Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಕುಂಭಮೇಳದ ಮೊನಾಲಿಸಾ 10 ದಿನದಲ್ಲಿ ₹10 ಕೋಟಿ ಗಳಿಸಿದ್ಲಾ..? ಆಕೆ ಹೇಳಿದ್ದೇನು?
ವಿಶ್ವ ವಿಖ್ಯಾತ ಮಹಾ ಕುಂಭಮೇಳ ನಡೆಯುತ್ತಿರುವ ನಡುವೆ ಸಿಕ್ಕಾಪಟ್ಟೆ ವೈರಲ್ ಆಗಿದ್ದ ಜೇನು ಕಣ್ಣಿನ ಬೆಡಗಿ ಮೊನಾಲಿಸಾ ಕುರಿತು ನಿಮಗೆಲ್ಲಾ ತಿಳಿದಿರಬಹುದು. ಆಕೆ ಮಹಾ ಕುಂಭಮೇಳದ ಸೆನ್ಸೇಷನ್ ಆಗಿಬಿಟ್ಟಿದ್ದಳು. ಒಂದೇ ಒಂದು ಫೋಟೋದ ಮೂಲಕ ಮನೆ ಮಾತಾದಳು, ಎಲ್ಲಾ ಕಡೆಗೂ ಅವಳದ್ದೇ ಮಾತುಗಳು ಹರಿದಾಡುತ್ತಿವೆ. ಆದ್ರೆ ಈಗ ಅವಳು ತನ್ನ ಹುಟ್ಟೂರಿಗೆ ವಾಪಾಸಾಗಿದ್ದಾಳೆ ಎನ್ನಲಾಗಿದೆ.
ಕುಂಭಮೇಳದಲ್ಲಿ ಲಕ್ಷಾಂತರ ಭಕ್ತರು ಆಗಮಿಸುವುದರಿಂದ ಅವರಿಗೆ ರುದ್ರಾಕ್ಷಿ ಹೂವುಗಳ ಮಾರಾಟ ಮಾಡಲೆಂದು ಆಕೆ ಆಗಮಿಸಿದ್ದಳು. ಆದ್ರೆ ಕ್ಯಾಮರಾ ಕಣ್ಣಿಗೆ ಬಿದ್ದಾಕೆ ಇಡೀ ದೇಶದಲ್ಲಿ ಸುದ್ದಿಯಾದಳು, ಹಾಗೆ ವ್ಯಾಪಾರ ಮಾಡಲಾಗದೆ ಪರಿತಪಿಸಿದ್ದೂ ಕೂಡ ನಾವು ನೋಡಬಹುದು. ಆಕೆಯ ಹತ್ತಾರು ವಿಡಿಯೋಗಳು, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದವು.

ಹಾಗೆ ಆಕೆ ಎಲ್ಲಾ ಸಾಮಾಜಿಕ ಮಾಧ್ಯಮಗಳಲ್ಲಿಯೂ ತನ್ನ ಖಾತೆ ಆರಂಭಿಸಿದಳು, ನೋಡ ನೋಡುತ್ತಲೇ ಅದರಲ್ಲಿ ಫಾಲೋವರ್ಸ್ ಹುಟ್ಟಿಕೊಂಡಳು ಆಕೆ ಆನ್ಲೈನ್ ಸೆನ್ಸೇಷನ್ ಆಗಿಬಿಟ್ಟಳು, ರಾತ್ರಿ ಬೆಳಗಾಗುವುದರೊಳಗೆ ಆಕೆ ಬಾಲಿವುಡ್ನಲ್ಲಿ ಸುದ್ದಿಯಾದಳು. ಹಾಗೆ ಸಿನಿಮಾದಲ್ಲೂ ನಟಿಸುವ ಅವಕಾಶ ಗಿಟ್ಟಿಸಿದಳು ಎಂಬ ವರದಿಗಳಿವೆ.
ಆದ್ರೆ ಇತ್ತೀಚಿಗೆ ಆಕೆಯ ಬಗ್ಗೆ ಹರಿದಾಡುತ್ತಿರುವ ಮತ್ತೊಂದು ವಿಚಾರ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಆಕೆ ಕೇವಲ 10 ದಿನಗಳ ಅವಧಿಯಲ್ಲಿ ಬರೋಬ್ಬರಿ 10 ಕೋಟಿ ರೂಪಾಯಿಯನ್ನು ಗಳಿಸಿದ್ದಾಳೆ ಎಂದು ಹೇಳಲಾಗಿದೆ. ಆಕೆ ಈವೆಂಟ್ ಮೂಲಕ 10 ಕೋಟಿ ರೂಪಾಯಿ ಗಳಿಸಿದ್ದಾಳೆ ಎಂದು ಹೇಳಲಾಗುತ್ತಿದೆ. ಅವರ ಕುಟುಂಬದವರು ಈ ಹಣ ಪಡೆದಿದ್ದಾರೆ ಎಂದು ಹೇಳುವ ಒಂದಿಷ್ಟು ಸುದ್ದಿ ಹರಿದಾಡಿವೆ.
ಆದ್ರೆ ಮೊನಾಲಿಸಾ ಈ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾಳೆ. 10 ಕೋಟಿ ರೂಪಾಯಿ ಸಿಕ್ಕಿರುವ ಕುರಿತು ಪ್ರತಿಕ್ರಿಯಿಸಿರುವ ಆಕೆ, 'ನನಗೆ ಅಷ್ಟೊಂದು ದೊಡ್ಡ ಮೊತ್ತ ಸಿಕ್ಕಿದ್ದರೆ ನಾನ್ಯಾಕೆ ಇಲ್ಲಿ ಇನ್ನೂ ರುದ್ರಾಕ್ಷಿ ಮಾರಾಟ ಮಾಡುತ್ತಿದ್ದೆ. ಮನೆಯವರ ಜೊತೆಗೆ ಊರಿನಲ್ಲಿ ಇರುತ್ತಿದ್ದೆ. ನಮಗೆ ಯಾವ ಹಣವೂ ಸಿಕ್ಕಿಲ್ಲ ಎಂದು ಆಕೆ ಹೇಳಿಕೊಂಡಿದ್ದಾಳೆ.
ಇಂದೋರ್ನಿಂದ ಮಹಾ ಕುಂಭಮೇಳದಲ್ಲಿ ಭಾಗಿಯಾಗಲೆಂದು ಆಕೆ ಆಗಮಿಸಿದ್ದಳು. ಆದ್ರೆ ಕ್ಯಾಮರಾ ಕಣ್ಣಿಗೆ ಬಿದ್ದು, ಈ ಸಾಮಾಜಿಕ ಜಾಲತಾಣದಿಂದಾಗಿ ಫೇಮಸ್ ಆದಳು, ಎಲ್ಲರು ಯಾರು ಈಕೆ ಎಂಬ ಕುತುಹಲಕ್ಕೆ ಬಿದ್ದರು, ಹಾಗೆ ಆಕೆಯೊಂದಿಗೆ ಸಂದರ್ಶನ, ಸೆಲ್ಫಿಗಾಗಿ ಜನರು ಮುಗಿಬಿದ್ದಿರುವುದು, ಗಲಾಟೆ ಮಾಡಿರುವುದು, ವ್ಯಾಪಾರಕ್ಕೆ ಅಡ್ಡಿಪಡಿಸಿರುವುದು ಸೇರು ಹಲವು ಘಟನೆಗಳು ನಡೆದವು. ಇದರ ಜೊತೆಗೆ ಈಗ ಆಕೆ ಈವೆಂಟ್ ಒಂದರಿಂದ 10 ಕೋಟಿ ರೂಪಾಯಿ ಪಡೆದಿದ್ದಾರೆ ಎಂದು ಕೂಡ ವರದಿಯಾಗಿದೆ. ಆದ್ರೆ ಇದನ್ನು ಖುದ್ದು ಮೊನಾಲಿಸಾ ತಳ್ಳಿ ಹಾಕಿದ್ದು, ಇದು ಸುಳ್ಳು ಎಂದು ಹೇಳಿದ್ದಾರೆ.
ಇದೆಲ್ಲದರ ನಡುವೆ ಆಕೆ ತನ್ನ ಹುಟ್ಟೂರು ಇಂದೋರ್ಗೆ ವಾಪಸಾಗಿದ್ದಾಳೆ ಎಂದು ಹೇಳಲಾಗಿದೆ. ಆಕೆ ಇದನ್ನು ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾಳೆ. ನನ್ನ ಕುಟುಂಬ ಮತ್ತು ನನ್ನ ಸುರಕ್ಷತೆಗಾಗಿ ನಾನು ಇಂದೋರ್ಗೆ ಹಿಂತಿರುಗಬೇಕಾಗಿದೆ. ಸಾಧ್ಯವಾದರೆ ಮುಂದಿನ ಮಹಾ ಕುಂಭಕ್ಕೆ ಹಿಂತಿರುಗುತ್ತೇನೆ ಎಂದು ಬರೆದುಕೊಂಡಿದ್ದಾಳೆ. ಒಂದು ಕಾಲದಲ್ಲಿ ಆಕೆಯಿಂದ ರುದ್ರಾಕ್ಷಿಗಳು, ಮಾಲೆಗಳ ಖರೀದಿಗೆ ಬರುತ್ತಿದ್ದ ಮಂದಿ ಈಗ ಕೇವಲ ಸೆಲ್ಫಿಗಾಗಿ ಬರುತ್ತಿದ್ದಾರೆ, ಇದರಿಂದ ಆಕೆಯ ವ್ಯಾಪಾರ ನಷ್ಟವಾಗಿತ್ತಲ್ಲದೆ ರಕ್ಷಣೆ ಇಲ್ಲದಂತಾಗಿತ್ತು. ಸದ್ಯ ಈಗ ಕುಂಭ ಮೇಳದ ಸೆನ್ಸೇಷನ್ ಆಗಿದ್ದ ಈ ಯುವತಿ ಇಡೀ ದೇಶದಲ್ಲಿ ಸುದ್ದಿಯಾಗಿದ್ದಳು. ಜನರು ಕೂಡ ಇಕೆಯ ಕುರಿತು ತಿಳಿಯಲು ಉತ್ಸುಕರಾಗಿದ್ದರು.



Click it and Unblock the Notifications











