Latest Updates
-
ಆರ್ಬಿಐ ಸಭೆಗೂ ಮುನ್ನ ದಂಪತಿಗಳಿಗೆ ಎಚ್ಚರಿಕೆ: ಇಂದೇ ಈ 30 ನಿಮಿಷದ ಫೈನಾನ್ಶಿಯಲ್ ಟೆಸ್ಟ್ ಮಾಡಿ! -
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು?
ಪಿತೃಕರ್ಮಕ್ಕೆ ಪ್ರಸಿದ್ಧಿಯಾಗಿರುವ ಆಷಾಢ ಅಮಾವಾಸ್ಯೆ, ಈ ವರ್ಷ ಯಾವಾಗ ಬರಲಿದೆ ಗೊತ್ತಾ?
ಜುಲೈ ತಿಂಗಳೆಂದರೆ ಅದು ಆಷಾಢ ತಿಂಗಳು. ಈ ಸಮಯದಲ್ಲಿ ಯಾವುದೇ ಶುಭ ಕಾರ್ಯಗಳು ನಿಷಿದ್ಧ. ಧಾರ್ಮಿಕ ದೃಷ್ಟಿಕೋನದಿಂದ ಆಷಾಢ ತಿಂಗಳಲ್ಲಿ ಬರುವ ಅಮಾವಾಸ್ಯೆಯು ಬಹಳ ಮಹತ್ವದ್ದಾಗಿದೆ. ಈ ವರ್ಷ ಆಷಾಢ ಅಮಾವಾಸ್ಯೆ ಜುಲೈ 9 ಶುಕ್ರವಾರ ಬರುತ್ತಿದೆ. ಪಿತೃ ದೋಷ ನಿವಾರಣೆಗಾಗಿ ಹೆಸರುವಾಸಿಯಾಗಿರುವ ಈ ಅಮಾವಾಸ್ಯೆಯ ಮುಹೂರ್ತ, ಪೂಜಾವಿಧಾನ ಹಾಗೂ ಮಹತ್ವವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

ಆಷಾಢ ಅಮಾವಾಸ್ಯೆಯ ದಿನಾಂಕ, ಮುಹೂರ್ತ, ಪೂಜಾವಿಧಾನ ಹಾಗೂ ಮಹತ್ವವನ್ನು ಈ ಕೆಳಗೆ ನೀಡಲಾಗಿದೆ:
ಹಿಂದೂ ಕ್ಯಾಲೆಂಡರ್ ಪ್ರಕಾರ, ಪ್ರತಿ ತಿಂಗಳ ಕೃಷ್ಣ ಪಕ್ಷದ ಕೊನೆಯ ದಿನಾಂಕವನ್ನು ಅಮಾವಾಸ್ಯೆ ಎಂದು ಕರೆಯಲಾಗುತ್ತದೆ. ಆಷಾಧ ಮಾಸದ ಅಮಾವಾಸ್ಯೆಯನ್ನು ಹಲಹರಿ ಅಮಾವಾಸ್ಯ ಕರಾವಳಿ ಪ್ರದೇಶಗಳಲ್ಲಿ ಆಟಿ ಅಮಾವಾಸ್ಯೆ ಎಂದೂ ಕರೆಯುತ್ತಾರೆ. ಈ ದಿನದಂದು ನೇಗಿಲು ಒಳಗೊಂಡಂತೆ ಇತರ ಕೃಷಿ ಉಪಕರಣಗಳನ್ನು ಪೂಜಿಸಲಾಗುತ್ತದೆ. ನೇಗಿಲನ್ನು ಪೂಜಿಸುವ ಮೂಲಕ ಸಮೃದ್ಧ ಬೆಳೆ ಸಿಗಲೆಂದು ರೈತರು ದೇವರಲ್ಲಿ ಪ್ರಾರ್ಥಿಸುತ್ತಾರೆ. ಇದರೊಂದಿಗೆ ಅಮಾವಾಸ್ಯೆಯ ದಿನವು ಪೂರ್ವಜರಿಗೆ ಶ್ರಾದ್ಧ ಮಾಡಲು ಬಹಳ ಶುಭ ದಿನವಾಗಿದೆ.

ಆಷಾಢ ಅಮಾವಾಸ್ಯೆ ಮುಹೂರ್ತ:
ಅಮಾವಾಸ್ಯೆ ತಿಥಿ ಜುಲೈ 9 ರಂದು ಬೆಳಿಗ್ಗೆ 05:16 ರಿಂದ ಪ್ರಾರಂಭವಾಗಲಿದ್ದು, ಜುಲೈ 10 ರಂದು ಬೆಳಿಗ್ಗೆ 06:46 ಕ್ಕೆ ಕೊನೆಗೊಳ್ಳಲಿದೆ.

ಅಮಾವಾಸ್ಯೆ ಪೂಜಾ ವಿಧಾನ:
ಅಮಾವಾಸ್ಯೆಯ ದಿನದಂದು ಮುಂಜಾನೆ ಬೇಗ ಎದ್ದೇಳಿ.
ಈ ದಿನ, ಬ್ರಾಹ್ಮಿ ಮುಹೂರ್ತ ಸಮಯದಲ್ಲಿ ಪವಿತ್ರ ನದಿಯಲ್ಲಿ ಸ್ನಾನ ಮಾಡಿ.
ಸೂರ್ಯೋದಯವಾಗುವಾಗ ಸೂರ್ಯದೇವನಿಗೆ ನೀರನ್ನು ಅರ್ಪಿಸಿ.
ಈ ದಿನ ನಿಮ್ಮ ಪೂರ್ವಜರ ಆತ್ಮ ಶಾಂತಿಗಾಗಿ ಪೂಜೆಗಳನ್ನು ಮಾಡಿ.
ಪೂರ್ವಜರ ಆತ್ಮಗಳ ಶಾಂತಿಗಾಗಿ ಉಪವಾಸವಿರಿ.
ಅಗತ್ಯವಿರುವವರಿಗೆ ದಾನ ಮಾಡಿ.
ಬ್ರಾಹ್ಮಣರಿಗೆ ಆಹಾರವನ್ನು ನೀಡಿ.

ಆಷಾಢ ಅಮಾವಾಸ್ಯೆಯ ಮಹತ್ವ:
ಧರ್ಮಗ್ರಂಥಗಳಲ್ಲಿ ಈ ದಿನ ಹೆಚ್ಚಿನ ಪ್ರಾಮುಖ್ಯತೆ ಪಡೆದಿದೆ. ಈ ದಿನ ಅನೇಕ ಶುಭ ಆಚರಣೆಗಳನ್ನು ನಡೆಸಲಾಗುತ್ತದೆ. ಅನೇಕರು ತಮ್ಮ ಪೂರ್ವಜರನ್ನು ಮೆಚ್ಚಿಸಲು ಅಮಾವಾಸ್ಯೆ ತಿಥಿಯಲ್ಲಿ ಶ್ರಾದ್ಧವನ್ನು ಮಾಡುತ್ತಾರೆ. ಈ ದಿನ, ಪಿತ್ರ ತರ್ಪಣ, ನದಿ ಸ್ನಾನ ಮತ್ತು ದಾನ ಇತ್ಯಾದಿಗಳನ್ನು ಮಾಡುವುದು ಹೆಚ್ಚು ಫಲಪ್ರದವೆಂದು ಪರಿಗಣಿಸಲಾಗುತ್ತದೆ. ಇದು ಮಾತ್ರವಲ್ಲ, ಈ ದಿನಾಂಕವನ್ನು ಪಿತೃ ದೋಷ ತೊಡೆದುಹಾಕಲು ಸಹಾಯಕವೆಂದು ಪರಿಗಣಿಸಲಾಗಿದೆ. ಆದ್ದರಿಂದ, ಈ ದಿನಾಂಕವನ್ನು ಪಿತೃ ಕರ್ಮಕ್ಕೆ ಬಹಳ ಶುಭವೆಂದು ಪರಿಗಣಿಸಲಾಗಿದೆ.



Click it and Unblock the Notifications