Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಗಾಂಧಿ ಜಯಂತಿ 2023: ಗಾಂಧೀಜಿಯ ಪ್ರೇರಣಾತ್ಮಕ ಸಂದೇಶಗಳು
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 153ನೇ ವರ್ಷದ ಜನ್ಮ ದಿನಾಚರಣೆಯನ್ನು 2022ರ ಆಕ್ಟೋಬರ್ 2 ರಂದು ಆಚರಿಸುತ್ತಿದ್ದೇವೆ. ದೇಶದ ಸ್ವಾತಂತ್ರಕ್ಕೆ ಅವಿರತ ಶ್ರಮಿಸಿದ ಮಹಾತ್ಮ ಗಾಂಧೀಜಿಯವರ ಹುಟ್ಟುಹಬ್ಬವನ್ನ ಭಾರತ ರಾಷ್ಟ್ರಿಯ ಹಬ್ಬವಾಗಿವಾಗಿ ಆಚರಿಸಲಾಗುವುದು.

ಗಾಂಧೀಜಿಯವರ ಜನ್ಮದಿನಾಚರಣೆಯ ಹಿನ್ನೆಲೆ ಅವರ ಪ್ರೇರಣಾತ್ಮಕ ಉಲ್ಲೇಖ, ಹೇಳಿಕೆಗಳನ್ನು ನಾವಿಲ್ಲಿ ನೀಡಲಿದ್ದೇವೆ.
ಮನುಷ್ಯನು ಅವನದೇ ಆಲೋಚನೆಗಳ ಪ್ರತಿರೂಪ ಆಗಿರುತ್ತಾನೆ. ಅವನು ಏನು ಯೋಚಿಸುತ್ತಾನೋ, ಅವನು ಅದೇ ಆಗುತ್ತಾನೆ. - ಮಹಾತ್ಮ ಗಾಂಧಿ
ಪ್ರಕೃತಿಯು ಪ್ರತಿಯೊಬ್ಬ ಮನುಷ್ಯನ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಒದಗಿಸುತ್ತದೆ, ಆದರೆ ಮನುಷ್ಯನ ದುರಾಸೆಯಲ್ಲ. - ಮಹಾತ್ಮ ಗಾಂಧಿ
ನೀವು ಮಾನವೀಯತೆಯ ಮೇಲಿನ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಮಾನವೀಯತೆ ಎಂಬುದು ಒಂದು ಸಾಗರದಂತೆ, ಸಮುದ್ರದ ಕೆಲವು ಹನಿಗಳು ಕೊಳಕಾಗಿದ್ದರೆ, ಸಾಗರವು ಕೊಳಕು ಆಗುವುದಿಲ್ಲ. - ಮಹಾತ್ಮ ಗಾಂಧಿ
ನಾವು ಯಾರಿಗೂ ಅವರ ಕೊಳಕು ಆಲೋಚನೆಗಳನ್ನು ನಮ್ಮ ಮನಸ್ಸಿನಲ್ಲಿ ನೆಲೆಸಲು ಅವಕಾಶ ನೀಡಬಾರದು. - ಮಹಾತ್ಮ ಗಾಂಧಿ
ನನ್ನ ಅನುಮತಿಯಿಲ್ಲದೆ ಯಾರೂ ನನ್ನನ್ನು ನೋಯಿಸಲು ಸಾಧ್ಯವೇ ಇಲ್ಲ. - ಮಹಾತ್ಮ ಗಾಂಧಿ
ನಾಳೆಯೇ ನೀವು ಸಾಯುತ್ತೀರಿ ಎಂದೇ ಇಂದು ಬದುಕಿ. ಎಂದೆಂದಿಗೂ ಬದುಕಿಯೇ ಇರುತ್ತೀರಿ ಎಂದು ಭಾವಿಸಿಕೊಂಡು ಹೊಸದನ್ನು ಕಲಿಯಿರಿ. - ಮಹಾತ್ಮ ಗಾಂಧಿ
ದುರ್ಬಲರು ಎಂದಿಗೂ ಕ್ಷಮಿಸಲಾರರು. ಕ್ಷಮೆ ಎಂದಿಗೂ ಬಲಶಾಲಿಗಳ ಗುಣ. - ಮಹಾತ್ಮ ಗಾಂಧಿ
ನನ್ನ ಧರ್ಮವು ಸತ್ಯ ಮತ್ತು ಅಹಿಂಸೆಯನ್ನು ಆಧರಿಸಿದೆ. ಸತ್ಯವೇ ನನ್ನ ದೇವರು, ಅಹಿಂಸೆಯೇ ಆತನನ್ನು ಅರಿತುಕೊಳ್ಳುವ ಸಾಧನವಾಗಿದೆ. - ಮಹಾತ್ಮ ಗಾಂಧಿ
ಪ್ರಪಂಚದ ಎಲ್ಲಾ ಧರ್ಮಗಳು, ಇತರ ವಿಷಯಗಳಲ್ಲಿ ಭಿನ್ನವಾಗಿರಬಹುದು. ಆದರೆ ಸತ್ಯ ಮಾತ್ರ ಎಲ್ಲಾ ಧರ್ಮಗಳಲ್ಲೂ ಒಂದೇ ಆಗಿದೆ. - ಮಹಾತ್ಮ ಗಾಂಧಿ
ನೀವು ಎದುರಾಳಿಗಳನ್ನು ಎದುರಿಸಿದಾಗಲೆಲ್ಲಾ ಪ್ರೀತಿಯಿಂದ ಜಯಿಸಿ. - ಮಹಾತ್ಮ ಗಾಂಧಿ
ಇಂದು ನೀವು ಏನು ಆಗುತ್ತೀರಿ ಎಂಬುದರ ಮೇಲೆ ನಿಮ್ಮ ನಾಳೆ ನಿಂತಿದೆ. - ಮಹಾತ್ಮ ಗಾಂಧಿ
ನಿಮ್ಮನ್ನು ನೀವು ಕಂಡುಕೊಳ್ಳುವ ಬಗೆ ಯಾವುದಾದರೂ ಇದ್ದರೆ ಅದು ಮತ್ತೊಬ್ಬರಿಗೆ ಸೇವೆ ಮಾಡುವುದೇ ಆಗಿದೆ. - ಮಹಾತ್ಮ ಗಾಂಧಿ



Click it and Unblock the Notifications











