Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
Hanuman Jayanti puja vidhi :ಪೂಜಾವಿಧಾನ ಹಾಗೂ ಹನುಮನನ್ನು ಒಲಿಸಿಕೊಳ್ಳುವ ಮಾರ್ಗಗಳು ಇಲ್ಲಿದೆ
ಇದೇ ಬರುವ 27ರಂದು ಹನುಮಾನ್ ಜಯಂತಿ. ಅಂದರೆ ರಾಮಭಕ್ತ ಹನುಮ ಹುಟ್ಟಿದ ದಿನ. ಈ ದಿನ ಹನುಂತನನ್ನ ಪೂಜಿಸಿದರ ತಮ್ಮ ಕಷ್ಟಗಳೆಲ್ಲಾ ದೂರವಾಗುತ್ತವೆ ಎಂಬ ನಂಬಿಕೆ. ಹಾಗಾದರೆ ಈ ದಿನ ಭಗವಾನ್ ಹನುಮಂತನನ್ನು ಪೂಜಿಸುವುದು ಹೇಗೆ? ಪೂಜಾ ವಿಧಾನ ಯಾವದು? ಹನುಮನನ್ನು ಒಲಿಸಿಕೊಳ್ಳಲು ನಾವು ಮಾಡಬೇಕಾಗಿರುವುದು ಏನು ಎಂಬುದನ್ನು ಈ ಲೇಖನದಲ್ಲಿ ನೀಡಲಾಗಿದೆ.

ಹನುಮಾನ್ ಜಯಂತಿಯ ಪೂಜಾ ವಿಧಾನವನ್ನು ಈ ಕೆಳಗೆ ನೀಡಲಾಗಿದೆ:
ಚೈತ್ರಮಾಸದಲ್ಲಿ ಹನುಮನನ್ನು ಪೂಜಿಸಲು ಹಲವಾರು ಮಾರ್ಗಗಳಿವೆ. ಈ ದಿನದಂದು ಜನರು ದೇವಾಲಯಗಳಿಗೆ ಭೇಟಿ ನೀಡಿ ಧಾರ್ಮಿಕ ಅರ್ಪಣೆಗಳೊಂದಿಗೆ ಪೂಜಿಸುತ್ತಾರೆ. ದೇವಾಲಯದ ಅರ್ಚಕರಿ ಭಕ್ತರಿಗೆ ಹೂವು, ತಿಂಡಿ, ತೆಂಗಿನಕಾಯಿ ಮೊದಲಾದವುಗಳಗಳನ್ನು ಪ್ರಸಾದದ ರೂಪದಲ್ಲಿ ನೀಡುತ್ತಾರೆ.

ಹನುಮಾನ್ ಜಯಂತಿ ಪೂಜಾ ವಿಧಾನ:
- ಈ ದಿನದಂದು ಬೆಳಿಗ್ಗೆ ಬೇಗ ಏಳಬೇಕು.
- ಸ್ನಾನ ಮಾಡಿದ ನಂತರ ಹನುಮಾನ್ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಬಹುದು ಅಥವಾ ನೆಯಲ್ಲಿಯೂ ಪೂಜೆ ಮಾಡಬಹುದು.
- ಪೂಜೆಗೆ ನಿಂತಿರುವ ಹನುಮ ವಿಗ್ರಹ ಒಳಿತೆಂಬ ನಂಬಿಕೆಯಿದೆ.
- ಭಗವಂತನಿಗೆ ಕೆಂಪು ಸಿಂಧೂರವನ್ನು ಅರ್ಪಿಸಿ.
- ಈ ದಿನ ಹನುಮಾನ್ ಚಾಲಿಸಾ ಪಠಿಸಿ
- ಹನುಮನಿಗೆ ಹೂವುಗಳು, ಸಿಹಿತಿಂಡಿಗಳನ್ನು ಅರ್ಪಿಸಿ.
- ಹನುಮನನ್ನು ಸಂತೋಷಪಡಿಸಲು, ಮಲ್ಲಿಗೆ ಎಣ್ಣೆಯನ್ನು ಬಳಸಿ.
- ಪೂಜೆ ಮಾಡುವಾಗ ಹೆಚ್ಚು ಹೆಚ್ಚು ಕೆಂಪು ವಸ್ತುಗಳನ್ನು ಬಳಸಿ.
- ಹನುಮಾನ್ ಜಯಂತಿ ಉಪವಾಸ ಆಚರಿಸುವವರು ಕೆಲವು ನಿಯಮಗಳನ್ನು ಪಾಲಿಸಬೇಕು. ಬೆಳಿಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಎದ್ದ ನಂತರ, ಭಗವಾನ್ ಶ್ರೀ ರಾಮ್, ತಾಯಿ ಸೀತಾ ಮತ್ತು ಶ್ರೀ ಹನುಮಾನ್ ಅವರನ್ನು ಸ್ಮರಿಸಿ, ಉಪವಾಸದ ನಿರ್ಣಯವನ್ನು ತೆಗೆದುಕೊಳ್ಳಿ.

ಹನುಮನನ್ನು ಒಲಿಸಿಕೊಳ್ಳುವ ವಿಧಾನ ಇಲ್ಲಿದೆ:
- ಓಂ ಹನುಮಂತೆ ನಮಃ ಜಪಿಸುವುದರಿಂದ, ದೈವಿಕ ಮತ್ತು ದೈಹಿಕ ತೊಂದರೆಗಳಿಂದ ಮುಕ್ತಿ ಪಡೆಯುತ್ತಾರೆ.
-ಪೂಜೆಯಲ್ಲಿ ಪರಿಮಳಯುಕ್ತ ಎಣ್ಣೆ ಮತ್ತು ಸಿಂಧೂರ ಹನುಮನಿಗೆ ಪ್ರಿಯವಾದುದರಿಂದ ಅವುಗಳನ್ನು ಅರ್ಪಿಸುವುದರಿಂದ ಉತ್ತಮ ಲಾಭವಿದೆ.
- ರಾಮಚರಿತ ಮಾನಸ, ಹನುಮಾನ್ ಚಾಲೀಸಾ, ಹನುಮಾನ್ ಬಹುಕ್ ಇತ್ಯಾದಿಗಳನ್ನು ಓದಿ.
-ದೇವಾಲಯಕ್ಕೆ ಭೇಟಿ ನೀಡಿ, ತೆಂಗಿನಕಾಯಿ ಹಿಡಿದು ೭ ಪ್ರದಕ್ಷಿಣೆ ಹಾಕಿದ ಬಳಿಕ ತೆಂಗಿನಕಾಯಿ ಒಡೆದು ದೇವರಿಗೆ ಅರ್ಪಿಸಿ.
-ಸೂರ್ಯಾಸ್ತದ ನಂತರ, ಹನುಮಾನ್ ಮುಂದೆ ಸಾಸಿವೆ ಎಣ್ಣೆ ದೀಪವನ್ನು ಬೆಳಗಿಸಿ. ದೀಪವು ಜೇಡಿಮಣ್ಣಿನಿಂದ ಕೂಡಿದ್ದರೆ, ಅದು ಹೆಚ್ಚು ಶುಭವಾಗಿರುತ್ತದೆ. ದೀಪವನ್ನು ಬೆಳಗಿಸಿದ ನಂತರ, ಹನುಮಾನ್ ಚಾಲಿಸಾ ಪಠಿಸಿ.



Click it and Unblock the Notifications











