Latest Updates
-
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು!
ದೀಪ ಹಚ್ಚುವಾಗ ಈ ತಪ್ಪುಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ!
ಹಿಂದೂ ಸಂಪ್ರದಾಯದಲ್ಲಿ ನಾವು ಪ್ರತಿನಿತ್ಯ ದೇವರಿಗೆ ದೀಪಹಚ್ಚಿ ಕೈ ಮುಗಿಯುವ ಸಂಪ್ರದಾಯವಿದೆ. ಅನೇಕ ಜನರಿಗೆ ದೀಪ ಹಚ್ಚೋದ್ರ ಹಿಂದಿನ ಕಾರಣ ಏನು ಅನ್ನೋದು ಕೂಡ ಗೊತ್ತಿಲ್ಲ. ತಲಾತಲಾಂತರಗಳಿಂದ ನಡೆದುಕೊಂಡು ಬಂದ ಪದ್ಧತಿಯನ್ನು ಪಾಲಿಸಿಕೊಂಡು ಬರಲಾಗುತ್ತಿದೆ ಅಷ್ಟೇ. ಆದರೆ ನಿಮಗೊತ್ತಾ? ದೀಪವನ್ನು ಹಚ್ಚುವಾಗ ನಾವು ಕೆಲವೊಂದು ನಿಯಮಗಳನ್ನು ಪಾಲಿಸೋದು ತುಂಬಾನೇ ಮುಖ್ಯವಾಗುತ್ತದೆ. ಅಷ್ಟಕ್ಕು ದೀಪ ಹಚ್ಚುವಾಗ ನಾವು ಪಾಲಿಸಲೇಬೇಕಾದ ಮುಖ್ಯ ನಿಯಮಗಳು ಯಾವುದು ಅನ್ನೋದನ್ನು ತಿಳಿಯೋಣ.
ಸನಾತನ ಧರ್ಮದ ಪ್ರಕಾರ ಮನೆಯಲ್ಲಿ ದೀಪ ಹಚ್ಚುವುದರಿಂದ ಮನೆಯಲ್ಲಿ ಸಂತೋಷ, ಶಾಂತಿ ಹಾಗೂ ಸಮೃದ್ಧಿ ಹೆಚ್ಚಾಗುತ್ತಂತೆ. ಯಾವುದೇ ಪೂಜಾ ಕಾರ್ಯಕ್ರಮ ನಡೆಯ ಬೇಕಾದರೂ ಮೊದಲಿಗೆ ದೀಪ ಹಚ್ಚಿ ನಂತರ ದೇವರಲ್ಲಿ ಭಕ್ತಿಯಿಂದ ಬೇಡಿಕೊಳ್ಳಲಾಗುತ್ತದೆ. ದೀಪವನ್ನು ಹಚ್ಚುವುದರಿಂದ ಅಂಧಕಾರ ಕಳೆಯಲಿದೆ ಅನ್ನೋ ನಂಬಿಕೆಯಿದೆ. ಅದ್ರಲ್ಲೂ ಮುಖ್ಯವಾಗಿ ಬೆಳಗ್ಗೆ ಹಾಗೂ ಸಂಜೆಯ ಸಮಯದಲ್ಲಿ ಮನೆಯಲ್ಲಿ ದೀಪ ಬೆಳಗೋದ್ರಿಂದ ಆ ಮನೆಗೆ ತುಂಬಾನೇ ಒಳ್ಳೆಯದಾಗುತ್ತಂತೆ.

ದೀಪ ಹಚ್ಚುವಾಗ ಪಾಲಿಸಬೇಕಾದ ವಿಧಾನಗಳು :
1. ಮುರಿದ ದೀಪದ ಬಟ್ಟಲನ್ನು ಬಳಸಬಾರದು
ದೇವರಿಗೆ ಬಳಸುವ ದೀಪದ ಸಾಮಾಗ್ರಿಗಳು ಚಿನ್ನದಿಂದಲೋ ಅಥವಾ ಬೆಳ್ಳಿಯಿಂದಲೋ ಮಾಡಿರಬೇಕಾಗಿಲ್ಲ. ದೇವರು ಇದನ್ನೆಲ್ಲಾ ಖಂಡಿತ ಬಯಸೋದಿಲ್ಲ. ಆದರೆ ನಮ್ಮಲ್ಲಿ ಭಕ್ತಿ ಇರಬೇಕು ಅಷ್ಟೇ. ಆದರೆ ನಾವು ಬಳಸುವ ದೀಪದ ಬಟ್ಟಲ ಬಗ್ಗೆ ಜಾಗರೂಕತೆ ವಹಿಸೋದು ತುಂಬಾನೇ ಮುಖ್ಯವಾಗುತ್ತದೆ. ಅದ್ರಲ್ಲೂ ಮುರಿದು ಹೋದ, ಜಜ್ಜಿದ ದೀಪದ ಬಟ್ಟಲನ್ನು ಪೂಜೆಗೆ ಎಂದಿಗೂ ಬಳಸೋದಕ್ಕೆ ಹೋಗಬೇಡಿ.
2. ಎಣ್ಣೆ ಅಥವಾ ತುಪ್ಪದ ದೀಪ ಹಚ್ಚಿ ಈ ವಿಚಾರ ಗೊತ್ತಿರಲಿ
ದೇವರಿಗೆ ದೀಪ ಹಚ್ಚುವಾಗ ಎಣ್ಣೆ ಹಾಗೂ ತುಪ್ಪದ ದೀಪ ಹಚ್ಚಿರಿ. ಒಂದು ವೇಳೆ ತುಪ್ಪದ ದೀಪ ಹಚ್ಚುವುದಾದರೆ ದೀಪವನ್ನು ದೇವರ ಎಡ ಬದಿಯಲ್ಲಿ ಇಡಬೇಕು. ಒಂದು ವೇಳೆ ನೀವು ಎಣ್ಣೆಯನ್ನು ಬಳಸಿ ದೀಪವನ್ನು ಹಚ್ಚುವುದಾದರೆ ದೇವರ ಬಲ ತುದಿಯಲ್ಲಿ ಇಡಬೇಕು. ಈ ರೀತಿ ಮಾಡುವುದರಿಂದ ನಿಮ್ಮ ಮನೆಯ ಸಮೃದ್ಧಿ ಹೆಚ್ಚಾಗಲಿದೆಯಂತೆ.
3. ಶನಿ ದೇವನಿಗಾಗಿ ದೀಪ ಹಚ್ಚಿರಿ
ಶನಿ ದೇವನನ್ನು ನ್ಯಾಯದ ದೇವರು ಎಂದು ಕರೆಯುತ್ತಾರೆ. ಶನಿ ದೇವನಿಗೆ ದೀಪವನ್ನು ಹಚ್ಚೋದ್ರಿಂದ ಸಾಡೆ ಸಾತಿ ದೋಷ ಪರಿಹಾರವಾಗಲಿದ್ಯಂತೆ. ಅಷ್ಟೇ ಅಲ್ಲದೇ ಶನಿ ದೇವನು ನಮ್ಮೆಲ್ಲಾ ಸಂಕಷ್ಟಗಳನ್ನೆಲ್ಲಾ ಪರಿಹಾರ ಮಾಡಿ ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸುವಂತೆ ಮಾಡಲಿದ್ದಾನೆ.
4. ದೀಪ ಹಚ್ಚುವ ಸಮಯ
ದೀಪ ಹಚ್ಚುವುದಕ್ಕೆ ಇಂತಹದ್ದೇ ಸಮಯ ಅಂತಿರುತ್ತದೆ. ನಮಗೆ ಇಷ್ಟ ಬಂದ ಸಮಯದಲ್ಲಿ ದೀಪ ಹಚ್ಚೋದಕ್ಕೆ ಸಾಧ್ಯವಾಗೋದಿಲ್ಲ. ಬೆಳಗ್ಗೆ 5 ರಿಂದ 10 ರವರೆಗೆ ಹಾಗೂ ಸಂಜೆ 5 ರಿಂದ 7ರವರೆಗೆ ದೀಪ ಹಚ್ಚುವುದಕ್ಕೆ ಪ್ರಾಶ್ತ್ಯವಾದ ಸಮಯ. ಮಧ್ಯಾಹ್ನದ ಸಮಯದಲ್ಲಿ ಮನೆಯಲ್ಲಿ ದೀಪ ಹಚ್ಚಿದರೆ ಒಳಿತಾಗೋದಿಲ್ಲ ಅನ್ನೋ ನಂಬಿಕೆಯಿದೆ. ಹೀಗಾಗಿ ದೀಪ ಹಚ್ಚುವುದು ಕೂಡ ಒಂದು ರೀತಿ ಸೂಕ್ಷ್ಮವಾದ ವಿಚಾರ.
ದೀಪ ಹಚ್ಚುವುದು ಸೂಕ್ಷ್ಮವಾದ ವಿಚಾರ ಆಗಿರೋದ್ರಿಂದ ಈ ಬಗ್ಗೆ ಮುಂಜಾಗರೂಕತೆ ವಹಿಸೋದು ತುಂಬಾನೇ ಮುಖ್ಯವಾಗುತ್ತದೆ. ಕಾಟಾಚಾರಕ್ಕೆ ಅಥವಾ ದೀಪ ಹಚ್ಚಬೇಕಲ್ಲ ಅನ್ನೋ ಕಾರಣಕ್ಕೆ ಹಚ್ಚಿದರೆ ಅದರ ಪ್ರತಿಫಲ ನಮಗೆ ಖಂಡಿತ ಸಿಗುವುದಿಲ್ಲ.



Click it and Unblock the Notifications
