Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಪಿತೃಕರ್ಮಕ್ಕೆ ಪ್ರಸಿದ್ಧಿಯಾಗಿರುವ ಆಷಾಢ ಅಮಾವಾಸ್ಯೆ, ಈ ವರ್ಷ ಯಾವಾಗ ಬರಲಿದೆ ಗೊತ್ತಾ?
ಜುಲೈ ತಿಂಗಳೆಂದರೆ ಅದು ಆಷಾಢ ತಿಂಗಳು. ಈ ಸಮಯದಲ್ಲಿ ಯಾವುದೇ ಶುಭ ಕಾರ್ಯಗಳು ನಿಷಿದ್ಧ. ಧಾರ್ಮಿಕ ದೃಷ್ಟಿಕೋನದಿಂದ ಆಷಾಢ ತಿಂಗಳಲ್ಲಿ ಬರುವ ಅಮಾವಾಸ್ಯೆಯು ಬಹಳ ಮಹತ್ವದ್ದಾಗಿದೆ. ಈ ವರ್ಷ ಆಷಾಢ ಅಮಾವಾಸ್ಯೆ ಜುಲೈ 9 ಶುಕ್ರವಾರ ಬರುತ್ತಿದೆ. ಪಿತೃ ದೋಷ ನಿವಾರಣೆಗಾಗಿ ಹೆಸರುವಾಸಿಯಾಗಿರುವ ಈ ಅಮಾವಾಸ್ಯೆಯ ಮುಹೂರ್ತ, ಪೂಜಾವಿಧಾನ ಹಾಗೂ ಮಹತ್ವವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

ಆಷಾಢ ಅಮಾವಾಸ್ಯೆಯ ದಿನಾಂಕ, ಮುಹೂರ್ತ, ಪೂಜಾವಿಧಾನ ಹಾಗೂ ಮಹತ್ವವನ್ನು ಈ ಕೆಳಗೆ ನೀಡಲಾಗಿದೆ:
ಹಿಂದೂ ಕ್ಯಾಲೆಂಡರ್ ಪ್ರಕಾರ, ಪ್ರತಿ ತಿಂಗಳ ಕೃಷ್ಣ ಪಕ್ಷದ ಕೊನೆಯ ದಿನಾಂಕವನ್ನು ಅಮಾವಾಸ್ಯೆ ಎಂದು ಕರೆಯಲಾಗುತ್ತದೆ. ಆಷಾಧ ಮಾಸದ ಅಮಾವಾಸ್ಯೆಯನ್ನು ಹಲಹರಿ ಅಮಾವಾಸ್ಯ ಕರಾವಳಿ ಪ್ರದೇಶಗಳಲ್ಲಿ ಆಟಿ ಅಮಾವಾಸ್ಯೆ ಎಂದೂ ಕರೆಯುತ್ತಾರೆ. ಈ ದಿನದಂದು ನೇಗಿಲು ಒಳಗೊಂಡಂತೆ ಇತರ ಕೃಷಿ ಉಪಕರಣಗಳನ್ನು ಪೂಜಿಸಲಾಗುತ್ತದೆ. ನೇಗಿಲನ್ನು ಪೂಜಿಸುವ ಮೂಲಕ ಸಮೃದ್ಧ ಬೆಳೆ ಸಿಗಲೆಂದು ರೈತರು ದೇವರಲ್ಲಿ ಪ್ರಾರ್ಥಿಸುತ್ತಾರೆ. ಇದರೊಂದಿಗೆ ಅಮಾವಾಸ್ಯೆಯ ದಿನವು ಪೂರ್ವಜರಿಗೆ ಶ್ರಾದ್ಧ ಮಾಡಲು ಬಹಳ ಶುಭ ದಿನವಾಗಿದೆ.

ಆಷಾಢ ಅಮಾವಾಸ್ಯೆ ಮುಹೂರ್ತ:
ಅಮಾವಾಸ್ಯೆ ತಿಥಿ ಜುಲೈ 9 ರಂದು ಬೆಳಿಗ್ಗೆ 05:16 ರಿಂದ ಪ್ರಾರಂಭವಾಗಲಿದ್ದು, ಜುಲೈ 10 ರಂದು ಬೆಳಿಗ್ಗೆ 06:46 ಕ್ಕೆ ಕೊನೆಗೊಳ್ಳಲಿದೆ.

ಅಮಾವಾಸ್ಯೆ ಪೂಜಾ ವಿಧಾನ:
ಅಮಾವಾಸ್ಯೆಯ ದಿನದಂದು ಮುಂಜಾನೆ ಬೇಗ ಎದ್ದೇಳಿ.
ಈ ದಿನ, ಬ್ರಾಹ್ಮಿ ಮುಹೂರ್ತ ಸಮಯದಲ್ಲಿ ಪವಿತ್ರ ನದಿಯಲ್ಲಿ ಸ್ನಾನ ಮಾಡಿ.
ಸೂರ್ಯೋದಯವಾಗುವಾಗ ಸೂರ್ಯದೇವನಿಗೆ ನೀರನ್ನು ಅರ್ಪಿಸಿ.
ಈ ದಿನ ನಿಮ್ಮ ಪೂರ್ವಜರ ಆತ್ಮ ಶಾಂತಿಗಾಗಿ ಪೂಜೆಗಳನ್ನು ಮಾಡಿ.
ಪೂರ್ವಜರ ಆತ್ಮಗಳ ಶಾಂತಿಗಾಗಿ ಉಪವಾಸವಿರಿ.
ಅಗತ್ಯವಿರುವವರಿಗೆ ದಾನ ಮಾಡಿ.
ಬ್ರಾಹ್ಮಣರಿಗೆ ಆಹಾರವನ್ನು ನೀಡಿ.

ಆಷಾಢ ಅಮಾವಾಸ್ಯೆಯ ಮಹತ್ವ:
ಧರ್ಮಗ್ರಂಥಗಳಲ್ಲಿ ಈ ದಿನ ಹೆಚ್ಚಿನ ಪ್ರಾಮುಖ್ಯತೆ ಪಡೆದಿದೆ. ಈ ದಿನ ಅನೇಕ ಶುಭ ಆಚರಣೆಗಳನ್ನು ನಡೆಸಲಾಗುತ್ತದೆ. ಅನೇಕರು ತಮ್ಮ ಪೂರ್ವಜರನ್ನು ಮೆಚ್ಚಿಸಲು ಅಮಾವಾಸ್ಯೆ ತಿಥಿಯಲ್ಲಿ ಶ್ರಾದ್ಧವನ್ನು ಮಾಡುತ್ತಾರೆ. ಈ ದಿನ, ಪಿತ್ರ ತರ್ಪಣ, ನದಿ ಸ್ನಾನ ಮತ್ತು ದಾನ ಇತ್ಯಾದಿಗಳನ್ನು ಮಾಡುವುದು ಹೆಚ್ಚು ಫಲಪ್ರದವೆಂದು ಪರಿಗಣಿಸಲಾಗುತ್ತದೆ. ಇದು ಮಾತ್ರವಲ್ಲ, ಈ ದಿನಾಂಕವನ್ನು ಪಿತೃ ದೋಷ ತೊಡೆದುಹಾಕಲು ಸಹಾಯಕವೆಂದು ಪರಿಗಣಿಸಲಾಗಿದೆ. ಆದ್ದರಿಂದ, ಈ ದಿನಾಂಕವನ್ನು ಪಿತೃ ಕರ್ಮಕ್ಕೆ ಬಹಳ ಶುಭವೆಂದು ಪರಿಗಣಿಸಲಾಗಿದೆ.



Click it and Unblock the Notifications