Latest Updates
-
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್!
ಈ ನಾಲ್ಕು ಸಂಗತಿಗಳು ಗರ್ಭದಲ್ಲಿರುವಾಗಲೇ ನಿರ್ಧಾರವಾಗುತ್ತೆ ಅಂತಾರೆ ಚಾಣಕ್ಯ..!
ಹುಟ್ಟಿದ ವ್ಯಕ್ತಿ ಈ ಭೂಮಿಯ ಮೇಲೆ ಎಷ್ಟು ದಿನ ಜೀವಂತವಾಗಿರ್ತಾನೆ ಅನ್ನೋದು ಗೊತ್ತಿಲ್ಲ. ಹುಟ್ಟು-ಸಾವು ಎಲ್ಲವೂ ನಮ್ಮ ಹಣೆಬರಹದಲ್ಲಿ ಬರೆದಿರುತ್ತದೆ. ಇವತ್ತು ಜೀವಂತವಾಗಿದ್ದ ವ್ಯಕ್ತಿ ನಾಳೆ ಇರ್ತಾನೆ ಅನೋ ಗ್ಯಾರಂಟಿ ಕೂಡ ಇರೋದಿಲ್ಲ. ಆದರೆ ನಿಮಗೊತ್ತಾ ಕೆಲವು ಸಂಗತಿಗಳು ನಾವು ತಾಯಿ ಗರ್ಭದಲ್ಲಿರುವಾಗಲೇ ನಿರ್ಧಾರವಾಗಿರುತ್ತಂತೆ. ಅದನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲವಂತೆ.

ಅಷ್ಟಕ್ಕು ಚಾಣಕ್ಯನ ಪ್ರಕಾರ ನಾವು ತಾಯಿಯ ಗರ್ಭದಲ್ಲಿರುವಾಗಲೇ ನಿರ್ಧಾರವಾಗಿರುವ ಆ ನಾಲ್ಕು ಸಂಗತಿಗಳು ಯಾವುದು ಅನ್ನೋದರ ಬಗ್ಗೆ ತಿಳಿದುಕೊಳ್ಳೋಣ.
1. ಕರ್ಮ
ಮಗುವೊಂದು ತಾಯಿಯ ಹೊಟ್ಟೆಯಲ್ಲಿರಬೇಕಾದರೆ ಆ ಮಗು ಹೊಟ್ಟೆಯಿಂದ ಹೊರಬಂದ ಮೇಲೆ ಸಂತೋಷವಾಗಿರುತ್ತಾ ಅಥವಾ ದುಃಖದಿಂದಿರುತ್ತಾ ಎಂದು ನಿರ್ಧಾರವಾಗಿರುತ್ತದೆ. ಚಾಣಕ್ಯನ ಪ್ರಕಾರ ಭೂಮಿಗೆ ಬಂದಮೇಲೆ ಇದನ್ನೇ ಅನುಭವಿಸಬೇಕು ಎಂದು ಆತನ ಹಣೆಯಲ್ಲಿ ಬರೆದಿರುತ್ತದೆ. ಪೂರ್ವ ಜನ್ಮದ ಕರ್ಮಗಳನ್ನು ಖಂಡಿತ ಈ ಜನ್ಮದಲ್ಲಿ ಆತ ಅನುಭವಿಸಲೇಬೇಕು.
2. ಸಾವು
ಚಾಣಕ್ಯನ ಪ್ರಕಾರ ಸಾವನ್ನು ಆ ಬ್ರಹ್ಮನಿಂದಲೂ ಬದಲಾಯಿಸಲು ಆಗುವುದಿಲ್ಲ. ನಾವು ಇದೇ ಸಮಯದಲ್ಲಿ ಸಾಯವೇಕು ಎಂದು ತಾಯಿಯ ಗರ್ಭದಲ್ಲಿರಬೇಕಾದರೆ ನಿರ್ಧಾರವಾಗಿರುತ್ತದೆ. ನೀವು ಎಷ್ಟೇ ಕೋಟ್ಯಾಧಿಪತಿಗಳು ಆಗಿರಬಹುದು ಅಥವಾ ನೀವು ಪ್ರಭಾವಿ ವ್ಯಕ್ತಿಯೇ ಆಗಿರಬಹುದು. ಆದರೂ ಕೂಡ ನಿಮ್ಮ ಸಾವನ್ನು ಯಾರಿಂದಲೂ ತಪ್ಪಿಸೋದಕ್ಕೆ ಸಾಧ್ಯವಿಲ್ಲ.
3. ಸಂಪತ್ತು ಮತ್ತು ವಿದ್ಯೆ
ಅನೇಕ ಜನರಿಗೆ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು ಎಂಬ ಆಸೆ ಇರುತ್ತದೆ. ಇನ್ನೂ ಕೆಲವರಿಗೆ ಕೈ ತುಂಬಾ ದುಡ್ಡು ಮಾಡಬೇಕು, ಕೋಟ್ಯಾಧಿಪತಿಗಳಾಗಬೇಕು ಎಂಬ ಆಸೆ ಇರುತ್ತದೆ. ಕೆಲವರಿಗೆ ಇದು ಕೈಗೂಡಿದರೆ ಇನ್ನೂ ಕೆಲವರಿಂದ ಇದು ಸಾಧ್ಯವಾಗೋದಿಲ್ಲ. ಯಾಕಂದರೆ ನೀವು ಮುಂದೆ ಏನಾಗುತ್ತೀರಾ? ನಿಮ್ಮ ಭವಿಷ್ಯದಲ್ಲಿ ಏನಾಗಲಿದೆ ಅನ್ನೋದು ತಾಯಿಯ ಗರ್ಭದಲ್ಲಿರಬೇಕಾದರೆ ನಿರ್ಧಾರವಾಗಿರುತ್ತದೆ.
4. ವಯಸ್ಸು
ಮನುಷ್ಯ ಭವಿಷ್ಯದ ಕನಸನ್ನು ಕಾಣೋದು ಹೆಚ್ಚು. ನಾಳೆ ನನ್ನ ಜೀವನದಲ್ಲಿ ಹೀಗಾಗುತ್ತೆ, ಮುಂದಿನ ಹತ್ತು ವರ್ಷಗಳಲ್ಲಿ ನಾನು ಕೋಟ್ಯಾಧಿಪತಿಯಾಗುತ್ತೇನೆ. ಹೀಗೆ ಮನುಷ್ಯರು ಬಣ್ಣ ಬಣ್ಣದ ಕನಸುಗಳನ್ನು ಕಂಡಿರ್ತಾರೆ. ಚಾಣಕ್ಯನ ಪ್ರಕಾರ ಭವಿಷ್ಯದ ಬಗ್ಗೆ ಅತೀ ಹೆಚ್ಚು ಚಿಂತಿಸುವ ಅಗತ್ಯವಿಲ್ಲ ಅಂತಾರೆ. ಯಾಕಂದ್ರೆ ನೀವು ಇಷ್ಟೇ ವರ್ಷ ಬದುಕಿರಬೇಕು ಅಂತ ತಾಯಿಯ ಗರ್ಭದಲ್ಲೇ ನಿರ್ಧಾರವಾಗಿರುವಾಗ ಅದನ್ನು ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ.
ಬದುಕಿನ ಬಂಡಿ ಇಷ್ಟೇ ದಿನ ನಡೆಯುತ್ತೆ ಅಂತ ಹೇಳೋದಿಕ್ಕಾಗೋದಿಲ್ಲ. ಆದ್ರೆ ಬದುಕಿರುವಷ್ಟು ದಿನ ಖುಷಿ-ಖುಷಿಯಿಂದ ಬಾಳಬೇಕು ಅಷ್ಟೇ.



Click it and Unblock the Notifications


