Latest Updates
-
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಈ 7 ನಿಮಿಷದ ರೂಟೀನ್ ನಿಮ್ಮನ್ನು ರಕ್ಷಿಸುತ್ತದೆ! -
ಬೆಂಗಳೂರಿನಲ್ಲಿ ಇಂದೇ ವಿದ್ಯುತ್ ಕಡಿತ: ನಿಮ್ಮ ಎಲೆಕ್ಟ್ರಾನಿಕ್ ಉಪಕರಣಗಳನ್ನು ಸುರಕ್ಷಿತವಾಗಿಡುವುದು ಹೇಗೆ? -
ಕರ್ಕ ಸಂಕ್ರಾಂತಿ ವಿಶೇಷ: ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಜಗನ್ನಾಥ ರಥಯಾತ್ರೆ 2026: ಸಂಚಾರ ಮಾರ್ಗ ಬದಲಾವಣೆ, ಭಕ್ತರಿಗಾಗಿ ಇಲ್ಲಿದೆ ಮಹತ್ವದ ಮಾಹಿತಿ! -
ನೀಟ್ ಪರೀಕ್ಷೆಯ ಆತಂಕವೇ? ಈ 6 ನಿಮಿಷದ ವ್ಯಾಯಾಮ ನಿಮ್ಮ ಒತ್ತಡವನ್ನು ಮರೆಸುತ್ತದೆ! -
ಮಧ್ಯಪ್ರದೇಶ UCC: ಲಿವ್-ಇನ್ ಜೋಡಿಗಳಿಗೆ ಕಡ್ಡಾಯ ನೋಂದಣಿ, ನಿಯಮ ಮೀರಿದರೆ ಕಾದಿದೆ ಸಂಕಷ್ಟ! -
ಹಾಲಿನಲ್ಲಿ ವಿಷಕಾರಿ ಕಲಬೆರಕೆ ಪತ್ತೆ: ನಿಮ್ಮ ಮನೆಯ ಹಾಲಿನ ಸುರಕ್ಷತೆ ಪರೀಕ್ಷಿಸುವುದು ಹೇಗೆ? -
ಬೆಂಗಳೂರಿನಲ್ಲಿ 12 ಗಂಟೆಗಳ ಕಾಲ ನೀರಿನ ಕಡಿತ: ನಾಳೆ ನೀರು ಉಳಿಸಲು ಈ ಟಿಪ್ಸ್ ಫಾಲೋ ಮಾಡಿ! -
ಮಳೆಗಾಲದಲ್ಲಿ ಜಿಮ್ಗೆ ಹೋಗಲು ಸಾಧ್ಯವಿಲ್ಲವೇ? ಮನೆಯಲ್ಲೇ ಫಿಟ್ ಆಗಿರಲು 8 ನಿಮಿಷದ ಈ ವರ್ಕೌಟ್ ಟ್ರೈ ಮಾಡಿ! -
ಮದುವೆಗೆ ಮುನ್ನ ಎಚ್ಚರ: ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ವರದಕ್ಷಿಣೆ ಮತ್ತು ಉಡುಗೊರೆಗಳ ನಡುವಿನ ವ್ಯತ್ಯಾಸವೇನು?
ಮಾಸಿಕ ಕೃಷ್ಣ ಜನ್ಮಾಷ್ಟಮಿ 2023 : ದಿನಾಂಕ, ಶುಭ ಮುಹೂರ್ತ ಮತ್ತು ಆಚರಣಾ ವಿಧಾನವೇನು?
ಹಿಂದೂ ಕ್ಯಾಲೆಂಡರ್ ಪ್ರಕಾರ ಮಾಸಿಕ ಕೃಷ್ಣ ಜನ್ಮಾಷ್ಟಮಿಯನ್ನು ಪ್ರತಿ ತಿಂಗಳು ಕೃಷ್ಣ ಪಕ್ಷದ ಅಷ್ಟಮಿಯ ದಿನದಂದು ಆಚರಿಸಲಾಗುತ್ತದೆ. ಈ ಬಾರಿ ಜೂನ್ 10 ರಂದು 'ಮಾಸಿಕ ಕೃಷ್ಣ ಜನ್ಮಾಷ್ಟಮಿ'ಯನ್ನು ಆಚರಣೆ ಮಾಡಲಾಗುತ್ತದೆ. ಪುರಾಣಗಳ ಪ್ರಕಾರ ಭಾದ್ರಪದ ಕೃಷ್ಣ ಪಕ್ಷದ ಅಷ್ಟಮಿಯ ದಿನದಂದು ಭಗವಾನ್ ಕೃಷ್ಣನು ಜನಿಸಿದನೆಂದು ಧಾರ್ಮಿಕ ಗ್ರಂಥಗಳಲ್ಲಿ ಉಲ್ಲೇಖವಾಗಿದೆ.
ಈ ದಿನ ಕೃಷ್ಣನನ್ನು ಪೂಜಿಸಿ ಭಕ್ತಿಯಿಂದ ಬೇಡಿಕೊಂಡರೆ ಆತ ನಮ್ಮನ್ನೆಲ್ಲಾ ರಕ್ಷಿಸುತ್ತಾನೆ ಎಂಬ ನಂಬಿಕೆಯಿದೆ. ಆತನ ಕೃಪೆಯಿಂದ ಭಕ್ತರ ಜೀವನದಲ್ಲಿ ಖುಷಿ, ಸಮೃದ್ಧಿ ನೆಲೆಯಾಗಲಿದೆಯಂತೆ. ಆದ್ದರಿಂದ ಮಾಸಿಕ ಕೃಷ್ಣ ಜನ್ಮಾಷ್ಟಮಿಯ ದಿನ ಮುರಳಿ ಮನೋಹರನನ್ನು ಭಕ್ತಿಯಿಂದ ಪೂಜಿಸೋದನ್ನು ಮರೀಬೇಡಿ. ಅಷ್ಟಕ್ಕು ಜೂನ್ ತಿಂಗಳಿನಲ್ಲಿ ಯಾವ ದಿನ ಮಾಸಿಕ ಕೃಷ್ಣ ಜನ್ಮಾಷ್ಟಮಿಯನ್ನು ಆಚರಣೆ ಮಾಡಲಾಗುತ್ತದೆ? ಶುಭ ಮುಹೂರ್ತ ಯಾವಾಗ? ಪೂಜಾ ವಿಧಾನದ ಬಗ್ಗೆ ತಿಳಿದುಕೊಳ್ಳೋಣ.

ಮಾಸಿಕ ಕೃಷ್ಣ ಜನ್ಮಾಷ್ಟಮಿ ಸಮಯ ಮತ್ತು ಶುಭ ಮುಹೂರ್ತ :
ಮಾಸಿಕ ಕೃಷ್ಣ ಜನ್ಮಾಷ್ಟಮಿ ಆರಂಭ : ಜೂನ್ 10 ರಂದು ಮಧ್ಯಾಹ್ನ 2.01ಕ್ಕೆ
ಮಾಸಿಕ ಕೃಷ್ಣ ಜನ್ಮಾಷ್ಟಮಿ ಅಂತ್ಯ : ಜೂನ್ 11 ರಂದು ಮಧ್ಯಾಹ್ನ 12.05ಕ್ಕೆ
ಪೂಜಾ ವಿಧಾನ ಹೇಗಿರುತ್ತೆ?
ಬೆಳಗ್ಗೆ ಬೇಗ ಎದ್ದು ಸ್ನಾನ ಮಾಡಿ. ನಂತರ ಹಳದಿ ಬಟ್ಟೆಯನ್ನು ಧರಿಸಿದರೆ ಉತ್ತಮ. ಇನ್ನೂ ದೇವರ ಕೋಣೆಯಲ್ಲಿ ಶ್ರೀ ಕೃಷ್ಣನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ. ಇದರ ನಂತರ ಶ್ರೀಕೃಷ್ಣನಿಗೆ ಹಣ್ಣು, ಹೂವು, ಧೂಪ, ದೀಪ, ಕುಂಕುಮ, ತುಳಸಿ ಎಲೆಗಳು, ಎಳ್ಳು, ಬಾರ್ಲಿ, ಅರಿಶಿನ ಮತ್ತು ಶ್ರೀಗಂಧವನ್ನು ಅರ್ಪಿಸಿ. ಕೊನೆಯಲ್ಲಿ ಆರತಿಯನ್ನು ಬೆಳಗಿರಿ. ಸಂತೋಷ, ಸಮೃದ್ಧಿ, ಶಾಂತಿ ಮತ್ತು ಭಕ್ತಿಗಾಗಿ ದೇವರನ್ನು ಭಕ್ತಿಯಿಂದ ಪ್ರಾರ್ಥಿಸಿ. ಶ್ರೀಕೃಷ್ಣನ ಕೃಪೆಯಿಂದ ನಿಮ್ಮ ಎಲ್ಲಾ ಇಷ್ಟಾರ್ಥಗಳು ನೆರವೇರುತ್ತದೆ.
ಮಾಸಿಕ ಕೃಷ್ಣ ಜನ್ಮಾಷ್ಟಮಿಯ ಮಹತ್ವವೇನು?
ಮಾಸಿಕ ಜನ್ಮಾಷ್ಟಮಿಯ ದಿನದಂದು ಶ್ರೀಕೃಷ್ಣನನ್ನು ಪೂಜಿಸಲಾಗುತ್ತದೆ. ಈ ದಿನ ಶ್ರೀಕೃಷ್ಣನ ಬಾಲ ರೂಪವನ್ನು ಪೂಜಿಸುವುದು ತುಂಬಾ ಮಂಗಳಕರವೆಂದು ನಂಬಲಾಗಿದೆ. ಮಗುವನ್ನು ಹೊಂದಲು ಬಯಸುವ ದಂಪತಿಗಳು ಬಾಲ ಕೃಷ್ಣನಿಗೆ ವಿಶೇಷ ಪೂಜೆ ಸಲ್ಲಿಸಬೇಕು. ಈ ವ್ರತವನ್ನು ಆಚರಿಸುವುದರಿಂದ ಸಂತಾನ ಪ್ರಾಪ್ತಿಯಾಗುತ್ತದೆ. ಅಷ್ಟೇ ಅಲ್ಲದೇ ಅದರೊಂದಿಗೆ ನಿಮ್ಮ ಗೌರವವೂ ಹೆಚ್ಚುತ್ತಂತೆ.



Click it and Unblock the Notifications