Latest Updates
-
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ! -
ಮಳೆಗಾಲದಲ್ಲಿ ಮದುವೆ ನಿಶ್ಚಯವಾಗಿದೆಯೇ? ನಿಮ್ಮ ಮದುವೆ ಸಂಭ್ರಮ ಹಾಳಾಗದಂತೆ ತಡೆಯಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು!
ಗರುಡ ಪುರಾಣದ ಪ್ರಕಾರ, ಈ ವಿಚಾರಗಳನ್ನು ಅರ್ಧದಲ್ಲೇ ಬಿಡಬೇಡಿ, ಮುಂದೆ ಹಾನಿಯಾಗುವುದು ಖಚಿತ
ಹಿಂದೂ ಧರ್ಮದ 18 ಪುರಾಣಗಳಲ್ಲಿ ಒಂದಾದ ಗರುಡ ಪುರಾಣಕ್ಕೆ ವಿಶೇಷ ಮಹತ್ವವಿದೆ. ಗರುಡ ಪುರಾಣವು ವಿಷ್ಣುವಿನ ಮಹಿಮೆಯನ್ನು ವಿವರಿಸುತ್ತದೆ. ಇದರಲ್ಲಿ, ಮಾನವ ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಎದುರಿಸುವುದು ಹೇಗೆ? ಜೊತೆಗೆ ಸಂತೋಷದ ಜೀವನವನ್ನು ಮಾಡುವುದು ಹೇಗೆ ಎಂಬುದನ್ನ ಹೇಳಿದೆ.
ಪುರಾಣಗಳಲ್ಲಿ ಉಲ್ಲೇಖಿಸಿರುವ ವಿಷಯಗಳನ್ನು ಅನುಸರಿಸುವ ಮೂಲಕ ಮನುಷ್ಯ ಯಾವಾಗಲೂ ಸದೃಢವಾಗಿರುತ್ತಾನೆ ಎಂದು ನಂಬಲಾಗಿದೆ. ಇದೇ ಗರುಡ ಪುರಾಣದಲ್ಲಿ, ಕೆಲವು ವಿಚಾರಗಳನ್ನು ಮಧ್ಯದಲ್ಲಿ ಬಿಡಬಾರದು ಎಂದು ಒಂದು ಪದ್ಯದ ಮೂಲಕ ಹೇಳಲಾಗಿದೆ. ಈ ಕಾರ್ಯಗಳನ್ನು ಅರ್ಧದಲ್ಲೇ ಬಿಡುವುದರಿಂದ ಮುಂದಿನ ದಿನಗಳಲ್ಲಿ ಅನೇಕ ಸಮಸ್ಯೆಗಳಿಗೆ ನಾಂದಿಯಾಗುತ್ತದೆ. ಹಾಗಾದ್ರೆ ಆ ವಿಚಾರಗಳಾವುವು ಎಂಬುದನ್ನು ವಿವರಿಸಲಾಗಿದೆ.
ಗರುಡ ಪುರಾಣದ ಪ್ರಕಾರ ಮಧ್ಯದಲ್ಲೇ ಬಿಡಬಾರದಂತಹ ವಿಚಾರಗಳನ್ನು ಈ ಕೆಳಗೆ ನೀಡಲಾಗಿದೆ:

1. ಅನಾರೋಗ್ಯ:
ಗರುಡ ಪುರಾಣದ ಪ್ರಕಾರ, ಒಬ್ಬ ವ್ಯಕ್ತಿಯು ಅನಾರೋಗ್ಯದಿಂದ ಬಳಲುತ್ತಿದ್ದರೆ, ಅವನು ತನ್ನ ಔಷಧಿಗಳನ್ನು ಅರ್ಧದಲ್ಲೇ ನಿಲ್ಲಿಸಬಾರದು. ಅನೇಕ ಬಾರಿ ಜನರು ಸಂಪೂರ್ಣವಾಗಿ ಗುಣವಾಗದೇ, ಔಷಧಿಗಳನ್ನು ತೆಗೆದುಕೊಳ್ಳುವುದನ್ನು ನಿಲ್ಲಿಸುತ್ತಾರೆ. ಇದರಿಂದಾಗಿ ಮುಂಬರುವ ಸಮಯದಲ್ಲಿ ರೋಗವು ಹೆಚ್ಚಾಗಬಹುದು. ಆದ್ದರಿಂದ ನಿಮ್ಮ ಆರೋಗ್ಯ ಸಾಮಾನ್ಯ ಸ್ಥಿತಿಯವರೆಗೆ ಬರುವವರೆಗೂ ಔಷಧಿಗಳನ್ನು ಮಧ್ಯದಲ್ಲಿ ಬಿಡಬಾರದು. ಗರುಡ ಪುರಾಣದಲ್ಲಿ ಹೇಳಿದ ಈ ಮಾತನ್ನು ನಿಧಾನವಾಗಿ ಕೂತು ಚಿಂತಿಸಿದರೆ ಇಂದಿಗೂ ಎಂದಿಗೂ ಸೂಕ್ತ ಎನಿಸುತ್ತದೆ. ಏಕೆಂದರೆ ಅನಾರೋಗ್ಯವನ್ನ ಹಾಗೆಯೇ ಬಿಡಲು ಸಾಧ್ಯವಿಲ್ಲ.

2. ಬೆಂಕಿ:
ಯಾವುದಾದರೂ ಸ್ಥಳದಲ್ಲಿ ಬೆಂಕಿ ಇದ್ದರೆ ಅದನ್ನು ಸಂಪೂರ್ಣವಾಗಿ ನಂದಿಸಬೇಕು ಎಂದು ಗರುಡ ಪುರಾಣ ಹೇಳುತ್ತದೆ. ಹೌದು, ಯಾವುದೇ ಜಾಗದಲ್ಲಿ ಬೆಂಕಿ ಕಂಡರೆ ಅಥವಾ ಬೆಂಕಿ ಉರಿಯುತ್ತಿದ್ದರೆ ಅದನ್ನು ಅಲ್ಲಿಗೇ ಬಿಟ್ಟು ಹೋಗಬೇಡಿ. ಸಂಪೂರ್ಣವಾಗಿ ನಂದಿಸಿ ಹೋಗಿ. ಅಲ್ಲಿ ಸಣ್ಣ ಕಿಡಿ ಉಳಿದಿದ್ದರೂ ಸಹ ಮತ್ತೆ ಬೆಂಕಿ ಹಿಡಿಯಬಹುದು. ಇದರಿಂದಾಗಿ ಜೀವ ಮತ್ತು ಆಸ್ತಿಪಾಸ್ತಿ ನಷ್ಟವಾಗುವ ಸಾಧ್ಯತೆಯಿದೆ. ಆದ್ದರಿಂದ ಬೆಂಕಿ ಎಲ್ಲೇ ಕಂಡರೂ, ಸಂಪೂರ್ಣವಾಗಿ ನಂದಿಸುವುದು ಒಳ್ಳೆಯದು.

3. ಸಾಲ:
ಗರುಡ ಪುರಾಣದ ಪ್ರಕಾರ, ನೀವು ಯಾರಿಂದಾದರೂ ಸಾಲ ಪಡೆದಿದ್ದರೆ, ಅದನ್ನು ಸಮಯಕ್ಕೆ ಸರಿಯಾಗಿ ಮರುಪಾವತಿಸಬೇಕು. ಸಾಲವನ್ನು ಸಮಯಕ್ಕೆ ಮರುಪಾವತಿಸದಿದ್ದರೆ, ಅದರ ಬಡ್ಡಿ ಹೆಚ್ಚಾಗಬಹುದು. ಅದು ನಿಮಗೆ ಮತ್ತೆ ಹೊರೆಯಾಗಬಹುದು. ಒಂದು ವೇಳೆ ನಿಮ್ಮ ಸಂಬಂಧಿಕರು ಅಥವಾ ಸ್ನೇಹಿತರ ಬಳಿ ಸಾಲ ತೆಗೆದುಕೊಂಡಿದ್ದರೆ, ಹಣದ ಕಾರಣದಿಂದಾಗಿ ಸಂಬಂಧದಲ್ಲಿ ಬಿರುಕು ಉಂಟಾಗಬಹುದು. ಆದ್ದರಿಂದ, ಪ್ರತಿಯೊಬ್ಬ ವ್ಯಕ್ತಿಯು ಸಾಲವನ್ನು ತ್ವರಿತವಾಗಿ ಮರುಪಾವತಿಸಲು ಪ್ರಯತ್ನಿಸಬೇಕು. ಇದು ಹಣ ಕೊಂಡು ನಿಮಗೂ, ಹಣ ನೀಡಿದ ಅವರಿಗೂ ಜೊತೆಗೆ ನಿಮ್ಮ ಗೌರವಕ್ಕೂ ಒಳ್ಳೆಯದು.



Click it and Unblock the Notifications