Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
Hanuman Jayanti puja vidhi :ಪೂಜಾವಿಧಾನ ಹಾಗೂ ಹನುಮನನ್ನು ಒಲಿಸಿಕೊಳ್ಳುವ ಮಾರ್ಗಗಳು ಇಲ್ಲಿದೆ
ಇದೇ ಬರುವ 27ರಂದು ಹನುಮಾನ್ ಜಯಂತಿ. ಅಂದರೆ ರಾಮಭಕ್ತ ಹನುಮ ಹುಟ್ಟಿದ ದಿನ. ಈ ದಿನ ಹನುಂತನನ್ನ ಪೂಜಿಸಿದರ ತಮ್ಮ ಕಷ್ಟಗಳೆಲ್ಲಾ ದೂರವಾಗುತ್ತವೆ ಎಂಬ ನಂಬಿಕೆ. ಹಾಗಾದರೆ ಈ ದಿನ ಭಗವಾನ್ ಹನುಮಂತನನ್ನು ಪೂಜಿಸುವುದು ಹೇಗೆ? ಪೂಜಾ ವಿಧಾನ ಯಾವದು? ಹನುಮನನ್ನು ಒಲಿಸಿಕೊಳ್ಳಲು ನಾವು ಮಾಡಬೇಕಾಗಿರುವುದು ಏನು ಎಂಬುದನ್ನು ಈ ಲೇಖನದಲ್ಲಿ ನೀಡಲಾಗಿದೆ.

ಹನುಮಾನ್ ಜಯಂತಿಯ ಪೂಜಾ ವಿಧಾನವನ್ನು ಈ ಕೆಳಗೆ ನೀಡಲಾಗಿದೆ:
ಚೈತ್ರಮಾಸದಲ್ಲಿ ಹನುಮನನ್ನು ಪೂಜಿಸಲು ಹಲವಾರು ಮಾರ್ಗಗಳಿವೆ. ಈ ದಿನದಂದು ಜನರು ದೇವಾಲಯಗಳಿಗೆ ಭೇಟಿ ನೀಡಿ ಧಾರ್ಮಿಕ ಅರ್ಪಣೆಗಳೊಂದಿಗೆ ಪೂಜಿಸುತ್ತಾರೆ. ದೇವಾಲಯದ ಅರ್ಚಕರಿ ಭಕ್ತರಿಗೆ ಹೂವು, ತಿಂಡಿ, ತೆಂಗಿನಕಾಯಿ ಮೊದಲಾದವುಗಳಗಳನ್ನು ಪ್ರಸಾದದ ರೂಪದಲ್ಲಿ ನೀಡುತ್ತಾರೆ.

ಹನುಮಾನ್ ಜಯಂತಿ ಪೂಜಾ ವಿಧಾನ:
- ಈ ದಿನದಂದು ಬೆಳಿಗ್ಗೆ ಬೇಗ ಏಳಬೇಕು.
- ಸ್ನಾನ ಮಾಡಿದ ನಂತರ ಹನುಮಾನ್ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಬಹುದು ಅಥವಾ ನೆಯಲ್ಲಿಯೂ ಪೂಜೆ ಮಾಡಬಹುದು.
- ಪೂಜೆಗೆ ನಿಂತಿರುವ ಹನುಮ ವಿಗ್ರಹ ಒಳಿತೆಂಬ ನಂಬಿಕೆಯಿದೆ.
- ಭಗವಂತನಿಗೆ ಕೆಂಪು ಸಿಂಧೂರವನ್ನು ಅರ್ಪಿಸಿ.
- ಈ ದಿನ ಹನುಮಾನ್ ಚಾಲಿಸಾ ಪಠಿಸಿ
- ಹನುಮನಿಗೆ ಹೂವುಗಳು, ಸಿಹಿತಿಂಡಿಗಳನ್ನು ಅರ್ಪಿಸಿ.
- ಹನುಮನನ್ನು ಸಂತೋಷಪಡಿಸಲು, ಮಲ್ಲಿಗೆ ಎಣ್ಣೆಯನ್ನು ಬಳಸಿ.
- ಪೂಜೆ ಮಾಡುವಾಗ ಹೆಚ್ಚು ಹೆಚ್ಚು ಕೆಂಪು ವಸ್ತುಗಳನ್ನು ಬಳಸಿ.
- ಹನುಮಾನ್ ಜಯಂತಿ ಉಪವಾಸ ಆಚರಿಸುವವರು ಕೆಲವು ನಿಯಮಗಳನ್ನು ಪಾಲಿಸಬೇಕು. ಬೆಳಿಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಎದ್ದ ನಂತರ, ಭಗವಾನ್ ಶ್ರೀ ರಾಮ್, ತಾಯಿ ಸೀತಾ ಮತ್ತು ಶ್ರೀ ಹನುಮಾನ್ ಅವರನ್ನು ಸ್ಮರಿಸಿ, ಉಪವಾಸದ ನಿರ್ಣಯವನ್ನು ತೆಗೆದುಕೊಳ್ಳಿ.

ಹನುಮನನ್ನು ಒಲಿಸಿಕೊಳ್ಳುವ ವಿಧಾನ ಇಲ್ಲಿದೆ:
- ಓಂ ಹನುಮಂತೆ ನಮಃ ಜಪಿಸುವುದರಿಂದ, ದೈವಿಕ ಮತ್ತು ದೈಹಿಕ ತೊಂದರೆಗಳಿಂದ ಮುಕ್ತಿ ಪಡೆಯುತ್ತಾರೆ.
-ಪೂಜೆಯಲ್ಲಿ ಪರಿಮಳಯುಕ್ತ ಎಣ್ಣೆ ಮತ್ತು ಸಿಂಧೂರ ಹನುಮನಿಗೆ ಪ್ರಿಯವಾದುದರಿಂದ ಅವುಗಳನ್ನು ಅರ್ಪಿಸುವುದರಿಂದ ಉತ್ತಮ ಲಾಭವಿದೆ.
- ರಾಮಚರಿತ ಮಾನಸ, ಹನುಮಾನ್ ಚಾಲೀಸಾ, ಹನುಮಾನ್ ಬಹುಕ್ ಇತ್ಯಾದಿಗಳನ್ನು ಓದಿ.
-ದೇವಾಲಯಕ್ಕೆ ಭೇಟಿ ನೀಡಿ, ತೆಂಗಿನಕಾಯಿ ಹಿಡಿದು ೭ ಪ್ರದಕ್ಷಿಣೆ ಹಾಕಿದ ಬಳಿಕ ತೆಂಗಿನಕಾಯಿ ಒಡೆದು ದೇವರಿಗೆ ಅರ್ಪಿಸಿ.
-ಸೂರ್ಯಾಸ್ತದ ನಂತರ, ಹನುಮಾನ್ ಮುಂದೆ ಸಾಸಿವೆ ಎಣ್ಣೆ ದೀಪವನ್ನು ಬೆಳಗಿಸಿ. ದೀಪವು ಜೇಡಿಮಣ್ಣಿನಿಂದ ಕೂಡಿದ್ದರೆ, ಅದು ಹೆಚ್ಚು ಶುಭವಾಗಿರುತ್ತದೆ. ದೀಪವನ್ನು ಬೆಳಗಿಸಿದ ನಂತರ, ಹನುಮಾನ್ ಚಾಲಿಸಾ ಪಠಿಸಿ.



Click it and Unblock the Notifications