Latest Updates
-
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್! -
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ! -
ಮಕ್ಕಳಲ್ಲಿ ಹೆಚ್ಚುತ್ತಿದೆ ಮಧುಮೇಹದ ಭೀತಿ: ಇಂದೇ ಬದಲಾಯಿಸಿ ನಿಮ್ಮ ಅಡುಗೆಮನೆಯ ಈ ಅಭ್ಯಾಸಗಳನ್ನು! -
ಮೆಟ್ ಗಾಲಾ 2026: ಜಾಗತಿಕ ವೇದಿಕೆಯಲ್ಲಿ ಅಬ್ಬರಿಸಿದ ಭಾರತೀಯ ಸಂಸ್ಕೃತಿ, ಫ್ಯಾನ್ಸ್ ಫಿದಾ! -
ಬೇಸಿಗೆಯ ಬಿಸಿಲಿಗೆ ಸುಸ್ತಾದ್ರಾ? ಕೇವಲ 1000 ರೂಪಾಯಿಯಲ್ಲಿ ನಿಮ್ಮ ಮನೆಯನ್ನು ತಂಪಾಗಿಸಿ! -
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ!
ಕಬೀರ್ ದಾಸ್ ಜನ್ಮದಿನ 2022: ಜೀವನಪಾಠ ಹೇಳಿರುವ ಕಬೀರ್ ದಾಸರ ಕೋಟ್ಸ್
ವೃತ್ತಿಯಿಂದ ನೇಕಾರರಾಗಿದ್ದ ಕಬೀರರು ಅನುಭಾವಿ ಕವಿಯಾದ ಅವರು ಇಂದಿಗೂ ತಮ್ಮ ಹಲವಾರು ಕವನಗಳ ಮೂಲಕ ಜೀವಂತವಾಗಿದ್ದಾರೆ ಮತ್ತು ಶತಮಾನಗಳಿಂದ ಅನ್ವೇಷಕರಿಗೆ ಸ್ಫೂರ್ತಿಯಾಗಿದ್ದಾರೆ. ಸಂತ ಕಬೀರ್ ದಾಸ್ ಅವರು ಕೇವಲ ಸಾಮಾಜಿಕ ಪಿಡುಗುಗಳ ವಿರುದ್ಧ ಮಾತ್ರವೇ ಸೆಣಸಲಿಲ್ಲ, ಜೊತೆಗೆ ಮಾನವತೆಯ ಪಾಠ ಮತ್ತು ವಿಶ್ವ ಪ್ರೇಮವನ್ನೂ ಬೋಧಿಸಿದರು. ಬೂಟಾಟಿಕೆ ವಿರುದ್ಧ ಧ್ವನಿ ಎತ್ತಿದರು ಮತ್ತು ಜನರಲ್ಲಿ ಭಕ್ತಿಯ ಬೀಜಗಳನ್ನು ಬಿತ್ತಿದರವರು ಕಬೀರರು.
ಇಂಥಾ ಮಹಾನ್ ಕವಿ ಕಬೀರ್ ದಾಸರು 1440ರ ಜೂನ್ 14ರಂದು ಜನಿಸಿದರು. ಇವರ ಜನ್ಮದಿನದ ವಿಶೇಷ ಕಬೀರರ ಸ್ಪೂರ್ತಿದಾಯಕ ಕೋಟ್ಸ್ಗಳನ್ನು ನೀಡಲಿದ್ದೇವೆ:

ದೇವರು ಎಂದರೇ ಯಾರು? ದೇವರು ಎಂದರೆ ನಮ್ಮ ಉಸಿರಾಟದೊಳಗಿನ ಉಸಿರು. - ಸಂತ ಕಬೀರ್ ದಾಸ
ನಮ್ಮ ಹೃದಯದಲ್ಲಿನ ದೀಪವನ್ನು ನೋಡಿದಾಗ ಜಗತ್ತಿನ ಎಲ್ಲಾ ಕತ್ತಲೆಯು ಮಾಯವಾಗುತ್ತದೆ. - ಸಂತ ಕಬೀರ್ ದಾಸ
ಸಾಕಷ್ಟು ಪರಿಶ್ರಮದ ನಂತರ ಸಂತೋಷದ ಸಾಗರಕ್ಕೆ ಬಂದಾಗ ಮತ್ತೆ ಬಾಯಾರಿಕೆಯಿಂದ ಹಿಂತಿರುಗಬೇಡಿ. - ಸಂತ ಕಬೀರ್ ದಾಸ
ದೇವರು ನನ್ನೊಳಗೂ ಇದ್ದಾನೆ, ದೇವರು ನಿನ್ನೊಳಗೂ ಇದ್ದಾನೆ. ಬದುಕು ಎನ್ನುವುದು ಪ್ರತಿಯೊಂದು ಅಣುವಿನಲ್ಲೂ ಇದೆ, ಅಹಃ ಬಿಟ್ಟು ಎಲ್ಲರೊಳಗೆ ಹಾಗೂ ನಮ್ಮೊಳಗಿನ ದೇವರನ್ನು ಕಾಣಿರಿ. - ಸಂತ ಕಬೀರ್ ದಾಸ
ಕುರುಡುತನವೇ ತುಂಬಿರುವ ಈ ಪ್ರಪಂಚದಲ್ಲಿ ನಾನು ಕನ್ನಡಿಯನ್ನು ಮಾರುತ್ತಿದ್ದೇನೆ. - ಸಂತ ಕಬೀರ್ ದಾಸ
ಈ ಜಗತ್ತಿನಲ್ಲಿ ನಿಮಗೆ ಸತ್ಯ ಬೇಕೆಂದರೆ ನಿಮ್ಮೊಳಗೆ ಅವಿತಿರುವ ರಹಸ್ಯವಾದ ಹಾಗೂ ನಿಜವಾದ ಶಬ್ಧವನ್ನು ಅಲಿಸಿರಿ, ಅದುವೇ ಸತ್ಯ. - ಸಂತ ಕಬೀರ್ ದಾಸ
ಹನಿಯು ಸಮುದ್ರದಲ್ಲಿ ವಿಲೀನಗೊಳ್ಳುತ್ತದೆ ಎಂದು ಎಲ್ಲರಿಗೂ ತಿಳಿದಿದೆ, ಆದರೆ ಸಮುದ್ರವು ಹನಿಯಲ್ಲಿ ವಿಲೀನಗೊಳ್ಳುತ್ತದೆ ಎಂದು ಕೆಲವರಿಗೆ ಮಾತ್ರ ತಿಳಿದಿದೆ. - ಸಂತ ಕಬೀರ್ ದಾಸ
ನೀವು ನಿಮ್ಮ ಹತ್ತಿರದ ಪ್ರೀತಿಪಾತ್ರರನ್ನು ನಿರಾಕರಿಸಿದ್ದೀರಿ ಮತ್ತು ಇತರರ ಬಗ್ಗೆ ಯೋಚಿಸುತ್ತಿದ್ದೀರಿ; ಇದರಿಂದಾಗಿ ನಿಮ್ಮ ಎಲ್ಲಾ ಕೆಲಸವೂ ವ್ಯರ್ಥವೇ. - ಸಂತ ಕಬೀರ್ ದಾಸ
ನೀನು ಎಲ್ಲೇ ಇದ್ದರೂ ಅದೇ ನಿನ್ನ ಆರಂಭದ ಹಾದಿ. - ಸಂತ ಕಬೀರ್ ದಾಸ
ಜೀವನದ ಸಾರವು ದೇವರನ್ನು ಸ್ಮರಿಸುವುದರಲ್ಲಿದೆ. - ಸಂತ ಕಬೀರ್ ದಾಸ
ನಾನು ಹಿಂದೂ ಅಲ್ಲ, ಮುಸಲ್ಮಾನನೂ ಅಲ್ಲ, ನಾನು ಈ ದೇಹ ಮಾತ್ರ. ಪಂಚಭೂತಗಳ ಸಾಕ್ಷಿ, ಸಂತೋಷ ಮತ್ತು ದುಃಖದ ನಡುವೆ ಬದುಕುವ ಆತ್ಮ. - ಸಂತ ಕಬೀರ್ ದಾಸ



Click it and Unblock the Notifications









