Just In
Don't Miss
- Movies ನೀಲಿ ಪ್ರಪಂಚದ ಕರಾಳ ಸತ್ಯವನ್ನ ಹೇಳಿದ ಲಾನಾ ರೋಡ್ಸ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಕ್ಷಾಬಂಧನ 2021: ಈ ರಾಶಿಯವರಿಗೆ ಗಜಕೇಸರಿ ಯೋಗದಿಂದ ಅದೃಷ್ಟ ಬದಲಾಗಲಿದೆ!
ಸಹೋದರ-ಸಹೋದರಿಯರ ಸಂಬಂಧದ ಹಬ್ಬ ರಕ್ಷಾ ಬಂಧನ ಸಮೀಪಿಸುತ್ತಿದೆ. ಗಸ್ಟ್ 22ರಂದು ನಡೆಯಲಿರುವ ರಕ್ಷಾಬಂಧನವು ಈ ಬಾರಿ ಅನೇಕ ವಿಶೇಷತೆಗಳನ್ನು ಹೊತ್ತು ತಂದಿದೆ. ಒಂದು ಕಡೆ, ಈ ದಿನ ಯಾವುದೇ ಭದ್ರಾ ಅವಧಿ ಇರುವುದಿಲ್ಲ, ಭದ್ರಾ ಅವಧಿಯಲ್ಲಿ ರಾಖಿ ಕಟ್ಟಬಾರದು ಎಂದು ಹೇಳಲಾಗುತ್ತದೆ. ಆದ್ದರಿಂದ ಈ ವರ್ಷ, ಸಹೋದರಿಯರು ತಮ್ಮ ಸಹೋದರರಿಗೆ ದಿನವಡೀ ಯಾವುದೇ ಸಮಯದಲ್ಲಿ ರಾಖಿ ಕಟ್ಟಬಹುದು.
ಮತ್ತೊಂದೆಡೆ, ಈ ಬಾರಿ ರಕ್ಷಾಬಂಧನದಂದು, ಕುಂಭದಲ್ಲಿ ಚಂದ್ರನು ಇರುತ್ತಾನೆ ಮತ್ತು ಕುಂಭ ರಾಶಿಯಲ್ಲಿ ಗುರು ಹಿಮ್ಮುಖ ಚಲನೆಯಲ್ಲಿರುತ್ತಾನೆ. ಜ್ಯೋತಿಷ್ಯದ ಪ್ರಕಾರ, ಗುರು ಮತ್ತು ಚಂದ್ರನ ಈ ಸಂಯೋಗದಿಂದಾಗಿ ಗಜಕೇಸರಿ ಯೋಗವು ರೂಪುಗೊಳ್ಳುತ್ತಿದೆ. ಜ್ಯೋತಿಷ್ಯದಲ್ಲಿ ಗಜಕೇಸರಿ ಯೋಗವನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಈ ದಿನ ಮಂಗಳಕರವಾದ ಕೆಲಸವನ್ನು ಮಾಡಿದರೆ, ಅದರಲ್ಲಿ ವಿಜಯ ಸಿಗುವ ಸಾಧ್ಯತೆಯಿದೆ. ಈ ಯೋಗವು ಕೆಲವು ರಾಶಿಚಕ್ರ ಚಿಹ್ನೆಗಳಿಗೆ ಬಹಳ ಶುಭಕರವಾಗಿದ್ದು, ಯಾವೆಲ್ಲಾ ಎಂಬುದನ್ನು ನೋಡೋಣ.
ರಕ್ಷಾಬಂಧನದಂದು ರೂಪುಗೊಳ್ಳುವ ಗಜಕೇಸರಿ ಯೋಗವು ಯಾವೆಲ್ಲಾ ರಾಶಿಗಳಿಗೆ ಶುಭಕರವಾಗಿರುತ್ತವ ಎಂಬುದನ್ನು ಈ ಕೆಳಗೆ ನೀಡಲಾಗಿದೆ:
ಧನಸ್ಸು:
ಈ ರಾಶಿಯ ಜನರು ಆರ್ಥಿಕ ಲಾಭಗಳನ್ನು ಪಡೆಯುವ ಉತ್ತಮ ಅವಕಾಶಗಳನ್ನು ಹೊಂದಿರುತ್ತಾರೆ, ಜೊತೆಗೆ ಖ್ಯಾತಿಯು ಹೆಚ್ಚಾಗುತ್ತದೆ. ಕೆಲಸದಲ್ಲಿ ಯಶಸ್ಸು ಇರುತ್ತದೆ. ನಿಲ್ಲಿಸಿದ ಕೆಲಸವನ್ನು ಮುಂದುವರಿಸುತ್ತೀರಿ. ನೀವು ಸ್ವಲ್ಪ ಸಮಯದವರೆಗೆ ಪ್ರಮುಖ ವಹಿವಾಟುಗಳನ್ನು ಮಾಡಲು ಬಯಸಿದರೆ, ಅದನ್ನು ಈ ಸಮಯದಲ್ಲಿ ಮಾಡಬಹುದು. ಇದರಿಂದು ಒಳ್ಳೆಯ ಲಾಭ ಸಿಗುವುದು.
ಮೀನ:
ನಿಮ್ಮ ಜೀವನದಲ್ಲಿ ದೀರ್ಘಕಾಲದಿಂದ ಬಿಟ್ಟು ಬಿಡದೇ ಕಾಡುತ್ತಿದ್ದ ತೊಂದರೆಗಳಿಗೆ ವಿದಾಯ ಹೇಳುವ ಸಮಯ ಬಂದಿದೆ. ನಿಮ್ಮ ಆಸೆಗಳು ಅಥವಾ ಕನಸುಗಳು ನನಸಾಗಬಹುದು. ಹಣ ಉತ್ತಮವಾಗಿರಲಿದೆ. ನಿಮ್ಮ ಎಲ್ಲಾ ಕೆಲಸವನ್ನು ಸುಲಭವಾಗಿ ಮಾಡಿ ಮುಗಿಸುತ್ತೀರಿ ಮತ್ತು ಅದಕ್ಕಾಗಿ ನೀವು ಪ್ರಶಂಸೆಯನ್ನೂ ಪಡೆಯುತ್ತೀರಿ. ಒಟ್ಟಾರೆಯಾಗಿ, ಗಜ ಕೇಸರಿ ಯೋಗವು ನಿಮಗೆ ಅತ್ಯಂತ ಮಂಗಳಕರವಾಗಿದೆ.
ಕರ್ಕ:
ಈ ರಾಶಿಯ ಅಧಿಪತಿ ಚಂದ್ರನಾಗಿರುವುದರಿಂದ, ಆತ ಗುರುವಿನೊಂದಿಗೆ ಸಂಯೋಜನೆ ಹೊಂದಿ ಗಜಕೇಸರಿ ಯೋಗ ರೂಪುಗೊಳ್ಳುವುದರಿಂದ ಈ ಯೋಗವು ಕರ್ಕಾಟಕ ರಾಶಿಯವರಿಗೆ ಬಹಳ ಮಂಗಳಕರವಾಗಿರುತ್ತದೆ. ಅವರು ತಮ್ಮ ಕಾರ್ಯಗಳಿಂದ ಉತ್ತಮ ಫಲಿತಾಂಶಗಳನ್ನು ಪಡೆಯುತ್ತಾರೆ. ಇದರಿಂದ ಆದಾಯ ಹೆಚ್ಚಾಗುತ್ತದೆ. ತಮ್ಮೆಲ್ಲಾ ಕೆಲಸಗಳಿಗೆ ಎಲ್ಲರ ಸಹಕಾರ ಸಿಗುತ್ತದೆ. ಜೀವನದಲ್ಲಿ ಸಂತೋಷ ಬರುತ್ತದೆ.