Just In
- 1 hr ago ವಾರ ಭವಿಷ್ಯ (ಏಪ್ರಿಲ್20-27) : ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- 4 hrs ago ಗುರು ಸಂಚಾರ 2024: ಕನ್ಯಾ ರಾಶಿಯಲ್ಲಿ 12 ತಿಂಗಳು ಗುರುವಿನ ಪ್ರಭಾವ ಹೇಗಿರಲಿದೆ?
- 13 hrs ago ವಾರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಈ 7 ದಿನಗಳು ನಿಮಗೆ ಹೇಗಿರಲಿದೆ?
- 14 hrs ago ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
Don't Miss
- News ನೇಹಾ ಕೊಲೆಗೆ ಸಿಎಂ ತೀವ್ರ ಖಂಡನೆ: ಕೊಲೆಗಾರನಿಗೆ ಶಿಕ್ಷೆ ಕುರಿತು ಸಿದ್ದರಾಮಯ್ಯ ಹೇಳಿದ್ದೇನು?
- Automobiles Mahindra: ಫ್ಯಾಮಿಲಿ ಕಾರು ಮಹೀಂದ್ರಾ ಎಕ್ಸ್ಯುವಿ700 ಖರೀದಿಸುವವರಿಗೆ ಸಿಹಿಸುದ್ದಿ.. ಇನ್ನೂ ತಿಂಗಳೇ ಸಾಕು!
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Movies ಹಳೇ ಟ್ವೀಟ್ ಹಾಕಿ ರಕ್ಷಿತ್ ಶೆಟ್ಟಿ ಹೇಳಿದ್ದೇನು? 'ರಿಚರ್ಡ್ ಆಂಟನಿ' ಕಥೆ ಏನಾಯ್ತು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
Hanuman Jayanti puja vidhi :ಪೂಜಾವಿಧಾನ ಹಾಗೂ ಹನುಮನನ್ನು ಒಲಿಸಿಕೊಳ್ಳುವ ಮಾರ್ಗಗಳು ಇಲ್ಲಿದೆ
ಇದೇ ಬರುವ 27ರಂದು ಹನುಮಾನ್ ಜಯಂತಿ. ಅಂದರೆ ರಾಮಭಕ್ತ ಹನುಮ ಹುಟ್ಟಿದ ದಿನ. ಈ ದಿನ ಹನುಂತನನ್ನ ಪೂಜಿಸಿದರ ತಮ್ಮ ಕಷ್ಟಗಳೆಲ್ಲಾ ದೂರವಾಗುತ್ತವೆ ಎಂಬ ನಂಬಿಕೆ. ಹಾಗಾದರೆ ಈ ದಿನ ಭಗವಾನ್ ಹನುಮಂತನನ್ನು ಪೂಜಿಸುವುದು ಹೇಗೆ? ಪೂಜಾ ವಿಧಾನ ಯಾವದು? ಹನುಮನನ್ನು ಒಲಿಸಿಕೊಳ್ಳಲು ನಾವು ಮಾಡಬೇಕಾಗಿರುವುದು ಏನು ಎಂಬುದನ್ನು ಈ ಲೇಖನದಲ್ಲಿ ನೀಡಲಾಗಿದೆ.
ಹನುಮಾನ್ ಜಯಂತಿಯ ಪೂಜಾ ವಿಧಾನವನ್ನು ಈ ಕೆಳಗೆ ನೀಡಲಾಗಿದೆ:
ಚೈತ್ರಮಾಸದಲ್ಲಿ ಹನುಮನನ್ನು ಪೂಜಿಸಲು ಹಲವಾರು ಮಾರ್ಗಗಳಿವೆ. ಈ ದಿನದಂದು ಜನರು ದೇವಾಲಯಗಳಿಗೆ ಭೇಟಿ ನೀಡಿ ಧಾರ್ಮಿಕ ಅರ್ಪಣೆಗಳೊಂದಿಗೆ ಪೂಜಿಸುತ್ತಾರೆ. ದೇವಾಲಯದ ಅರ್ಚಕರಿ ಭಕ್ತರಿಗೆ ಹೂವು, ತಿಂಡಿ, ತೆಂಗಿನಕಾಯಿ ಮೊದಲಾದವುಗಳಗಳನ್ನು ಪ್ರಸಾದದ ರೂಪದಲ್ಲಿ ನೀಡುತ್ತಾರೆ.
ಹನುಮಾನ್ ಜಯಂತಿ ಪೂಜಾ ವಿಧಾನ:
- ಈ ದಿನದಂದು ಬೆಳಿಗ್ಗೆ ಬೇಗ ಏಳಬೇಕು.
- ಸ್ನಾನ ಮಾಡಿದ ನಂತರ ಹನುಮಾನ್ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಬಹುದು ಅಥವಾ ನೆಯಲ್ಲಿಯೂ ಪೂಜೆ ಮಾಡಬಹುದು.
- ಪೂಜೆಗೆ ನಿಂತಿರುವ ಹನುಮ ವಿಗ್ರಹ ಒಳಿತೆಂಬ ನಂಬಿಕೆಯಿದೆ.
- ಭಗವಂತನಿಗೆ ಕೆಂಪು ಸಿಂಧೂರವನ್ನು ಅರ್ಪಿಸಿ.
- ಈ ದಿನ ಹನುಮಾನ್ ಚಾಲಿಸಾ ಪಠಿಸಿ
- ಹನುಮನಿಗೆ ಹೂವುಗಳು, ಸಿಹಿತಿಂಡಿಗಳನ್ನು ಅರ್ಪಿಸಿ.
- ಹನುಮನನ್ನು ಸಂತೋಷಪಡಿಸಲು, ಮಲ್ಲಿಗೆ ಎಣ್ಣೆಯನ್ನು ಬಳಸಿ.
- ಪೂಜೆ ಮಾಡುವಾಗ ಹೆಚ್ಚು ಹೆಚ್ಚು ಕೆಂಪು ವಸ್ತುಗಳನ್ನು ಬಳಸಿ.
- ಹನುಮಾನ್ ಜಯಂತಿ ಉಪವಾಸ ಆಚರಿಸುವವರು ಕೆಲವು ನಿಯಮಗಳನ್ನು ಪಾಲಿಸಬೇಕು. ಬೆಳಿಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಎದ್ದ ನಂತರ, ಭಗವಾನ್ ಶ್ರೀ ರಾಮ್, ತಾಯಿ ಸೀತಾ ಮತ್ತು ಶ್ರೀ ಹನುಮಾನ್ ಅವರನ್ನು ಸ್ಮರಿಸಿ, ಉಪವಾಸದ ನಿರ್ಣಯವನ್ನು ತೆಗೆದುಕೊಳ್ಳಿ.
ಹನುಮನನ್ನು ಒಲಿಸಿಕೊಳ್ಳುವ ವಿಧಾನ ಇಲ್ಲಿದೆ:
- ಓಂ ಹನುಮಂತೆ ನಮಃ ಜಪಿಸುವುದರಿಂದ, ದೈವಿಕ ಮತ್ತು ದೈಹಿಕ ತೊಂದರೆಗಳಿಂದ ಮುಕ್ತಿ ಪಡೆಯುತ್ತಾರೆ.
-ಪೂಜೆಯಲ್ಲಿ ಪರಿಮಳಯುಕ್ತ ಎಣ್ಣೆ ಮತ್ತು ಸಿಂಧೂರ ಹನುಮನಿಗೆ ಪ್ರಿಯವಾದುದರಿಂದ ಅವುಗಳನ್ನು ಅರ್ಪಿಸುವುದರಿಂದ ಉತ್ತಮ ಲಾಭವಿದೆ.
- ರಾಮಚರಿತ ಮಾನಸ, ಹನುಮಾನ್ ಚಾಲೀಸಾ, ಹನುಮಾನ್ ಬಹುಕ್ ಇತ್ಯಾದಿಗಳನ್ನು ಓದಿ.
-ದೇವಾಲಯಕ್ಕೆ ಭೇಟಿ ನೀಡಿ, ತೆಂಗಿನಕಾಯಿ ಹಿಡಿದು ೭ ಪ್ರದಕ್ಷಿಣೆ ಹಾಕಿದ ಬಳಿಕ ತೆಂಗಿನಕಾಯಿ ಒಡೆದು ದೇವರಿಗೆ ಅರ್ಪಿಸಿ.
-ಸೂರ್ಯಾಸ್ತದ ನಂತರ, ಹನುಮಾನ್ ಮುಂದೆ ಸಾಸಿವೆ ಎಣ್ಣೆ ದೀಪವನ್ನು ಬೆಳಗಿಸಿ. ದೀಪವು ಜೇಡಿಮಣ್ಣಿನಿಂದ ಕೂಡಿದ್ದರೆ, ಅದು ಹೆಚ್ಚು ಶುಭವಾಗಿರುತ್ತದೆ. ದೀಪವನ್ನು ಬೆಳಗಿಸಿದ ನಂತರ, ಹನುಮಾನ್ ಚಾಲಿಸಾ ಪಠಿಸಿ.