Just In
- 5 min ago 2024 ಏಪ್ರಿಲ್ ತಿಂಗಳ ರಾಶಿಫಲ: 12 ರಾಶಿಗಳ ವೃತ್ತಿ, ಆರ್ಥಿಕ, ಸಂಬಂಧ, ಆರೋಗ್ಯ ಭವಿಷ್ಯ
- 55 min ago ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- 3 hrs ago ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- 4 hrs ago ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
Don't Miss
- News ಧಾರವಾಡ: ದಿಂಗಾಲೇಶ್ವರ ಶ್ರೀಗಳ ಬೆನ್ನಿಗೆ ನಿಂತ 'ವೀರಶೈವ ಲಿಂಗಾಯತ ಮಹಾಸಭಾ'
- Movies Puttakkana Makkalu:ಈ ಬಾರಿ ಸಹನಾ ಹೊಗಳಿದ ಅಭಿಮಾನಿಗಳು: ಪುಟ್ಟಕ್ಕನ ನಡವಳಿಕೆಗೆ ಫ್ಯಾನ್ಸ್ ಬೇಸರ
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಾಂಧಿ ಜಯಂತಿ 2023: ಗಾಂಧೀಜಿಯ ಪ್ರೇರಣಾತ್ಮಕ ಸಂದೇಶಗಳು
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 153ನೇ ವರ್ಷದ ಜನ್ಮ ದಿನಾಚರಣೆಯನ್ನು 2022ರ ಆಕ್ಟೋಬರ್ 2 ರಂದು ಆಚರಿಸುತ್ತಿದ್ದೇವೆ. ದೇಶದ ಸ್ವಾತಂತ್ರಕ್ಕೆ ಅವಿರತ ಶ್ರಮಿಸಿದ ಮಹಾತ್ಮ ಗಾಂಧೀಜಿಯವರ ಹುಟ್ಟುಹಬ್ಬವನ್ನ ಭಾರತ ರಾಷ್ಟ್ರಿಯ ಹಬ್ಬವಾಗಿವಾಗಿ ಆಚರಿಸಲಾಗುವುದು.
ಗಾಂಧೀಜಿಯವರ ಜನ್ಮದಿನಾಚರಣೆಯ ಹಿನ್ನೆಲೆ ಅವರ ಪ್ರೇರಣಾತ್ಮಕ ಉಲ್ಲೇಖ, ಹೇಳಿಕೆಗಳನ್ನು ನಾವಿಲ್ಲಿ ನೀಡಲಿದ್ದೇವೆ.
ಮನುಷ್ಯನು ಅವನದೇ ಆಲೋಚನೆಗಳ ಪ್ರತಿರೂಪ ಆಗಿರುತ್ತಾನೆ. ಅವನು ಏನು ಯೋಚಿಸುತ್ತಾನೋ, ಅವನು ಅದೇ ಆಗುತ್ತಾನೆ. - ಮಹಾತ್ಮ ಗಾಂಧಿ
ಪ್ರಕೃತಿಯು ಪ್ರತಿಯೊಬ್ಬ ಮನುಷ್ಯನ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಒದಗಿಸುತ್ತದೆ, ಆದರೆ ಮನುಷ್ಯನ ದುರಾಸೆಯಲ್ಲ. - ಮಹಾತ್ಮ ಗಾಂಧಿ
ನೀವು ಮಾನವೀಯತೆಯ ಮೇಲಿನ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಮಾನವೀಯತೆ ಎಂಬುದು ಒಂದು ಸಾಗರದಂತೆ, ಸಮುದ್ರದ ಕೆಲವು ಹನಿಗಳು ಕೊಳಕಾಗಿದ್ದರೆ, ಸಾಗರವು ಕೊಳಕು ಆಗುವುದಿಲ್ಲ. - ಮಹಾತ್ಮ ಗಾಂಧಿ
ನಾವು ಯಾರಿಗೂ ಅವರ ಕೊಳಕು ಆಲೋಚನೆಗಳನ್ನು ನಮ್ಮ ಮನಸ್ಸಿನಲ್ಲಿ ನೆಲೆಸಲು ಅವಕಾಶ ನೀಡಬಾರದು. - ಮಹಾತ್ಮ ಗಾಂಧಿ
ನನ್ನ ಅನುಮತಿಯಿಲ್ಲದೆ ಯಾರೂ ನನ್ನನ್ನು ನೋಯಿಸಲು ಸಾಧ್ಯವೇ ಇಲ್ಲ. - ಮಹಾತ್ಮ ಗಾಂಧಿ
ನಾಳೆಯೇ ನೀವು ಸಾಯುತ್ತೀರಿ ಎಂದೇ ಇಂದು ಬದುಕಿ. ಎಂದೆಂದಿಗೂ ಬದುಕಿಯೇ ಇರುತ್ತೀರಿ ಎಂದು ಭಾವಿಸಿಕೊಂಡು ಹೊಸದನ್ನು ಕಲಿಯಿರಿ. - ಮಹಾತ್ಮ ಗಾಂಧಿ
ದುರ್ಬಲರು ಎಂದಿಗೂ ಕ್ಷಮಿಸಲಾರರು. ಕ್ಷಮೆ ಎಂದಿಗೂ ಬಲಶಾಲಿಗಳ ಗುಣ. - ಮಹಾತ್ಮ ಗಾಂಧಿ
ನನ್ನ ಧರ್ಮವು ಸತ್ಯ ಮತ್ತು ಅಹಿಂಸೆಯನ್ನು ಆಧರಿಸಿದೆ. ಸತ್ಯವೇ ನನ್ನ ದೇವರು, ಅಹಿಂಸೆಯೇ ಆತನನ್ನು ಅರಿತುಕೊಳ್ಳುವ ಸಾಧನವಾಗಿದೆ. - ಮಹಾತ್ಮ ಗಾಂಧಿ
ಪ್ರಪಂಚದ ಎಲ್ಲಾ ಧರ್ಮಗಳು, ಇತರ ವಿಷಯಗಳಲ್ಲಿ ಭಿನ್ನವಾಗಿರಬಹುದು. ಆದರೆ ಸತ್ಯ ಮಾತ್ರ ಎಲ್ಲಾ ಧರ್ಮಗಳಲ್ಲೂ ಒಂದೇ ಆಗಿದೆ. - ಮಹಾತ್ಮ ಗಾಂಧಿ
ನೀವು ಎದುರಾಳಿಗಳನ್ನು ಎದುರಿಸಿದಾಗಲೆಲ್ಲಾ ಪ್ರೀತಿಯಿಂದ ಜಯಿಸಿ. - ಮಹಾತ್ಮ ಗಾಂಧಿ
ಇಂದು ನೀವು ಏನು ಆಗುತ್ತೀರಿ ಎಂಬುದರ ಮೇಲೆ ನಿಮ್ಮ ನಾಳೆ ನಿಂತಿದೆ. - ಮಹಾತ್ಮ ಗಾಂಧಿ
ನಿಮ್ಮನ್ನು ನೀವು ಕಂಡುಕೊಳ್ಳುವ ಬಗೆ ಯಾವುದಾದರೂ ಇದ್ದರೆ ಅದು ಮತ್ತೊಬ್ಬರಿಗೆ ಸೇವೆ ಮಾಡುವುದೇ ಆಗಿದೆ. - ಮಹಾತ್ಮ ಗಾಂಧಿ