Latest Updates
-
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ? -
ಬೇಕರಿಯಲ್ಲಿ ಸಿಗುವ ಕೊಬ್ಬರಿ ತುರಿ ಬರ್ಫಿ ನಿಮಿಷದಲ್ಲಿ ಮಾಡಿ! ಇಲ್ಲಿದೆ ಸುಲಭದ ಸ್ವೀಟ್ ವಿಧಾನ -
ಮಧುರೈಗೆ ಹೋಗ್ತಿದ್ದೀರಾ? ಈ ಪವಿತ್ರ ದೇಗುಲಗಳಿಗೂ ಭೇಟಿ ನೀಡೋದನ್ನ ಮರೀಬೇಡಿ.. ಪಟ್ಟಿ ಇಲ್ಲಿದೆ -
ಈ 3 ರಾಶಿಗಳಿಗೆ ಜೀವನದಲ್ಲಿ ಏರಿಳಿತಗಳು! ಹಳೆಯ ನೆನಪುಗಳು ಕಾಡುತ್ತೆ
ಗಾಂಧಿ ಜಯಂತಿ 2023: ಗಾಂಧೀಜಿಯ ಪ್ರೇರಣಾತ್ಮಕ ಸಂದೇಶಗಳು
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 153ನೇ ವರ್ಷದ ಜನ್ಮ ದಿನಾಚರಣೆಯನ್ನು 2022ರ ಆಕ್ಟೋಬರ್ 2 ರಂದು ಆಚರಿಸುತ್ತಿದ್ದೇವೆ. ದೇಶದ ಸ್ವಾತಂತ್ರಕ್ಕೆ ಅವಿರತ ಶ್ರಮಿಸಿದ ಮಹಾತ್ಮ ಗಾಂಧೀಜಿಯವರ ಹುಟ್ಟುಹಬ್ಬವನ್ನ ಭಾರತ ರಾಷ್ಟ್ರಿಯ ಹಬ್ಬವಾಗಿವಾಗಿ ಆಚರಿಸಲಾಗುವುದು.

ಗಾಂಧೀಜಿಯವರ ಜನ್ಮದಿನಾಚರಣೆಯ ಹಿನ್ನೆಲೆ ಅವರ ಪ್ರೇರಣಾತ್ಮಕ ಉಲ್ಲೇಖ, ಹೇಳಿಕೆಗಳನ್ನು ನಾವಿಲ್ಲಿ ನೀಡಲಿದ್ದೇವೆ.
ಮನುಷ್ಯನು ಅವನದೇ ಆಲೋಚನೆಗಳ ಪ್ರತಿರೂಪ ಆಗಿರುತ್ತಾನೆ. ಅವನು ಏನು ಯೋಚಿಸುತ್ತಾನೋ, ಅವನು ಅದೇ ಆಗುತ್ತಾನೆ. - ಮಹಾತ್ಮ ಗಾಂಧಿ
ಪ್ರಕೃತಿಯು ಪ್ರತಿಯೊಬ್ಬ ಮನುಷ್ಯನ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಒದಗಿಸುತ್ತದೆ, ಆದರೆ ಮನುಷ್ಯನ ದುರಾಸೆಯಲ್ಲ. - ಮಹಾತ್ಮ ಗಾಂಧಿ
ನೀವು ಮಾನವೀಯತೆಯ ಮೇಲಿನ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಮಾನವೀಯತೆ ಎಂಬುದು ಒಂದು ಸಾಗರದಂತೆ, ಸಮುದ್ರದ ಕೆಲವು ಹನಿಗಳು ಕೊಳಕಾಗಿದ್ದರೆ, ಸಾಗರವು ಕೊಳಕು ಆಗುವುದಿಲ್ಲ. - ಮಹಾತ್ಮ ಗಾಂಧಿ
ನಾವು ಯಾರಿಗೂ ಅವರ ಕೊಳಕು ಆಲೋಚನೆಗಳನ್ನು ನಮ್ಮ ಮನಸ್ಸಿನಲ್ಲಿ ನೆಲೆಸಲು ಅವಕಾಶ ನೀಡಬಾರದು. - ಮಹಾತ್ಮ ಗಾಂಧಿ
ನನ್ನ ಅನುಮತಿಯಿಲ್ಲದೆ ಯಾರೂ ನನ್ನನ್ನು ನೋಯಿಸಲು ಸಾಧ್ಯವೇ ಇಲ್ಲ. - ಮಹಾತ್ಮ ಗಾಂಧಿ
ನಾಳೆಯೇ ನೀವು ಸಾಯುತ್ತೀರಿ ಎಂದೇ ಇಂದು ಬದುಕಿ. ಎಂದೆಂದಿಗೂ ಬದುಕಿಯೇ ಇರುತ್ತೀರಿ ಎಂದು ಭಾವಿಸಿಕೊಂಡು ಹೊಸದನ್ನು ಕಲಿಯಿರಿ. - ಮಹಾತ್ಮ ಗಾಂಧಿ
ದುರ್ಬಲರು ಎಂದಿಗೂ ಕ್ಷಮಿಸಲಾರರು. ಕ್ಷಮೆ ಎಂದಿಗೂ ಬಲಶಾಲಿಗಳ ಗುಣ. - ಮಹಾತ್ಮ ಗಾಂಧಿ
ನನ್ನ ಧರ್ಮವು ಸತ್ಯ ಮತ್ತು ಅಹಿಂಸೆಯನ್ನು ಆಧರಿಸಿದೆ. ಸತ್ಯವೇ ನನ್ನ ದೇವರು, ಅಹಿಂಸೆಯೇ ಆತನನ್ನು ಅರಿತುಕೊಳ್ಳುವ ಸಾಧನವಾಗಿದೆ. - ಮಹಾತ್ಮ ಗಾಂಧಿ
ಪ್ರಪಂಚದ ಎಲ್ಲಾ ಧರ್ಮಗಳು, ಇತರ ವಿಷಯಗಳಲ್ಲಿ ಭಿನ್ನವಾಗಿರಬಹುದು. ಆದರೆ ಸತ್ಯ ಮಾತ್ರ ಎಲ್ಲಾ ಧರ್ಮಗಳಲ್ಲೂ ಒಂದೇ ಆಗಿದೆ. - ಮಹಾತ್ಮ ಗಾಂಧಿ
ನೀವು ಎದುರಾಳಿಗಳನ್ನು ಎದುರಿಸಿದಾಗಲೆಲ್ಲಾ ಪ್ರೀತಿಯಿಂದ ಜಯಿಸಿ. - ಮಹಾತ್ಮ ಗಾಂಧಿ
ಇಂದು ನೀವು ಏನು ಆಗುತ್ತೀರಿ ಎಂಬುದರ ಮೇಲೆ ನಿಮ್ಮ ನಾಳೆ ನಿಂತಿದೆ. - ಮಹಾತ್ಮ ಗಾಂಧಿ
ನಿಮ್ಮನ್ನು ನೀವು ಕಂಡುಕೊಳ್ಳುವ ಬಗೆ ಯಾವುದಾದರೂ ಇದ್ದರೆ ಅದು ಮತ್ತೊಬ್ಬರಿಗೆ ಸೇವೆ ಮಾಡುವುದೇ ಆಗಿದೆ. - ಮಹಾತ್ಮ ಗಾಂಧಿ



Click it and Unblock the Notifications























