Latest Updates
-
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ! -
ಮಕ್ಕಳಲ್ಲಿ ಹೆಚ್ಚುತ್ತಿದೆ ಮಧುಮೇಹದ ಭೀತಿ: ಇಂದೇ ಬದಲಾಯಿಸಿ ನಿಮ್ಮ ಅಡುಗೆಮನೆಯ ಈ ಅಭ್ಯಾಸಗಳನ್ನು! -
ಮೆಟ್ ಗಾಲಾ 2026: ಜಾಗತಿಕ ವೇದಿಕೆಯಲ್ಲಿ ಅಬ್ಬರಿಸಿದ ಭಾರತೀಯ ಸಂಸ್ಕೃತಿ, ಫ್ಯಾನ್ಸ್ ಫಿದಾ! -
ಬೇಸಿಗೆಯ ಬಿಸಿಲಿಗೆ ಸುಸ್ತಾದ್ರಾ? ಕೇವಲ 1000 ರೂಪಾಯಿಯಲ್ಲಿ ನಿಮ್ಮ ಮನೆಯನ್ನು ತಂಪಾಗಿಸಿ! -
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ! -
ದೆಹಲಿ-ಎನ್ಸಿಆರ್ನಲ್ಲಿ ಯೆಲ್ಲೋ ಅಲರ್ಟ್: ಮಳೆಯ ಅಬ್ಬರದ ನಡುವೆಯೂ ದಂಪತಿಗಳು ತಮ್ಮ ಬಾಂಧವ್ಯವನ್ನು ಗಟ್ಟಿಗೊಳಿಸುವುದು ಹೇಗೆ? -
ದೆಹಲಿ-ಎನ್ಸಿಆರ್ ನಿವಾಸಿಗಳೇ ಎಚ್ಚರ: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವಾಗಿದೆಯೇ? -
ಮುಂಬೈ-ಥಾಣೆಯಲ್ಲಿ 39 ಡಿಗ್ರಿ ಬಿಸಿಲ ಅಬ್ಬರ: ಯೆಲ್ಲೋ ಅಲರ್ಟ್ ನಡುವೆ ನಿಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? -
ಮೆಟ್ ಗಾಲಾ 2026: ಇಶಾ ಅಂಬಾನಿ-ಕರಣ್ ಜೋಹರ್ ಲುಕ್ ನೋಡಿ ಫಿದಾ ಆದ ಫ್ಯಾಷನ್ ಪ್ರಿಯರು! -
ಹವಾಮಾನ ಇಲಾಖೆ ಎಚ್ಚರಿಕೆ: ಇಂದಿನ ಮಳೆ-ಸಿಡಿಲಿನ ಆರ್ಭಟಕ್ಕೆ ನಿಮ್ಮ ದಿನಚರಿ ಬದಲಾಯಿಸಿಕೊಳ್ಳಿ!
Hanuman Jayanti puja vidhi :ಪೂಜಾವಿಧಾನ ಹಾಗೂ ಹನುಮನನ್ನು ಒಲಿಸಿಕೊಳ್ಳುವ ಮಾರ್ಗಗಳು ಇಲ್ಲಿದೆ
ಇದೇ ಬರುವ 27ರಂದು ಹನುಮಾನ್ ಜಯಂತಿ. ಅಂದರೆ ರಾಮಭಕ್ತ ಹನುಮ ಹುಟ್ಟಿದ ದಿನ. ಈ ದಿನ ಹನುಂತನನ್ನ ಪೂಜಿಸಿದರ ತಮ್ಮ ಕಷ್ಟಗಳೆಲ್ಲಾ ದೂರವಾಗುತ್ತವೆ ಎಂಬ ನಂಬಿಕೆ. ಹಾಗಾದರೆ ಈ ದಿನ ಭಗವಾನ್ ಹನುಮಂತನನ್ನು ಪೂಜಿಸುವುದು ಹೇಗೆ? ಪೂಜಾ ವಿಧಾನ ಯಾವದು? ಹನುಮನನ್ನು ಒಲಿಸಿಕೊಳ್ಳಲು ನಾವು ಮಾಡಬೇಕಾಗಿರುವುದು ಏನು ಎಂಬುದನ್ನು ಈ ಲೇಖನದಲ್ಲಿ ನೀಡಲಾಗಿದೆ.

ಹನುಮಾನ್ ಜಯಂತಿಯ ಪೂಜಾ ವಿಧಾನವನ್ನು ಈ ಕೆಳಗೆ ನೀಡಲಾಗಿದೆ:
ಚೈತ್ರಮಾಸದಲ್ಲಿ ಹನುಮನನ್ನು ಪೂಜಿಸಲು ಹಲವಾರು ಮಾರ್ಗಗಳಿವೆ. ಈ ದಿನದಂದು ಜನರು ದೇವಾಲಯಗಳಿಗೆ ಭೇಟಿ ನೀಡಿ ಧಾರ್ಮಿಕ ಅರ್ಪಣೆಗಳೊಂದಿಗೆ ಪೂಜಿಸುತ್ತಾರೆ. ದೇವಾಲಯದ ಅರ್ಚಕರಿ ಭಕ್ತರಿಗೆ ಹೂವು, ತಿಂಡಿ, ತೆಂಗಿನಕಾಯಿ ಮೊದಲಾದವುಗಳಗಳನ್ನು ಪ್ರಸಾದದ ರೂಪದಲ್ಲಿ ನೀಡುತ್ತಾರೆ.

ಹನುಮಾನ್ ಜಯಂತಿ ಪೂಜಾ ವಿಧಾನ:
- ಈ ದಿನದಂದು ಬೆಳಿಗ್ಗೆ ಬೇಗ ಏಳಬೇಕು.
- ಸ್ನಾನ ಮಾಡಿದ ನಂತರ ಹನುಮಾನ್ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಬಹುದು ಅಥವಾ ನೆಯಲ್ಲಿಯೂ ಪೂಜೆ ಮಾಡಬಹುದು.
- ಪೂಜೆಗೆ ನಿಂತಿರುವ ಹನುಮ ವಿಗ್ರಹ ಒಳಿತೆಂಬ ನಂಬಿಕೆಯಿದೆ.
- ಭಗವಂತನಿಗೆ ಕೆಂಪು ಸಿಂಧೂರವನ್ನು ಅರ್ಪಿಸಿ.
- ಈ ದಿನ ಹನುಮಾನ್ ಚಾಲಿಸಾ ಪಠಿಸಿ
- ಹನುಮನಿಗೆ ಹೂವುಗಳು, ಸಿಹಿತಿಂಡಿಗಳನ್ನು ಅರ್ಪಿಸಿ.
- ಹನುಮನನ್ನು ಸಂತೋಷಪಡಿಸಲು, ಮಲ್ಲಿಗೆ ಎಣ್ಣೆಯನ್ನು ಬಳಸಿ.
- ಪೂಜೆ ಮಾಡುವಾಗ ಹೆಚ್ಚು ಹೆಚ್ಚು ಕೆಂಪು ವಸ್ತುಗಳನ್ನು ಬಳಸಿ.
- ಹನುಮಾನ್ ಜಯಂತಿ ಉಪವಾಸ ಆಚರಿಸುವವರು ಕೆಲವು ನಿಯಮಗಳನ್ನು ಪಾಲಿಸಬೇಕು. ಬೆಳಿಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಎದ್ದ ನಂತರ, ಭಗವಾನ್ ಶ್ರೀ ರಾಮ್, ತಾಯಿ ಸೀತಾ ಮತ್ತು ಶ್ರೀ ಹನುಮಾನ್ ಅವರನ್ನು ಸ್ಮರಿಸಿ, ಉಪವಾಸದ ನಿರ್ಣಯವನ್ನು ತೆಗೆದುಕೊಳ್ಳಿ.

ಹನುಮನನ್ನು ಒಲಿಸಿಕೊಳ್ಳುವ ವಿಧಾನ ಇಲ್ಲಿದೆ:
- ಓಂ ಹನುಮಂತೆ ನಮಃ ಜಪಿಸುವುದರಿಂದ, ದೈವಿಕ ಮತ್ತು ದೈಹಿಕ ತೊಂದರೆಗಳಿಂದ ಮುಕ್ತಿ ಪಡೆಯುತ್ತಾರೆ.
-ಪೂಜೆಯಲ್ಲಿ ಪರಿಮಳಯುಕ್ತ ಎಣ್ಣೆ ಮತ್ತು ಸಿಂಧೂರ ಹನುಮನಿಗೆ ಪ್ರಿಯವಾದುದರಿಂದ ಅವುಗಳನ್ನು ಅರ್ಪಿಸುವುದರಿಂದ ಉತ್ತಮ ಲಾಭವಿದೆ.
- ರಾಮಚರಿತ ಮಾನಸ, ಹನುಮಾನ್ ಚಾಲೀಸಾ, ಹನುಮಾನ್ ಬಹುಕ್ ಇತ್ಯಾದಿಗಳನ್ನು ಓದಿ.
-ದೇವಾಲಯಕ್ಕೆ ಭೇಟಿ ನೀಡಿ, ತೆಂಗಿನಕಾಯಿ ಹಿಡಿದು ೭ ಪ್ರದಕ್ಷಿಣೆ ಹಾಕಿದ ಬಳಿಕ ತೆಂಗಿನಕಾಯಿ ಒಡೆದು ದೇವರಿಗೆ ಅರ್ಪಿಸಿ.
-ಸೂರ್ಯಾಸ್ತದ ನಂತರ, ಹನುಮಾನ್ ಮುಂದೆ ಸಾಸಿವೆ ಎಣ್ಣೆ ದೀಪವನ್ನು ಬೆಳಗಿಸಿ. ದೀಪವು ಜೇಡಿಮಣ್ಣಿನಿಂದ ಕೂಡಿದ್ದರೆ, ಅದು ಹೆಚ್ಚು ಶುಭವಾಗಿರುತ್ತದೆ. ದೀಪವನ್ನು ಬೆಳಗಿಸಿದ ನಂತರ, ಹನುಮಾನ್ ಚಾಲಿಸಾ ಪಠಿಸಿ.



Click it and Unblock the Notifications