Latest Updates
-
ಖೇಲೋ ಇಂಡಿಯಾ ಸಂವಾದ ವೀಕ್ಷಿಸುವಾಗ ಜಡತ್ವ ಬೇಡ: 12 ನಿಮಿಷಗಳ ಈ ಸಿಂಪಲ್ ವರ್ಕೌಟ್ ಟ್ರೈ ಮಾಡಿ! -
ಆಗಸ್ಟ್ 27 ಅಥವಾ 28? ರಾಖಿ ಹಬ್ಬದ ಗೊಂದಲಕ್ಕೆ ಇಲ್ಲಿದೆ ಬೆಸ್ಟ್ ಪ್ಲಾನ್! -
ಗುಡುಗು-ಸಿಡಿಲು ಮಳೆ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು 15 ನಿಮಿಷಗಳ ತುರ್ತು ಕ್ರಮಗಳು -
ರಕ್ಷಾಬಂಧನಕ್ಕೆ ಸಿಹಿ ಖರೀದಿಸ್ತಿದ್ದೀರಾ? ಈ ತಪ್ಪು ಮಾಡಿದ್ರೆ ಆರೋಗ್ಯಕ್ಕೆ ಕುತ್ತು, ನಕಲಿ ಸ್ವೀಟ್ಸ್ ಪತ್ತೆ! -
ರಕ್ಷಾಬಂಧನಕ್ಕೆ ಚಿನ್ನ ಖರೀದಿಸುವ ಮುನ್ನ ಎಚ್ಚರ! ಇಂದಿನ ದರ ಮತ್ತು ಲಾಭದಾಯಕ ಟಿಪ್ಸ್ ಇಲ್ಲಿದೆ -
ರಾಷ್ಟ್ರೀಯ ಕ್ರೀಡಾ ದಿನ: 29 ನಿಮಿಷಗಳ ಸರಳ ವರ್ಕೌಟ್ ಮೂಲಕ ಫಿಟ್ ಆಗಿ! -
ಕುಟುಂಬದಲ್ಲಿ ಉಡುಪಿನ ಬಗ್ಗೆ ಟೀಕೆಗಳೇ? ಈ 7 ವಾಕ್ಯಗಳ ಮೂಲಕ ಗೌರವಯುತವಾಗಿ ಉತ್ತರಿಸಿ! -
ಈರುಳ್ಳಿ ಬೆಲೆ ಏರಿಕೆ: ಅಡುಗೆಮನೆಯ ಬಜೆಟ್ ಉಳಿಸಲು ಸರಳ ಟಿಪ್ಸ್ ಮತ್ತು ಪರ್ಯಾಯಗಳು! -
ಪ್ಯಾಕೆಟ್ ಆಹಾರದ ಮೇಲೆ ಕಡ್ಡಾಯ ಎಚ್ಚರಿಕೆ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಅಂತಿಮ ಗಡುವು! -
ಇಂದಿನ ಪೆಟ್ರೋಲ್ ದರ ಸ್ಥಿರ: ಪ್ರಯಾಣದ ವೆಚ್ಚ ಉಳಿಸಲು ಈ 5 ಸಿಂಪಲ್ ಟಿಪ್ಸ್ ಫಾಲೋ ಮಾಡಿ!
ಗಾಂಧಿ ಜಯಂತಿ 2023: ಗಾಂಧೀಜಿಯ ಪ್ರೇರಣಾತ್ಮಕ ಸಂದೇಶಗಳು
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 153ನೇ ವರ್ಷದ ಜನ್ಮ ದಿನಾಚರಣೆಯನ್ನು 2022ರ ಆಕ್ಟೋಬರ್ 2 ರಂದು ಆಚರಿಸುತ್ತಿದ್ದೇವೆ. ದೇಶದ ಸ್ವಾತಂತ್ರಕ್ಕೆ ಅವಿರತ ಶ್ರಮಿಸಿದ ಮಹಾತ್ಮ ಗಾಂಧೀಜಿಯವರ ಹುಟ್ಟುಹಬ್ಬವನ್ನ ಭಾರತ ರಾಷ್ಟ್ರಿಯ ಹಬ್ಬವಾಗಿವಾಗಿ ಆಚರಿಸಲಾಗುವುದು.

ಗಾಂಧೀಜಿಯವರ ಜನ್ಮದಿನಾಚರಣೆಯ ಹಿನ್ನೆಲೆ ಅವರ ಪ್ರೇರಣಾತ್ಮಕ ಉಲ್ಲೇಖ, ಹೇಳಿಕೆಗಳನ್ನು ನಾವಿಲ್ಲಿ ನೀಡಲಿದ್ದೇವೆ.
ಮನುಷ್ಯನು ಅವನದೇ ಆಲೋಚನೆಗಳ ಪ್ರತಿರೂಪ ಆಗಿರುತ್ತಾನೆ. ಅವನು ಏನು ಯೋಚಿಸುತ್ತಾನೋ, ಅವನು ಅದೇ ಆಗುತ್ತಾನೆ. - ಮಹಾತ್ಮ ಗಾಂಧಿ
ಪ್ರಕೃತಿಯು ಪ್ರತಿಯೊಬ್ಬ ಮನುಷ್ಯನ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಒದಗಿಸುತ್ತದೆ, ಆದರೆ ಮನುಷ್ಯನ ದುರಾಸೆಯಲ್ಲ. - ಮಹಾತ್ಮ ಗಾಂಧಿ
ನೀವು ಮಾನವೀಯತೆಯ ಮೇಲಿನ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಮಾನವೀಯತೆ ಎಂಬುದು ಒಂದು ಸಾಗರದಂತೆ, ಸಮುದ್ರದ ಕೆಲವು ಹನಿಗಳು ಕೊಳಕಾಗಿದ್ದರೆ, ಸಾಗರವು ಕೊಳಕು ಆಗುವುದಿಲ್ಲ. - ಮಹಾತ್ಮ ಗಾಂಧಿ
ನಾವು ಯಾರಿಗೂ ಅವರ ಕೊಳಕು ಆಲೋಚನೆಗಳನ್ನು ನಮ್ಮ ಮನಸ್ಸಿನಲ್ಲಿ ನೆಲೆಸಲು ಅವಕಾಶ ನೀಡಬಾರದು. - ಮಹಾತ್ಮ ಗಾಂಧಿ
ನನ್ನ ಅನುಮತಿಯಿಲ್ಲದೆ ಯಾರೂ ನನ್ನನ್ನು ನೋಯಿಸಲು ಸಾಧ್ಯವೇ ಇಲ್ಲ. - ಮಹಾತ್ಮ ಗಾಂಧಿ
ನಾಳೆಯೇ ನೀವು ಸಾಯುತ್ತೀರಿ ಎಂದೇ ಇಂದು ಬದುಕಿ. ಎಂದೆಂದಿಗೂ ಬದುಕಿಯೇ ಇರುತ್ತೀರಿ ಎಂದು ಭಾವಿಸಿಕೊಂಡು ಹೊಸದನ್ನು ಕಲಿಯಿರಿ. - ಮಹಾತ್ಮ ಗಾಂಧಿ
ದುರ್ಬಲರು ಎಂದಿಗೂ ಕ್ಷಮಿಸಲಾರರು. ಕ್ಷಮೆ ಎಂದಿಗೂ ಬಲಶಾಲಿಗಳ ಗುಣ. - ಮಹಾತ್ಮ ಗಾಂಧಿ
ನನ್ನ ಧರ್ಮವು ಸತ್ಯ ಮತ್ತು ಅಹಿಂಸೆಯನ್ನು ಆಧರಿಸಿದೆ. ಸತ್ಯವೇ ನನ್ನ ದೇವರು, ಅಹಿಂಸೆಯೇ ಆತನನ್ನು ಅರಿತುಕೊಳ್ಳುವ ಸಾಧನವಾಗಿದೆ. - ಮಹಾತ್ಮ ಗಾಂಧಿ
ಪ್ರಪಂಚದ ಎಲ್ಲಾ ಧರ್ಮಗಳು, ಇತರ ವಿಷಯಗಳಲ್ಲಿ ಭಿನ್ನವಾಗಿರಬಹುದು. ಆದರೆ ಸತ್ಯ ಮಾತ್ರ ಎಲ್ಲಾ ಧರ್ಮಗಳಲ್ಲೂ ಒಂದೇ ಆಗಿದೆ. - ಮಹಾತ್ಮ ಗಾಂಧಿ
ನೀವು ಎದುರಾಳಿಗಳನ್ನು ಎದುರಿಸಿದಾಗಲೆಲ್ಲಾ ಪ್ರೀತಿಯಿಂದ ಜಯಿಸಿ. - ಮಹಾತ್ಮ ಗಾಂಧಿ
ಇಂದು ನೀವು ಏನು ಆಗುತ್ತೀರಿ ಎಂಬುದರ ಮೇಲೆ ನಿಮ್ಮ ನಾಳೆ ನಿಂತಿದೆ. - ಮಹಾತ್ಮ ಗಾಂಧಿ
ನಿಮ್ಮನ್ನು ನೀವು ಕಂಡುಕೊಳ್ಳುವ ಬಗೆ ಯಾವುದಾದರೂ ಇದ್ದರೆ ಅದು ಮತ್ತೊಬ್ಬರಿಗೆ ಸೇವೆ ಮಾಡುವುದೇ ಆಗಿದೆ. - ಮಹಾತ್ಮ ಗಾಂಧಿ



Click it and Unblock the Notifications











