Latest Updates
-
ಮಳೆಗಾಲದ ಪ್ರಯಾಣ: ಟ್ರಾಫಿಕ್ ಮತ್ತು ಕ್ಯಾಬ್ ಸಮಸ್ಯೆಗಳ ನಡುವೆ ದಂಪತಿಗಳು ನೆಮ್ಮದಿ ಕಾಪಾಡಿಕೊಳ್ಳುವುದು ಹೇಗೆ? -
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ಇಂದಿನ ಪರಿಷ್ಕೃತ ಪಟ್ಟಿ ಮತ್ತು ನಿಮ್ಮ ಪ್ರಕರಣದ ಸ್ಥಿತಿ ಪರಿಶೀಲಿಸಿ -
ಓಣಂ ಹಬ್ಬ: ಮಳೆಗೆ ಹಾಳಾಗದ, ₹500ರೊಳಗೆ ಸುಂದರ ಪೂಕಳಂ ಬಿಡಿಸುವ ಸರಳ ಟಿಪ್ಸ್! -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಜಾಗ ಉಳಿಸುವ ಸುಂದರ ಪೂಕಳಂ ಐಡಿಯಾಗಳು -
ಓಣಂ ಸದ್ಯದ ಸಂಭ್ರಮ: ಡಯಾಬಿಟಿಸ್ ಇದ್ದರೂ ಆರೋಗ್ಯಕರವಾಗಿ ಸವಿಯುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ಮೊಟ್ಟೆ ದರ ಏರಿಕೆ ಚಿಂತೆಯೇ? ಕಡಿಮೆ ಬಜೆಟ್ನಲ್ಲಿ ಪ್ರೋಟೀನ್ ಪಡೆಯಲು ಈ ಸ್ಮಾರ್ಟ್ ಟಿಪ್ಸ್ ಫಾಲೋ ಮಾಡಿ -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ಕುಟುಂಬದೊಂದಿಗೆ ಸಂಭ್ರಮಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಪ್ಲಾನ್! -
ವರ್ಕ್ ಫ್ರಮ್ ಹೋಮ್ ಜೊತೆ ಭಾರತ-ಶ್ರೀಲಂಕಾ ಟೆಸ್ಟ್ ಮ್ಯಾಚ್: ಲೈವ್ ಸ್ಕೋರ್ ಮತ್ತು ಸ್ಮಾರ್ಟ್ ಟಿಪ್ಸ್ ಇಲ್ಲಿದೆ! -
ದೆಹಲಿ ಟಫ್ಮನ್ ಹಾಫ್ ಮ್ಯಾರಥಾನ್: ತೇವಾಂಶದ ನಡುವೆಯೂ ಓಟದಲ್ಲಿ ಮಿಂಚಲು ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರು ರನ್ನಿಂಗ್ ಡೇ: ಮಳೆಗಾಲದಲ್ಲಿ ಓಡುವಾಗ ಈ ತಪ್ಪುಗಳನ್ನು ಮಾಡಬೇಡಿ, ಸುರಕ್ಷಿತವಾಗಿರಿ!
Hanuman Jayanti puja vidhi :ಪೂಜಾವಿಧಾನ ಹಾಗೂ ಹನುಮನನ್ನು ಒಲಿಸಿಕೊಳ್ಳುವ ಮಾರ್ಗಗಳು ಇಲ್ಲಿದೆ
ಇದೇ ಬರುವ 27ರಂದು ಹನುಮಾನ್ ಜಯಂತಿ. ಅಂದರೆ ರಾಮಭಕ್ತ ಹನುಮ ಹುಟ್ಟಿದ ದಿನ. ಈ ದಿನ ಹನುಂತನನ್ನ ಪೂಜಿಸಿದರ ತಮ್ಮ ಕಷ್ಟಗಳೆಲ್ಲಾ ದೂರವಾಗುತ್ತವೆ ಎಂಬ ನಂಬಿಕೆ. ಹಾಗಾದರೆ ಈ ದಿನ ಭಗವಾನ್ ಹನುಮಂತನನ್ನು ಪೂಜಿಸುವುದು ಹೇಗೆ? ಪೂಜಾ ವಿಧಾನ ಯಾವದು? ಹನುಮನನ್ನು ಒಲಿಸಿಕೊಳ್ಳಲು ನಾವು ಮಾಡಬೇಕಾಗಿರುವುದು ಏನು ಎಂಬುದನ್ನು ಈ ಲೇಖನದಲ್ಲಿ ನೀಡಲಾಗಿದೆ.

ಹನುಮಾನ್ ಜಯಂತಿಯ ಪೂಜಾ ವಿಧಾನವನ್ನು ಈ ಕೆಳಗೆ ನೀಡಲಾಗಿದೆ:
ಚೈತ್ರಮಾಸದಲ್ಲಿ ಹನುಮನನ್ನು ಪೂಜಿಸಲು ಹಲವಾರು ಮಾರ್ಗಗಳಿವೆ. ಈ ದಿನದಂದು ಜನರು ದೇವಾಲಯಗಳಿಗೆ ಭೇಟಿ ನೀಡಿ ಧಾರ್ಮಿಕ ಅರ್ಪಣೆಗಳೊಂದಿಗೆ ಪೂಜಿಸುತ್ತಾರೆ. ದೇವಾಲಯದ ಅರ್ಚಕರಿ ಭಕ್ತರಿಗೆ ಹೂವು, ತಿಂಡಿ, ತೆಂಗಿನಕಾಯಿ ಮೊದಲಾದವುಗಳಗಳನ್ನು ಪ್ರಸಾದದ ರೂಪದಲ್ಲಿ ನೀಡುತ್ತಾರೆ.

ಹನುಮಾನ್ ಜಯಂತಿ ಪೂಜಾ ವಿಧಾನ:
- ಈ ದಿನದಂದು ಬೆಳಿಗ್ಗೆ ಬೇಗ ಏಳಬೇಕು.
- ಸ್ನಾನ ಮಾಡಿದ ನಂತರ ಹನುಮಾನ್ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಬಹುದು ಅಥವಾ ನೆಯಲ್ಲಿಯೂ ಪೂಜೆ ಮಾಡಬಹುದು.
- ಪೂಜೆಗೆ ನಿಂತಿರುವ ಹನುಮ ವಿಗ್ರಹ ಒಳಿತೆಂಬ ನಂಬಿಕೆಯಿದೆ.
- ಭಗವಂತನಿಗೆ ಕೆಂಪು ಸಿಂಧೂರವನ್ನು ಅರ್ಪಿಸಿ.
- ಈ ದಿನ ಹನುಮಾನ್ ಚಾಲಿಸಾ ಪಠಿಸಿ
- ಹನುಮನಿಗೆ ಹೂವುಗಳು, ಸಿಹಿತಿಂಡಿಗಳನ್ನು ಅರ್ಪಿಸಿ.
- ಹನುಮನನ್ನು ಸಂತೋಷಪಡಿಸಲು, ಮಲ್ಲಿಗೆ ಎಣ್ಣೆಯನ್ನು ಬಳಸಿ.
- ಪೂಜೆ ಮಾಡುವಾಗ ಹೆಚ್ಚು ಹೆಚ್ಚು ಕೆಂಪು ವಸ್ತುಗಳನ್ನು ಬಳಸಿ.
- ಹನುಮಾನ್ ಜಯಂತಿ ಉಪವಾಸ ಆಚರಿಸುವವರು ಕೆಲವು ನಿಯಮಗಳನ್ನು ಪಾಲಿಸಬೇಕು. ಬೆಳಿಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಎದ್ದ ನಂತರ, ಭಗವಾನ್ ಶ್ರೀ ರಾಮ್, ತಾಯಿ ಸೀತಾ ಮತ್ತು ಶ್ರೀ ಹನುಮಾನ್ ಅವರನ್ನು ಸ್ಮರಿಸಿ, ಉಪವಾಸದ ನಿರ್ಣಯವನ್ನು ತೆಗೆದುಕೊಳ್ಳಿ.

ಹನುಮನನ್ನು ಒಲಿಸಿಕೊಳ್ಳುವ ವಿಧಾನ ಇಲ್ಲಿದೆ:
- ಓಂ ಹನುಮಂತೆ ನಮಃ ಜಪಿಸುವುದರಿಂದ, ದೈವಿಕ ಮತ್ತು ದೈಹಿಕ ತೊಂದರೆಗಳಿಂದ ಮುಕ್ತಿ ಪಡೆಯುತ್ತಾರೆ.
-ಪೂಜೆಯಲ್ಲಿ ಪರಿಮಳಯುಕ್ತ ಎಣ್ಣೆ ಮತ್ತು ಸಿಂಧೂರ ಹನುಮನಿಗೆ ಪ್ರಿಯವಾದುದರಿಂದ ಅವುಗಳನ್ನು ಅರ್ಪಿಸುವುದರಿಂದ ಉತ್ತಮ ಲಾಭವಿದೆ.
- ರಾಮಚರಿತ ಮಾನಸ, ಹನುಮಾನ್ ಚಾಲೀಸಾ, ಹನುಮಾನ್ ಬಹುಕ್ ಇತ್ಯಾದಿಗಳನ್ನು ಓದಿ.
-ದೇವಾಲಯಕ್ಕೆ ಭೇಟಿ ನೀಡಿ, ತೆಂಗಿನಕಾಯಿ ಹಿಡಿದು ೭ ಪ್ರದಕ್ಷಿಣೆ ಹಾಕಿದ ಬಳಿಕ ತೆಂಗಿನಕಾಯಿ ಒಡೆದು ದೇವರಿಗೆ ಅರ್ಪಿಸಿ.
-ಸೂರ್ಯಾಸ್ತದ ನಂತರ, ಹನುಮಾನ್ ಮುಂದೆ ಸಾಸಿವೆ ಎಣ್ಣೆ ದೀಪವನ್ನು ಬೆಳಗಿಸಿ. ದೀಪವು ಜೇಡಿಮಣ್ಣಿನಿಂದ ಕೂಡಿದ್ದರೆ, ಅದು ಹೆಚ್ಚು ಶುಭವಾಗಿರುತ್ತದೆ. ದೀಪವನ್ನು ಬೆಳಗಿಸಿದ ನಂತರ, ಹನುಮಾನ್ ಚಾಲಿಸಾ ಪಠಿಸಿ.



Click it and Unblock the Notifications