Latest Updates
-
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್!
ಮಾಸಿಕ ಕೃಷ್ಣ ಜನ್ಮಾಷ್ಟಮಿ 2023 : ದಿನಾಂಕ, ಶುಭ ಮುಹೂರ್ತ ಮತ್ತು ಆಚರಣಾ ವಿಧಾನವೇನು?
ಹಿಂದೂ ಕ್ಯಾಲೆಂಡರ್ ಪ್ರಕಾರ ಮಾಸಿಕ ಕೃಷ್ಣ ಜನ್ಮಾಷ್ಟಮಿಯನ್ನು ಪ್ರತಿ ತಿಂಗಳು ಕೃಷ್ಣ ಪಕ್ಷದ ಅಷ್ಟಮಿಯ ದಿನದಂದು ಆಚರಿಸಲಾಗುತ್ತದೆ. ಈ ಬಾರಿ ಜೂನ್ 10 ರಂದು 'ಮಾಸಿಕ ಕೃಷ್ಣ ಜನ್ಮಾಷ್ಟಮಿ'ಯನ್ನು ಆಚರಣೆ ಮಾಡಲಾಗುತ್ತದೆ. ಪುರಾಣಗಳ ಪ್ರಕಾರ ಭಾದ್ರಪದ ಕೃಷ್ಣ ಪಕ್ಷದ ಅಷ್ಟಮಿಯ ದಿನದಂದು ಭಗವಾನ್ ಕೃಷ್ಣನು ಜನಿಸಿದನೆಂದು ಧಾರ್ಮಿಕ ಗ್ರಂಥಗಳಲ್ಲಿ ಉಲ್ಲೇಖವಾಗಿದೆ.
ಈ ದಿನ ಕೃಷ್ಣನನ್ನು ಪೂಜಿಸಿ ಭಕ್ತಿಯಿಂದ ಬೇಡಿಕೊಂಡರೆ ಆತ ನಮ್ಮನ್ನೆಲ್ಲಾ ರಕ್ಷಿಸುತ್ತಾನೆ ಎಂಬ ನಂಬಿಕೆಯಿದೆ. ಆತನ ಕೃಪೆಯಿಂದ ಭಕ್ತರ ಜೀವನದಲ್ಲಿ ಖುಷಿ, ಸಮೃದ್ಧಿ ನೆಲೆಯಾಗಲಿದೆಯಂತೆ. ಆದ್ದರಿಂದ ಮಾಸಿಕ ಕೃಷ್ಣ ಜನ್ಮಾಷ್ಟಮಿಯ ದಿನ ಮುರಳಿ ಮನೋಹರನನ್ನು ಭಕ್ತಿಯಿಂದ ಪೂಜಿಸೋದನ್ನು ಮರೀಬೇಡಿ. ಅಷ್ಟಕ್ಕು ಜೂನ್ ತಿಂಗಳಿನಲ್ಲಿ ಯಾವ ದಿನ ಮಾಸಿಕ ಕೃಷ್ಣ ಜನ್ಮಾಷ್ಟಮಿಯನ್ನು ಆಚರಣೆ ಮಾಡಲಾಗುತ್ತದೆ? ಶುಭ ಮುಹೂರ್ತ ಯಾವಾಗ? ಪೂಜಾ ವಿಧಾನದ ಬಗ್ಗೆ ತಿಳಿದುಕೊಳ್ಳೋಣ.

ಮಾಸಿಕ ಕೃಷ್ಣ ಜನ್ಮಾಷ್ಟಮಿ ಸಮಯ ಮತ್ತು ಶುಭ ಮುಹೂರ್ತ :
ಮಾಸಿಕ ಕೃಷ್ಣ ಜನ್ಮಾಷ್ಟಮಿ ಆರಂಭ : ಜೂನ್ 10 ರಂದು ಮಧ್ಯಾಹ್ನ 2.01ಕ್ಕೆ
ಮಾಸಿಕ ಕೃಷ್ಣ ಜನ್ಮಾಷ್ಟಮಿ ಅಂತ್ಯ : ಜೂನ್ 11 ರಂದು ಮಧ್ಯಾಹ್ನ 12.05ಕ್ಕೆ
ಪೂಜಾ ವಿಧಾನ ಹೇಗಿರುತ್ತೆ?
ಬೆಳಗ್ಗೆ ಬೇಗ ಎದ್ದು ಸ್ನಾನ ಮಾಡಿ. ನಂತರ ಹಳದಿ ಬಟ್ಟೆಯನ್ನು ಧರಿಸಿದರೆ ಉತ್ತಮ. ಇನ್ನೂ ದೇವರ ಕೋಣೆಯಲ್ಲಿ ಶ್ರೀ ಕೃಷ್ಣನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ. ಇದರ ನಂತರ ಶ್ರೀಕೃಷ್ಣನಿಗೆ ಹಣ್ಣು, ಹೂವು, ಧೂಪ, ದೀಪ, ಕುಂಕುಮ, ತುಳಸಿ ಎಲೆಗಳು, ಎಳ್ಳು, ಬಾರ್ಲಿ, ಅರಿಶಿನ ಮತ್ತು ಶ್ರೀಗಂಧವನ್ನು ಅರ್ಪಿಸಿ. ಕೊನೆಯಲ್ಲಿ ಆರತಿಯನ್ನು ಬೆಳಗಿರಿ. ಸಂತೋಷ, ಸಮೃದ್ಧಿ, ಶಾಂತಿ ಮತ್ತು ಭಕ್ತಿಗಾಗಿ ದೇವರನ್ನು ಭಕ್ತಿಯಿಂದ ಪ್ರಾರ್ಥಿಸಿ. ಶ್ರೀಕೃಷ್ಣನ ಕೃಪೆಯಿಂದ ನಿಮ್ಮ ಎಲ್ಲಾ ಇಷ್ಟಾರ್ಥಗಳು ನೆರವೇರುತ್ತದೆ.
ಮಾಸಿಕ ಕೃಷ್ಣ ಜನ್ಮಾಷ್ಟಮಿಯ ಮಹತ್ವವೇನು?
ಮಾಸಿಕ ಜನ್ಮಾಷ್ಟಮಿಯ ದಿನದಂದು ಶ್ರೀಕೃಷ್ಣನನ್ನು ಪೂಜಿಸಲಾಗುತ್ತದೆ. ಈ ದಿನ ಶ್ರೀಕೃಷ್ಣನ ಬಾಲ ರೂಪವನ್ನು ಪೂಜಿಸುವುದು ತುಂಬಾ ಮಂಗಳಕರವೆಂದು ನಂಬಲಾಗಿದೆ. ಮಗುವನ್ನು ಹೊಂದಲು ಬಯಸುವ ದಂಪತಿಗಳು ಬಾಲ ಕೃಷ್ಣನಿಗೆ ವಿಶೇಷ ಪೂಜೆ ಸಲ್ಲಿಸಬೇಕು. ಈ ವ್ರತವನ್ನು ಆಚರಿಸುವುದರಿಂದ ಸಂತಾನ ಪ್ರಾಪ್ತಿಯಾಗುತ್ತದೆ. ಅಷ್ಟೇ ಅಲ್ಲದೇ ಅದರೊಂದಿಗೆ ನಿಮ್ಮ ಗೌರವವೂ ಹೆಚ್ಚುತ್ತಂತೆ.



Click it and Unblock the Notifications