Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮಾಸಿಕ ಕೃಷ್ಣ ಜನ್ಮಾಷ್ಟಮಿ 2023 : ದಿನಾಂಕ, ಶುಭ ಮುಹೂರ್ತ ಮತ್ತು ಆಚರಣಾ ವಿಧಾನವೇನು?
ಹಿಂದೂ ಕ್ಯಾಲೆಂಡರ್ ಪ್ರಕಾರ ಮಾಸಿಕ ಕೃಷ್ಣ ಜನ್ಮಾಷ್ಟಮಿಯನ್ನು ಪ್ರತಿ ತಿಂಗಳು ಕೃಷ್ಣ ಪಕ್ಷದ ಅಷ್ಟಮಿಯ ದಿನದಂದು ಆಚರಿಸಲಾಗುತ್ತದೆ. ಈ ಬಾರಿ ಜೂನ್ 10 ರಂದು 'ಮಾಸಿಕ ಕೃಷ್ಣ ಜನ್ಮಾಷ್ಟಮಿ'ಯನ್ನು ಆಚರಣೆ ಮಾಡಲಾಗುತ್ತದೆ. ಪುರಾಣಗಳ ಪ್ರಕಾರ ಭಾದ್ರಪದ ಕೃಷ್ಣ ಪಕ್ಷದ ಅಷ್ಟಮಿಯ ದಿನದಂದು ಭಗವಾನ್ ಕೃಷ್ಣನು ಜನಿಸಿದನೆಂದು ಧಾರ್ಮಿಕ ಗ್ರಂಥಗಳಲ್ಲಿ ಉಲ್ಲೇಖವಾಗಿದೆ.
ಈ ದಿನ ಕೃಷ್ಣನನ್ನು ಪೂಜಿಸಿ ಭಕ್ತಿಯಿಂದ ಬೇಡಿಕೊಂಡರೆ ಆತ ನಮ್ಮನ್ನೆಲ್ಲಾ ರಕ್ಷಿಸುತ್ತಾನೆ ಎಂಬ ನಂಬಿಕೆಯಿದೆ. ಆತನ ಕೃಪೆಯಿಂದ ಭಕ್ತರ ಜೀವನದಲ್ಲಿ ಖುಷಿ, ಸಮೃದ್ಧಿ ನೆಲೆಯಾಗಲಿದೆಯಂತೆ. ಆದ್ದರಿಂದ ಮಾಸಿಕ ಕೃಷ್ಣ ಜನ್ಮಾಷ್ಟಮಿಯ ದಿನ ಮುರಳಿ ಮನೋಹರನನ್ನು ಭಕ್ತಿಯಿಂದ ಪೂಜಿಸೋದನ್ನು ಮರೀಬೇಡಿ. ಅಷ್ಟಕ್ಕು ಜೂನ್ ತಿಂಗಳಿನಲ್ಲಿ ಯಾವ ದಿನ ಮಾಸಿಕ ಕೃಷ್ಣ ಜನ್ಮಾಷ್ಟಮಿಯನ್ನು ಆಚರಣೆ ಮಾಡಲಾಗುತ್ತದೆ? ಶುಭ ಮುಹೂರ್ತ ಯಾವಾಗ? ಪೂಜಾ ವಿಧಾನದ ಬಗ್ಗೆ ತಿಳಿದುಕೊಳ್ಳೋಣ.

ಮಾಸಿಕ ಕೃಷ್ಣ ಜನ್ಮಾಷ್ಟಮಿ ಸಮಯ ಮತ್ತು ಶುಭ ಮುಹೂರ್ತ :
ಮಾಸಿಕ ಕೃಷ್ಣ ಜನ್ಮಾಷ್ಟಮಿ ಆರಂಭ : ಜೂನ್ 10 ರಂದು ಮಧ್ಯಾಹ್ನ 2.01ಕ್ಕೆ
ಮಾಸಿಕ ಕೃಷ್ಣ ಜನ್ಮಾಷ್ಟಮಿ ಅಂತ್ಯ : ಜೂನ್ 11 ರಂದು ಮಧ್ಯಾಹ್ನ 12.05ಕ್ಕೆ
ಪೂಜಾ ವಿಧಾನ ಹೇಗಿರುತ್ತೆ?
ಬೆಳಗ್ಗೆ ಬೇಗ ಎದ್ದು ಸ್ನಾನ ಮಾಡಿ. ನಂತರ ಹಳದಿ ಬಟ್ಟೆಯನ್ನು ಧರಿಸಿದರೆ ಉತ್ತಮ. ಇನ್ನೂ ದೇವರ ಕೋಣೆಯಲ್ಲಿ ಶ್ರೀ ಕೃಷ್ಣನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ. ಇದರ ನಂತರ ಶ್ರೀಕೃಷ್ಣನಿಗೆ ಹಣ್ಣು, ಹೂವು, ಧೂಪ, ದೀಪ, ಕುಂಕುಮ, ತುಳಸಿ ಎಲೆಗಳು, ಎಳ್ಳು, ಬಾರ್ಲಿ, ಅರಿಶಿನ ಮತ್ತು ಶ್ರೀಗಂಧವನ್ನು ಅರ್ಪಿಸಿ. ಕೊನೆಯಲ್ಲಿ ಆರತಿಯನ್ನು ಬೆಳಗಿರಿ. ಸಂತೋಷ, ಸಮೃದ್ಧಿ, ಶಾಂತಿ ಮತ್ತು ಭಕ್ತಿಗಾಗಿ ದೇವರನ್ನು ಭಕ್ತಿಯಿಂದ ಪ್ರಾರ್ಥಿಸಿ. ಶ್ರೀಕೃಷ್ಣನ ಕೃಪೆಯಿಂದ ನಿಮ್ಮ ಎಲ್ಲಾ ಇಷ್ಟಾರ್ಥಗಳು ನೆರವೇರುತ್ತದೆ.
ಮಾಸಿಕ ಕೃಷ್ಣ ಜನ್ಮಾಷ್ಟಮಿಯ ಮಹತ್ವವೇನು?
ಮಾಸಿಕ ಜನ್ಮಾಷ್ಟಮಿಯ ದಿನದಂದು ಶ್ರೀಕೃಷ್ಣನನ್ನು ಪೂಜಿಸಲಾಗುತ್ತದೆ. ಈ ದಿನ ಶ್ರೀಕೃಷ್ಣನ ಬಾಲ ರೂಪವನ್ನು ಪೂಜಿಸುವುದು ತುಂಬಾ ಮಂಗಳಕರವೆಂದು ನಂಬಲಾಗಿದೆ. ಮಗುವನ್ನು ಹೊಂದಲು ಬಯಸುವ ದಂಪತಿಗಳು ಬಾಲ ಕೃಷ್ಣನಿಗೆ ವಿಶೇಷ ಪೂಜೆ ಸಲ್ಲಿಸಬೇಕು. ಈ ವ್ರತವನ್ನು ಆಚರಿಸುವುದರಿಂದ ಸಂತಾನ ಪ್ರಾಪ್ತಿಯಾಗುತ್ತದೆ. ಅಷ್ಟೇ ಅಲ್ಲದೇ ಅದರೊಂದಿಗೆ ನಿಮ್ಮ ಗೌರವವೂ ಹೆಚ್ಚುತ್ತಂತೆ.



Click it and Unblock the Notifications