Latest Updates
-
ಬಿಸಿಲಿನಲ್ಲಿ ಮದುವೆ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ 5 ಬದಲಾವಣೆಗಳನ್ನು ಮರೆಯಬೇಡಿ! -
ದೆಹಲಿ ಧೂಳಿನ ಬಿರುಗಾಳಿ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 500 ರೂಪಾಯಿಯ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ಈ ಸರಳ ಆಹಾರ ಬದಲಾವಣೆ ನಿಮ್ಮನ್ನು ಹೀಟ್ಸ್ಟ್ರೋಕ್ನಿಂದ ರಕ್ಷಿಸುತ್ತದೆ! -
ರೆಡ್ ಕಾರ್ಪೆಟ್ನಿಂದ ನಿಮ್ಮ ವಾರ್ಡ್ರೋಬ್ಗೆ: ಕಾನ್ 2026ರ ಈ ಫ್ಯಾಷನ್ ಟ್ರೆಂಡ್ಸ್ ಈಗ ಸಿಕ್ಕಾಪಟ್ಟೆ ವೈರಲ್! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲ ಬೇಗೆಯಲ್ಲಿ ಮದುವೆ ಸಂಭ್ರಮ ಹಾಳಾಗದಿರಲಿ: ಅತಿಥಿಗಳ ಆರೋಗ್ಯ ಕಾಪಾಡಲು ಇಲ್ಲಿವೆ ಸೀಕ್ರೆಟ್ ಟಿಪ್ಸ್! -
ಬಿಸಿಗಾಳಿಯ ಆರ್ಭಟ: ಮನೆಯನ್ನು ತಂಪಾಗಿಡಲು ಮತ್ತು ಆರೋಗ್ಯ ಕಾಪಾಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ರೆಡ್ ಅಲರ್ಟ್: ಆಯುಷ್ ಸಚಿವಾಲಯದ ಈ ಸಿಂಪಲ್ ಟಿಪ್ಸ್ ಪಾಲಿಸಿದರೆ ಸಾಕು, ದೇಹ ತಂಪಾಗಿರುತ್ತೆ! -
ಬಿಸಿಲಿನ ಬೇಗೆಯಿಂದ ತತ್ತರಿಸಿದ ಕರ್ನಾಟಕ: ಮನೆಯಲ್ಲೇ ತಂಪಾಗಿರಲು ನೀವು ಮಾಡಬೇಕಾದ ಆ 5 ಬದಲಾವಣೆಗಳೇನು? -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ!
Hanuman Jayanti puja vidhi :ಪೂಜಾವಿಧಾನ ಹಾಗೂ ಹನುಮನನ್ನು ಒಲಿಸಿಕೊಳ್ಳುವ ಮಾರ್ಗಗಳು ಇಲ್ಲಿದೆ
ಇದೇ ಬರುವ 27ರಂದು ಹನುಮಾನ್ ಜಯಂತಿ. ಅಂದರೆ ರಾಮಭಕ್ತ ಹನುಮ ಹುಟ್ಟಿದ ದಿನ. ಈ ದಿನ ಹನುಂತನನ್ನ ಪೂಜಿಸಿದರ ತಮ್ಮ ಕಷ್ಟಗಳೆಲ್ಲಾ ದೂರವಾಗುತ್ತವೆ ಎಂಬ ನಂಬಿಕೆ. ಹಾಗಾದರೆ ಈ ದಿನ ಭಗವಾನ್ ಹನುಮಂತನನ್ನು ಪೂಜಿಸುವುದು ಹೇಗೆ? ಪೂಜಾ ವಿಧಾನ ಯಾವದು? ಹನುಮನನ್ನು ಒಲಿಸಿಕೊಳ್ಳಲು ನಾವು ಮಾಡಬೇಕಾಗಿರುವುದು ಏನು ಎಂಬುದನ್ನು ಈ ಲೇಖನದಲ್ಲಿ ನೀಡಲಾಗಿದೆ.

ಹನುಮಾನ್ ಜಯಂತಿಯ ಪೂಜಾ ವಿಧಾನವನ್ನು ಈ ಕೆಳಗೆ ನೀಡಲಾಗಿದೆ:
ಚೈತ್ರಮಾಸದಲ್ಲಿ ಹನುಮನನ್ನು ಪೂಜಿಸಲು ಹಲವಾರು ಮಾರ್ಗಗಳಿವೆ. ಈ ದಿನದಂದು ಜನರು ದೇವಾಲಯಗಳಿಗೆ ಭೇಟಿ ನೀಡಿ ಧಾರ್ಮಿಕ ಅರ್ಪಣೆಗಳೊಂದಿಗೆ ಪೂಜಿಸುತ್ತಾರೆ. ದೇವಾಲಯದ ಅರ್ಚಕರಿ ಭಕ್ತರಿಗೆ ಹೂವು, ತಿಂಡಿ, ತೆಂಗಿನಕಾಯಿ ಮೊದಲಾದವುಗಳಗಳನ್ನು ಪ್ರಸಾದದ ರೂಪದಲ್ಲಿ ನೀಡುತ್ತಾರೆ.

ಹನುಮಾನ್ ಜಯಂತಿ ಪೂಜಾ ವಿಧಾನ:
- ಈ ದಿನದಂದು ಬೆಳಿಗ್ಗೆ ಬೇಗ ಏಳಬೇಕು.
- ಸ್ನಾನ ಮಾಡಿದ ನಂತರ ಹನುಮಾನ್ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಬಹುದು ಅಥವಾ ನೆಯಲ್ಲಿಯೂ ಪೂಜೆ ಮಾಡಬಹುದು.
- ಪೂಜೆಗೆ ನಿಂತಿರುವ ಹನುಮ ವಿಗ್ರಹ ಒಳಿತೆಂಬ ನಂಬಿಕೆಯಿದೆ.
- ಭಗವಂತನಿಗೆ ಕೆಂಪು ಸಿಂಧೂರವನ್ನು ಅರ್ಪಿಸಿ.
- ಈ ದಿನ ಹನುಮಾನ್ ಚಾಲಿಸಾ ಪಠಿಸಿ
- ಹನುಮನಿಗೆ ಹೂವುಗಳು, ಸಿಹಿತಿಂಡಿಗಳನ್ನು ಅರ್ಪಿಸಿ.
- ಹನುಮನನ್ನು ಸಂತೋಷಪಡಿಸಲು, ಮಲ್ಲಿಗೆ ಎಣ್ಣೆಯನ್ನು ಬಳಸಿ.
- ಪೂಜೆ ಮಾಡುವಾಗ ಹೆಚ್ಚು ಹೆಚ್ಚು ಕೆಂಪು ವಸ್ತುಗಳನ್ನು ಬಳಸಿ.
- ಹನುಮಾನ್ ಜಯಂತಿ ಉಪವಾಸ ಆಚರಿಸುವವರು ಕೆಲವು ನಿಯಮಗಳನ್ನು ಪಾಲಿಸಬೇಕು. ಬೆಳಿಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಎದ್ದ ನಂತರ, ಭಗವಾನ್ ಶ್ರೀ ರಾಮ್, ತಾಯಿ ಸೀತಾ ಮತ್ತು ಶ್ರೀ ಹನುಮಾನ್ ಅವರನ್ನು ಸ್ಮರಿಸಿ, ಉಪವಾಸದ ನಿರ್ಣಯವನ್ನು ತೆಗೆದುಕೊಳ್ಳಿ.

ಹನುಮನನ್ನು ಒಲಿಸಿಕೊಳ್ಳುವ ವಿಧಾನ ಇಲ್ಲಿದೆ:
- ಓಂ ಹನುಮಂತೆ ನಮಃ ಜಪಿಸುವುದರಿಂದ, ದೈವಿಕ ಮತ್ತು ದೈಹಿಕ ತೊಂದರೆಗಳಿಂದ ಮುಕ್ತಿ ಪಡೆಯುತ್ತಾರೆ.
-ಪೂಜೆಯಲ್ಲಿ ಪರಿಮಳಯುಕ್ತ ಎಣ್ಣೆ ಮತ್ತು ಸಿಂಧೂರ ಹನುಮನಿಗೆ ಪ್ರಿಯವಾದುದರಿಂದ ಅವುಗಳನ್ನು ಅರ್ಪಿಸುವುದರಿಂದ ಉತ್ತಮ ಲಾಭವಿದೆ.
- ರಾಮಚರಿತ ಮಾನಸ, ಹನುಮಾನ್ ಚಾಲೀಸಾ, ಹನುಮಾನ್ ಬಹುಕ್ ಇತ್ಯಾದಿಗಳನ್ನು ಓದಿ.
-ದೇವಾಲಯಕ್ಕೆ ಭೇಟಿ ನೀಡಿ, ತೆಂಗಿನಕಾಯಿ ಹಿಡಿದು ೭ ಪ್ರದಕ್ಷಿಣೆ ಹಾಕಿದ ಬಳಿಕ ತೆಂಗಿನಕಾಯಿ ಒಡೆದು ದೇವರಿಗೆ ಅರ್ಪಿಸಿ.
-ಸೂರ್ಯಾಸ್ತದ ನಂತರ, ಹನುಮಾನ್ ಮುಂದೆ ಸಾಸಿವೆ ಎಣ್ಣೆ ದೀಪವನ್ನು ಬೆಳಗಿಸಿ. ದೀಪವು ಜೇಡಿಮಣ್ಣಿನಿಂದ ಕೂಡಿದ್ದರೆ, ಅದು ಹೆಚ್ಚು ಶುಭವಾಗಿರುತ್ತದೆ. ದೀಪವನ್ನು ಬೆಳಗಿಸಿದ ನಂತರ, ಹನುಮಾನ್ ಚಾಲಿಸಾ ಪಠಿಸಿ.



Click it and Unblock the Notifications