Latest Updates
-
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು?
ಮಾಸಿಕ ಕೃಷ್ಣ ಜನ್ಮಾಷ್ಟಮಿ 2023 : ದಿನಾಂಕ, ಶುಭ ಮುಹೂರ್ತ ಮತ್ತು ಆಚರಣಾ ವಿಧಾನವೇನು?
ಹಿಂದೂ ಕ್ಯಾಲೆಂಡರ್ ಪ್ರಕಾರ ಮಾಸಿಕ ಕೃಷ್ಣ ಜನ್ಮಾಷ್ಟಮಿಯನ್ನು ಪ್ರತಿ ತಿಂಗಳು ಕೃಷ್ಣ ಪಕ್ಷದ ಅಷ್ಟಮಿಯ ದಿನದಂದು ಆಚರಿಸಲಾಗುತ್ತದೆ. ಈ ಬಾರಿ ಜೂನ್ 10 ರಂದು 'ಮಾಸಿಕ ಕೃಷ್ಣ ಜನ್ಮಾಷ್ಟಮಿ'ಯನ್ನು ಆಚರಣೆ ಮಾಡಲಾಗುತ್ತದೆ. ಪುರಾಣಗಳ ಪ್ರಕಾರ ಭಾದ್ರಪದ ಕೃಷ್ಣ ಪಕ್ಷದ ಅಷ್ಟಮಿಯ ದಿನದಂದು ಭಗವಾನ್ ಕೃಷ್ಣನು ಜನಿಸಿದನೆಂದು ಧಾರ್ಮಿಕ ಗ್ರಂಥಗಳಲ್ಲಿ ಉಲ್ಲೇಖವಾಗಿದೆ.
ಈ ದಿನ ಕೃಷ್ಣನನ್ನು ಪೂಜಿಸಿ ಭಕ್ತಿಯಿಂದ ಬೇಡಿಕೊಂಡರೆ ಆತ ನಮ್ಮನ್ನೆಲ್ಲಾ ರಕ್ಷಿಸುತ್ತಾನೆ ಎಂಬ ನಂಬಿಕೆಯಿದೆ. ಆತನ ಕೃಪೆಯಿಂದ ಭಕ್ತರ ಜೀವನದಲ್ಲಿ ಖುಷಿ, ಸಮೃದ್ಧಿ ನೆಲೆಯಾಗಲಿದೆಯಂತೆ. ಆದ್ದರಿಂದ ಮಾಸಿಕ ಕೃಷ್ಣ ಜನ್ಮಾಷ್ಟಮಿಯ ದಿನ ಮುರಳಿ ಮನೋಹರನನ್ನು ಭಕ್ತಿಯಿಂದ ಪೂಜಿಸೋದನ್ನು ಮರೀಬೇಡಿ. ಅಷ್ಟಕ್ಕು ಜೂನ್ ತಿಂಗಳಿನಲ್ಲಿ ಯಾವ ದಿನ ಮಾಸಿಕ ಕೃಷ್ಣ ಜನ್ಮಾಷ್ಟಮಿಯನ್ನು ಆಚರಣೆ ಮಾಡಲಾಗುತ್ತದೆ? ಶುಭ ಮುಹೂರ್ತ ಯಾವಾಗ? ಪೂಜಾ ವಿಧಾನದ ಬಗ್ಗೆ ತಿಳಿದುಕೊಳ್ಳೋಣ.

ಮಾಸಿಕ ಕೃಷ್ಣ ಜನ್ಮಾಷ್ಟಮಿ ಸಮಯ ಮತ್ತು ಶುಭ ಮುಹೂರ್ತ :
ಮಾಸಿಕ ಕೃಷ್ಣ ಜನ್ಮಾಷ್ಟಮಿ ಆರಂಭ : ಜೂನ್ 10 ರಂದು ಮಧ್ಯಾಹ್ನ 2.01ಕ್ಕೆ
ಮಾಸಿಕ ಕೃಷ್ಣ ಜನ್ಮಾಷ್ಟಮಿ ಅಂತ್ಯ : ಜೂನ್ 11 ರಂದು ಮಧ್ಯಾಹ್ನ 12.05ಕ್ಕೆ
ಪೂಜಾ ವಿಧಾನ ಹೇಗಿರುತ್ತೆ?
ಬೆಳಗ್ಗೆ ಬೇಗ ಎದ್ದು ಸ್ನಾನ ಮಾಡಿ. ನಂತರ ಹಳದಿ ಬಟ್ಟೆಯನ್ನು ಧರಿಸಿದರೆ ಉತ್ತಮ. ಇನ್ನೂ ದೇವರ ಕೋಣೆಯಲ್ಲಿ ಶ್ರೀ ಕೃಷ್ಣನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ. ಇದರ ನಂತರ ಶ್ರೀಕೃಷ್ಣನಿಗೆ ಹಣ್ಣು, ಹೂವು, ಧೂಪ, ದೀಪ, ಕುಂಕುಮ, ತುಳಸಿ ಎಲೆಗಳು, ಎಳ್ಳು, ಬಾರ್ಲಿ, ಅರಿಶಿನ ಮತ್ತು ಶ್ರೀಗಂಧವನ್ನು ಅರ್ಪಿಸಿ. ಕೊನೆಯಲ್ಲಿ ಆರತಿಯನ್ನು ಬೆಳಗಿರಿ. ಸಂತೋಷ, ಸಮೃದ್ಧಿ, ಶಾಂತಿ ಮತ್ತು ಭಕ್ತಿಗಾಗಿ ದೇವರನ್ನು ಭಕ್ತಿಯಿಂದ ಪ್ರಾರ್ಥಿಸಿ. ಶ್ರೀಕೃಷ್ಣನ ಕೃಪೆಯಿಂದ ನಿಮ್ಮ ಎಲ್ಲಾ ಇಷ್ಟಾರ್ಥಗಳು ನೆರವೇರುತ್ತದೆ.
ಮಾಸಿಕ ಕೃಷ್ಣ ಜನ್ಮಾಷ್ಟಮಿಯ ಮಹತ್ವವೇನು?
ಮಾಸಿಕ ಜನ್ಮಾಷ್ಟಮಿಯ ದಿನದಂದು ಶ್ರೀಕೃಷ್ಣನನ್ನು ಪೂಜಿಸಲಾಗುತ್ತದೆ. ಈ ದಿನ ಶ್ರೀಕೃಷ್ಣನ ಬಾಲ ರೂಪವನ್ನು ಪೂಜಿಸುವುದು ತುಂಬಾ ಮಂಗಳಕರವೆಂದು ನಂಬಲಾಗಿದೆ. ಮಗುವನ್ನು ಹೊಂದಲು ಬಯಸುವ ದಂಪತಿಗಳು ಬಾಲ ಕೃಷ್ಣನಿಗೆ ವಿಶೇಷ ಪೂಜೆ ಸಲ್ಲಿಸಬೇಕು. ಈ ವ್ರತವನ್ನು ಆಚರಿಸುವುದರಿಂದ ಸಂತಾನ ಪ್ರಾಪ್ತಿಯಾಗುತ್ತದೆ. ಅಷ್ಟೇ ಅಲ್ಲದೇ ಅದರೊಂದಿಗೆ ನಿಮ್ಮ ಗೌರವವೂ ಹೆಚ್ಚುತ್ತಂತೆ.



Click it and Unblock the Notifications
