Latest Updates
-
ಬಿಸಿಲ ಬೇಗೆಯಿಂದ ಪಾರಾಗಲು ಮುಂಜಾನೆಯೇ ವ್ಯಾಯಾಮ: ನಿಮ್ಮ ದಿನಚರಿಯಲ್ಲಿ ಈ ಬದಲಾವಣೆ ಮಾಡಿಕೊಳ್ಳಿ -
ಬೇಸಿಗೆ ಮದುವೆ ಸಂಭ್ರಮ: ಬಿಸಿಲ ಬೇಗೆಯಿಂದ ಅತಿಥಿಗಳನ್ನು ರಕ್ಷಿಸಲು ಇಲ್ಲಿದೆ ಮಾಸ್ಟರ್ ಪ್ಲಾನ್ -
ಮೇ 2-3ರ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಗಿಡಗಳನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಭಾರತದಲ್ಲಿ ಸುಡುವ ಬಿಸಿಲು: ಹೀಟ್ ವೇವ್ನಿಂದ ಪಾರಾಗಲು ಇಲ್ಲಿವೆ ಬೆಸ್ಟ್ ಡಯಟ್ ಮತ್ತು ಹೈಡ್ರೇಶನ್ ಟಿಪ್ಸ್! -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಕರಣ್ ಜೋಹರ್ ಅಬ್ಬರ, ಭಾರತೀಯ ಫ್ಯಾಷನ್ ಲೋಕದ ಹೊಸ ಸಂಚಲನ! -
ಮೇ ತಿಂಗಳ ಬಿಸಿಲ ಧಗೆ: ನಿಮ್ಮ ಬೆಳಗಿನ ದಿನಚರಿಯಲ್ಲಿ ಈ ಬದಲಾವಣೆ ಮಾಡಿಕೊಳ್ಳದಿದ್ದರೆ ಕಷ್ಟ! -
ಎವೆಲಿನ್ ಶರ್ಮಾ ವಿಚ್ಛೇದನ: ಮಕ್ಕಳ ಭವಿಷ್ಯಕ್ಕಾಗಿ ಈ ಜೋಡಿ ಆರಿಸಿದ ಹೊಸ ದಾರಿ ಯಾವುದು? -
ಬಿಸಿಲ ಧಗೆಗೆ ತಂಪಾದ ಗುಡ್ ನ್ಯೂಸ್: ಮೇ 8 ರಿಂದ ಶುರುವಾಗಲಿದೆ ಗ್ರೇಟ್ ಸಮ್ಮರ್ ಸೇಲ್! -
ಬಿಸಿಲ ಬೇಗೆಗೆ ಸುಸ್ತಾಗಿದ್ದೀರಾ? ಈ ಸರಳ ಆಹಾರ ಪದ್ಧತಿಯಿಂದ ಇಡೀ ದಿನ ಇರಿ ಫ್ರೆಶ್! -
ಬಿಸಿಲ ಬೇಗೆಗೆ ಸುಸ್ತಾಗಿದ್ದೀರಾ? ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ ಕೂಲ್ ಆಗಿರಿ!
ಕನ್ನಡ ರಾಜ್ಯೋತ್ಸವ 2024: ಕನ್ನಡಿಗರೇ, ಕನ್ನಡ ಹಬ್ಬಕ್ಕೆ ಶುಭ ಕೋರಲು ಇಲ್ಲಿವೆ ಶುಭಾಶಯಗಳು
ನವೆಂಬರ್ ತಿಂಗಳೆಂದರೆ ಕನ್ನಡಿಗರಿಗೆ ವಿಶೇಷವಾದ ತಿಂಗಳು. ಈ ವರ್ಷ ನಾವೆಲ್ಲಾ 69ನೇ ಕನ್ನಡ ರಾಜ್ಯೋತ್ಸವ ಆಚರಿಸಲಿದ್ದೇವೆ.
ಅಲ್ಲಲ್ಲಿ ಚದುರಿದ್ದ ಕನ್ನಡ ಪ್ರಾಂತ್ಯವೆನ್ನೆಲ್ಲಾ ಒಂದು ಗೂಡಿಸಿ ಅದನ್ನು ಕರ್ನಾಟಕ ಎಂದು ನಾಮಕರಣ ಮಾಡಿದ ದಿನ. ಇಂದಿನ ಕರ್ನಾಟಕವನ್ನು ಹಿಂದೆ ಮೈಸೂರು ಪ್ರಾಂತ್ಯವೆಂದು ಕರೆಯಲಾಗಿತ್ತು.
ಕರ್ನಾಟಕದ ಹುಟ್ಟಿಗೆ ಕಾರಣರಾದ ಕನ್ನಡದ ಕುಲಪುರೋಹಿತ ಎಂದೇ ಹೆಸರಾದ ಆಲೂರು ವೆಂಕಟರಾವ್ ಅವರು ಮೊದಲಿಗೆ ಕರ್ನಾಟಕ ಏಕೀಕರಣ ಚಳುವಳಿಯನ್ನು ಸ್ವಾತಂತ್ರ್ಯ ಪೂರ್ವವೇ 1905ರಲ್ಲಿ ಪ್ರಾರಂಭಿಸಿದರು. ನಂತರ ಭಾರತಕ್ಕೆ ಸ್ವಾತಂತ್ರ್ಯ ದೊರೆತು ಗಣರಾಜ್ಯವಾದ ನಂತರ ಭಾಷೆಗಳ ಆಧಾರದ ಮೇಲೆ 1956ರ ನವೆಂಬರ್ 1ರಂದು ರಾಜ್ಯಗಳನ್ನು ವಿಂಗಡಿಸಿದರು.

ಅದರಂತೆ ಮದ್ರಾಸ್, ಮುಂಬಯಿ ಮತ್ತು ಹೈದರಾಬಾದ್ ಪ್ರಾಂತ್ಯದ ಕನ್ನಡ ಮಾತನಾಡುವ ಪ್ರದೇಶಗಳೆಲ್ಲವೂ ವಿಲೀನಗೊಂಡು ಮೈಸೂರು ರಾಜ್ಯ ಉದಯವಾಯಿತು. ನಂತರ ಮೈಸೂರು ರಾಜ್ಯವನ್ನು ಮೂರು ವಿಭಾಗಗಳಾಗಿ ವಿಂಗಡಿಸಲಾಯಿತು. ಅವುಗಳೆಂದರೆ ಉತ್ತರ ಕರ್ನಾಟಕ, ಹಳೆಯ ಮೈಸೂರು ಹಾಗೂ ಮಲೆನಾಡು.
ಕನ್ನಡದ ಇತಿಹಾಸ, ಮಹತ್ವ, ಹೋರಾಟಗಳ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸುವ ಉದ್ದೇಶದಿಂದ ಹಾಗೂ ಕರ್ನಾಟಕದ ಏಕೀಕರಣಕ್ಕೆ ಹೋರಾಡಿದ ಮಹನೀಯರನ್ನು ಸ್ಮರಿಸುವ ಉದ್ದೇಶದಿಂದ ಕನ್ನಡ ರಾಜ್ಯೋತ್ಸವ ಅತ್ಯಂತ ಮಹತ್ವವನ್ನು ಪಡೆದುಕೊಂಡಿದೆ.
ನಾವಿಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ, ಮೆಸೇಜ್ ಕಳುಹಿಸಲು ಕೋಟ್ಸ್ ನೀಡಿದ್ದೇವೆ ನೋಡಿ.

ವಿಶ್ 1
1. ಕನ್ನಡ ರಾಜ್ಯೋತ್ಸವದ ಶುಭಾಶಯಗಳು

ಶುಭಾಶಯ 2
ನವೆಂಬರ್ ಮಾಸಕ್ಕೆ ಮೀಸಲಾಗದಿರಲಿ ಕನ್ನಡ ರಾಜ್ಯೋತ್ಸವ, ಕನ್ನಡ ಭಾಷೆಯನ್ನು ಮತ್ತಷ್ಟು ಬೆಳಸೋಣ, ಕನ್ನಡ ರಾಜ್ಯೋತ್ಸವದ ಶುಭಾಶಯಗಳು

ಕನ್ನಡ ರಾಜ್ಯೋತ್ಸ
ನಮ್ಮ ಕನ್ನಡ, ನಮ್ಮ ಹೆಮ್ಮೆ
ಕನ್ನಡ ರಾಜ್ಯೋತ್ಸವದ ಶುಭಾಶಯಗಳು

ಶುಭಾಶಯ4
. ಕನ್ನಡಿಗ ಮನದಲ್ಲಿ ಕನ್ನಡ ಪ್ರೇಮವಿರುವವರಿಗೂ ಯಾವ ಭಾಷೆ ಹೇರಿಕೆ ಬಗೆಯೂ ಹೆದರ ಬೇಕಾಗಿಲ್ಲ. ನಮ್ಮ ಕನ್ನಡವನ್ನು ಬೆಳೆಸೋಣ ಕನ್ನಡಿಗರೇ...
ಕನ್ನಡ ರಾಜ್ಯೋತ್ಸವದ ಶುಭಾಶಯಗಳು

ಶುಭಾಶಯ 5
ನಾವು ಇತರರ ಭಾಷೆ ಕಲಿಯುವ ಆಸಕ್ತಿಯನ್ನು, ಕನ್ನಡವನ್ನು ಇತರರಿಗೆ ಕಲಿಸುವಲ್ಲಿಯೂ ತೋರೋಣ, ಜೈ ಕನ್ನಡಾಂಬೆ
ಕನ್ನಡ ರಾಜ್ಯೋತ್ಸವದ ಶುಭಾಶಯಗಳು

ಶುಭಾಶಯ 6
ಎಲ್ಲಾದರು ಇರು ಎಂತಾದರು ಇರು
ಎಂದೆಂದಿಗೂ ನೀ ಕನ್ನಡವಾಗಿರು
ಕನ್ನಡ ರಾಜ್ಯೋತ್ಸವದ ಶುಭಾಶಯಗಳು

ಶುಭಾಶಯ 7
ಹಚ್ಚೇವು ಕನ್ನಡದ ದೀಪ
ಕರುನಾಡ ದೀಪ ಸಿರಿನುಡಿಯ ದೀಪ
ಒಲವೆತ್ತಿ ತೋರುವ ದೀಪ
ಕನ್ನಡ ರಾಜ್ಯೋತ್ಸವದ ಶುಭಾಶಯಗಳು

ಶುಭಾಶಯ 8
ಬಾರಿಸು ಕನ್ನಡ ಡಿಂಡಿಮವ
ಓ ಕರ್ನಾಟಕ ಹೃದಯ ಶಿವ
ಬಾರಿಸು ಕನ್ನಡ ಡಿಂಡಿಮವ
ಕನ್ನಡ ರಾಜ್ಯೋತ್ಸವದ ಶುಭಾಶಯಗಳು

ಶುಭಾಶಯ 9
ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು
ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು
ಕನ್ನಡ ರಾಜ್ಯೋತ್ಸವದ ಶುಭಾಶಯಗಳು



Click it and Unblock the Notifications