Latest Updates
-
ಮಧ್ಯಪ್ರದೇಶ UCC: ಲಿವ್-ಇನ್ ಜೋಡಿಗಳಿಗೆ ಕಡ್ಡಾಯ ನೋಂದಣಿ, ನಿಯಮ ಮೀರಿದರೆ ಕಾದಿದೆ ಸಂಕಷ್ಟ! -
ಹಾಲಿನಲ್ಲಿ ವಿಷಕಾರಿ ಕಲಬೆರಕೆ ಪತ್ತೆ: ನಿಮ್ಮ ಮನೆಯ ಹಾಲಿನ ಸುರಕ್ಷತೆ ಪರೀಕ್ಷಿಸುವುದು ಹೇಗೆ? -
ಬೆಂಗಳೂರಿನಲ್ಲಿ 12 ಗಂಟೆಗಳ ಕಾಲ ನೀರಿನ ಕಡಿತ: ನಾಳೆ ನೀರು ಉಳಿಸಲು ಈ ಟಿಪ್ಸ್ ಫಾಲೋ ಮಾಡಿ! -
ಮಳೆಗಾಲದಲ್ಲಿ ಜಿಮ್ಗೆ ಹೋಗಲು ಸಾಧ್ಯವಿಲ್ಲವೇ? ಮನೆಯಲ್ಲೇ ಫಿಟ್ ಆಗಿರಲು 8 ನಿಮಿಷದ ಈ ವರ್ಕೌಟ್ ಟ್ರೈ ಮಾಡಿ! -
ಮದುವೆಗೆ ಮುನ್ನ ಎಚ್ಚರ: ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ವರದಕ್ಷಿಣೆ ಮತ್ತು ಉಡುಗೊರೆಗಳ ನಡುವಿನ ವ್ಯತ್ಯಾಸವೇನು? -
ಬೆಂಗಳೂರಿನಲ್ಲಿ ಮಳೆ ಬಿಡುವು: ನಿಮ್ಮ ಬಾಲ್ಕನಿ ಗಾರ್ಡನ್ ಗಿಡಗಳನ್ನು ರಕ್ಷಿಸಲು ಈ ಸರಳ ಟಿಪ್ಸ್ ಪಾಲಿಸಿ -
ಟೊಮೆಟೊ, ಶುಂಠಿ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಉಳಿಸಲು ಇಲ್ಲಿದೆ ಸ್ಮಾರ್ಟ್ ಟಿಪ್ಸ್! -
2026ರಲ್ಲಿ ಚಿನ್ನದ ಆಭರಣ: ತೂಕದಲ್ಲಿ ಕಡಿಮೆ ಖರೀದಿ, ಖರ್ಚಿ ನಲ್ಲಿ ಹೆಚ್ಚು — ಕುಟುಂಬಗಳ ಖರೀ ದಿ ಹೇಗೆ ಬದಲಾಗುತ್ತಿದೆ? -
ನಥಿಂಗ್ ಫೋನ್ (4b) RCB ಎಡಿಷನ್ ಸೇಲ್ ಶುರು: ಫ್ಯಾನ್ಸ್ ಮಿಸ್ ಮಾಡ್ಬೇಡಿ, ಇಂದೇ ಖರೀದಿಸಿ! -
ಆಷಾಢ ಅಮಾವಾಸ್ಯೆ: ಉಪವಾಸದ ದಿನ ಸುಸ್ತಾಗದಂತೆ ಇರಲು ಈ 7 ನಿಮಿಷದ ವ್ಯಾಯಾಮ ಟ್ರೈ ಮಾಡಿ!
ಪಿತೃಕರ್ಮಕ್ಕೆ ಪ್ರಸಿದ್ಧಿಯಾಗಿರುವ ಆಷಾಢ ಅಮಾವಾಸ್ಯೆ, ಈ ವರ್ಷ ಯಾವಾಗ ಬರಲಿದೆ ಗೊತ್ತಾ?
ಜುಲೈ ತಿಂಗಳೆಂದರೆ ಅದು ಆಷಾಢ ತಿಂಗಳು. ಈ ಸಮಯದಲ್ಲಿ ಯಾವುದೇ ಶುಭ ಕಾರ್ಯಗಳು ನಿಷಿದ್ಧ. ಧಾರ್ಮಿಕ ದೃಷ್ಟಿಕೋನದಿಂದ ಆಷಾಢ ತಿಂಗಳಲ್ಲಿ ಬರುವ ಅಮಾವಾಸ್ಯೆಯು ಬಹಳ ಮಹತ್ವದ್ದಾಗಿದೆ. ಈ ವರ್ಷ ಆಷಾಢ ಅಮಾವಾಸ್ಯೆ ಜುಲೈ 9 ಶುಕ್ರವಾರ ಬರುತ್ತಿದೆ. ಪಿತೃ ದೋಷ ನಿವಾರಣೆಗಾಗಿ ಹೆಸರುವಾಸಿಯಾಗಿರುವ ಈ ಅಮಾವಾಸ್ಯೆಯ ಮುಹೂರ್ತ, ಪೂಜಾವಿಧಾನ ಹಾಗೂ ಮಹತ್ವವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

ಆಷಾಢ ಅಮಾವಾಸ್ಯೆಯ ದಿನಾಂಕ, ಮುಹೂರ್ತ, ಪೂಜಾವಿಧಾನ ಹಾಗೂ ಮಹತ್ವವನ್ನು ಈ ಕೆಳಗೆ ನೀಡಲಾಗಿದೆ:
ಹಿಂದೂ ಕ್ಯಾಲೆಂಡರ್ ಪ್ರಕಾರ, ಪ್ರತಿ ತಿಂಗಳ ಕೃಷ್ಣ ಪಕ್ಷದ ಕೊನೆಯ ದಿನಾಂಕವನ್ನು ಅಮಾವಾಸ್ಯೆ ಎಂದು ಕರೆಯಲಾಗುತ್ತದೆ. ಆಷಾಧ ಮಾಸದ ಅಮಾವಾಸ್ಯೆಯನ್ನು ಹಲಹರಿ ಅಮಾವಾಸ್ಯ ಕರಾವಳಿ ಪ್ರದೇಶಗಳಲ್ಲಿ ಆಟಿ ಅಮಾವಾಸ್ಯೆ ಎಂದೂ ಕರೆಯುತ್ತಾರೆ. ಈ ದಿನದಂದು ನೇಗಿಲು ಒಳಗೊಂಡಂತೆ ಇತರ ಕೃಷಿ ಉಪಕರಣಗಳನ್ನು ಪೂಜಿಸಲಾಗುತ್ತದೆ. ನೇಗಿಲನ್ನು ಪೂಜಿಸುವ ಮೂಲಕ ಸಮೃದ್ಧ ಬೆಳೆ ಸಿಗಲೆಂದು ರೈತರು ದೇವರಲ್ಲಿ ಪ್ರಾರ್ಥಿಸುತ್ತಾರೆ. ಇದರೊಂದಿಗೆ ಅಮಾವಾಸ್ಯೆಯ ದಿನವು ಪೂರ್ವಜರಿಗೆ ಶ್ರಾದ್ಧ ಮಾಡಲು ಬಹಳ ಶುಭ ದಿನವಾಗಿದೆ.

ಆಷಾಢ ಅಮಾವಾಸ್ಯೆ ಮುಹೂರ್ತ:
ಅಮಾವಾಸ್ಯೆ ತಿಥಿ ಜುಲೈ 9 ರಂದು ಬೆಳಿಗ್ಗೆ 05:16 ರಿಂದ ಪ್ರಾರಂಭವಾಗಲಿದ್ದು, ಜುಲೈ 10 ರಂದು ಬೆಳಿಗ್ಗೆ 06:46 ಕ್ಕೆ ಕೊನೆಗೊಳ್ಳಲಿದೆ.

ಅಮಾವಾಸ್ಯೆ ಪೂಜಾ ವಿಧಾನ:
ಅಮಾವಾಸ್ಯೆಯ ದಿನದಂದು ಮುಂಜಾನೆ ಬೇಗ ಎದ್ದೇಳಿ.
ಈ ದಿನ, ಬ್ರಾಹ್ಮಿ ಮುಹೂರ್ತ ಸಮಯದಲ್ಲಿ ಪವಿತ್ರ ನದಿಯಲ್ಲಿ ಸ್ನಾನ ಮಾಡಿ.
ಸೂರ್ಯೋದಯವಾಗುವಾಗ ಸೂರ್ಯದೇವನಿಗೆ ನೀರನ್ನು ಅರ್ಪಿಸಿ.
ಈ ದಿನ ನಿಮ್ಮ ಪೂರ್ವಜರ ಆತ್ಮ ಶಾಂತಿಗಾಗಿ ಪೂಜೆಗಳನ್ನು ಮಾಡಿ.
ಪೂರ್ವಜರ ಆತ್ಮಗಳ ಶಾಂತಿಗಾಗಿ ಉಪವಾಸವಿರಿ.
ಅಗತ್ಯವಿರುವವರಿಗೆ ದಾನ ಮಾಡಿ.
ಬ್ರಾಹ್ಮಣರಿಗೆ ಆಹಾರವನ್ನು ನೀಡಿ.

ಆಷಾಢ ಅಮಾವಾಸ್ಯೆಯ ಮಹತ್ವ:
ಧರ್ಮಗ್ರಂಥಗಳಲ್ಲಿ ಈ ದಿನ ಹೆಚ್ಚಿನ ಪ್ರಾಮುಖ್ಯತೆ ಪಡೆದಿದೆ. ಈ ದಿನ ಅನೇಕ ಶುಭ ಆಚರಣೆಗಳನ್ನು ನಡೆಸಲಾಗುತ್ತದೆ. ಅನೇಕರು ತಮ್ಮ ಪೂರ್ವಜರನ್ನು ಮೆಚ್ಚಿಸಲು ಅಮಾವಾಸ್ಯೆ ತಿಥಿಯಲ್ಲಿ ಶ್ರಾದ್ಧವನ್ನು ಮಾಡುತ್ತಾರೆ. ಈ ದಿನ, ಪಿತ್ರ ತರ್ಪಣ, ನದಿ ಸ್ನಾನ ಮತ್ತು ದಾನ ಇತ್ಯಾದಿಗಳನ್ನು ಮಾಡುವುದು ಹೆಚ್ಚು ಫಲಪ್ರದವೆಂದು ಪರಿಗಣಿಸಲಾಗುತ್ತದೆ. ಇದು ಮಾತ್ರವಲ್ಲ, ಈ ದಿನಾಂಕವನ್ನು ಪಿತೃ ದೋಷ ತೊಡೆದುಹಾಕಲು ಸಹಾಯಕವೆಂದು ಪರಿಗಣಿಸಲಾಗಿದೆ. ಆದ್ದರಿಂದ, ಈ ದಿನಾಂಕವನ್ನು ಪಿತೃ ಕರ್ಮಕ್ಕೆ ಬಹಳ ಶುಭವೆಂದು ಪರಿಗಣಿಸಲಾಗಿದೆ.



Click it and Unblock the Notifications