Just In
- 55 min ago ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- 1 hr ago ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
- 3 hrs ago ದಿನ ಭವಿಷ್ಯ ಏಪ್ರಿಲ್ 20: ಶನಿವಾರದ ಈ ಶುಭ ದಿನ ನಿಮ್ಮ ರಾಶಿಗೆ ಹೇಗಿರಲಿದೆ?
- 4 hrs ago ವೃಷಭ ರಾಶಿಗೆ ಗುರು ಸಂಚಾರ: 10ನೇ ಮನೆಯಲ್ಲಿ ಗುರು ಸಿಂಹ ರಾಶಿಯವರು ಆಸ್ತಿ ಖರೀದಿಸಬಹುದು
Don't Miss
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- News RCB: ಆರ್ಸಿಬಿ ಫ್ರಾಂಚೈಸ್ನಿಂದ ಬೆಂಗಳೂರಿನ ಮೂರು ಕೆರೆಗಳ ಪುನಶ್ಚೇತನ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಾಲ್ಮೀಕಿ ಜಯಂತಿ 2022: ಮಹಾನ್ ಋಷಿ ವಾಲ್ಮೀಕಿ ಅವರ ಕೋಟ್ಸ್, ಶುಭಾಶಯಗಳು
ಆದಿಕವಿ ಮಹರ್ಷಿ ವಾಲ್ಮೀಕಿ ಹಿಂದೂಗಳ ಧರ್ಮಗ್ರಂಥ ರಾಮಾಯಣ ಮಹಾಕಾವ್ಯದ ಕರ್ತೃ. ವಾಲ್ಮೀಕಿ ಮಹರ್ಷಿಗಳು ಬ್ರಹ್ಮನ ಅನುಗ್ರಹದಿಂದ ರಾಮಾಯಣವನ್ನು ರಚಿಸಿದರು ಎಂಬುದು ಭಾರತೀಯ ನಂಬಿಕೆ. ಇದು ಭಾರತದ ಮೊಟ್ಟ ಮೊದಲ ಮಹಾಕಾವ್ಯ ಎಂಬ ಹಿರಿಮೆಗೆ ಸಹ ಪಾತ್ರವಾದ ಕೃತಿ ಹಾಗೂ ಕರ್ತೃ ಮಹರ್ಷಿ ವಾಲ್ಮೀಕಿ.
ಅಕ್ಟೋಬರ್ 31ರಂದು ಮಹರ್ಷಿ ವಾಲ್ಮೀಕಿ ಅವರು ಜನಿಸಿದ ದಿನ, ಇಂದು ದೇಶಾದ್ಯಂತ ಅವರ ಜಯಂತಿಯನ್ನು ಆಚರಿಸಲಾಗುತ್ತದೆ. 2022ನೇ ಸಾಲಿನಲ್ಲಿ ಅಕ್ಟೋಬರ್ 9ರಂದು ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಗುತ್ತಿದೆ. ವಿಶೇಷವಾಗಿ ಕರ್ನಾಟಕದಲ್ಲಿ ವಾಲ್ಮೀಕಿ ಜಯಂತಿಗೆ ವಿಶೇಷ ಗೌರವ ನೀಡಲಾಗಿದೆ. ಈ ಹಿನ್ನೆಲೆ ಮಹಾನ್ ಋಷಿ ವಾಲ್ಮೀಕಿ ಅವರು ಹೇಳಿರುವ ಜೀವನಸಾರವುಳ್ಳ ಹೇಳಿಕೆಗಳನ್ನು ನಾವಿಲ್ಲಿ ದಾಖಲಿಸಿದ್ದೇವೆ:
1. ಬೆನ್ನಿನ ಹಿಂದೆ ಆಡಿಕೊಳ್ಳುವ ಜನರ ಬಗ್ಗೆ ತಲೆಕೆಡಿಸಿಕೊಳ್ಳಬೇಡ, ಏಕೆಂದರೆ ನಿನ್ನ ಬೆನ್ನೆ ನಿನಗೆ ಕಾಣುವುದಿಲ್ಲ, ಎದುರಾದರೆ ಎದುರಿಸು ಗೆದ್ದೇ ಗೆಲ್ಲುವೆ. -ಮಹರ್ಷಿ ವಾಲ್ಮೀಕಿ
2. ನೀವು ಜ್ಞಾನ, ಹಣ, ಪ್ರತಿಷ್ಠೆ, ಶಕ್ತಿಯನ್ನು ಸಂಗ್ರಹಿಸಬಹುದು. ಆದರೆ ಇದೆಲ್ಲದರ ನಡುವೆ ಪ್ರೀತಿಯನ್ನು ಕಳೆದುಕೊಂಡಿದ್ದರೆ ನೀವು ನಿಜವಾದ ಬದುಕನ್ನೇ ಕಳೆದುಕೊಂಡಿದ್ದೀರಿ ಎಂದರ್ಥ. - ಮಹರ್ಷಿ ವಾಲ್ಮೀಕಿ
3. ಪ್ರಶ್ನಿಸಿದರು ಎಂದು ಕುಗ್ಗಬೇಡ, ಪ್ರಶ್ನೆ ಯಾರಾದರೂ ಕೇಳುವರು, ಸಮಯ ನೋಡಿ ಉತ್ತರ ಕೊಡುವವನೇ ಚಾಣಾಕ್ಯ. - ಮಹರ್ಷಿ ವಾಲ್ಮೀಕಿ
4. ಬೇರೆಯವರ ಬಗ್ಗೆ ಕೆಟ್ಟ್ ಭಾವನೆ, ಆಲೋಚನೆಗಳನ್ನು ನಮ್ಮ ಮನಸ್ಸಲ್ಲಿ ಇಟ್ಟುಕೊಳ್ಳುವುದರಿಂದ ನಮ್ಮ ಮನಸ್ಸೆ ಮಲಿನವಾಗುತ್ತದೆ. - ಮಹರ್ಷಿ ವಾಲ್ಮೀಕಿ
5. ವ್ಯಕ್ತಿಯು ಆನೆಯನ್ನೇ ಉಡುಗೊರೆಯಾಗಿ ನೀಡುವಾಗ, ಆನೆಯನ್ನು ಕಟ್ಟುವ ಹಗ್ಗದ ಮೇಲೆ ಮನಸ್ಸಿದ್ದರೆ ಏನು ಪ್ರಯೋಜನ. ಆನೆಯನ್ನೇ ಕಳೆದುಕೊಂಡಾಗ ಹಗ್ಗದ ಮೇಲಿನ ಬಾಂಧವ್ಯದಿಂದ ಏನು ಉಪಯೋಗ. - ಮಹರ್ಷಿ ವಾಲ್ಮೀಕಿ
6. ವೈರಿಯನ್ನು ಇಲ್ಲವಾಗಿಸಲು ಅವನ ತಲೆ ತೆಗೆಯಬೇಕಾಗಿಲ್ಲ, ನಮ್ಮ ತಲೆಯಿಂದ ಅವನನ್ನು ತೆಗೆದರೆ ಸಾಕು. - ಮಹರ್ಷಿ ವಾಲ್ಮೀಕಿ
7. ಬಂಗಾರವೇ ಬದುಕಲ್ಲ, ಬದುಕು ಬಂಗಾರವಾಗಲಿ. - ಮಹರ್ಷಿ ವಾಲ್ಮೀಕಿ
8. ಯಾವಾಗಲೂ ಸಂತೋಷವಾಗಿರಲು ಹೇಗೆ ತಾನೇ ಸಾಧ್ಯ. ಜೀವನ ಎಂದ ಮೇಲೆ ಸುಖ ಮತ್ತು ದುಃಖಗಳ ಮಿಳಿತವಾಗಿರುತ್ತದೆ, ನಿರಂತರವಾದ ಸಂತೋಷ ಮಾತ್ರ ಇರಲು ಸಾಧ್ಯವೇ ಇಲ್ಲ. - ಮಹರ್ಷಿ ವಾಲ್ಮೀಕಿ
9. ಸಮಯಕ್ಕಿಂತ ಶಕ್ತಿಶಾಲಿ ದೇವತೆ ಮತ್ತೊಂದಿಲ್ಲ. - ಮಹರ್ಷಿ ವಾಲ್ಮೀಕಿ
10. ಧರ್ಮದಿಂದ ಸಂಪತ್ತು ಚಿಗುರುತ್ತದೆ, ಧರ್ಮದಿಂದ ಸಂತೋಷ ಬರುತ್ತದೆ ಮತ್ತು ಧರ್ಮದಿಂದ ಎಲ್ಲವನ್ನೂ ಪಡೆಯುತ್ತಾನೆ. ಧರ್ಮವೆ ಈ ಪ್ರಪಂಚದ ಸಾರವಾಗಿದೆ. - ಮಹರ್ಷಿ ವಾಲ್ಮೀಕಿ