Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಅಯೋಧ್ಯೆ ರಾಮಮಂದಿರದಲ್ಲಿ ಕೇಸರಿ ಧ್ವಜ ಹಾರಾಟ: ರಾಮನ ದರ್ಶನ ಪಡೆದ ಪ್ರಧಾನಿ ಮೋದಿ!
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಯೋಧ್ಯೆಯ ರಾಮ ಮಂದಿರದ ಮೇಲೆ ಕೇಸರಿ ಧ್ವಜವನ್ನು ಉದ್ಘಾಟಿಸಿದ್ದಾರೆ. ಈ ಮೂಲಕ ದೇವಾಲಯ ನಿರ್ಮಾಣ ಕಾರ್ಯ ಮುಕ್ತಾಯಗೊಂಡಿದೆ ಎಂಬುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಪ್ರಧಾನಿ ಮೋದಿ ಅವರಿಗೆ ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಾಥ್ ನೀಡಿದ್ದಾರೆ. ಹಾಗೆ ಸಮಾರಂಭದಲ್ಲಿ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸಹ ಭಾಗಿಯಾಗಿದ್ದರು.
ಅಯೋಧ್ಯೆ ರಾಮ ಮಂದಿರ ಈಗ ಪ್ರಮುಖ ಆಧ್ಯಾತ್ಮಿಕ ಕೇಂದ್ರವಾಗಿ ಬದಲಾಗಿದೆ. ಕಳೆದ ವರ್ಷ ಜನವರಿ 22ರಂದು ದೇವಾಲಯವನ್ನು ಉದ್ಘಾಟಿಸಲಾಗಿತ್ತು. ಇದಾದ ಬಳಿಕ ಲಕ್ಷಾಂತರ ಮಂದಿ ನಿತ್ಯವೂ ಶ್ರೀರಾಮನ ದರ್ಶನ ಪಡೆಯಲು ಅಯೋಧ್ಯೆಗೆ ಆಗಮಿಸುತ್ತಾರೆ. ಈ ದೀಪಾವಳಿಯ ಸಮಯದಲ್ಲಿ ರಾಮಮಂದಿರ ದೀಪಗಳಿಂದ ಅಲಂಕೃತಗೊಂಡಿತ್ತು. ಹಾಗೆ ರಾಮನಿಗೆ ಈವರೆಗೆ ಹಲವು ರೀತಿ ವಿಶೇಷ ಉಡುಗೊರೆಗಳು ಸಹ ಬಂದಿವೆ. ಆದ್ರೆ ಈಗ ಮುಖ್ಯ ದೇವಾಲಯ ಹಾಗೆ 7 ಇತರೆ ಗುಡಿಗಳ ಮೇಲೆ ಈ ಕೇಸರಿ ಧ್ವಜ ಹಾರಾಡಲಿದೆ.

ಈ ಕೇಸರಿ ಧ್ವಜದ ವಿಶೇಷತೆ ಏನು?
ಕೇಸರಿ ಧ್ವಜವು ಮಧ್ಯದಲ್ಲಿ ಓಂ ಎಂಬ ಬರಹವನ್ನು ಹೊಂದಿದೆ. ಇದು ತ್ರಿಕೋನ ಆಕಾರದಲ್ಲಿದೆ. ಸುಮಾರು 10 ಅಡಿ ಎತ್ತರ ಮತ್ತು 20 ಉದ್ದದ ಬಲಕೋನ ಧ್ವಜವಾಗಿದೆ. ಹಿಂದೂಗಳು ಶುಭವೆಂದು ಪರಿಗಣಿಸುವ ಗ್ರಹ ನಕ್ಷತ್ರ 'ಅಭಿಜಿತ್ ಮುಹೂರ್ತ'ದಂದು ಧ್ವಜಾರೋಹಣ ನೆರವೇರಿಸಲಾಗಿದೆ. ಧ್ವಜದ ಕೇಸರಿ ಬಣ್ಣವು ಬೆಂಕಿ ಮತ್ತು ಉದಯಿಸುವ ಸೂರ್ಯನನ್ನು ಸಂಕೇತಿಸುತ್ತದೆ - ತ್ಯಾಗ ಮತ್ತು ಸಮರ್ಪಣೆಯನ್ನು ಪ್ರತಿನಿಧಿಸುತ್ತದೆ. ಈ ಮಂದಿರ ಕೂಡ ಹಲವರ ತ್ಯಾಗದ ಪ್ರತಿಫಲ ಎಂದು ಬಿಂಬಿಸುತ್ತದೆ.
ರಾಮ ಮಂದಿರ ಸೇರಿ ಅಲ್ಲಿರುವ ಎಲ್ಲಾ 7 ದೇವಾಲಯದ ಮೇಲೆ ಹಾರಾಡುವ ಕೇಸರಿ ಧ್ವಜ ಶಾಶ್ವತವಾಗಿ ಇರಲಿದೆ. ಈ ಧ್ವಜ ನಿರ್ಮಾಣಕ್ಕೆ 25 ದಿನಗಳ ಕಾಲ ಸಮಯ ತೆಗೆದುಕೊಳ್ಳಲಾಗಿದೆ. ಹಾಗೆ ಮೂರು ಪದರದ ಬಟ್ಟೆಗಳ ಬಳಸಿ ಇದನ್ನು ಮಾಡಲಾಗಿದೆ. ಹಾಗೆ ಎಲ್ಲಾ ವಸ್ತುವನ್ನು ಸ್ಥಳೀಯರಿಂದಲೇ ಖರೀದಿಸಲಾಗಿದೆ. ರೇಷ್ಮೆ ಅಂಚುಗಳು, ಹಾಗೆ ಮಧ್ಯದಲ್ಲಿ ಓಂ ಅನ್ನು ಕೈಯಿಂದ ಬಿಡಿಸಲಾಗಿದೆ. ಈ ಓಂ ಅಕ್ಷರ ಬರೆಯಲು 7ರಿಂದ 8 ದಿನಗಳ ಸಮಯ ತೆಗೆದುಕೊಳ್ಳಲಾಗಿದೆ. ಅಲ್ಲಿನ ಸ್ಥಳೀಯ ಕಲಾವಿದರಾದ ಕಶ್ಯಪ್ ಮೇವಾಡ ಈ ಧ್ವಜವನ್ನು ನಿರ್ಮಿಸಿ ದೇವಾಲಯಕ್ಕೆ ನೀಡಿದ್ದಾರೆ.
ಇಂದು ಬೆಳಗ್ಗೆಯಿಂದಲೂ ದೇವಾಲಯಕ್ಕೆ ಸಾವಿರಾರು ಮಂದಿ ಭಕ್ತರು ಆಗಮಿಸಿದ್ದಾರೆ. ಹಾಗೆ ರಾಮನ ದರ್ಶನ ಸಮಯವನ್ನೂ ಹೆಚ್ಚಿಸಲಾಗಿದೆ. ಮಂದಿರದ ಸುತ್ತಲೂ ಇಂದು ಜೈ ಶ್ರೀರಾಮ್ ಘೋಷಣೆಗಳು ಮೊಳಗುತ್ತಿವೆ. ಧ್ವಜಾರೋಹಣ ಬಳಿಕ ದೇವಾಲಯದಲ್ಲಿ ಹಲವು ಕಾರ್ಯಕ್ರಮಗಳು ನಡೆಯುತ್ತಿವೆ. ಈ ವಿಶೇಷ ಸಂದರ್ಭದಲ್ಲಿ ಶ್ರೀರಾಮನಿಗೆ ಆರತಿ, ವಿಶೇಷ ಅಲಂಕಾರದೊಂದಿಗೆ ಪೂಜೆ ನೆರವೇರಲಿದೆ. ಶ್ರೀರಾಮ ಮತ್ತು ಸೀತೆಯ ವಿವಾಹ ಸಮಾರಂಭದ ವಾರ್ಷಿಕೋತ್ಸವವಾದ್ದರಿಂದ ಅಯೋಧ್ಯೆಗೆ ಅತ್ಯಂತ ಪವಿತ್ರ ದಿನ. ಅಯೋಧ್ಯೆಯಲ್ಲಿ ವಿವಾಹ ಪಂಚಮಿ ಎಂದು ಆಚರಿಸಲಾಗುತ್ತದೆ.
ರಾಮನ ಬಳಿಕ ಕೃಷ್ಣನ ದರ್ಶನ
ಅಯೋಧ್ಯೆಯ ಶ್ರೀರಾಮನ ದರ್ಶನ ಪಡೆದ ಪ್ರಧಾನಿ ನರೇಂದ್ರ ಮೋದಿ ಅವರು ಇದೇ ನವೆಂಬರ್ 28ರಂದು ಕೃಷ್ಣನ ದರ್ಶನ ಪಡೆಯಲಿದ್ದಾರೆ. ಉಡುಪಿಯ ಶ್ರೀಕೃಷ್ಣ ಮಠಕ್ಕೆ ಅವರು ಭೇಟಿ ನೀಡುತ್ತಿದ್ದಾರೆ. 3ನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆಯಾದ ಬಳಿಕ ಮೋದಿ ಇದೇ ಮೊದಲ ಬಾರಿಗೆ ಉಡುಪಿ ಮಠಕ್ಕೆ ಭೇಟಿ ನೀಡುತ್ತಿದ್ದಾರೆ. ನವೆಂಬರ್ 28 ರಂದು ದೆಹಲಿಯಿಂದ ನೇರವಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಬೆಳಗ್ಗೆ 11:05 ಕ್ಕೆ ಆಗಮಿಸಲಿದ್ದಾರೆ. ನಂತರ ಅಲ್ಲಿಂದ ಹಲಿಕಾಪ್ಟರ್ ಮೂಲಕ ಅವರು ಉಡುಪಿಗೆ ಆಗಮಿಸಲಿದ್ದಾರೆ. ಉಡುಪಿ ಕೃಷ್ಣನ ದರ್ಶನ ಪಡೆದು ಬಳಿಕ ಲಕ್ಷ ಕಂಠ ಗೀತ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.



Click it and Unblock the Notifications










