Latest Updates
-
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಕುತ್ತು ತಪ್ಪಿದ್ದಲ್ಲ! -
ಸೋಷಿಯಲ್ ಮೀಡಿಯಾದಲ್ಲಿ ಪ್ರೀತಿಯನ್ನು ತೋರಿಸುವ ಹೊಸ ಟ್ರೆಂಡ್: 'ಸಾಫ್ಟ್ ಲಾಂಚ್' ಮೂಲಕ ನಿಮ್ಮ ಸಂಬಂಧವನ್ನು ಭದ್ರಪಡಿಸಿಕೊಳ್ಳಿ! -
ಹೀಟ್ವೇವ್ ಎಚ್ಚರಿಕೆ: ಸುಡುವ ಬಿಸಿಲಲ್ಲೂ ನಿಮ್ಮ ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಉಳಿಸಲು ಈ ಟಿಪ್ಸ್ ಸಾಕು! -
ಬಿಸಿಲ ಬೇಗೆಗೆ ಸುಸ್ತಾಗಿದ್ದೀರಾ? ಹೀಟ್ವೇವ್ನಿಂದ ಪಾರಾಗಲು ಈ ಆಹಾರ ಕ್ರಮಗಳನ್ನು ಮರೆಯದೆ ಪಾಲಿಸಿ! -
ಮುಟ್ಟಿನ ನೈರ್ಮಲ್ಯ ದಿನ: ಕೇವಲ 200 ರೂಪಾಯಿಗೂ ಕಡಿಮೆ ಬೆಲೆಯಲ್ಲಿ ಸಿಗುತ್ತಿವೆ ಈ ಅಗತ್ಯ ಉತ್ಪನ್ನಗಳು, ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ಮದುವೆ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ 5 ಬದಲಾವಣೆಗಳನ್ನು ಮರೆಯಬೇಡಿ! -
ದೆಹಲಿ ಧೂಳಿನ ಬಿರುಗಾಳಿ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 500 ರೂಪಾಯಿಯ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ಈ ಸರಳ ಆಹಾರ ಬದಲಾವಣೆ ನಿಮ್ಮನ್ನು ಹೀಟ್ಸ್ಟ್ರೋಕ್ನಿಂದ ರಕ್ಷಿಸುತ್ತದೆ! -
ರೆಡ್ ಕಾರ್ಪೆಟ್ನಿಂದ ನಿಮ್ಮ ವಾರ್ಡ್ರೋಬ್ಗೆ: ಕಾನ್ 2026ರ ಈ ಫ್ಯಾಷನ್ ಟ್ರೆಂಡ್ಸ್ ಈಗ ಸಿಕ್ಕಾಪಟ್ಟೆ ವೈರಲ್! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ!
ಪಿತೃಕರ್ಮಕ್ಕೆ ಪ್ರಸಿದ್ಧಿಯಾಗಿರುವ ಆಷಾಢ ಅಮಾವಾಸ್ಯೆ, ಈ ವರ್ಷ ಯಾವಾಗ ಬರಲಿದೆ ಗೊತ್ತಾ?
ಜುಲೈ ತಿಂಗಳೆಂದರೆ ಅದು ಆಷಾಢ ತಿಂಗಳು. ಈ ಸಮಯದಲ್ಲಿ ಯಾವುದೇ ಶುಭ ಕಾರ್ಯಗಳು ನಿಷಿದ್ಧ. ಧಾರ್ಮಿಕ ದೃಷ್ಟಿಕೋನದಿಂದ ಆಷಾಢ ತಿಂಗಳಲ್ಲಿ ಬರುವ ಅಮಾವಾಸ್ಯೆಯು ಬಹಳ ಮಹತ್ವದ್ದಾಗಿದೆ. ಈ ವರ್ಷ ಆಷಾಢ ಅಮಾವಾಸ್ಯೆ ಜುಲೈ 9 ಶುಕ್ರವಾರ ಬರುತ್ತಿದೆ. ಪಿತೃ ದೋಷ ನಿವಾರಣೆಗಾಗಿ ಹೆಸರುವಾಸಿಯಾಗಿರುವ ಈ ಅಮಾವಾಸ್ಯೆಯ ಮುಹೂರ್ತ, ಪೂಜಾವಿಧಾನ ಹಾಗೂ ಮಹತ್ವವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

ಆಷಾಢ ಅಮಾವಾಸ್ಯೆಯ ದಿನಾಂಕ, ಮುಹೂರ್ತ, ಪೂಜಾವಿಧಾನ ಹಾಗೂ ಮಹತ್ವವನ್ನು ಈ ಕೆಳಗೆ ನೀಡಲಾಗಿದೆ:
ಹಿಂದೂ ಕ್ಯಾಲೆಂಡರ್ ಪ್ರಕಾರ, ಪ್ರತಿ ತಿಂಗಳ ಕೃಷ್ಣ ಪಕ್ಷದ ಕೊನೆಯ ದಿನಾಂಕವನ್ನು ಅಮಾವಾಸ್ಯೆ ಎಂದು ಕರೆಯಲಾಗುತ್ತದೆ. ಆಷಾಧ ಮಾಸದ ಅಮಾವಾಸ್ಯೆಯನ್ನು ಹಲಹರಿ ಅಮಾವಾಸ್ಯ ಕರಾವಳಿ ಪ್ರದೇಶಗಳಲ್ಲಿ ಆಟಿ ಅಮಾವಾಸ್ಯೆ ಎಂದೂ ಕರೆಯುತ್ತಾರೆ. ಈ ದಿನದಂದು ನೇಗಿಲು ಒಳಗೊಂಡಂತೆ ಇತರ ಕೃಷಿ ಉಪಕರಣಗಳನ್ನು ಪೂಜಿಸಲಾಗುತ್ತದೆ. ನೇಗಿಲನ್ನು ಪೂಜಿಸುವ ಮೂಲಕ ಸಮೃದ್ಧ ಬೆಳೆ ಸಿಗಲೆಂದು ರೈತರು ದೇವರಲ್ಲಿ ಪ್ರಾರ್ಥಿಸುತ್ತಾರೆ. ಇದರೊಂದಿಗೆ ಅಮಾವಾಸ್ಯೆಯ ದಿನವು ಪೂರ್ವಜರಿಗೆ ಶ್ರಾದ್ಧ ಮಾಡಲು ಬಹಳ ಶುಭ ದಿನವಾಗಿದೆ.

ಆಷಾಢ ಅಮಾವಾಸ್ಯೆ ಮುಹೂರ್ತ:
ಅಮಾವಾಸ್ಯೆ ತಿಥಿ ಜುಲೈ 9 ರಂದು ಬೆಳಿಗ್ಗೆ 05:16 ರಿಂದ ಪ್ರಾರಂಭವಾಗಲಿದ್ದು, ಜುಲೈ 10 ರಂದು ಬೆಳಿಗ್ಗೆ 06:46 ಕ್ಕೆ ಕೊನೆಗೊಳ್ಳಲಿದೆ.

ಅಮಾವಾಸ್ಯೆ ಪೂಜಾ ವಿಧಾನ:
ಅಮಾವಾಸ್ಯೆಯ ದಿನದಂದು ಮುಂಜಾನೆ ಬೇಗ ಎದ್ದೇಳಿ.
ಈ ದಿನ, ಬ್ರಾಹ್ಮಿ ಮುಹೂರ್ತ ಸಮಯದಲ್ಲಿ ಪವಿತ್ರ ನದಿಯಲ್ಲಿ ಸ್ನಾನ ಮಾಡಿ.
ಸೂರ್ಯೋದಯವಾಗುವಾಗ ಸೂರ್ಯದೇವನಿಗೆ ನೀರನ್ನು ಅರ್ಪಿಸಿ.
ಈ ದಿನ ನಿಮ್ಮ ಪೂರ್ವಜರ ಆತ್ಮ ಶಾಂತಿಗಾಗಿ ಪೂಜೆಗಳನ್ನು ಮಾಡಿ.
ಪೂರ್ವಜರ ಆತ್ಮಗಳ ಶಾಂತಿಗಾಗಿ ಉಪವಾಸವಿರಿ.
ಅಗತ್ಯವಿರುವವರಿಗೆ ದಾನ ಮಾಡಿ.
ಬ್ರಾಹ್ಮಣರಿಗೆ ಆಹಾರವನ್ನು ನೀಡಿ.

ಆಷಾಢ ಅಮಾವಾಸ್ಯೆಯ ಮಹತ್ವ:
ಧರ್ಮಗ್ರಂಥಗಳಲ್ಲಿ ಈ ದಿನ ಹೆಚ್ಚಿನ ಪ್ರಾಮುಖ್ಯತೆ ಪಡೆದಿದೆ. ಈ ದಿನ ಅನೇಕ ಶುಭ ಆಚರಣೆಗಳನ್ನು ನಡೆಸಲಾಗುತ್ತದೆ. ಅನೇಕರು ತಮ್ಮ ಪೂರ್ವಜರನ್ನು ಮೆಚ್ಚಿಸಲು ಅಮಾವಾಸ್ಯೆ ತಿಥಿಯಲ್ಲಿ ಶ್ರಾದ್ಧವನ್ನು ಮಾಡುತ್ತಾರೆ. ಈ ದಿನ, ಪಿತ್ರ ತರ್ಪಣ, ನದಿ ಸ್ನಾನ ಮತ್ತು ದಾನ ಇತ್ಯಾದಿಗಳನ್ನು ಮಾಡುವುದು ಹೆಚ್ಚು ಫಲಪ್ರದವೆಂದು ಪರಿಗಣಿಸಲಾಗುತ್ತದೆ. ಇದು ಮಾತ್ರವಲ್ಲ, ಈ ದಿನಾಂಕವನ್ನು ಪಿತೃ ದೋಷ ತೊಡೆದುಹಾಕಲು ಸಹಾಯಕವೆಂದು ಪರಿಗಣಿಸಲಾಗಿದೆ. ಆದ್ದರಿಂದ, ಈ ದಿನಾಂಕವನ್ನು ಪಿತೃ ಕರ್ಮಕ್ಕೆ ಬಹಳ ಶುಭವೆಂದು ಪರಿಗಣಿಸಲಾಗಿದೆ.



Click it and Unblock the Notifications