Latest Updates
-
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು!
ಪಿತೃಕರ್ಮಕ್ಕೆ ಪ್ರಸಿದ್ಧಿಯಾಗಿರುವ ಆಷಾಢ ಅಮಾವಾಸ್ಯೆ, ಈ ವರ್ಷ ಯಾವಾಗ ಬರಲಿದೆ ಗೊತ್ತಾ?
ಜುಲೈ ತಿಂಗಳೆಂದರೆ ಅದು ಆಷಾಢ ತಿಂಗಳು. ಈ ಸಮಯದಲ್ಲಿ ಯಾವುದೇ ಶುಭ ಕಾರ್ಯಗಳು ನಿಷಿದ್ಧ. ಧಾರ್ಮಿಕ ದೃಷ್ಟಿಕೋನದಿಂದ ಆಷಾಢ ತಿಂಗಳಲ್ಲಿ ಬರುವ ಅಮಾವಾಸ್ಯೆಯು ಬಹಳ ಮಹತ್ವದ್ದಾಗಿದೆ. ಈ ವರ್ಷ ಆಷಾಢ ಅಮಾವಾಸ್ಯೆ ಜುಲೈ 9 ಶುಕ್ರವಾರ ಬರುತ್ತಿದೆ. ಪಿತೃ ದೋಷ ನಿವಾರಣೆಗಾಗಿ ಹೆಸರುವಾಸಿಯಾಗಿರುವ ಈ ಅಮಾವಾಸ್ಯೆಯ ಮುಹೂರ್ತ, ಪೂಜಾವಿಧಾನ ಹಾಗೂ ಮಹತ್ವವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

ಆಷಾಢ ಅಮಾವಾಸ್ಯೆಯ ದಿನಾಂಕ, ಮುಹೂರ್ತ, ಪೂಜಾವಿಧಾನ ಹಾಗೂ ಮಹತ್ವವನ್ನು ಈ ಕೆಳಗೆ ನೀಡಲಾಗಿದೆ:
ಹಿಂದೂ ಕ್ಯಾಲೆಂಡರ್ ಪ್ರಕಾರ, ಪ್ರತಿ ತಿಂಗಳ ಕೃಷ್ಣ ಪಕ್ಷದ ಕೊನೆಯ ದಿನಾಂಕವನ್ನು ಅಮಾವಾಸ್ಯೆ ಎಂದು ಕರೆಯಲಾಗುತ್ತದೆ. ಆಷಾಧ ಮಾಸದ ಅಮಾವಾಸ್ಯೆಯನ್ನು ಹಲಹರಿ ಅಮಾವಾಸ್ಯ ಕರಾವಳಿ ಪ್ರದೇಶಗಳಲ್ಲಿ ಆಟಿ ಅಮಾವಾಸ್ಯೆ ಎಂದೂ ಕರೆಯುತ್ತಾರೆ. ಈ ದಿನದಂದು ನೇಗಿಲು ಒಳಗೊಂಡಂತೆ ಇತರ ಕೃಷಿ ಉಪಕರಣಗಳನ್ನು ಪೂಜಿಸಲಾಗುತ್ತದೆ. ನೇಗಿಲನ್ನು ಪೂಜಿಸುವ ಮೂಲಕ ಸಮೃದ್ಧ ಬೆಳೆ ಸಿಗಲೆಂದು ರೈತರು ದೇವರಲ್ಲಿ ಪ್ರಾರ್ಥಿಸುತ್ತಾರೆ. ಇದರೊಂದಿಗೆ ಅಮಾವಾಸ್ಯೆಯ ದಿನವು ಪೂರ್ವಜರಿಗೆ ಶ್ರಾದ್ಧ ಮಾಡಲು ಬಹಳ ಶುಭ ದಿನವಾಗಿದೆ.

ಆಷಾಢ ಅಮಾವಾಸ್ಯೆ ಮುಹೂರ್ತ:
ಅಮಾವಾಸ್ಯೆ ತಿಥಿ ಜುಲೈ 9 ರಂದು ಬೆಳಿಗ್ಗೆ 05:16 ರಿಂದ ಪ್ರಾರಂಭವಾಗಲಿದ್ದು, ಜುಲೈ 10 ರಂದು ಬೆಳಿಗ್ಗೆ 06:46 ಕ್ಕೆ ಕೊನೆಗೊಳ್ಳಲಿದೆ.

ಅಮಾವಾಸ್ಯೆ ಪೂಜಾ ವಿಧಾನ:
ಅಮಾವಾಸ್ಯೆಯ ದಿನದಂದು ಮುಂಜಾನೆ ಬೇಗ ಎದ್ದೇಳಿ.
ಈ ದಿನ, ಬ್ರಾಹ್ಮಿ ಮುಹೂರ್ತ ಸಮಯದಲ್ಲಿ ಪವಿತ್ರ ನದಿಯಲ್ಲಿ ಸ್ನಾನ ಮಾಡಿ.
ಸೂರ್ಯೋದಯವಾಗುವಾಗ ಸೂರ್ಯದೇವನಿಗೆ ನೀರನ್ನು ಅರ್ಪಿಸಿ.
ಈ ದಿನ ನಿಮ್ಮ ಪೂರ್ವಜರ ಆತ್ಮ ಶಾಂತಿಗಾಗಿ ಪೂಜೆಗಳನ್ನು ಮಾಡಿ.
ಪೂರ್ವಜರ ಆತ್ಮಗಳ ಶಾಂತಿಗಾಗಿ ಉಪವಾಸವಿರಿ.
ಅಗತ್ಯವಿರುವವರಿಗೆ ದಾನ ಮಾಡಿ.
ಬ್ರಾಹ್ಮಣರಿಗೆ ಆಹಾರವನ್ನು ನೀಡಿ.

ಆಷಾಢ ಅಮಾವಾಸ್ಯೆಯ ಮಹತ್ವ:
ಧರ್ಮಗ್ರಂಥಗಳಲ್ಲಿ ಈ ದಿನ ಹೆಚ್ಚಿನ ಪ್ರಾಮುಖ್ಯತೆ ಪಡೆದಿದೆ. ಈ ದಿನ ಅನೇಕ ಶುಭ ಆಚರಣೆಗಳನ್ನು ನಡೆಸಲಾಗುತ್ತದೆ. ಅನೇಕರು ತಮ್ಮ ಪೂರ್ವಜರನ್ನು ಮೆಚ್ಚಿಸಲು ಅಮಾವಾಸ್ಯೆ ತಿಥಿಯಲ್ಲಿ ಶ್ರಾದ್ಧವನ್ನು ಮಾಡುತ್ತಾರೆ. ಈ ದಿನ, ಪಿತ್ರ ತರ್ಪಣ, ನದಿ ಸ್ನಾನ ಮತ್ತು ದಾನ ಇತ್ಯಾದಿಗಳನ್ನು ಮಾಡುವುದು ಹೆಚ್ಚು ಫಲಪ್ರದವೆಂದು ಪರಿಗಣಿಸಲಾಗುತ್ತದೆ. ಇದು ಮಾತ್ರವಲ್ಲ, ಈ ದಿನಾಂಕವನ್ನು ಪಿತೃ ದೋಷ ತೊಡೆದುಹಾಕಲು ಸಹಾಯಕವೆಂದು ಪರಿಗಣಿಸಲಾಗಿದೆ. ಆದ್ದರಿಂದ, ಈ ದಿನಾಂಕವನ್ನು ಪಿತೃ ಕರ್ಮಕ್ಕೆ ಬಹಳ ಶುಭವೆಂದು ಪರಿಗಣಿಸಲಾಗಿದೆ.



Click it and Unblock the Notifications











