Latest Updates
-
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ! -
ಮಳೆಗಾಲದಲ್ಲಿ ಮದುವೆ ನಿಶ್ಚಯವಾಗಿದೆಯೇ? ನಿಮ್ಮ ಮದುವೆ ಸಂಭ್ರಮ ಹಾಳಾಗದಂತೆ ತಡೆಯಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು! -
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ! -
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ!
ವೈವಾಹಿಕ ಜೀವನಕ್ಕೆ ಕಾಲಿರಿಸಿದ ರೂಪಾ ಅಯ್ಯರ್
ರೂಪಾ ಅಯ್ಯರ್ ಹೆಚ್ಚು ಪ್ರಸಿದ್ಧಿಯಲ್ಲಿರುವ ಚಿತ್ರ ನಿರ್ದೇಶಕಿ, ನಟಿ, ಕೊರಿಯೋಗ್ರಾಫರ್, ನೃತ್ಯ ಕಲಾವಿದೆ ಹೀಗೆ ಬಹು ಮುಖ ಪ್ರತಿಭೆಗಳನ್ನು ತನ್ನೊಳಗೆ ಚಿರಂತನವಾಗಿಸಿರುವ ಕಲಾವಿದೆ.
ತಮ್ಮ ಚಿತ್ರದಲ್ಲಿ ಅವರು ಮಾಡುತ್ತಿರುವ ಹೊಸ ಹೊಸ ಪ್ರಯೋಗಗಳು ಮತ್ತು ಕೊಡುಗೆಗಳಿಗಾಗಿ ಹಲವಾರು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿರುವ ಅಸಾಮಾನ್ಯ ಕಲಾವಿದೆ ರೂಪಾ ಅಯ್ಯರ್. ಸಮಾಜ ಸೇವಕಿಯಾಗಿ ಕೂಡ ತನ್ನನ್ನು ತೊಡಗಿಸಿಕೊಂಡಿರುವ ಈ ಪ್ರತಿಭಾವಂತೆ ತಮ್ಮ ಐಸಿಎ ಕಂಪೆನಿಯ ಮೂಲಕ ಏಡ್ಸ್ ಮತ್ತು ಎಚ್ಐವಿ ಬಗ್ಗೆ ಜನಜಾಗೃತಿಯನ್ನು ಮೂಡಿಸುತ್ತಿರುವವರು.

ಕರ್ನಾಟಕದ ಸಣ್ಣ ಹಳ್ಳಿಯಾದ ಬೆಳಕವಾಡಿಯ ಮಧ್ಯಮ ವರ್ಗದ ಸಂಪ್ರದಾಯಸ್ಥ ಕುಟುಂಬದಲ್ಲಿ ರೂಪಾ ಅಯ್ಯರ್ ಜನನವಾಯಿತು. ತಂದೆ ರೈತರಾದರೆ, ತಾಯಿ ಶಾಲೆಯೊಂದರಲ್ಲಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಹುಟ್ಟಿನಿಂದಲೂ ಪ್ರತಿಭಾವಂತೆಯಾಗಿದ್ದ ರೂಪಾ ಅಯ್ಯರ್ ತಮ್ಮ ಹತ್ತನೇ ವಯಸ್ಸಿನಲ್ಲಿ ಬೇಲೂರಿನಲ್ಲಿ ತಮ್ಮದೇ ವಯಸ್ಸಿನ ಹುಡುಗಿಯರಿಗಾಗಿ ನೃತ್ಯ ಶಾಲೆಯನ್ನು ತೆರೆದರು. ಆ ವಯಸ್ಸಿನಲ್ಲೇ ನೃತ್ಯದಂತಹ ಪ್ರತಿಭಾವಂತ ಕಲೆಯನ್ನು ಕಲಿತು ಅದನ್ನು ಉಳಿದವರಿಗೆ ಕಲಿಸಿ ಅನೇಕ ಕಾರ್ಯಕ್ರಮಗಳನ್ನು ಕೊಟ್ಟಂತಹ ಸಾಹಸಿ.
ಬರಿಯ ನೃತ್ಯದಲ್ಲಷ್ಟೇ ತಮ್ಮನ್ನು ತೊಡಗಿಸಿಕೊಳ್ಳದೇ ಕಥೆ, ಕವನ, ಕಾದಂಬರಿಗಳನ್ನು ಬರೆದು ಸಾಮಾಜಿಕವಾಗಿ ಹೆಸರು ಗಳಿಸಿದವರು. ರಾಜ್ಯ ಪ್ರಶಸ್ತಿಯನ್ನು ಗಳಿಸಿರುವ ಈ ನಟಿ ಕಲಾವಿದೆ ಇಂದು ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ.
ಬೆಂಗಳೂರಿನಲ್ಲಿ ನಡೆಯಲಿರುವ ಅದ್ಧೂರಿಯಾಗಿ ಮದುವೆ ಮಾಡಿಕೊಳ್ಳುತ್ತಿರುವ ರೂಪಾ ಅಯ್ಯರ್ ಕೈ ಹಿಡಿಯುತ್ತಿರುವವರು ಗೌತಮ್ ಶ್ರೀವತ್ಸವ್. ತಮ್ಮ ಮುಖ ಪುಟ ಚಿತ್ರಕ್ಕಾಗಿ ರಾಜ್ಯ ಪ್ರಶಸ್ತಿಯ ಗೌರವಕ್ಕೆ ಪಾತ್ರರಾಗಿರುವ ರೂಪಾ 'ಚಂದ್ರ' ಎಂಬ ಸುಂದರ ಚಲನಚಿತ್ರವನ್ನು ಕನ್ನಡ ಅಭಿಮಾನಿಗಳಿಗೆ ನೀಡಿದವರು.
ರೂಪಾ ಮತ್ತು ಗೌತಮ್ ಚಂದ್ರ ಚಿತ್ರದ ತಯಾರಿಯಲ್ಲಿ ಜೊತೆಯಾಗಿ ತೊಡಗಿಸಿಕೊಂಡವರು. ಇದೊಂದು ಲವ್ ಕಮ್ ಅರೇಂಜ್ ಮಾರೇಜ್ ಆಗಿದ್ದು ಎರಡೂ ಮನೆಯವರ ಸಂಪೂರ್ಣ ಸಮ್ಮತಿಯೊಂದಿಗೆ ಜೋಡಿಗಳು ಹಸೆಮಣೆ ಏರುತ್ತಿದ್ದಾರೆ. ಜೋಡಿ ಜೂನ್ 19 ರಂದು ನಡೆದ ಸರಳ ಸಮಾರಂಭವೊಂದರಲ್ಲಿ ನಿಶ್ಚಿತಾರ್ಥವನ್ನು ಮಾಡಿಕೊಂಡಿದ್ದರು.



Click it and Unblock the Notifications