Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ರಾಷ್ಟ್ರೀಯ ವೈದ್ಯರ ದಿನ: ಕೋವಿಡ್ ಎದುರಿಸುವಲ್ಲಿ ನಿಮ್ಮ ಕೊಡುಗೆ ಎಲ್ಲವನ್ನೂ ಮೀರಿದ್ದು..
"ವೈದ್ಯೋ ನಾರಾಯಣೋ ಹರಿ" ಎಂಬ ಮಾತಿದೆ. ಈ ಮಾತಿನ ನಿಜವಾದ ಅರ್ಥ ಕಳೆದೆರಡು ವರ್ಷಗಳಿಂದ ಜಗತ್ತು ಎದುರಿಸುತ್ತಿರುವ ಸಾಂಕ್ರಾಮಿಕದಿಂದ ಅರಿವಿಗೆ ಬರುತ್ತಿದೆ ಎಂದರೆ ತಪ್ಪಾಗಲ್ಲ. ವೈದ್ಯರಿಲ್ಲದೇ ಈ ಕೊರೊನಾ ಮಹಾಮಾರಿಯನ್ನು ಎದುರಿಸುವ ವಿಚಾರ ಊಹಿಸಿಕೊಳ್ಳಲು ಅಸಾಧ್ಯ. ಅದೇ ರೀತಿ ಪ್ರತಿಯೊಬ್ಬ ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಡಾಕ್ಟರ್ ಗಳ ಪಾತ್ರ ಮಾತಿಗೆ ನಿಲುಕದ್ದು.
ಯಾವುದೇ ಪ್ರತಿಫಲವನ್ನು ನಿರೀಕ್ಷಿಸದೇ, ಜನಸೇವೆ ಮಾಡುವ ವೈದ್ಯರು ನಮ್ಮ ನಡುವೆ ಸಾಕಷ್ಟು ಜನರಿದ್ದಾರೆ. ತಮ್ಮ ಅನುಕೂಲತೆಯನ್ನು ಗಣನೆಗೆ ತೆಗೆದುಕೊಳ್ಳದೆ ರೋಗಿಯ ಆರೈಕೆಗೆ ಹೆಚ್ಚು ಕಾಲವನ್ನು ವಿನಿಯೋಗಿಸುವ ವೈದ್ಯರುಗಳು ಸದಾ ದೇವತೆಗಳಿಗೆ ಸಮನಾಗಿರುತ್ತಾರೆ. ಜುಲೈ 1ನ್ನು ವೈದ್ಯರ ದಿನವನ್ನಾಗಿ ಆಚರಿಸಲಾಗುವುದು, ಈ ಆಚರಣೆಯ ಇತಿಹಾಸ, ಮಹತ್ವ ಇಲ್ಲಿದೆ ನೋಡಿ.

ಎಲ್ಲಾ ವೈದ್ಯರಿಗೆ ಅನಂತಾನಂತ ಪ್ರಣಾಮಗಳು:
ಸಮಾಜಕ್ಕೆ ಹಾಗೂ ಜನರಿಗೆ ವೈದ್ಯರ ಪಾತ್ರ, ಅವರ ಪ್ರಾಮುಖ್ಯತೆ ಮತ್ತು ಜವಾಬ್ದಾರಿಗಳು ಅತ್ಯಂತ ಮಹತ್ವವನ್ನು ಪಡೆದುಕೊಂಡಿರುತ್ತದೆ. ವೈದ್ಯರ ಕೆಲಸ, ಪ್ರವೃತ್ತಿ, ಜವಾಬ್ದಾರಿ ಹಾಗೂ ಪ್ರಾಮುಖ್ಯತೆಯ ಬಗ್ಗೆ ಜನರಲ್ಲಿ ಅರಿವನ್ನು ಮೂಡಿಸುವ ಅಗತ್ಯವಿದೆ. ಈ ಉದ್ದೇಶದಿಂದಲೇ ಭಾರತದಲ್ಲಿ ರಾಷ್ಟ್ರೀಯ ವೈದ್ಯರ ದಿನವನ್ನು ಪ್ರತಿವರ್ಷ ಜುಲೈ 1 ರಂದು ಆಚರಿಸಲಾಗುತ್ತದೆ. ವೈದ್ಯರ ನಿಷ್ಠ, ಶ್ರಮ ಹಾಗೂ ನಿಸ್ವಾರ್ಥ ಭಾವದಿಂದ ನೀಡುವ ಆರೈಕೆಗೆ ಮೌಲ್ಯ ಕಟ್ಟಲು ಸಾಧ್ಯವಿಲ್ಲ. ಅವರು ತೋರುವ ಸೇವೆ ಹಾಗೂ ಚಿಕಿತ್ಸೆಯು ರೋಗಿಗೆ ಮರುಜನ್ಮವನ್ನು ನೀಡುತ್ತದೆ. ಹಾಗಾಗಿ ಕೊರೊನಾ ಎದುರಿಸಲು ಅಪಾರ ಪಾಲು ನೀಡುತ್ತಿರುವ ಎಲ್ಲಾ ವೈದ್ಯಕೀಯ ವರ್ಗದವರಿಗೆ ರಾಷ್ಟ್ರೀಯ ವೈದ್ಯ ದಿನಾಚರಣೆಯ ಶುಭಾಶಯಗಳು.

ರಾಷ್ಟ್ರೀಯ ವೈದ್ಯರ ದಿನದ ಇತಿಹಾಸ:
ಹಿರಿಯ ವೈದ್ಯ ಮತ್ತು ಪಶ್ಚಿಮ ಬಂಗಾಳದ ಎರಡನೇ ಮುಖ್ಯಮಂತ್ರಿ ಡಾ. ಬಿಧಾನ್ ಚಂದ್ರ ರಾಯ್ ಅವರ ಜನ್ಮ ಮತ್ತು ಮರಣ ವಾರ್ಷಿಕೋತ್ಸವವು ಒಂದೇ ದಿನದಲ್ಲಿ ನಡೆಯುತ್ತದೆ. ಡಾ.ಬಿಧಾನ್ ಚಂದ್ರ ರಾಯ್ ಅವರು ಜುಲೈ 1, 1882 ರಂದು ಜನಿಸಿದರು ಮತ್ತು ಅದೇ ದಿನಾಂಕದಂದು 1962 ರಲ್ಲಿ ನಿಧನರಾದರು. ಫೆಬ್ರವರಿ 4, 1961 ರಂದು ಅವರನ್ನು ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ, ಭಾರತ ರತ್ನ ನೀಡಿ ಗೌರವಿಸಲಾಯಿತು. ಅವರ ಸ್ಮರಣಾರ್ಥವಾಗಿ ಹಾಗೂ ಗೌರವಿಸಲು ರಾಷ್ಟ್ರೀಯ ವೈದ್ಯರ ದಿನವನ್ನು ಆಚರಿಸಲಾಗುತ್ತದೆ. ಈ ದಿನ ಇಡೀ ವೈದ್ಯಕೀಯ ವೃತ್ತಿಗೆ ಗೌರವ ಸಲ್ಲಿಸುವುದರ ಜೊತೆಗೆ ನಮ್ಮ ಜೀವನದಲ್ಲಿ ವೈದ್ಯರ ಮೌಲ್ಯವನ್ನು ಎತ್ತಿ ತೋರಿಸುತ್ತದೆ. ಡಾ. ಬಿಧಾನ್ ಚಂದ್ರ ರಾಯ್ ಅವರಿಗೆ ಗೌರವ ಸಲ್ಲಿಸಲು 1991 ರಲ್ಲಿ ರಾಷ್ಟ್ರೀಯ ವೈದ್ಯರ ದಿನವನ್ನು ಕೇಂದ್ರ ಸರ್ಕಾರವು ಮಾನ್ಯತೆ ಮತ್ತು ಪ್ರತಿವರ್ಷ ಜುಲೈ 1 ರಂದು ಆಚರಿಸಲು ಸ್ಥಾಪಿಸಿತು.
ಮೊದಲ ಬಾರಿಗೆ ವೈದ್ಯರ ದಿನವನ್ನು ಮಾರ್ಚ್ 1933 ರಲ್ಲಿ ಯುಎಸ್ ರಾಜ್ಯ ಜಾರ್ಜಿಯಾದಲ್ಲಿ ಆಚರಿಸಲಾಯಿತು. ವೈದ್ಯರಿಗೆ ಕಾರ್ಡ್ ಕಳುಹಿಸುವ ಮೂಲಕ ಮತ್ತು ಸತ್ತ ವೈದ್ಯರ ಸಮಾಧಿಯ ಮೇಲೆ ಹೂವುಗಳನ್ನು ಇರಿಸುವ ಮೂಲಕ ಈ ದಿನವನ್ನು ಆಚರಿಸಲಾಗುತ್ತದೆ. ವಿವಿಧ ದೇಶಗಳಲ್ಲಿ ವೈದ್ಯರ ದಿನವನ್ನು ವಿವಿಧ ದಿನಾಂಕಗಳಲ್ಲಿ ಆಚರಿಸಲಾಗುತ್ತದೆ. ಯುನೈಟೆಡ್ ಸ್ಟೇಟ್ಸ್ನಂತೆ ಇದನ್ನು ಮಾರ್ಚ್ 30 ರಂದು, ಕ್ಯೂಬಾದಲ್ಲಿ ಡಿಸೆಂಬರ್ 3 ರಂದು ಮತ್ತು ಆಗಸ್ಟ್ 23 ರಂದು ಇರಾನ್ನಲ್ಲಿ ಆಚರಿಸಲಾಗುತ್ತದೆ.

ಈ ವರ್ಷದ ವಿಷಯ:
ಪ್ರತಿ ವರ್ಷವೂ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಹೊಸ ಹೊಸ ವಿಷಯದ ಆಧಾರದ ಮೇಲೆ ಆಚರಿಸಲಾಗುತ್ತದೆ. ಈ ವರ್ಷದ ಅಂದರೆ 2021ರ ರಾಷ್ಟ್ರೀಯ ವೈದ್ಯರ ದಿನಾಚರಣೆಯ ವಿಷಯವೆಂದರೆ "ಕುಟುಂಬ ವೈದ್ಯರೊಂದಿಗೆ ಭವಿಷ್ಯವನ್ನು ನಿರ್ಮಿಸುವುದು". ಪ್ರತಿ ವರ್ಷ ಥೀಮ್ ಅನ್ನು ಭಾರತೀಯ ವೈದ್ಯಕೀಯ ಸಂಘವು ಘೋಷಿ ಸುತ್ತದೆ. ಈ ವರ್ಷವನ್ನು ಜಗತ್ತು ಸಾಂಕ್ರಾಮಿಕ ಎದುರಿಸುವಲ್ಲಿ ಕೊಡುಗೆ ನೀಡಿದ ಪ್ರತಿಯೊಬ್ಬ ವೈದ್ಯರಿಗೆ ಅರ್ಪಿಸಲಾಗಿದೆ.

ರಾಷ್ಟ್ರೀಯ ವೈದ್ಯರ ದಿನದ ಆಚರಣೆ:
ಹಲವಾರು ವರ್ಷಗಳಿಂದ ರಾಷ್ಟ್ರೀಯ ವೈದ್ಯರ ದಿನವನ್ನು ಸರ್ಕಾರ ಮತ್ತು ಸರ್ಕಾರೇತರ ಆರೋಗ್ಯ ಸಂಸ್ಥೆಗಳು ವೈದ್ಯರ ಕೊಡುಗೆಗಳ ಬಗ್ಗೆ ತಿಳಿದುಕೊಳ್ಳಲು ಆಚರಿಸುತ್ತವೆ. ಆರೋಗ್ಯ ಸಂಸ್ಥೆಗಳ ಸಿಬ್ಬಂದಿ ಈ ದಿನ ಹಲವಾರು ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳನ್ನು ಆಯೋಜಿಸುತ್ತಾರೆ. ಡಾಕ್ಟರ್ಸ್ ಡೇ ರೋಟರಿ ಕ್ಲಬ್ ಆಫ್ ದಿ ನಾರ್ತ್ ಕಲ್ಕತ್ತಾ ಮತ್ತು ಈಶಾನ್ಯ ಕಲ್ಕತ್ತಾ ಸಾಮಾಜಿಕ ಮತ್ತು ಕಲ್ಯಾಣ ಸಂಸ್ಥೆಯ ಭವ್ಯ ಆಚರಣೆಗೆ "ವಾರ್ಷಿಕವಾಗಿ ದೊಡ್ಡ ಕಾರ್ಯಕ್ರಮಗಳನ್ನು ಆಯೋಜಿಸುತ್ತದೆ. ಗುಣಮಟ್ಟದ ವೈದ್ಯಕೀಯ ಸೇವೆಗಳನ್ನು ಸಾರ್ವಜನಿಕರಲ್ಲಿ ಉಚಿತವಾಗಿ ಉತ್ತೇಜಿಸಲು ಆರೋಗ್ಯ ಸಂಸ್ಥೆಗಳು ವಿವಿಧ ಆರೋಗ್ಯ ಕೇಂದ್ರಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರಗಳನ್ನು ಆಯೋಜಿಸಲಾಗಿದೆ. ವೈದ್ಯರಿಂದ ಆವರ್ತಕ ವೈದ್ಯಕೀಯ ಸೇವೆಗಳನ್ನು ಸಹ ಉತ್ತೇಜಿಸಲಾಗುತ್ತದೆ. ಆರೋಗ್ಯ ತಪಾಸಣೆ, ತಡೆಗಟ್ಟುವಿಕೆ, ರೋಗನಿರ್ಣಯ, ರೋಗದ ಸರಿಯಾದ ಚಿಕಿತ್ಸೆ ಇತ್ಯಾದಿಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ದೇಶಾದ್ಯಂತ ವಿವಿಧ ಚರ್ಚಾ ಕಾರ್ಯಕ್ರಮಗಳನ್ನು ಆಚರಿಸಲಾಗುತ್ತದೆ. ಆದರೆ ಈಗಿರುವ ಕೊರೊನಾ ಪರಿಸ್ಥಿತಿ ಈ ಎಲ್ಲಾ ಆಚರಣೆಗಳಿಗೆ ತಣ್ಣೀರೆರಚಿದೆ.



Click it and Unblock the Notifications











