Latest Updates
-
ಸುಪ್ರೀಂ ಕೋರ್ಟ್ ಶಾಕ್: ವಿಚ್ಛೇದನ ಒಪ್ಪಂದ ಮುರಿದರೆ ಕಾದಿದೆ ಕಠಿಣ ಶಿಕ್ಷೆ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ -
ಬಿಸಿಗಾಳಿ ಕಾಟವೇ? ಈ ತಂಪು ಪಾನೀಯಗಳೇ ನಿಮ್ಮ ರಕ್ಷಕ -
ಹಬ್ಬದ ಫ್ಯಾಷನ್: ಈ ಟಿಪ್ಸ್ ಫಾಲೋ ಮಾಡಿ ಮಿಂಚಿ! -
ಬಿಸಿಲ ಧಗೆಯಿಂದ ಪಾರಾಗಲು ನಿಮ್ಮ ವರ್ಕೌಟ್ ರೂಟೀನ್ ಬದಲಾಯಿಸಿ -
ಬಿಸಿಗಾಳಿ ಕಾಟ: ಮದುವೆ ಡೇಟಿಂಗ್ ಪ್ಲಾನ್ ಹಾಳಾಗದಂತೆ ತಡೆಯುವುದು ಹೇಗೆ? -
ಬಾಲ್ಕನಿ ಅಲಂಕಾರ: ಹಬ್ಬದ ಸಂಭ್ರಮಕ್ಕೆ 10 ನಿಮಿಷದ ಮ್ಯಾಜಿಕ್ -
ಬಿಸಿಲಿನ ಬೇಗೆಗೆ ಈ ಪಾನೀಯಗಳೇ ಮದ್ದು, ತಂಪಾಗಿರಿ ಹೀಗೆ! -
ಬೈಸಾಕಿ ಮತ್ತು ವಿಷು ಹಬ್ಬದ ಲುಕ್: ಈ ಟ್ರೆಂಡ್ಸ್ ಮಿಸ್ ಮಾಡ್ಬೇಡಿ -
ತೆಲಂಗಾಣ ಬಿಸಿಲ ಬೇಗೆ: ಫಿಟ್ ಆಗಿರಲು ಈ ತಪ್ಪುಗಳನ್ನು ಮಾಡಬೇಡಿ
ಬೆಳಗ್ಗೆ ಎದ್ದು ಈ 5 ಕೆಲಸಗಳನ್ನು ಮಾಡಿದರೆ, ಲಕ್ಷ್ಮಿ ದೇವಿ ನಿಮ್ಮ ಮನೆ ಬಾಗಿಲಿಗೆ ಬರುವಳು
ದೇವಿ ಲಕ್ಷ್ಮಿಯನ್ನು ಸಂಪತ್ತು ಮತ್ತು ಐಶ್ವರ್ಯದ ದೇವತೆ ಎಂದು ಕರೆಯಲಾಗುತ್ತದೆ. ಶಾಸ್ತ್ರಗಳ ಪ್ರಕಾರ, ಲಕ್ಷ್ಮಿ ದೇವಿಯ ಕೃಪೆಯಿಂದ ವ್ಯಕ್ತಿಯು ಸಂಪತ್ತು ಮತ್ತು ಸಮೃದ್ಧಿಯನ್ನು ಪಡೆಯುತ್ತಾನೆ. ಹಾಗಾಗಿ ಲಕ್ಷ್ಮಿಯ ಆಶೀರ್ವಾದ ಸದಾ ಎಲ್ಲರ ಮೇಲಿರಲಿ ಎಂದು ಪ್ರತಿಯೊಬ್ಬರೂ ಪ್ರಾರ್ಥಿಸುವುದು. ಇದರ ಜೊತೆಗೆ ಬೆಳಗ್ಗೆ ಎದ್ದು ಕೆಲವು ಕ್ರಮಗಳನ್ನು ಮಾಡುವುದರಿಂದ, ಲಕ್ಷ್ಮಿ ದೇವಿಯನ್ನು ಮೆಚ್ಚಿಸಬಹುದು. ಇದರಿಂದ ಮನೆಯಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿ ನೆಲೆಸಿರುತ್ತದೆ. ಅಷ್ಟೇ ಅಲ್ಲ, ಮನೆಯ ವಾತಾವರಣವೂ ಸಕಾರಾತ್ಮಕವಾಗಿರುತ್ತದೆ. ಹಾಗಾದರೆ, ಲಕ್ಷ್ಮಿ ಕೃಪೆಗಾಗಿ ಜ್ಯೋತಿಷ್ಯದ ಪ್ರಕಾರ ಬೆಳಗ್ಗೆ ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದನ್ನು ಇಲ್ಲಿ ನೋಡೋಣ.
ಲಕ್ಷ್ಮಿ ಕೃಪೆಗಾಗಿ, ಬೆಳಗ್ಗೆ ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು ಈ ಕೆಳಗೆ ನೀಡಲಾಗಿದೆ:

1. ತುಳಸಿ ಪೂಜೆ:
ನಿಮ್ಮ ಮನೆಯಲ್ಲಿ ತುಳಸಿ ಗಿಡವನ್ನು ನೆಟ್ಟು ಬೆಳಿಗ್ಗೆ ಸ್ನಾನ ಮಾಡಿದ ನಂತರ ನೀರನ್ನು ಅರ್ಪಿಸಿ. ತಾಯಿ ಲಕ್ಷ್ಮಿ ತುಳಸಿ ಗಿಡದಲ್ಲಿ ನೆಲೆಸಿರುತ್ತಾಳೆ. ಆದ್ದರಿಂದ, ತುಳಸಿ ಗಿಡಕ್ಕೆ ನೀರನ್ನು ಅರ್ಪಿಸುವುದರಿಂದ ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ಉಂಟಾಗುತ್ತದೆ. ತುಳಸಿಗೆ ನೀರನ್ನು ಅರ್ಪಿಸುವಾಗ, ವಿಷ್ಣುವಿನ ಮಂತ್ರವಾದ ‘ಓಂ ನಮೋ ಭಗವತೇ ವಾಸುದೇವಾಯ' ವನ್ನು ಜಪಿಸಬೇಕು. ಇದರೊಂದಿಗೆ ಲಕ್ಷ್ಮಿಯ ಜೊತೆಗೆ ಶ್ರೀ ಹರಿಯ ಕೃಪೆಯೂ ಉಳಿಯುತ್ತದೆ.

2. ಸೂರ್ಯನಿಗೆ ನೀರು ಅರ್ಪಣೆ:
ಬೆಳಿಗ್ಗೆ ಸ್ನಾನದ ನಂತರ ತಾಮ್ರದ ಪಾತ್ರೆಯಲ್ಲಿ ನೀರು ತುಂಬಿದ ನಂತರ, ಅದಕ್ಕೆ ಸ್ವಲ್ಪ ಕುಂಕುಮ, ಹೂವುಗಳನ್ನು ಸೇರಿಸಿ, ಉದಯಿಸುವ ಸೂರ್ಯನಿಗೆ ಅರ್ಪಿಸಿ. ಇದರಿಂದ ತಾಯಿ ಲಕ್ಷ್ಮಿಯು ಸಂತುಷ್ಟಳಾಗಿದ್ದಾಳೆ, ಹಾಗೆಯೇ ನೀನು ಯಾವಾಗಲೂ ಆರೋಗ್ಯವಾಗಿ ಮತ್ತು ಸಂತೋಷವಾಗಿರುತ್ತೀರಿ.

3. ತುಪ್ಪದ ದೀಪ ಬೆಳಗಿ:
ಬೆಳಿಗ್ಗೆ ಮನೆಯನ್ನು ಸ್ವಚ್ಛಗೊಳಿಸಿದ ನಂತರ ಮುಖ್ಯ ಬಾಗಿಲಲ್ಲಿ ತುಪ್ಪದ ದೀಪವನ್ನು ಬೆಳಗಿಸಬೇಕು. ದೀಪದಲ್ಲಿ ಎಲ್ಲಾ ದೇವತೆಗಳು ನೆಲೆಸಿರುತ್ತಾರೆ. ಹೀಗೆ ಮಾಡುವುದರಿಂದ ನೀವು ಎಲ್ಲಾ ತೊಂದರೆಗಳಿಂದ ಮುಕ್ತರಾಗುತ್ತೀರಿ. ಇದರೊಂದಿಗೆ ಲಕ್ಷ್ಮಿ ದೇವಿಯ ಆಗಮನವು ಆಗುತ್ತದೆ. ಇದರಿಂದಾಗಿ ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ಇರುತ್ತದೆ. ಅಷ್ಟೇ ಅಲ್ಲ, ದೀಪವನ್ನು ಹಚ್ಚುವುದರಿಂದ ಮನೆಯ ವಾಸ್ತು ದೋಷಗಳು ದೂರವಾಗುತ್ತವೆ.

4. ತಿಲಕಧಾರಣೆ:
ಪ್ರತಿನಿತ್ಯ ಪೂಜೆ ಮಾಡಿದ ನಂತರ ತಿಲಕವನ್ನು ಹಚ್ಚಿಕೊಳ್ಳಬೇಕು. ಇದನ್ನು ಧರ್ಮಗ್ರಂಥಗಳಲ್ಲಿ ಬಹಳ ಮಂಗಳಕರವೆಂದು ಪರಿಗಣಿಸಲಾಗಿದೆ. ಇದರಿಂದ ನೀವು ಶಾಂತಿ, ನೆಮ್ಮದಿಯನ್ನು ಪಡೆಯುತ್ತೀರಿ ಜೊತೆಗೆ ದೇವಿ ಲಕ್ಷ್ಮಿಯು ಪ್ರಸನ್ನಳಾಗುತ್ತಾಳೆ. ಆದ್ದರಿಂದ ಪ್ರತಿದಿನ ಶ್ರೀಗಂಧದ ತಿಲಕವನ್ನು ಹಚ್ಚಿಕೊಳ್ಳಿ.

5. ಉಪ್ಪುನೀರಿನಿಂದ ಸ್ವಚ್ಛಗೊಳಿಸುವಿಕೆ:
ವಾಸ್ತು ದೋಷಗಳನ್ನು ಹೋಗಲಾಡಿಸಲು ಪ್ರತಿನಿತ್ಯ ಬೆಳಗ್ಗೆ ಉಪ್ಪು ನೀರಿನಿಂದ ಮನೆಯಲ್ಲೆಲ್ಲಾ ಒರೆಸಬೇಕು. ಹೀಗೆ ಮಾಡುವುದರಿಂದ ಲಕ್ಷ್ಮಿಯ ಆಶೀರ್ವಾದ ಸದಾ ನಿಮ್ಮ ಮೇಲೆ ಇರುತ್ತದೆ, ಜೊತೆಗೆ ಮನೆಯ ವಾಸ್ತು ದೋಷಗಳೆಲ್ಲಾ ನಿವಾರಣೆಯಾಗುತ್ತವೆ.



Click it and Unblock the Notifications











