Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಪಿತೃಕರ್ಮಕ್ಕೆ ಪ್ರಸಿದ್ಧಿಯಾಗಿರುವ ಆಷಾಢ ಅಮಾವಾಸ್ಯೆ, ಈ ವರ್ಷ ಯಾವಾಗ ಬರಲಿದೆ ಗೊತ್ತಾ?
ಜುಲೈ ತಿಂಗಳೆಂದರೆ ಅದು ಆಷಾಢ ತಿಂಗಳು. ಈ ಸಮಯದಲ್ಲಿ ಯಾವುದೇ ಶುಭ ಕಾರ್ಯಗಳು ನಿಷಿದ್ಧ. ಧಾರ್ಮಿಕ ದೃಷ್ಟಿಕೋನದಿಂದ ಆಷಾಢ ತಿಂಗಳಲ್ಲಿ ಬರುವ ಅಮಾವಾಸ್ಯೆಯು ಬಹಳ ಮಹತ್ವದ್ದಾಗಿದೆ. ಈ ವರ್ಷ ಆಷಾಢ ಅಮಾವಾಸ್ಯೆ ಜುಲೈ 9 ಶುಕ್ರವಾರ ಬರುತ್ತಿದೆ. ಪಿತೃ ದೋಷ ನಿವಾರಣೆಗಾಗಿ ಹೆಸರುವಾಸಿಯಾಗಿರುವ ಈ ಅಮಾವಾಸ್ಯೆಯ ಮುಹೂರ್ತ, ಪೂಜಾವಿಧಾನ ಹಾಗೂ ಮಹತ್ವವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

ಆಷಾಢ ಅಮಾವಾಸ್ಯೆಯ ದಿನಾಂಕ, ಮುಹೂರ್ತ, ಪೂಜಾವಿಧಾನ ಹಾಗೂ ಮಹತ್ವವನ್ನು ಈ ಕೆಳಗೆ ನೀಡಲಾಗಿದೆ:
ಹಿಂದೂ ಕ್ಯಾಲೆಂಡರ್ ಪ್ರಕಾರ, ಪ್ರತಿ ತಿಂಗಳ ಕೃಷ್ಣ ಪಕ್ಷದ ಕೊನೆಯ ದಿನಾಂಕವನ್ನು ಅಮಾವಾಸ್ಯೆ ಎಂದು ಕರೆಯಲಾಗುತ್ತದೆ. ಆಷಾಧ ಮಾಸದ ಅಮಾವಾಸ್ಯೆಯನ್ನು ಹಲಹರಿ ಅಮಾವಾಸ್ಯ ಕರಾವಳಿ ಪ್ರದೇಶಗಳಲ್ಲಿ ಆಟಿ ಅಮಾವಾಸ್ಯೆ ಎಂದೂ ಕರೆಯುತ್ತಾರೆ. ಈ ದಿನದಂದು ನೇಗಿಲು ಒಳಗೊಂಡಂತೆ ಇತರ ಕೃಷಿ ಉಪಕರಣಗಳನ್ನು ಪೂಜಿಸಲಾಗುತ್ತದೆ. ನೇಗಿಲನ್ನು ಪೂಜಿಸುವ ಮೂಲಕ ಸಮೃದ್ಧ ಬೆಳೆ ಸಿಗಲೆಂದು ರೈತರು ದೇವರಲ್ಲಿ ಪ್ರಾರ್ಥಿಸುತ್ತಾರೆ. ಇದರೊಂದಿಗೆ ಅಮಾವಾಸ್ಯೆಯ ದಿನವು ಪೂರ್ವಜರಿಗೆ ಶ್ರಾದ್ಧ ಮಾಡಲು ಬಹಳ ಶುಭ ದಿನವಾಗಿದೆ.

ಆಷಾಢ ಅಮಾವಾಸ್ಯೆ ಮುಹೂರ್ತ:
ಅಮಾವಾಸ್ಯೆ ತಿಥಿ ಜುಲೈ 9 ರಂದು ಬೆಳಿಗ್ಗೆ 05:16 ರಿಂದ ಪ್ರಾರಂಭವಾಗಲಿದ್ದು, ಜುಲೈ 10 ರಂದು ಬೆಳಿಗ್ಗೆ 06:46 ಕ್ಕೆ ಕೊನೆಗೊಳ್ಳಲಿದೆ.

ಅಮಾವಾಸ್ಯೆ ಪೂಜಾ ವಿಧಾನ:
ಅಮಾವಾಸ್ಯೆಯ ದಿನದಂದು ಮುಂಜಾನೆ ಬೇಗ ಎದ್ದೇಳಿ.
ಈ ದಿನ, ಬ್ರಾಹ್ಮಿ ಮುಹೂರ್ತ ಸಮಯದಲ್ಲಿ ಪವಿತ್ರ ನದಿಯಲ್ಲಿ ಸ್ನಾನ ಮಾಡಿ.
ಸೂರ್ಯೋದಯವಾಗುವಾಗ ಸೂರ್ಯದೇವನಿಗೆ ನೀರನ್ನು ಅರ್ಪಿಸಿ.
ಈ ದಿನ ನಿಮ್ಮ ಪೂರ್ವಜರ ಆತ್ಮ ಶಾಂತಿಗಾಗಿ ಪೂಜೆಗಳನ್ನು ಮಾಡಿ.
ಪೂರ್ವಜರ ಆತ್ಮಗಳ ಶಾಂತಿಗಾಗಿ ಉಪವಾಸವಿರಿ.
ಅಗತ್ಯವಿರುವವರಿಗೆ ದಾನ ಮಾಡಿ.
ಬ್ರಾಹ್ಮಣರಿಗೆ ಆಹಾರವನ್ನು ನೀಡಿ.

ಆಷಾಢ ಅಮಾವಾಸ್ಯೆಯ ಮಹತ್ವ:
ಧರ್ಮಗ್ರಂಥಗಳಲ್ಲಿ ಈ ದಿನ ಹೆಚ್ಚಿನ ಪ್ರಾಮುಖ್ಯತೆ ಪಡೆದಿದೆ. ಈ ದಿನ ಅನೇಕ ಶುಭ ಆಚರಣೆಗಳನ್ನು ನಡೆಸಲಾಗುತ್ತದೆ. ಅನೇಕರು ತಮ್ಮ ಪೂರ್ವಜರನ್ನು ಮೆಚ್ಚಿಸಲು ಅಮಾವಾಸ್ಯೆ ತಿಥಿಯಲ್ಲಿ ಶ್ರಾದ್ಧವನ್ನು ಮಾಡುತ್ತಾರೆ. ಈ ದಿನ, ಪಿತ್ರ ತರ್ಪಣ, ನದಿ ಸ್ನಾನ ಮತ್ತು ದಾನ ಇತ್ಯಾದಿಗಳನ್ನು ಮಾಡುವುದು ಹೆಚ್ಚು ಫಲಪ್ರದವೆಂದು ಪರಿಗಣಿಸಲಾಗುತ್ತದೆ. ಇದು ಮಾತ್ರವಲ್ಲ, ಈ ದಿನಾಂಕವನ್ನು ಪಿತೃ ದೋಷ ತೊಡೆದುಹಾಕಲು ಸಹಾಯಕವೆಂದು ಪರಿಗಣಿಸಲಾಗಿದೆ. ಆದ್ದರಿಂದ, ಈ ದಿನಾಂಕವನ್ನು ಪಿತೃ ಕರ್ಮಕ್ಕೆ ಬಹಳ ಶುಭವೆಂದು ಪರಿಗಣಿಸಲಾಗಿದೆ.



Click it and Unblock the Notifications