Just In
- 5 hrs ago ವಾರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಈ 7 ದಿನಗಳು ನಿಮಗೆ ಹೇಗಿರಲಿದೆ?
- 5 hrs ago ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- 6 hrs ago ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- 7 hrs ago ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
Don't Miss
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನವೆಂಬರ್ 11ಕ್ಕೆ ಒನಕೆ ಓಬವ್ವ ಜಯಂತಿ: ವೀರವನಿತೆಯ ಬಗ್ಗೆ ನಿಮಗೆ ತಿಳಿದಿರದ ಕೆಲವು ಸಂಗತಿಗಳಿವು
ನವೆಂಬರ್ 11ರಂದು ಒನಕೆ ಓಬವ್ವ ಜಯಂತಿ ಆಚರಣೆಗೆ ಕರ್ನಾಟಕ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಆದೇಶ ಹೊರಡಿಸಿದ್ದು, ರಾಜ್ಯದಾದ್ಯಂತ ಓಬ್ಬವ್ವರ ಜನ್ಮದಿನವನ್ನು ಆಚರಣೆ ಮಾಡಲಾಗುವುದು. ಈ ಹಿನ್ನಲೆಯಲ್ಲಿ ಒನಕೆ ಓಬವ್ವರ ಕುರಿತು ನೀವು ತಿಳಿದುಕೊಳ್ಳಲೇಬೇಕಾದ ಕೆಲವೊಂದು ಸಂಗತಿಗಳನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.
ಒನಕೆ ಓಬವ್ವರ ಕುರಿತು ನೀವು ತಿಳಿದುಕೊಳ್ಳಲೇಬೇಕಾದ ಕೆಲವು ಆಸಕ್ತಿದಾಯಕ ಸಂಗತಿಗಳನ್ನು ಈ ಕೆಳಗೆ ನೀಡಲಾಗಿದೆ:
ಇತಿಹಾಸದ ಪುಟದಲ್ಲಿ ಅಚ್ಚಳಿಯದೇ ಉಳಿದಿರುವ ಐತಿಹಾಸಿಕ ಸ್ಥಳಗಳಲ್ಲಿ ಚಿತ್ರದುರ್ಗವೂ ಒಂದು. ಚಿತ್ರದುರ್ಗ ಎಂದಾಕ್ಷಣ ನೆನಪಾಗುವುದೇ ಹೈದರಾಲಿಯ ಸೈನ್ಯದೊಂದಿಗೆ ಏಕಾಂಗಿಯಾಗಿ ಹೋರಾಡಿದ ವೀರವನಿತೆ ಒನಕೆ ಓಬವ್ವ. ಆಕೆಯ ಸಾಹಸದ ಕತೆ ಎಂದಿಗೂ ಅಜರಾಮರ. ಅಂತಹ ಧೀರ ಮಹಿಳೆ ಜನಿಸಿದ ನಾಡಿನಲ್ಲಿ ನಾವಿರುವುದು ಬಹಳ ಹೆಮ್ಮೆಯ ವಿಚಾರ.
1. ಕರ್ನಾಟಕ ರಾಜ್ಯದ ಚಿತ್ರದುರ್ಗದಲ್ಲಿ ಹೈದರ್ ಅಲಿಯ ಪಡೆಗಳ ವಿರುದ್ಧ ಏಕಾಂಗಿಯಾಗಿ ಒನಕೆಯೊಂದಿಗೆ ಹೋರಾಡಿದ ಮಹಿಳೆ ಒನಕೆ ಓಬವ್ವ. ಆಕೆಯ ಪತಿ ಚಿತ್ರದುರ್ಗದ ಕಲ್ಲಿನ ಕೋಟೆಯ ಕಾವಲು ಗೋಪುರದ ಕಾವಲುಗಾರರಾಗಿದ್ದರು. ಕರ್ನಾಟಕ ರಾಜ್ಯದಲ್ಲಿ, ಅಬ್ಬಕ್ಕ ರಾಣಿ, ಕೆಳದಿ ಚೆನ್ನಮ್ಮ ಮತ್ತು ಕಿತ್ತೂರು ಚೆನ್ನಮ್ಮರ ಜೊತೆ ಒನಕೆ ಓಬವ್ವ ಕೂಡ, ಅಗ್ರಗಣ್ಯ ಮಹಿಳಾ ಯೋಧೆಯಾಗಿ ಮತ್ತು ದೇಶಭಕ್ತರಾಗಿ ಆಚರಿಸಲ್ಪಡುತ್ತಾರೆ.
2. ಮದಕರಿ ನಾಯಕನ ಆಳ್ವಿಕೆಯಲ್ಲಿ, ಚಿತ್ರದುರ್ಗ ನಗರವನ್ನು ಹೈದರ್ ಅಲಿ (1754-1779) ಪಡೆಗಳು ಮುತ್ತಿಗೆ ಹಾಕಿದವು. ಬಂಡೆಗಳ ರಂಧ್ರದ ಮೂಲಕ ವ್ಯಕ್ತಿಯೊಬ್ಬ ಚಿತ್ರದುರ್ಗದ ಕೋಟೆಯನ್ನು ಪ್ರವೇಶಿಸುವುದನ್ನು ಆಕಸ್ಮಿಕವಾಗಿ ನೋಡಿದ ಹೈದರ್ ಅಲಿ ತನ್ನ ಸೈನಿಕರನ್ನು ಆ ರಂಧ್ರದ ಮೂಲಕ ಕಳುಹಿಸುವ ಯೋಜನೆ ಮಾಡಿಕೊಂಡನು. ಅಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಹಳೆ ಊದುವಾತ ಹನುಮ ಊಟ ಮಾಡಲು ಮನೆಗೆ ಹೋಗಿದ್ದನು. ಊಟದ ಸಮಯದಲ್ಲಿ ಮದಕರಿ ನಾಯಕನಿಗೆ ಕುಡಿಯಲು ಸ್ವಲ್ಪ ನೀರು ಬೇಕಿತ್ತು, ಆದ್ದರಿಂದ ಅವನ ಹೆಂಡತಿ ಓಬವ್ವ ಕೊಳದಿಂದ ಪಾತ್ರೆಯಲ್ಲಿ ನೀರುತರಲು ಹೋದಳು. ಆಗ ಶತ್ರು ಸೈನ್ಯವು ರಂಧ್ರದ ಮೂಲಕ ಕೋಟೆಯನ್ನು ಪ್ರವೇಶಿಸಲು ಪ್ರಯತ್ನಿಸುತ್ತಿರುವುದನ್ನು ಅವಳು ಗಮನಿಸಿದಳು. ಆಗ ಊಟ ಮಾಡುತ್ತಿದ್ದ ಪತಿಯನ್ನು ಕರೆಯಲು ಮನಸ್ಸಾಗದೇ, ಆಕೆಯೇ ಒನಕೆ ಹಿಡಿದು, ಕಿಂಡಿಯಿಂದ ನುಸುಳುತ್ತಿದ್ದ ಸೈನಿಕರನ್ನು ಒಬ್ಬೊಬ್ಬರ ತಲೆಗೆ ಬಡಿದು, ಕೊಂದಳು. ಊಟ ಮುಗಿಸಿ ಬಂದ, ಮದಕರಿ ನಾಯಕ ಇದನ್ನು ನೋಡಿ, ತನ್ನ ಸೈನ್ಯಕ್ಕೆ ಆದೇಶ ನೀಡಿದನು. ಈ ಹೋರಾಟದ ನಡುವೆ, ಆಕೆಗೆ ಶತ್ರು ಪಡೆಯ ಸೈನಿಕನೊಬ್ಬ ಹಿಂದಿನಿಂದು ಬಂದು, ಆಕೆಯನ್ನು ಕೊಂದನು. ಆಕೆಯ ಈ ಹೋರಾಟವು ಆಕೆಗೆ ಒನಕೆ ಓಬವ್ವ ಎಂಬ ಬಿರುದನ್ನು ತಂದುಕೊಟ್ಟಿತ್ತು.
3. ಅವಳು ಹೊಲಯ (ಚಲವಾದಿ) ಸಮುದಾಯಕ್ಕೆ ಸೇರಿದವರು.
4. ಆಕೆಯನ್ನು ಕನ್ನಡದ ಹೆಣ್ಣಿನ ಅಭಿಮಾನದ ಪ್ರತಿರೂಪವೆಂದು ಪರಿಗಣಿಸಲಾಗಿದೆ. ಹೈದರ್ ಅಲಿಯ ಸೈನಿಕರು ನುಸುಳಿದ ರಂಧ್ರವನ್ನು ಒನಕೆ ಓಬವ್ವನ ಕಿಂಡಿ ಅಥವಾ ಒನಕೆ ಕಿಂಡಿ ಎಂದು ಕರೆಯಲಾಗುತ್ತದೆ. ಪುಟ್ಟಣ್ಣ ಕಣಗಾಲ್ ನಿರ್ದೇಶನದ ನಾಗರಹಾವು ಚಿತ್ರದಲ್ಲಿನ ಪ್ರಸಿದ್ಧ ಹಾಡಿನಲ್ಲಿ ಆಕೆಯ ವೀರತ್ವವನ್ನು ಚಿತ್ರಿಸಲಾಗಿದೆ.
5. ಚಿತ್ರದುರ್ಗದ ಕ್ರೀಡಾಂಗಣಕ್ಕೆ, ವೀರ ವನಿತೆ ಒನಕೆ ಓಬವ್ವ ಕ್ರೀಡಾಂಗಣ ಎಂಬ ಹೆಸರನ್ನು ಇಡಲಾಗಿದೆ.
6. ಚಿತ್ರದುರ್ಗದ ಜಿಲ್ಲಾಧಿಕಾರಿ ಕಛೇರಿ ಮುಂದೆ ಒನಕೆ ಓಬವ್ವರ ಪ್ರತಿಮೆಯನ್ನು ಸ್ಥಾಪಿಸಲಾಗಿದೆ.