Latest Updates
-
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು!
Hanuman Jayanti puja vidhi :ಪೂಜಾವಿಧಾನ ಹಾಗೂ ಹನುಮನನ್ನು ಒಲಿಸಿಕೊಳ್ಳುವ ಮಾರ್ಗಗಳು ಇಲ್ಲಿದೆ
ಇದೇ ಬರುವ 27ರಂದು ಹನುಮಾನ್ ಜಯಂತಿ. ಅಂದರೆ ರಾಮಭಕ್ತ ಹನುಮ ಹುಟ್ಟಿದ ದಿನ. ಈ ದಿನ ಹನುಂತನನ್ನ ಪೂಜಿಸಿದರ ತಮ್ಮ ಕಷ್ಟಗಳೆಲ್ಲಾ ದೂರವಾಗುತ್ತವೆ ಎಂಬ ನಂಬಿಕೆ. ಹಾಗಾದರೆ ಈ ದಿನ ಭಗವಾನ್ ಹನುಮಂತನನ್ನು ಪೂಜಿಸುವುದು ಹೇಗೆ? ಪೂಜಾ ವಿಧಾನ ಯಾವದು? ಹನುಮನನ್ನು ಒಲಿಸಿಕೊಳ್ಳಲು ನಾವು ಮಾಡಬೇಕಾಗಿರುವುದು ಏನು ಎಂಬುದನ್ನು ಈ ಲೇಖನದಲ್ಲಿ ನೀಡಲಾಗಿದೆ.

ಹನುಮಾನ್ ಜಯಂತಿಯ ಪೂಜಾ ವಿಧಾನವನ್ನು ಈ ಕೆಳಗೆ ನೀಡಲಾಗಿದೆ:
ಚೈತ್ರಮಾಸದಲ್ಲಿ ಹನುಮನನ್ನು ಪೂಜಿಸಲು ಹಲವಾರು ಮಾರ್ಗಗಳಿವೆ. ಈ ದಿನದಂದು ಜನರು ದೇವಾಲಯಗಳಿಗೆ ಭೇಟಿ ನೀಡಿ ಧಾರ್ಮಿಕ ಅರ್ಪಣೆಗಳೊಂದಿಗೆ ಪೂಜಿಸುತ್ತಾರೆ. ದೇವಾಲಯದ ಅರ್ಚಕರಿ ಭಕ್ತರಿಗೆ ಹೂವು, ತಿಂಡಿ, ತೆಂಗಿನಕಾಯಿ ಮೊದಲಾದವುಗಳಗಳನ್ನು ಪ್ರಸಾದದ ರೂಪದಲ್ಲಿ ನೀಡುತ್ತಾರೆ.

ಹನುಮಾನ್ ಜಯಂತಿ ಪೂಜಾ ವಿಧಾನ:
- ಈ ದಿನದಂದು ಬೆಳಿಗ್ಗೆ ಬೇಗ ಏಳಬೇಕು.
- ಸ್ನಾನ ಮಾಡಿದ ನಂತರ ಹನುಮಾನ್ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಬಹುದು ಅಥವಾ ನೆಯಲ್ಲಿಯೂ ಪೂಜೆ ಮಾಡಬಹುದು.
- ಪೂಜೆಗೆ ನಿಂತಿರುವ ಹನುಮ ವಿಗ್ರಹ ಒಳಿತೆಂಬ ನಂಬಿಕೆಯಿದೆ.
- ಭಗವಂತನಿಗೆ ಕೆಂಪು ಸಿಂಧೂರವನ್ನು ಅರ್ಪಿಸಿ.
- ಈ ದಿನ ಹನುಮಾನ್ ಚಾಲಿಸಾ ಪಠಿಸಿ
- ಹನುಮನಿಗೆ ಹೂವುಗಳು, ಸಿಹಿತಿಂಡಿಗಳನ್ನು ಅರ್ಪಿಸಿ.
- ಹನುಮನನ್ನು ಸಂತೋಷಪಡಿಸಲು, ಮಲ್ಲಿಗೆ ಎಣ್ಣೆಯನ್ನು ಬಳಸಿ.
- ಪೂಜೆ ಮಾಡುವಾಗ ಹೆಚ್ಚು ಹೆಚ್ಚು ಕೆಂಪು ವಸ್ತುಗಳನ್ನು ಬಳಸಿ.
- ಹನುಮಾನ್ ಜಯಂತಿ ಉಪವಾಸ ಆಚರಿಸುವವರು ಕೆಲವು ನಿಯಮಗಳನ್ನು ಪಾಲಿಸಬೇಕು. ಬೆಳಿಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಎದ್ದ ನಂತರ, ಭಗವಾನ್ ಶ್ರೀ ರಾಮ್, ತಾಯಿ ಸೀತಾ ಮತ್ತು ಶ್ರೀ ಹನುಮಾನ್ ಅವರನ್ನು ಸ್ಮರಿಸಿ, ಉಪವಾಸದ ನಿರ್ಣಯವನ್ನು ತೆಗೆದುಕೊಳ್ಳಿ.

ಹನುಮನನ್ನು ಒಲಿಸಿಕೊಳ್ಳುವ ವಿಧಾನ ಇಲ್ಲಿದೆ:
- ಓಂ ಹನುಮಂತೆ ನಮಃ ಜಪಿಸುವುದರಿಂದ, ದೈವಿಕ ಮತ್ತು ದೈಹಿಕ ತೊಂದರೆಗಳಿಂದ ಮುಕ್ತಿ ಪಡೆಯುತ್ತಾರೆ.
-ಪೂಜೆಯಲ್ಲಿ ಪರಿಮಳಯುಕ್ತ ಎಣ್ಣೆ ಮತ್ತು ಸಿಂಧೂರ ಹನುಮನಿಗೆ ಪ್ರಿಯವಾದುದರಿಂದ ಅವುಗಳನ್ನು ಅರ್ಪಿಸುವುದರಿಂದ ಉತ್ತಮ ಲಾಭವಿದೆ.
- ರಾಮಚರಿತ ಮಾನಸ, ಹನುಮಾನ್ ಚಾಲೀಸಾ, ಹನುಮಾನ್ ಬಹುಕ್ ಇತ್ಯಾದಿಗಳನ್ನು ಓದಿ.
-ದೇವಾಲಯಕ್ಕೆ ಭೇಟಿ ನೀಡಿ, ತೆಂಗಿನಕಾಯಿ ಹಿಡಿದು ೭ ಪ್ರದಕ್ಷಿಣೆ ಹಾಕಿದ ಬಳಿಕ ತೆಂಗಿನಕಾಯಿ ಒಡೆದು ದೇವರಿಗೆ ಅರ್ಪಿಸಿ.
-ಸೂರ್ಯಾಸ್ತದ ನಂತರ, ಹನುಮಾನ್ ಮುಂದೆ ಸಾಸಿವೆ ಎಣ್ಣೆ ದೀಪವನ್ನು ಬೆಳಗಿಸಿ. ದೀಪವು ಜೇಡಿಮಣ್ಣಿನಿಂದ ಕೂಡಿದ್ದರೆ, ಅದು ಹೆಚ್ಚು ಶುಭವಾಗಿರುತ್ತದೆ. ದೀಪವನ್ನು ಬೆಳಗಿಸಿದ ನಂತರ, ಹನುಮಾನ್ ಚಾಲಿಸಾ ಪಠಿಸಿ.



Click it and Unblock the Notifications