Latest Updates
-
ಬಿಸಿಲ ಬೇಗೆಯಲ್ಲಿ ಮದುವೆ ಸಂಭ್ರಮ ಹಾಳಾಗದಿರಲಿ: ಅತಿಥಿಗಳ ಆರೋಗ್ಯ ಕಾಪಾಡಲು ಇಲ್ಲಿವೆ ಸೀಕ್ರೆಟ್ ಟಿಪ್ಸ್! -
ಬಿಸಿಗಾಳಿಯ ಆರ್ಭಟ: ಮನೆಯನ್ನು ತಂಪಾಗಿಡಲು ಮತ್ತು ಆರೋಗ್ಯ ಕಾಪಾಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ರೆಡ್ ಅಲರ್ಟ್: ಆಯುಷ್ ಸಚಿವಾಲಯದ ಈ ಸಿಂಪಲ್ ಟಿಪ್ಸ್ ಪಾಲಿಸಿದರೆ ಸಾಕು, ದೇಹ ತಂಪಾಗಿರುತ್ತೆ! -
ಬಿಸಿಲಿನ ಬೇಗೆಯಿಂದ ತತ್ತರಿಸಿದ ಕರ್ನಾಟಕ: ಮನೆಯಲ್ಲೇ ತಂಪಾಗಿರಲು ನೀವು ಮಾಡಬೇಕಾದ ಆ 5 ಬದಲಾವಣೆಗಳೇನು? -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
45 ಡಿಗ್ರಿ ಬಿಸಿಲಲ್ಲಿ ಮದುವೆ ಪ್ಲಾನ್ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ ಎಚ್ಚರಿಕೆ ಮರೆಯದಿರಿ! -
ಶಾಖದ ಅಲೆ ಎಚ್ಚರಿಕೆ: ಎಸಿ ಇಲ್ಲದೆ ಮನೆಯನ್ನು ತಂಪಾಗಿಡಲು ಮತ್ತು ನಿಮ್ಮ ಗಿಡಗಳನ್ನು ಬಿಸಿಲಿನಿಂದ ರಕ್ಷಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಬಿಸಿಲ ಬೇಗೆಗೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ಪಾನೀಯ ಮತ್ತು ಆಹಾರವೇ ಸಂಜೀವಿನಿ! -
ಸೀರೆ ಉಡೋದ್ರಲ್ಲಿ ಹೊಸ ಕ್ರಾಂತಿ: ಇನ್ಸ್ಟಾಗ್ರಾಮ್ನಲ್ಲಿ ವೈರಲ್ ಆಗ್ತಿರೋ 'ದೇಸಿ-ಕೋರ್' ಸೀರೆ ಸ್ಟೈಲ್ಸ್ ಮಿಸ್ ಮಾಡ್ಬೇಡಿ! -
ಬಿಸಿಲ ಬೇಗೆಯಲ್ಲೂ ಫಿಟ್ ಆಗಿರಬೇಕೆ? ಮುಂಜಾನೆಯ ಈ ಸಣ್ಣ ಬದಲಾವಣೆ ನಿಮ್ಮ ಆರೋಗ್ಯಕ್ಕೆ ವರದಾನ!
ಮಾಸಿಕ ಕೃಷ್ಣ ಜನ್ಮಾಷ್ಟಮಿ 2023 : ದಿನಾಂಕ, ಶುಭ ಮುಹೂರ್ತ ಮತ್ತು ಆಚರಣಾ ವಿಧಾನವೇನು?
ಹಿಂದೂ ಕ್ಯಾಲೆಂಡರ್ ಪ್ರಕಾರ ಮಾಸಿಕ ಕೃಷ್ಣ ಜನ್ಮಾಷ್ಟಮಿಯನ್ನು ಪ್ರತಿ ತಿಂಗಳು ಕೃಷ್ಣ ಪಕ್ಷದ ಅಷ್ಟಮಿಯ ದಿನದಂದು ಆಚರಿಸಲಾಗುತ್ತದೆ. ಈ ಬಾರಿ ಜೂನ್ 10 ರಂದು 'ಮಾಸಿಕ ಕೃಷ್ಣ ಜನ್ಮಾಷ್ಟಮಿ'ಯನ್ನು ಆಚರಣೆ ಮಾಡಲಾಗುತ್ತದೆ. ಪುರಾಣಗಳ ಪ್ರಕಾರ ಭಾದ್ರಪದ ಕೃಷ್ಣ ಪಕ್ಷದ ಅಷ್ಟಮಿಯ ದಿನದಂದು ಭಗವಾನ್ ಕೃಷ್ಣನು ಜನಿಸಿದನೆಂದು ಧಾರ್ಮಿಕ ಗ್ರಂಥಗಳಲ್ಲಿ ಉಲ್ಲೇಖವಾಗಿದೆ.
ಈ ದಿನ ಕೃಷ್ಣನನ್ನು ಪೂಜಿಸಿ ಭಕ್ತಿಯಿಂದ ಬೇಡಿಕೊಂಡರೆ ಆತ ನಮ್ಮನ್ನೆಲ್ಲಾ ರಕ್ಷಿಸುತ್ತಾನೆ ಎಂಬ ನಂಬಿಕೆಯಿದೆ. ಆತನ ಕೃಪೆಯಿಂದ ಭಕ್ತರ ಜೀವನದಲ್ಲಿ ಖುಷಿ, ಸಮೃದ್ಧಿ ನೆಲೆಯಾಗಲಿದೆಯಂತೆ. ಆದ್ದರಿಂದ ಮಾಸಿಕ ಕೃಷ್ಣ ಜನ್ಮಾಷ್ಟಮಿಯ ದಿನ ಮುರಳಿ ಮನೋಹರನನ್ನು ಭಕ್ತಿಯಿಂದ ಪೂಜಿಸೋದನ್ನು ಮರೀಬೇಡಿ. ಅಷ್ಟಕ್ಕು ಜೂನ್ ತಿಂಗಳಿನಲ್ಲಿ ಯಾವ ದಿನ ಮಾಸಿಕ ಕೃಷ್ಣ ಜನ್ಮಾಷ್ಟಮಿಯನ್ನು ಆಚರಣೆ ಮಾಡಲಾಗುತ್ತದೆ? ಶುಭ ಮುಹೂರ್ತ ಯಾವಾಗ? ಪೂಜಾ ವಿಧಾನದ ಬಗ್ಗೆ ತಿಳಿದುಕೊಳ್ಳೋಣ.

ಮಾಸಿಕ ಕೃಷ್ಣ ಜನ್ಮಾಷ್ಟಮಿ ಸಮಯ ಮತ್ತು ಶುಭ ಮುಹೂರ್ತ :
ಮಾಸಿಕ ಕೃಷ್ಣ ಜನ್ಮಾಷ್ಟಮಿ ಆರಂಭ : ಜೂನ್ 10 ರಂದು ಮಧ್ಯಾಹ್ನ 2.01ಕ್ಕೆ
ಮಾಸಿಕ ಕೃಷ್ಣ ಜನ್ಮಾಷ್ಟಮಿ ಅಂತ್ಯ : ಜೂನ್ 11 ರಂದು ಮಧ್ಯಾಹ್ನ 12.05ಕ್ಕೆ
ಪೂಜಾ ವಿಧಾನ ಹೇಗಿರುತ್ತೆ?
ಬೆಳಗ್ಗೆ ಬೇಗ ಎದ್ದು ಸ್ನಾನ ಮಾಡಿ. ನಂತರ ಹಳದಿ ಬಟ್ಟೆಯನ್ನು ಧರಿಸಿದರೆ ಉತ್ತಮ. ಇನ್ನೂ ದೇವರ ಕೋಣೆಯಲ್ಲಿ ಶ್ರೀ ಕೃಷ್ಣನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ. ಇದರ ನಂತರ ಶ್ರೀಕೃಷ್ಣನಿಗೆ ಹಣ್ಣು, ಹೂವು, ಧೂಪ, ದೀಪ, ಕುಂಕುಮ, ತುಳಸಿ ಎಲೆಗಳು, ಎಳ್ಳು, ಬಾರ್ಲಿ, ಅರಿಶಿನ ಮತ್ತು ಶ್ರೀಗಂಧವನ್ನು ಅರ್ಪಿಸಿ. ಕೊನೆಯಲ್ಲಿ ಆರತಿಯನ್ನು ಬೆಳಗಿರಿ. ಸಂತೋಷ, ಸಮೃದ್ಧಿ, ಶಾಂತಿ ಮತ್ತು ಭಕ್ತಿಗಾಗಿ ದೇವರನ್ನು ಭಕ್ತಿಯಿಂದ ಪ್ರಾರ್ಥಿಸಿ. ಶ್ರೀಕೃಷ್ಣನ ಕೃಪೆಯಿಂದ ನಿಮ್ಮ ಎಲ್ಲಾ ಇಷ್ಟಾರ್ಥಗಳು ನೆರವೇರುತ್ತದೆ.
ಮಾಸಿಕ ಕೃಷ್ಣ ಜನ್ಮಾಷ್ಟಮಿಯ ಮಹತ್ವವೇನು?
ಮಾಸಿಕ ಜನ್ಮಾಷ್ಟಮಿಯ ದಿನದಂದು ಶ್ರೀಕೃಷ್ಣನನ್ನು ಪೂಜಿಸಲಾಗುತ್ತದೆ. ಈ ದಿನ ಶ್ರೀಕೃಷ್ಣನ ಬಾಲ ರೂಪವನ್ನು ಪೂಜಿಸುವುದು ತುಂಬಾ ಮಂಗಳಕರವೆಂದು ನಂಬಲಾಗಿದೆ. ಮಗುವನ್ನು ಹೊಂದಲು ಬಯಸುವ ದಂಪತಿಗಳು ಬಾಲ ಕೃಷ್ಣನಿಗೆ ವಿಶೇಷ ಪೂಜೆ ಸಲ್ಲಿಸಬೇಕು. ಈ ವ್ರತವನ್ನು ಆಚರಿಸುವುದರಿಂದ ಸಂತಾನ ಪ್ರಾಪ್ತಿಯಾಗುತ್ತದೆ. ಅಷ್ಟೇ ಅಲ್ಲದೇ ಅದರೊಂದಿಗೆ ನಿಮ್ಮ ಗೌರವವೂ ಹೆಚ್ಚುತ್ತಂತೆ.



Click it and Unblock the Notifications