Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸಂಪತ್ತು, ಸಂತಾನ ಭಾಗ್ಯಕ್ಕಾಗಿ ಜನ್ಮಾಷ್ಟಮಿಯಂದು ಈ ಕಾರ್ಯಗಳನ್ನು ಮಾಡಿ
ಸಮಸ್ಯೆ ಅಂತ ಬಂದಾಗ ನಾವು ದೇವರ ಮೊರೆ ಹೋಗುತ್ತೇವೆ, ದೇವರ ಕೃಪೆಯಿದ್ದರೆ ಎಲ್ಲವೂ ಸರಿಹೋಗುವುದು ಎಂಬ ನಂಬಿಕೆ. ಶ್ರೀಕೃಷ್ಣ ಭಕ್ತರು ಕೂಡ ನಮ್ಮೆಲ್ಲಾ ಸಮಸ್ಯೆಗಳಿಗೆ ಶ್ರೀಕೃಷ್ಣ ಯಾವುದೋ ಒಂದು ರೂಪದಲ್ಲಿ ಪರಿಹಾರ ನೀಡುತ್ತಾನೆ ಎಂದು ಬಲವಾಗಿ ನಂಬುತ್ತಾರೆ. ಭಕ್ತರ ನಂಬಿಕೆಯಂತೆಯೇ ಎಷ್ಟೂ ಸಮಸ್ಯೆಗಳು ಪರಿಹಾರವಾಗುವುದರಿಂದ ಈ ನಂಬಿಕೆ ಎಂಬುವುದು ಮತ್ತಷ್ಟು ಹೆಚ್ಚಾಗುವುದು.

ಶ್ರೀಕೃಷ್ಣನ ಆರಾಧನೆ ಮಾಡುವವರಿಗೆ ಕೃಷ್ಣ ಜನ್ಮಾಷ್ಟಮಿ ಇನ್ನೂ ವಿಶೇಷವಾಗಿರುತ್ತದೆ, ಈ ದಿನ ಕೃಷ್ಣ ಜನಿಸಿದ ದಿನ. ಶ್ರಾವಣ ಮಾಸದ ಕೃಷ್ಣ ಪಕ್ಷದ ಅಷ್ಟಮಿಯಂದು ಶ್ರೀ ಕೃಷ್ಣನ ಜನ್ಮದಿನವನ್ನು ಆಚರಿಸಲಾಗುವುದು. ಈ ದಿನ ಶ್ರೀಕೃಷ್ಣನ ಮೂರ್ತಿಯನ್ನು ಅಲಂಕರಿಸಿ ವಿಶೇಷ ಪೂಜೆಯನ್ನು ಮಾಡಲಾಗುವುದು. ಶ್ರೀ ಕೃಷ್ಣ ದೇವಾಲಯಗಳಿಗೆ ಭೇಟಿ ನೀಡಿ ಪೂಜೆಯನ್ನು ಸಲ್ಲಿಸಲಾಗುವುದು. ಜನ್ಮಾಷ್ಟಮಿಯಂದು ಕೆಲವೊಂದು ಪರಿಹಾರ ಮಾಡಿದರೆ ಒಳ್ಳೆಯದು ಎಂದು ಹೇಳಲಾಗುತ್ತದೆ, ಅದರ ಬಗ್ಗೆ ನೋಡುವುದಾದರೆ
* ದೇವರಿಗೆ ನೈವೇದ್ಯ ಅರ್ಪಿಸುವಾಗ ಅದರಲ್ಲಿ ತುಳಸಿಯನ್ನು ಹಾಕಲು ಮರೆಯದಿರಿ. ಪಾಯಸಕ್ಕೆ ತುಳಸಿ ಹಾಕಿ ಅರ್ಪಿಸುವುದರಿಂದ ಆರ್ಥಿಕ ಸ್ಥಿತಿ ಮತ್ತಷ್ಟು ಉತ್ತಮವಾಗುವುದು.
* ಜನ್ಮಾಷ್ಟಮಿಯಂದು ಕೃಷ್ಣನಿಗೆ ಕೇಸರಿ ಮಿಶ್ರಿತ ಹಾಲಿನೊಂದಿಗೆ ಅಭಿಷೇಕ ಮಾಡಿ. ಈ ಪರಿಹಾರವನ್ನು ಮಾಡುವುದರಿಂದ ಶ್ರೀಕೃಷ್ಣನ ಜೊತೆಗೆ ಸಂಪತ್ತಿನ ಅಧಿದೇವತೆಯಾದ ಲಕ್ಷ್ಮಿಯ ಆಶೀರ್ವಾದವೂ ಸಿಗಲಿದೆ.
* ಕೃಷ್ಣ ಜನ್ಮಾಷ್ಟಮಿಯ ದಿನದಂದು ಕೃಷ್ಣನಿಗೆ ಬೆಳ್ಳಿಯ ಕೊಳಲು ಅರ್ಪಿಸಿ. ಹೀಗೆ ಮಾಡುವುದರಿಂದ ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗುತ್ತದೆ ಎಂಬ ನಂಬಿಕೆ ಇದೆ. ಅಲ್ಲದೆ, ಕುಟುಂಬ ಸದಸ್ಯರ ನಡುವೆ ಭಿನ್ನಾಭಿಪ್ರಾಯ ಮುಂದುವರಿದರೆ, ಅದು ಸಹ ಕೊನೆಯಾಗುವುದು.
* ನಿಮ್ಮ ಸಮಸ್ಯೆಗಳಿಗೆ ಯಾವುದೇ ಶತ್ರು ಪ್ರಮುಖ ಕಾರಣವಾಗುತ್ತಿದ್ದರೆ, ಅವನಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು, ಜನ್ಮಾಷ್ಟಮಿಯ ದಿನದಂದು "ಕ್ಲೀಂ ಕೃಷ್ಣಾಯ ವಾಸುದೇವಾಯ ಹರಿ: ಪರಮಾತ್ಮನೇ ಪ್ರಣಾತ್: ಕ್ಲೇಶಶಾಯ ಗೋವಿಂದಾಯ ನಮೋ ನಮಃ" ಎಂಬ ಮಂತ್ರ ಪಠಿಸಿ ಇದರಿಂದ ಶತ್ರು ಕಾಟ ಕಡಿಮೆಯಾಗುವುದು.
* ಶ್ರೀ ಕೃಷ್ಣನನ್ನು ಪೀತಾಂಬರಧಾರಿ ಎಂದೂ ಕರೆಯುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಕೃಷ್ಣ ಜನ್ಮಾಷ್ಟಮಿಯ ಪೂಜೆಯ ಪೂರ್ಣ ಫಲವನ್ನು ಪಡೆಯಲು ಹಳದಿ ಬಣ್ಣದ ಬಟ್ಟೆಗಳನ್ನು ಧರಿಸಿ ಹಳದಿ ಹಣ್ಣು, ಹಳದಿ ಹೂ, ಹಳದಿ ಸಿಹಿಯನ್ನು ಶ್ರೀ ಕೃಷ್ಣನಿಗೆ ಅರ್ಪಿಸಿ.
* ಕೃಷ್ಣ ಜನ್ಮಾಷ್ಟಮಿಯ ದಿನದಂದು 'ಓಂ ಕ್ಲೀಂ ಕೃಷ್ಣಾಯ ವಾಸುದೇವಾಯ ಹರಿ: ಪರಮಾತ್ಮನೇ ಪ್ರಣತ್: ಕ್ಲೇಷ್ಣಾಶಾಯ ಗೋವಿಂದಾಯ ನಮೋ ನಮಃ: ಕ್ಲೀನ ಕೃಷ್ಣಾಯ ಗೋವಿಂದಾಯ ಗೋಪಿಜನವಲ್ಲಭಾಯ ಸ್ವಾಹಾ' ಎಂಬ ಮಂತ್ರವನ್ನು ಜಪಿಸಿದರೆ ವೈವಾಹಿಕ ಸಂಬಂಧ ಚೆನ್ನಾಗಿರಲಿದೆ.
* ಜನ್ಮಾಷ್ಟಮಿ ದಿನದಿಂದ 27 ದಿನದವರೆಗೆ ಪ್ರತಿದಿನ ಶ್ರೀಕೃಷ್ಣ ನ ದೇವಾಲಯಕ್ಕೆ ತೆಂಗಿನಕಾಯಿಯನ್ನು ಅರ್ಪಿಸಿ.
* ಸಂತಾನಭಾಗ್ಯಕ್ಕಾಗಿ ನೀವು ಸಂತಾನ ಗೋಪಾಲ ಸ್ತೋತ್ರ ಪಠಿಸುವುದು ಒಳ್ಳೆಯದು.
* ಶ್ರೀಕೃಷ್ಣನ ಕೃಪೆಯಿಂದ ಶನಿದೋಷಕ್ಕೆ ಕೂಡ ಪರಿಹಾರ ಸಿಗುವುದು. ಶನಿಯ ಸಂಖ್ಯೆ ಕೂಡ 8, ಆದ್ದರಿಂದ ಅಷ್ಟಮಿಯಂದು ಶ್ರೀಕೃಷ್ಣನ ಆರಾಧನೆ ಮಾಡುವುದರಿಂದ ಶನಿ ಕಾಟ ಕಡಿಮೆಯಗುವುದು.



Click it and Unblock the Notifications