನಪುಗಳು ಕಾಡುತ್ತೆ -
March 09 Horoscope: ಶುಭ ಕಾರ್ಯದಲ್ಲಿ ಭಾಗಿಯಾಗುವ ಸಾಧ್ಯತೆ ಹೆಚ್ಚು! -
Weekly Horoscope: ಮಾರ್ಚ್ 08 ರಿಂದ ಮಾರ್ಚ್ 15ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 08 ರಿಂದ ಮಾರ್ಚ್ 15ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಹೊಸ ರೀತಿಯ ಟೊಮೆಟೊ ಚಕ್ಕುಲಿ ಸುಲಭವಾಗಿ ಮಾಡಿ: ಇಲ್ಲಿದೆ ಮಾಡುವ ವಿಧಾನ -
ಶನಿ ಸಂಚಾರ 2026: ಮಾರ್ಚ್ನಿಂದ ಈ 5 ರಾಶಿ ಜನರು ಎಚ್ಚರವಹಿಸಿ, ವೈಯಕ್ತಿಕ ಹಾನಿ ಸಂಭವ! -
ಮಸಾಲೆ ಲೆಸ್ ವೈಟ್ ಪಲಾವ್; ವಿಭಿನ್ನ ರುಚಿ ವಿಶೇಷ ಖಾದ್ಯ ಸಿದ್ದಮಾಡಿ ನೋಡಿ! -
ಅಂತಾರಾಷ್ಟ್ರೀಯ ಮಹಿಳಾ ದಿನ: ದಕ್ಷಿಣ ಏಷ್ಯಾದಲ್ಲಿ ಹೆಚ್ಚಾಗುತ್ತಿದೆ ರಕ್ತಹೀನತೆ, ಮಹಿಳೆಯರೇ ಬಲಿಪಶು ಏಕೆ? -
March 08 Horoscope: ಯಾರ ಬಳಿಯಾದರು ಸಾಲ ಪಡೆಯುವ ಆಲೋಚನೆ ಮುಂದೂಡಿ!
ಮಧುರೈನಲ್ಲಿ ಕಾರ್ತಿಕ ದೀಪ ವಿವಾದ: ಏನಿದು ಘಟನೆ? ಜಾಗದ ವಿಚಾರದಲ್ಲಿ ಗಲಾಟೆ ಏಕೆ?
ದೇವಾಲಯ, ಹಿಂದೂ ಸಂಪ್ರದಾಯಗಳು ಸೇರಿದಂತೆ ಹಲವು ರೀತಿಯ ವಿವಾದಗಳು ಆಗಾಗ ಮುನ್ನಲೆಗೆ ಬರುತ್ತಲೇ ಇರುತ್ತದೆ. ಈ ಸಾಲಿಗೆ ಈಗ ಹೊಸದಾಗಿ ತಮಿಳುನಾಡಿನ ಮಧುರೈ ದೇವಸ್ಥಾನದ ಕಾರ್ತಿಕ ದೀಪ ಬೆಳಗುವ ವಿಚಾರ ಈಗ ಚರ್ಚೆಗಳಿಗೆ ಕಾರಣವಾಗುತ್ತಿದೆ. ಅದ್ರಲ್ಲೂ ತಿರುಪರಂಕುಂದ್ರಂನಲ್ಲಿರುವ ದೀಪಥೂನ್ ಕಂಬದ ಮೇಲೆ ಕಾರ್ತಿಕ ದೀಪ ಬೆಳಗುವುದನ್ನು ನಿಷೇಧಿಸಲು ಮುಂದಾಗಿರುವುದು ಹೊಸ ವಿವಾದ ಸೃಷ್ಟಿಸಿದೆ.
ಈ ಸಂಬಂಧ ಬಲಪಂಥೀಯ ಕಾರ್ಯಕರ್ತರು ದೀಪ ಬೆಳಗುವ ಸಂಬಂಧ ಗಲಾಟೆ ಮಾಡಿಕೊಂಡಿದ್ದು ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು, ಕೋರ್ಟ್ ಈ ಘಟನೆ ಕುರಿತು ವಿಚಾರಣೆ ನಡೆಸಿ ವಿವಾದಿತ ಬೆಟ್ಟದ ತುದಿಯಲ್ಲಿರುವ ದೇವಸ್ಥಾನದಲ್ಲಿಯೇ ದೀಪ ಬೆಳಗಿಸಬೇಕೆಂದು ಮದ್ರಾಸ್ ಹೈಕೋರ್ಟ್ ತೀರ್ಪು ಸಹ ನೀಡಿತ್ತು.

ಆದ್ರೆ ಈ ತೀರ್ಪಿಗೆ ತಮಿಳುನಾಡು ಸರ್ಕಾರ ಸಹಮತ ಸೂಚಿಸದೆ ಕೋರ್ಟ್ ಆದೇಶದ ವಿರುದ್ಧ ನಿಂತಿದೆ. ಹಾಗೆ ಹಿರಿಯ ನ್ಯಾಯಾಧೀಶರ ಪದಚ್ಯುತಿಗೊಳಿಸುವ ಹಕ್ಕು ಮಂಡಿಸಲು ಮುಂದಾಗಿದೆ. ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರನ್ನು ಪದಚ್ಯುತಿಗೊಳಿಸಬೇಕು ಎಂದು ಸಂಸದರ ಸಹಿ ಪಡೆಯಲಾಗಿದೆ.
ಏನಿದು ವಿವಾದ? ದೀಪ ಬೆಳಗಲು ಅಡ್ಡಿ ಏಕೆ?
ಈ ಜಾಗದ ವಿವಾದ ಹಲವು ವರ್ಷಗಳಿಂದ ನಡೆಯುತ್ತಿದೆ. ಬೆಟ್ಟದ ಮೇಲಿನ ದೇವಸ್ಥಾನಕ್ಕೆ ದಶಕಗಳ ಇತಿಹಾಸವಿದೆ. ನಂಬಿಕೆ ಮತ್ತು ಶಾಂತಿಯ ತಾಣವಾಗಿ ಗುರುತಿಸಿಕೊಂಡಿದೆ. ಇಲ್ಲಿನ ಸುಬ್ರಮಣ್ಯಸ್ವಾಮಿ ದೇವಾಲಯ, ಕಾಶಿ ವಿಶ್ವನಾಥ ಸ್ವಾಮಿ ದೇವಾಲಯ ಹಾಗೂ ಸಿಖಂದರ್ ಬಾದ್ಷಾ ದರ್ಗಾಗಳು ಒಟ್ಟಿಗೆ ನೆಲೆಸಿವೆ. ಆದ್ರೆ ಈ ಬೆಟ್ಟದಲ್ಲಿ ಮಾಂಸಾಹಾರ ಸೇವನೆ ಮಾಡಲಾಗುತ್ತದೆ ಎಂಬುದು ವಾದ ಹಾಗೂ ವಿವಾದದ ಕೇಂದ್ರಬಿಂದುವಾಗಿದೆ. ಬೆಟ್ಟದ ಮೇಲಿರುವ ಸುಬ್ರಮಣಿಯ ಸ್ವಾಮಿ ದೇವಾಲಯವು 1920 ರ ನ್ಯಾಯಾಲಯದ ತೀರ್ಪಿನ ಆಧಾರದ ಮೇಲೆ ಬಹುತೇಕ ಬೆಟ್ಟದ ಮಾಲೀಕತ್ವವನ್ನು ಹೊಂದಿದೆ. ಹೀಗಾಗಿ ಬೆಟ್ಟದ ಮೇಲಿನ ದರ್ಗಾದ ಬಳಿ ಇರುವ ದೀಪ ಸ್ತಂಭದಲ್ಲಿ ಕಾರ್ತಿಕ ದೀಪ ಬೆಳಗಿಸಲು ಮುಂದಾಗಿರುವುದು ವಿವಾದ ಹುಟ್ಟುಹಾಕಿದೆ.
ಸಿಖಂದರ್ ಬಾದ್ಷಾ ದರ್ಗಾದ ಸಮೀಪದಲ್ಲಿರುವ ಮತ್ತು ಬಹಳ ಹಿಂದಿನಿಂದಲೂ ಸೂಕ್ಷ್ಮ ಪ್ರದೇಶವೆಂದು ಪರಿಗಣಿಸಲಾದ ತಿರುಪರಂಕುಂದ್ರಂನಲ್ಲಿರುವ ದೀಪಥೂನ್ ಕಂಬದ ಮೇಲೆ ಕಾರ್ತಿಗೈ ದೀಪವನ್ನು ಬೆಳಗಿಸಬೇಕೆಂದು ನ್ಯಾಯಾಧೀಶರು ನೀಡಿದ ಆದೇಶದ ನಂತರ ವಿವಾದ ಮತ್ತಷ್ಟು ದೊಡ್ಡದಾಗಿದೆ. ಈ ಆದೇಶದ ನಂತರ ದೀಪ ಬೆಳಗದೆ ಇದ್ದಾಗ ಬಲಪಂಥೀಯ ಕಾರ್ಯಕರ್ತರು ಜಮಾಯಿಸಿ ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾರೆ. ಸದ್ಯ ಈ ತೀರ್ಪು 2017ರಲ್ಲಿ ಬಂದಿರುವ ವಿಭಾಗೀಯ ಪೀಠದ ತೀರ್ಪಿಗೆ ವಿರುದ್ಧ ಎಂದು ಆರೋಪಿಸಲಾಗಿದೆ.
ಸದ್ಯ ಈಗ ದೇವಾಲಯ ಸಿಬ್ಬಂದಿ ವಿರುದ್ಧ ಅಲ್ಲಿನ ಬಲಪಂಥೀಯ ಕಾರ್ಯಕರ್ತರು ತಿರುಗಿ ಬಿದ್ದಿದ್ದಾರೆ. ಹಾಗೆ ಸುಬ್ರಮಣಿಯ ಸ್ವಾಮಿ ದೇವಸ್ಥಾನದ ಭಕ್ತರಿಗೆ ಅನುಮತಿ ನೀಡುವ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರಕಾರ ಸಲ್ಲಿಸಿದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ಸಮ್ಮತಿಸಿದೆ. ರಾಜ್ಯ ಸರಕಾರದ ಪರ ವಕೀಲರೊಬ್ಬರ ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಸ್ವೀಕರಿಸಿದೆ.
ದೀಪ ಬೆಳಗುವುದರಿಂದ ದರ್ಗಾ ಅಥವಾ ಮುಸ್ಲಿಮರ ಹಕ್ಕುಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗುವುದಿಲ್ಲವಾದರೂ, ಹಾಗೆ ಮಾಡದಿರುವುದು ಬೆಟ್ಟದ ಖಾಲಿ ಭಾಗಗಳ ಮೇಲಿನ ಸುಬ್ರಮಣ್ಯ ಸ್ವಾಮಿ ದೇವಾಲಯದ ಹಕ್ಕುಗಳಿಗೆ ಧಕ್ಕೆ ತರಬಹುದು ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಸದ್ಯ ಮುಂದಿನ ವರ್ಷ ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಈ ಹಿನ್ನೆಲೆ ಈ ಪ್ರಕರಣ ಈಗ ರಾಜಕೀಯ ರೂಪ ಪಡೆದುಕೊಂಡಿದೆ.



Click it and Unblock the Notifications











