Latest Updates
-
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ
ಉಪರಾಷ್ಟ್ರಪತಿಯಾಗಿ ಜಗದೀಪ್ ಧನಕರ್: ಇವರಿಗೆ ಸಿಗುವ ಸಂಬಳ, ಭತ್ಯೆ ಸೌಲಭ್ಯಗಳೇನು?
ಭಾರತದ ನೂತನ ಉಪರಾಷ್ಟ್ರಪತಿಯಾಗಿ ಎನ್ಡಿಎ ಅಭ್ಯರ್ಥಿ ಜಗದೀಪ್ ಧನಕರ್ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮಾರ್ಗರೇಟ್ ಆಳ್ವ ಅವರ ವಿರುದ್ಧ ಗೆಲುವು ಸಾಧಿಸಿ, ಭಾರತದ 14ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.

71 ವರ್ಷದ ಜಗದೀಪ್ ಧನಕರ್ ರಾಜಾಸ್ಥಾನದ ಜುಂಝುನು ಜಿಲ್ಲೆಯಲ್ಲಿ 1951 ಮೇ 18ರಂದು ಕಿತಾನಾ ಗ್ರಾಮದ ರೈತಾಪಿ ಕುಟುಂಬದಲ್ಲಿ ಜನಿಸಿದರು. ಇವರು ಮೂಲತಃ ಬಿಜೆಪಿಯವರಲ್ಲ, 1989ರಲ್ಲಿ ಜನತಾದಳದ ಅಭ್ಯರ್ಥಿಯಾಗಿ ರಾಜಸ್ಥಾನದ ಜುಂಝುನು ಕ್ಷೇತ್ರದಿಂದ ಮೊದಲ ಬಾರಿಗೆ ಲೋಕಸಭೆಗೆ ಸ್ಪರ್ಧಿಸಿ ಗೆದ್ದರು. ನಂತರ ಅಶೋಕ್ ಗೆಹ್ಲೋಟ್ ಅಧಿಕಾರಕ್ಕೆ ಬಂದ ಮೇಲೆ 2008ರಲ್ಲಿ ಬಿಜೆಪಿಗೆ ಸೇರ್ಪಡೆಯಾದರು. 2019ರಲ್ಲಿ ಜಗದೀಪ್ ಧನಕರ್ ಅವರು ಪಶ್ಚಿಮ ಬಂಗಾಳ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಅವರ ಕುರಿತು ಪ್ರಮುಖವಾದ ವಿಷಯಗಳನ್ನು ಇಲ್ಲಿ ನೀಡಲಾಗಿದೆ ನೋಡಿ:
* ಜಗದೀಪ್ ಧನಕರ್ ಅವರು ರಾಜಾಸ್ಥಾನದ ರೈತ ಕುಟುಂಬದಲ್ಲಿ ಜನಿಸಿದವರು.
* ಜಗದೀಪ್ ಧನಕರ್ ಅವರು ಲಾಯರ್ ಆಗಿ ಸುಪ್ರೀಂಕೋರ್ಟ್ ಹಾಗೂ ರಾಜಾಸ್ಥಾನದ ಹೈ ಕೋರ್ಟ್ನಲ್ಲಿ ಕಾರ್ಯ ನಿರ್ವಹಿಸಿದ್ದಾರೆ. 1990 ನಂತರ ರಾಜಕೀಯ ಪ್ರವೇಶಿಸುತ್ತಾರೆ.
* ಪಿ ವಿ ನರಸಿಂಹರಾವ್ ಇರುವಾಗ ಅವರು ಕಾಂಗ್ರೆಸ್ ಸೇರಿದರು, ನಂತರ ಅಶೋಕ್ ಗೆಹ್ಲೋಟ್ ಅಧಿಕಾರಕ್ಕೆ ಬಂದಾಗ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದರು.
ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಲು ಅರ್ಹತೆಗಳೇನು?
* ಉಪರಾಷ್ಟ್ರಪತಿಯಾಗಲು ಕನಿಷ್ಠ 35 ವರ್ಷ ವಯಸ್ಸಾಗಿರಬೇಕು, ಅಭ್ಯರ್ಥಿಯು ಭಾರತೀಯ ನಾಗರಿಕರಾಗಿರಬೇಕು, ರಾಜ್ಯಸಭೆಯಲ್ಲಿ ಸದಸ್ಯತ್ವ ಹೊಂದಿದ್ದರಬೇಕು.
* ಕೇಂದ್ರ ಅಥವಾ ರಾಜ್ಯ ಸರ್ಕಾರ ಅಡಿಯಲ್ಲಿ ಯಾವುದೇ ಲಾಭದಾಯಕ ಹುದ್ದೆ ಹೊಂದಿರಬಾರದು.
ಉಪ ರಾಷ್ಟ್ರಪತಿಗಳ ಸಂಬಳ ಎಷ್ಟು?
ಮೂಲಗಳ ಪ್ರಕಾರ ಉಪ ರಾಷ್ಟ್ರಪತಿಗಳಿಗೆ ವಿವಿಧ ಭತ್ಯೆಗಳ ಜೊತೆಗೆ ತಿಂಗಳಿಗೆ 4 ಲಕ್ಷ ರೂ. ಸಂಬಳವಿದೆ. ಇವರಿಗೆ ವೈಯಕ್ತಿಕ ಭದ್ರತೆ ಸಿಬ್ಬಂದಿ ನೀಡಲಾಗುವುದು, ಉಚಿತ ವೈದ್ಯಕೀಯ ಸೇವೆ, ಉಚಿತ ರೈಲು, ವಿಮಾನ ಪ್ರಯಾಣ, ಸಂವಹನ ಸಂಪರ್ಕ ಹೀಗೆ ಎಲ್ಲಾ ವ್ಯವಸ್ಥೆ ನೀಡಲಾಗಿರುತ್ತೆ.
ಉಪರಾಷ್ಟ್ರಪತಿಯವರು ನವದೆಹಲಿಯ ಮೌಲಾನಾ ಅಜಾದ್ ರಸ್ತೆಯಲ್ಲಿರುವ ಉಪರಾಷ್ಟ್ರಪತಿಯವರ ಭವನದಲ್ಲಿ ವಾಸಿಸುತ್ತಾರೆ. ಈ ಭವನ ಇರುವ ಸ್ಥಳ 6.48 ಎಕರೆ ವಿಸ್ತೀರ್ಣ ಹೊಂದಿದೆ.



Click it and Unblock the Notifications












